Homeಅಂತರಾಷ್ಟ್ರೀಯಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: 117 ಮಕ್ಕಳು ಸೇರಿ 266 ಫೆಲೆಸ್ತೀನಿಯರು ಸಾವು

ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: 117 ಮಕ್ಕಳು ಸೇರಿ 266 ಫೆಲೆಸ್ತೀನಿಯರು ಸಾವು

- Advertisement -
- Advertisement -

ಇಸ್ರೇಲ್‌ ಗಾಝಾ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದ್ದು, ಕಳೆದ 24 ಗಂಟೆಯಲ್ಲಿ 117 ಮಕ್ಕಳು ಸೇರಿ 266 ಫೆಲೆಸ್ತೀನೀಯರು ಬಲಿಯಾಗಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ವೆಸ್ಟ್ ಬ್ಯಾಂಕ್‌ನ ರಾಮಲ್ಲಾ ಬಳಿಯ ಜಲಜೋನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ ನಡೆಸಿ ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದು, ಹಲವರನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ.

ಪ್ಯಾಲೇಸ್ತೀನ್ ಮಾಧ್ಯಮಗಳ ಪ್ರಕಾರ, ಗಾಜಾದಲ್ಲಿನ ವಸತಿ ಕಟ್ಟಡಕ್ಕೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕನಿಷ್ಠ 30 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ. ಜಬಾಲಿಯಾ ನಿರಾಶ್ರಿತರ ಶಿಬಿರದ ಅಲ್-ಶುಹಾದಾ ಪ್ರದೇಶದಲ್ಲಿ ಈ ಕಟ್ಟಡವಿತ್ತು. ದಾಳಿಗೆ ಕಟ್ಟಡ  ನೆಲಸಮಗೊಂಡಿದ್ದು ಮತ್ತು ಹಲವಾರು ಅಕ್ಕಪಕ್ಕದ ಮನೆಗಳು ಕೂಡ ಧ್ವಂಸಗೊಂಡಿದೆ.

ಇಸ್ರೇಲ್‌ ದಾಳಿಯಿಂದ ಇತ್ತೀಚಿನ ವರದಿಯ ಪ್ರಕಾರ 4,600 ಜನರು ಕೊಲ್ಲಲ್ಪಟ್ಟಿದ್ದಾರೆ. ಮತ್ತು 14,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಝಾ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ಇಸ್ರೇಲಿ ವಾಯು ದಾಳಿಗಳಿಗೆ 117 ಮಕ್ಕಳ ಸಹಿತ 266 ಫೆಲೆಸ್ತೀನೀಯರು ಬಲಿಯಾಗಿದ್ದಾರೆ.

ಹಮಾಸ್‌ ನಡೆಸಿದ ದಾಳಿಗೆ 1,400 ಇಸ್ರೇಲ್‌ ಪ್ರಜೆಗಳು ಕೊಲ್ಲಲ್ಪಟ್ಟರು ಮತ್ತು 212 ಜನರನ್ನು ಒತ್ತೆಯಾಳಾಗಿರಿಸಲಾಗಿದೆ.

ಈ ಮಧ್ಯೆ ಈಜಿಪ್ಟ್‌ನಿಂದ ಗಾಝಾಗೆ ಪರಿಹಾರ ಸಾಮಾಗ್ರಿ ಹೊತ್ತ 14  ಟ್ರಕ್‌ಗಳು ರಫಾ ಕ್ರಾಸಿಂಗ್‌ ಮೂಲಕ ಪ್ರವೇಶಿಸಿದೆ. ಆದರೆ ಯುಎನ್‌ ಕಚೇರಿಯು ಗಾಝಾಗೆ ಬೇಕಾಗಿರುವ ದೈನಂದಿನ ಸರಾಸರಿ ಅಗತ್ಯ ವಸ್ತುಗಳಲ್ಲಿ ಕೇವಲ 4% ಮಾತ್ರ ಬಂದಿದೆ ಎಂದು ಹೇಳಿದ್ದಾರೆ.

ಇದಲ್ಲದೆ ಇಸ್ರೇಲ್ ಸೇನೆಯು ಸೋಮವಾರ ಮುಂಜಾನೆ ಲೆಬನಾನ್‌ನಲ್ಲಿ ಎರಡು ಹೆಜ್ಬೊಲ್ಲಾ ಘಟಕಗಳನ್ನು ಹೊಡೆದು ಹಾಕಿದೆ. ಹೆಜ್ಬೊಲ್ಲಾ ಇಸ್ರೇಲ್ ಕಡೆಗೆ  ಕ್ಷಿಪಣಿಗಳು ಮತ್ತು ರಾಕೆಟ್‌ಗಳನ್ನು ಉಡಾಯಿಸುವ ಸಾಧ್ಯತೆ ಹಿನ್ನೆಲೆ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಹೇಳಿದೆ.

ಹಮಾಸ್‌ ಸಶಸ್ತ್ರ ಗುಂಪು ಇಸ್ರೇಲ್‌ ಮೇಲೆ ವಾಯು, ಭೂ ಮತ್ತು ಜಲ ಮಾರ್ಗಗಳಲ್ಲಿ ದಾಳಿ ನಡೆಸಿತ್ತು. ಆ ಬಳಿಕ ಇಸ್ರೇಲ್‌ ಯುದ್ಧವನ್ನು ಘೋಷಿಸಿತ್ತು. ಗಾಝಾ ಪಟ್ಟಿಗೆ ನೀರು, ಆಹಾರ, ವಿದ್ಯುತ್‌ ಸರಬರಾಜನ್ನು ತಡೆ ಹಿಡಿದಿತ್ತು.

ಇದನ್ನು ಓದಿ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಮಾಝ್ ಮಾಡಲು ಅವಕಾಶ ಕೊಟ್ಟ ಮುಖ್ಯ ಶಿಕ್ಷಕಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...