Homeಮುಖಪುಟಮೇಘಾಲಯ-ಅಸ್ಸಾಂ ಗಡಿಯ ವಿವಾದಿತ ಗ್ರಾಮಗಳಲ್ಲಿ 30 ಮೇಘಾಲಯದಲ್ಲಿ ಉಳಿಯಲಿವೆ: ಸಿಎಂ

ಮೇಘಾಲಯ-ಅಸ್ಸಾಂ ಗಡಿಯ ವಿವಾದಿತ ಗ್ರಾಮಗಳಲ್ಲಿ 30 ಮೇಘಾಲಯದಲ್ಲಿ ಉಳಿಯಲಿವೆ: ಸಿಎಂ

- Advertisement -
- Advertisement -

ಮೇಘಾಲಯ-ಅಸ್ಸಾಂ ಗಡಿಯಲ್ಲಿರುವ 36 ವಿವಾದಿತ ಗ್ರಾಮಗಳ ಪೈಕಿ 30 ಗ್ರಾಮಗಳನ್ನು ಮೇಘಾಲಯದಲ್ಲೇ ಉಳಿಯುವಂತೆ ಎರಡು ರಾಜ್ಯಗಳ ಪ್ರಾದೇಶಿಕ ಸಮಿತಿಗಳು ಶಿಫಾರಸು ಮಾಡಿದೆ ಎಂದು ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಸೋಮವಾರ ವಿಧಾನಸಭೆಗೆ ತಿಳಿಸಿದ್ದಾರೆ.

ಈ ವಿವಾದಿತ 36 ಗ್ರಾಮಗಳು 36.9 ಚದರ ಕಿಲೋಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, 30 ಗ್ರಾಮಗಳು 18 ಚದರ ಕಿಮೀ ಪ್ರದೇಶದಲ್ಲಿ ಹರಡಿಕೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.

ಅಂತರರಾಜ್ಯ ಗಡಿ ವಿವಾದವನ್ನು ಪರಿಹರಿಸಲು ಅಸ್ಸಾಂ ಸರ್ಕಾರದೊಂದಿಗಿನ ಮಾತುಕತೆಯ ಕುರಿತು ಸದನವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, “ಈಗಾಗಲೇ ಗುರುತಿಸಲಾಗಿರುವ 12 ಸ್ಥಳಗಳಿಗೆ ಯಾವುದೇ ಹೊಸ ವ್ಯತ್ಯಾಸಗಳನ್ನು ಸೇರಿಸಬಾರದು ಎಂದು ಎರಡೂ ರಾಜ್ಯಗಳು ಒಪ್ಪಿಕೊಂಡಿವೆ. 2011 ರಲ್ಲಿ ಮೇಘಾಲಯವು ಹಕ್ಕು ಸಾಧಿಸಿದ 36 ಹಳ್ಳಿಗಳಲ್ಲಿ, ಒಟ್ಟು 30 ಗ್ರಾಮಗಳನ್ನು ಮೇಘಾಲಯದಲ್ಲಿ ಉಳಿಯಲು ಎರಡು ರಾಜ್ಯಗಳ ಪ್ರಾದೇಶಿಕ ಸಮಿತಿಗಳು ಶಿಫಾರಸು ಮಾಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು: ಮೇಘಾಲಯ ರಾಜ್ಯಪಾಲರ ಸ್ಫೋಟಕ ಹೇಳಿಕೆ

“ತಾರಾಬರಿ ಪ್ರದೇಶದಲ್ಲಿ ಮೇಘಾಲಯವು ಹಕ್ಕು ಸಾಧಿಸಿದ ಎಲ್ಲಾ ಎಂಟು ಹಳ್ಳಿಗಳು ರಾಜ್ಯದಲ್ಲಿ ಉಳಿಯುತ್ತವೆ. ಗಿಜಾಂಗ್‌ನ ಮೂರು ಹಳ್ಳಿಗಳಲ್ಲಿ ಎರಡು ನಮ್ಮೊಂದಿಗೆ ಉಳಿಯುತ್ತವೆ. ನಾವು 12 ಹಕ್ಕು ಸಾಧಿಸಿದ ಹಳ್ಳಿಗಳಲ್ಲಿ 11 ಪಡೆದಿದ್ದೇವೆ. ಬೊಕ್ಲಾಪಾರಾದಲ್ಲಿ ಒಂದು, ಖಾನಪಾರ-ಪಿಳ್ಳಂಗಟಾದ ಐದು ಹಳ್ಳಿಗಳು ಮತ್ತು ರಟಾಚೆರಾದಲ್ಲಿ ಮೂರು ಹಳ್ಳಿಗಳು ನಮ್ಮ ರಾಜ್ಯದಲ್ಲಿವೆ” ಎಂದು ಹೇಳಿದ್ದಾರೆ.

ಕ್ಯಾಬಿನೆಟ್ ಸಚಿವರ ನೇತೃತ್ವದ ಎರಡು ರಾಜ್ಯಗಳ ಪ್ರಾದೇಶಿಕ ಸಮಿತಿಗಳಿಂದ ಹಲವು ಚರ್ಚೆಗಳು, ಭೇಟಿಗಳು ಮತ್ತು ಸಮೀಕ್ಷೆಗಳನ್ನು ನಡೆಸಲಾಗಿದೆ. ವಿಶೇಷ ತಂತ್ರಜ್ಞಾನಗಳನ್ನು ಸಮೀಕ್ಷೆಯಲ್ಲಿ ಬಳಸಲಾಗಿದೆ. ಎರಡೂ ರಾಜ್ಯಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವೆ ಆಫ್ ಇಂಡಿಯಾದಿಂದ ಪ್ರದೇಶಗಳನ್ನು ಹೆಚ್ಚು ನಿಖರವಾಗಿ ನಿರ್ಧರಿಸಲಾಗುತ್ತದೆ ಎಂದು ಸಿಎಂ ಸಂಗ್ಮಾ ಎಂದಿದ್ದಾರೆ.

ಇದೆ ವೇಳೆ ಉಳಿದ ಆರು ಕ್ಷೇತ್ರಗಳ ತೀರ್ಮಾನದ ಕುರಿತು ಜನವರಿ ಅಂತ್ಯದಲ್ಲಿ ಎರಡೂ ರಾಜ್ಯಗಳು ಒಪ್ಪಂದಕ್ಕೆ ಸಹಿ ಹಾಕಿದ್ದು, ಅದನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.


ಇದನ್ನೂ ಓದಿ: ಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...