Homeಕರ್ನಾಟಕ'ಯುವ ನಿಧಿ' ಯೋಜನೆ- ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ.: ರಾಹುಲ್‌ ಗಾಂಧಿ ಘೋ‍ಷಣೆ

‘ಯುವ ನಿಧಿ’ ಯೋಜನೆ- ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ.: ರಾಹುಲ್‌ ಗಾಂಧಿ ಘೋ‍ಷಣೆ

- Advertisement -
- Advertisement -

ಬೆಳಗಾವಿಯಲ್ಲಿ ಇಂದು(ಮಾ. 20) ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾಗವಹಿಸಿದ್ದರು. ಈ ವೇಳೆ ಆಡಳಿತಾರೂಢ ಬಿಜೆಪಿ ವಿರುದ್ಧ ಅವರು ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿರುವ 40 ಪರ್ಸೆಂಟ್ ಕಮೀಷನ್ ಸರ್ಕಾರ ರಾಜ್ಯದ ಉದ್ಯೋಗ ನೀಡದೆ ಯುವಜನರ ಬದುಕನ್ನೇ ಹಾಳುಮಾಡಿದೆ ಎಂದು ಕಿಡಿಕಾರಿದ್ದಾರೆ.

ಯುವ ಕ್ರಾಂತಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್, ”ನಾನು ಭಾರತ್ ಜೋಡೋ ಯಾತ್ರೆ ಮಾಡುವ ಸಂದರ್ಭದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಾಗ ಒಂದು ವಿಚಾರವನ್ನು ಅರಿತುಕೊಂಡೆ. ಇಲ್ಲಿ ನಿರುದ್ಯೋಗ ಸಮಸ್ಯೆಯು ಯುವಕರನ್ನು ಕಾಡುತ್ತಿದೆ. ಭ್ರಷ್ಟ ಬಿಜೆಪಿ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಸೃಷ್ಟಿಸಿದೆ. ಇದನ್ನು ಅರ್ಥಮಾಡಿಕೊಳ್ಳಲು ನಾನು ಸಾವಿರಾರು ಯುವಕರೊಂದಿಗೆ ಮಾತನಾಡಿದ್ದೆನೆ” ಎಂದು ಹೇಳಿದರು.

‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ 10 ಲಕ್ಷ ಉದ್ಯೋಗಗಳನ್ನು ನೀಡುತ್ತೇವೆ. ನಾವು ಅಧಿಕಾರಕ್ಕೆ ಬಂದರೆ ಸರ್ಕಾರಿ ವಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ” ಎಂದು ಯುವಕರಿಗೆ ರಾಹುಲ್‌ ಭರವಸೆ ನೀಡಿದರು.

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ನಿರುದ್ಯೋಗಿ ಯುವಕರಿಗಾಗಿ ‘ಯುವ ನಿಧಿ’ ಯೋಜನೆಯನ್ನು ಹಮ್ಮಿಕೊಳ್ಳಲಿದೆ. ಚುನಾವಣೆಯಲ್ಲಿ ಗೆದ್ದ ನಂತರ ಯುವ ನಿಧಿ ಯೋಜನೆಯನ್ನು ತಕ್ಷಣವೇ ರಾಜ್ಯದಲ್ಲಿ ಜಾರಿಗೆ ತರಲಾಗುವುದು. ಪದವಿ ಪಡೆದಿರುವ ನಿರುದ್ಯೋಗಿಗಳಿಗೆ 3000 ರೂ. ನೀಡಲಾಗುತ್ತದೆ. ಡಿಪ್ಲೋಮಾ ಹೊಂದಿರುವ ನಿರುದ್ಯೋಗಿಗಳಿಗೆ 1500 ರೂ. ಗಳನ್ನು ನೀಡಲಾಗುತ್ತದೆ. ಇದು ಎರಡು ವರ್ಷಗಳ ವರೆಗೆ ಮುಂದುವರಿಯುತ್ತದೆ” ಎಂದು ರಾಹುಲ್‌ ಗಾಂಧಿ ಘೋಷಿಸಿದರು.

”ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇರುವುದನ್ನು ನಾನು ಈಗಾಗಲೇ ಗಮನಿಸಿದ್ದೇನೆ. ರಾಜ್ಯ ಘಟಕ ಬಯಸಿದರೆ ಕರ್ನಾಟಕದ ಯಾವುದೇ ಜಿಲ್ಲೆಯಲ್ಲಿ ಪ್ರವಾಸ ಮಾಡಲು ಸಿದ್ಧನಿದ್ದೇನೆ. ಭ್ರಷ್ಟ ಬಿಜೆಪಿ ಸರಕಾರವನ್ನು ಕಿತ್ತೊಗೆಯಲಿದ್ದೇವೆ” ಎಂದು ಅವರು ಹೇಳಿದರು.

‘ದೇಶದ ಅತ್ಯಂತ ಭ್ರಷ್ಟ ಸರ್ಕಾರ ‘ಕರ್ನಾಟಕದಲ್ಲಿನ ಬಿಜೆಪಿ ಸರ್ಕಾರ ಎಂದು ಎಲ್ಲ ವರ್ಗದ ಜನ ಹೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಪ್ರಧಾನಿಗಳಿಗೆ ಪತ್ರ ಬರೆದು ರಾಜ್ಯದಲ್ಲಿ 40 ಪರ್ಸೆಂಟ್‌ ಕಮಿಷನ್ ಪಡೆಯಲಾಗುತ್ತಿದೆ ಎಂದು ದೂರಿದ್ದಾರೆ. ಆದರೂ ಪ್ರಧಾನಿಗಳು ಈ 40 ಪರ್ಸೆಂಟ್‌ ಕಮಿಷನ್ ಸರ್ಕಾರದ ಬಗ್ಗೆ ಮಾತನಾಡುತ್ತಿಲ್ಲ” ಎಂದರು.

ರಾಜ್ಯದ ಮಹಿಳೆಯರ ಕಷ್ಟಕ್ಕೆ ಪರಿಹಾರ ನೀಡಲು ‘ಗೃಹಲಕ್ಷ್ಮಿ’ ಯೋಜನೆ ಮೂಲಕ ಮನೆಯೊಡತಿಗೆ 2000ರೂ. ಪ್ರೋತ್ಸಾಹ ಧನ, ಅನ್ನ ಭಾಗ್ಯ ಯೋಜನೆ ಮೂಲಕ ಬಡ ಕುಟುಂಬ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ, ‘ಗೃಹಜ್ಯೋತಿ’ ಯೋಜನೆ ಮೂಲಕ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಅಷ್ಟೇ ಅಲ್ಲದೆ, ನಿರುದ್ಯೋಗಿ ಯುವಕರಿಗಾಗಿ ‘ಯುವ ನಿಧಿ’ ಯೋಜನೆಯನ್ನು ಹಮ್ಮಿಕೊಳ್ಳಲಿದೆ. ಪದವಿ ಪಡೆದಿರುವ ನಿರುದ್ಯೋಗಿಗಳಿಗೆ 3000 ರೂ. ನೀಡಲಾಗುತ್ತದೆ. ಡಿಪ್ಲೋಮಾ ಹೊಂದಿರುವ ನಿರುದ್ಯೋಗಿಗಳಿಗೆ 1500 ರೂ. ಗಳನ್ನು ನೀಡಲಾಗುತ್ತದೆ ಎಂದು ರಾಹುಲ್ ಹೇಳಿದರು.

”ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ಕರ್ನಾಟಕದ ಮೂಲಕ ಸಾಗಿದಾಗ ಅಭೂತಪೂರ್ವ ಬೆಂಬಲ ನೀಡಿ ಯಾತ್ರೆ ಯಶಸ್ಸುಗೊಳಿಸಿದ್ದಿರಿ. ಅದಕ್ಕಾಗಿ ಕರ್ನಾಟಕದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ದೇಶ ಯಾರೋ ಒಬ್ಬರ ಸ್ವತ್ತಲ್ಲ, ಅಧಾನಿ ಸ್ವತ್ತೂ ಅಲ್ಲ. ಈ ದೇಶ ರೈತರು, ಯುವಕರು, ಬಡವರು ಸೇರಿದಂತೆ ಎಲ್ಲರಿಗೂ ಸೇರಿದ್ದು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...