Homeಅಂತರಾಷ್ಟ್ರೀಯಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: 117 ಮಕ್ಕಳು ಸೇರಿ 266 ಫೆಲೆಸ್ತೀನಿಯರು ಸಾವು

ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: 117 ಮಕ್ಕಳು ಸೇರಿ 266 ಫೆಲೆಸ್ತೀನಿಯರು ಸಾವು

- Advertisement -
- Advertisement -

ಇಸ್ರೇಲ್‌ ಗಾಝಾ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದ್ದು, ಕಳೆದ 24 ಗಂಟೆಯಲ್ಲಿ 117 ಮಕ್ಕಳು ಸೇರಿ 266 ಫೆಲೆಸ್ತೀನೀಯರು ಬಲಿಯಾಗಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ವೆಸ್ಟ್ ಬ್ಯಾಂಕ್‌ನ ರಾಮಲ್ಲಾ ಬಳಿಯ ಜಲಜೋನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ ನಡೆಸಿ ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದು, ಹಲವರನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ.

ಪ್ಯಾಲೇಸ್ತೀನ್ ಮಾಧ್ಯಮಗಳ ಪ್ರಕಾರ, ಗಾಜಾದಲ್ಲಿನ ವಸತಿ ಕಟ್ಟಡಕ್ಕೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕನಿಷ್ಠ 30 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ. ಜಬಾಲಿಯಾ ನಿರಾಶ್ರಿತರ ಶಿಬಿರದ ಅಲ್-ಶುಹಾದಾ ಪ್ರದೇಶದಲ್ಲಿ ಈ ಕಟ್ಟಡವಿತ್ತು. ದಾಳಿಗೆ ಕಟ್ಟಡ  ನೆಲಸಮಗೊಂಡಿದ್ದು ಮತ್ತು ಹಲವಾರು ಅಕ್ಕಪಕ್ಕದ ಮನೆಗಳು ಕೂಡ ಧ್ವಂಸಗೊಂಡಿದೆ.

ಇಸ್ರೇಲ್‌ ದಾಳಿಯಿಂದ ಇತ್ತೀಚಿನ ವರದಿಯ ಪ್ರಕಾರ 4,600 ಜನರು ಕೊಲ್ಲಲ್ಪಟ್ಟಿದ್ದಾರೆ. ಮತ್ತು 14,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಝಾ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ಇಸ್ರೇಲಿ ವಾಯು ದಾಳಿಗಳಿಗೆ 117 ಮಕ್ಕಳ ಸಹಿತ 266 ಫೆಲೆಸ್ತೀನೀಯರು ಬಲಿಯಾಗಿದ್ದಾರೆ.

ಹಮಾಸ್‌ ನಡೆಸಿದ ದಾಳಿಗೆ 1,400 ಇಸ್ರೇಲ್‌ ಪ್ರಜೆಗಳು ಕೊಲ್ಲಲ್ಪಟ್ಟರು ಮತ್ತು 212 ಜನರನ್ನು ಒತ್ತೆಯಾಳಾಗಿರಿಸಲಾಗಿದೆ.

ಈ ಮಧ್ಯೆ ಈಜಿಪ್ಟ್‌ನಿಂದ ಗಾಝಾಗೆ ಪರಿಹಾರ ಸಾಮಾಗ್ರಿ ಹೊತ್ತ 14  ಟ್ರಕ್‌ಗಳು ರಫಾ ಕ್ರಾಸಿಂಗ್‌ ಮೂಲಕ ಪ್ರವೇಶಿಸಿದೆ. ಆದರೆ ಯುಎನ್‌ ಕಚೇರಿಯು ಗಾಝಾಗೆ ಬೇಕಾಗಿರುವ ದೈನಂದಿನ ಸರಾಸರಿ ಅಗತ್ಯ ವಸ್ತುಗಳಲ್ಲಿ ಕೇವಲ 4% ಮಾತ್ರ ಬಂದಿದೆ ಎಂದು ಹೇಳಿದ್ದಾರೆ.

ಇದಲ್ಲದೆ ಇಸ್ರೇಲ್ ಸೇನೆಯು ಸೋಮವಾರ ಮುಂಜಾನೆ ಲೆಬನಾನ್‌ನಲ್ಲಿ ಎರಡು ಹೆಜ್ಬೊಲ್ಲಾ ಘಟಕಗಳನ್ನು ಹೊಡೆದು ಹಾಕಿದೆ. ಹೆಜ್ಬೊಲ್ಲಾ ಇಸ್ರೇಲ್ ಕಡೆಗೆ  ಕ್ಷಿಪಣಿಗಳು ಮತ್ತು ರಾಕೆಟ್‌ಗಳನ್ನು ಉಡಾಯಿಸುವ ಸಾಧ್ಯತೆ ಹಿನ್ನೆಲೆ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಹೇಳಿದೆ.

ಹಮಾಸ್‌ ಸಶಸ್ತ್ರ ಗುಂಪು ಇಸ್ರೇಲ್‌ ಮೇಲೆ ವಾಯು, ಭೂ ಮತ್ತು ಜಲ ಮಾರ್ಗಗಳಲ್ಲಿ ದಾಳಿ ನಡೆಸಿತ್ತು. ಆ ಬಳಿಕ ಇಸ್ರೇಲ್‌ ಯುದ್ಧವನ್ನು ಘೋಷಿಸಿತ್ತು. ಗಾಝಾ ಪಟ್ಟಿಗೆ ನೀರು, ಆಹಾರ, ವಿದ್ಯುತ್‌ ಸರಬರಾಜನ್ನು ತಡೆ ಹಿಡಿದಿತ್ತು.

ಇದನ್ನು ಓದಿ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಮಾಝ್ ಮಾಡಲು ಅವಕಾಶ ಕೊಟ್ಟ ಮುಖ್ಯ ಶಿಕ್ಷಕಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...