Homeಮುಖಪುಟತೂಗು ಸೇತುವೆ ದುರಂತದ ವೇಳೆ ಮೊರ್ಬಿಗೆ ಮೋದಿ ಭೇಟಿ ನೀಡಲು ಖರ್ಚಾಗಿದ್ದು ₹ 30 ಕೋಟಿ:...

ತೂಗು ಸೇತುವೆ ದುರಂತದ ವೇಳೆ ಮೊರ್ಬಿಗೆ ಮೋದಿ ಭೇಟಿ ನೀಡಲು ಖರ್ಚಾಗಿದ್ದು ₹ 30 ಕೋಟಿ: ಟಿಎಂಸಿ ಆರೋಪ

- Advertisement -
- Advertisement -

ಗುಜರಾತ್‌ ತೂಗು ಸೇತುವೆ ದುರಂತದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೆಲವು ಗಂಟೆಗಳ ಕಾಲ ಮೊರ್ಬಿಗೆ ಭೇಟಿ ನೀಡಲು 30 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಾಯಕ ಸಾಕೇತ್‌ ಗೋಖಲೆ ಆರೋಪಿಸಿದ್ದಾರೆ.

“ಈ ಕುರಿತು ಆರ್‌ಟಿಐ ಅಡಿ ಮಾಹಿತಿ ಬಹಿರಂಗವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

130ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ ಇತ್ತೀಚಿನ ಸೇತುವೆ ಕುಸಿತದ ದುರಂತದ ನಂತರ ಪ್ರಧಾನಿ ಮೋದಿಯವರು ಅಕ್ಟೋಬರ್ 30ರಂದು ಗುಜರಾತ್ ರಾಜ್ಯದ ಮೊರ್ಬಿ ನಗರಕ್ಕೆ ಭೇಟಿ ನೀಡಿದ್ದರು. ಅದಕ್ಕಾಗಿ 30 ಕೋಟಿ ರೂಪಾಯಿ ವೆಚ್ಚವಾಗಿದೆ. ಅದರಲ್ಲಿ 5.5 ಕೋಟಿ ರೂಪಾಯಿಗಳು ‘ಸ್ವಾಗತ, ಕಾರ್ಯಕ್ರಮ ನಿರ್ವಹಣೆ ಮತ್ತು ಫೋಟೋಗ್ರಫಿ’ಗೆ ಖರ್ಚಾಗಿದೆ ಎಂದು ಗೋಖಲೆ ದೂರಿದ್ದಾರೆ.

ಮೋರ್ಬಿ ದುರಂತದ 135 ಸಂತ್ರಸ್ತರಿಗೆ ತಲಾ 4 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಆದರೆ ಪ್ರಧಾನ ಮೋದಿಯವರ ಭೇಟಿಗೆ ಹೆಚ್ಚಿನ ಖರ್ಚಾಗಿದೆ ಎಂದು ಹೋಲಿಕೆ ಮಾಡಿರುವ ಅವರು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

“ಮೋರ್ಬಿಗೆ ಮೋದಿಯವರ ಕೆಲವು ಗಂಟೆಗಳ ಭೇಟಿಗೆ ₹ 30 ಕೋಟಿ ವೆಚ್ಚವಾಗಿದೆ ಎಂದು ಆರ್‌ಟಿಐ ಬಹಿರಂಗಪಡಿಸುತ್ತದೆ. ಇದರಲ್ಲಿ ₹ 5.5 ಕೋಟಿ ಕೇವಲ ‘ಸ್ವಾಗತ, ಈವೆಂಟ್ ಮ್ಯಾನೇಜ್‌ಮೆಂಟ್ ಮತ್ತು ಫೋಟೋಗ್ರಫಿ’ಗಾಗಿ ಖರ್ಚಾಗಿದೆ” ಎಂದು ಗೋಖಲೆ ಟ್ವೀಟ್‌ ಮಾಡಿದ್ದು, ಪತ್ರಿಕಾ ತುಣುಕುಗಳನ್ನು ಲಗತ್ತಿಸಿದ್ದಾರೆ.

“ಮೃತಪಟ್ಟ 135 ಸಂತ್ರಸ್ತರಿಗೆ ತಲಾ ₹ 4 ಲಕ್ಷ ಪರಿಹಾರ, ಅಂದರೆ ₹ 5 ಕೋಟಿ ಸಿಕ್ಕಿದೆ. ಕೇವಲ ಮೋದಿಯವರ ಈವೆಂಟ್ ಮ್ಯಾನೇಜ್ಮೆಂಟ್ ಮತ್ತು ಪಬ್ಲಿಕ್‌ ಪಿಆರ್‌‌ ಕೆಲಸಕ್ಕಾಗಿ 135 ಜನರ ಜೀವನಕ್ಕಿಂತ ಹೆಚ್ಚು ವೆಚ್ಚ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಗೋಖಲೆ ಅವರು ಗುಜರಾತಿ ಪತ್ರಿಕೆಯೊಂದರ ಕ್ಲಿಪ್ಪಿಂಗ್‌ಗಳೊಂದಿಗೆ ಟ್ವಿಟ್ಟರ್ ಪೋಸ್ಟ್‌ನಲ್ಲಿ ಈ ರೀತಿ ಹಂಚಿಕೊಂಡಿದ್ದಾರೆ. ಆದರೆ ಸಾಕೇತ್‌ ಅವರ ಪ್ರತಿಪಾದನೆಯನ್ನು ಸರ್ಕಾರ ನಿರಾಕರಿಸಿದೆ.

ಈ ಕುರಿತು ಯಾವುದೇ ಆರ್‌ಟಿಐ ಮಾಹಿತಿಯನ್ನು ನೀಡಲಾಗಿಲ್ಲ. ಈ ಸುದ್ದಿಯು ಸುಳ್ಳು ಎಂದು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಟ್ವೀಟ್ ಮಾಡಿದೆ.

“ಈ ಪ್ರತಿಪಾದನೆ ನಕಲಿಯಾಗಿದೆ. ಅಂತಹ ಯಾವುದೇ ಆರ್‌ಟಿಐ ಪ್ರತಿಕ್ರಿಯೆಯನ್ನು ನೀಡಲಾಗಿಲ್ಲ” ಎಂದು ಪಿಐಬಿ ಸ್ಪಷ್ಟಪಡಿಸಿದೆ. ಆದರೆ ನಿಜಕ್ಕೂ ಎಷ್ಟು ಹಣ ಖರ್ಚಾಗಿದೆ ಎಂಬುದನ್ನು ಸ್ಪಷ್ಟಪಡಿಸಲಾಗಿಲ್ಲ.

ಗುಜರಾತ್‌ ಬಿಜೆಪಿ ಘಟಕವು ಈ ಕುರಿತು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದೆ. “ಇದು ಫೇಕ್ ನ್ಯೂಸ್. ಅಂತಹ ಯಾವುದೇ ಆರ್‌ಟಿಐ ಮಾಹಿತಿ ನೀಡಲಾಗಿಲ್ಲ. ಅಂತಹ ಯಾವುದೇ ಸುದ್ದಿ ಪ್ರಕಟವಾಗಿಲ್ಲ. ಇದು ಸೃಷ್ಟಿಸಲ್ಪಷ್ಟ ಸುದ್ದಿಯಾಗಿದೆ” ಎಂದು ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...