Homeಅಂತರಾಷ್ಟ್ರೀಯಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: 117 ಮಕ್ಕಳು ಸೇರಿ 266 ಫೆಲೆಸ್ತೀನಿಯರು ಸಾವು

ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: 117 ಮಕ್ಕಳು ಸೇರಿ 266 ಫೆಲೆಸ್ತೀನಿಯರು ಸಾವು

- Advertisement -
- Advertisement -

ಇಸ್ರೇಲ್‌ ಗಾಝಾ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದ್ದು, ಕಳೆದ 24 ಗಂಟೆಯಲ್ಲಿ 117 ಮಕ್ಕಳು ಸೇರಿ 266 ಫೆಲೆಸ್ತೀನೀಯರು ಬಲಿಯಾಗಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ವೆಸ್ಟ್ ಬ್ಯಾಂಕ್‌ನ ರಾಮಲ್ಲಾ ಬಳಿಯ ಜಲಜೋನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ ನಡೆಸಿ ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದು, ಹಲವರನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ.

ಪ್ಯಾಲೇಸ್ತೀನ್ ಮಾಧ್ಯಮಗಳ ಪ್ರಕಾರ, ಗಾಜಾದಲ್ಲಿನ ವಸತಿ ಕಟ್ಟಡಕ್ಕೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕನಿಷ್ಠ 30 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ. ಜಬಾಲಿಯಾ ನಿರಾಶ್ರಿತರ ಶಿಬಿರದ ಅಲ್-ಶುಹಾದಾ ಪ್ರದೇಶದಲ್ಲಿ ಈ ಕಟ್ಟಡವಿತ್ತು. ದಾಳಿಗೆ ಕಟ್ಟಡ  ನೆಲಸಮಗೊಂಡಿದ್ದು ಮತ್ತು ಹಲವಾರು ಅಕ್ಕಪಕ್ಕದ ಮನೆಗಳು ಕೂಡ ಧ್ವಂಸಗೊಂಡಿದೆ.

ಇಸ್ರೇಲ್‌ ದಾಳಿಯಿಂದ ಇತ್ತೀಚಿನ ವರದಿಯ ಪ್ರಕಾರ 4,600 ಜನರು ಕೊಲ್ಲಲ್ಪಟ್ಟಿದ್ದಾರೆ. ಮತ್ತು 14,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಝಾ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ಇಸ್ರೇಲಿ ವಾಯು ದಾಳಿಗಳಿಗೆ 117 ಮಕ್ಕಳ ಸಹಿತ 266 ಫೆಲೆಸ್ತೀನೀಯರು ಬಲಿಯಾಗಿದ್ದಾರೆ.

ಹಮಾಸ್‌ ನಡೆಸಿದ ದಾಳಿಗೆ 1,400 ಇಸ್ರೇಲ್‌ ಪ್ರಜೆಗಳು ಕೊಲ್ಲಲ್ಪಟ್ಟರು ಮತ್ತು 212 ಜನರನ್ನು ಒತ್ತೆಯಾಳಾಗಿರಿಸಲಾಗಿದೆ.

ಈ ಮಧ್ಯೆ ಈಜಿಪ್ಟ್‌ನಿಂದ ಗಾಝಾಗೆ ಪರಿಹಾರ ಸಾಮಾಗ್ರಿ ಹೊತ್ತ 14  ಟ್ರಕ್‌ಗಳು ರಫಾ ಕ್ರಾಸಿಂಗ್‌ ಮೂಲಕ ಪ್ರವೇಶಿಸಿದೆ. ಆದರೆ ಯುಎನ್‌ ಕಚೇರಿಯು ಗಾಝಾಗೆ ಬೇಕಾಗಿರುವ ದೈನಂದಿನ ಸರಾಸರಿ ಅಗತ್ಯ ವಸ್ತುಗಳಲ್ಲಿ ಕೇವಲ 4% ಮಾತ್ರ ಬಂದಿದೆ ಎಂದು ಹೇಳಿದ್ದಾರೆ.

ಇದಲ್ಲದೆ ಇಸ್ರೇಲ್ ಸೇನೆಯು ಸೋಮವಾರ ಮುಂಜಾನೆ ಲೆಬನಾನ್‌ನಲ್ಲಿ ಎರಡು ಹೆಜ್ಬೊಲ್ಲಾ ಘಟಕಗಳನ್ನು ಹೊಡೆದು ಹಾಕಿದೆ. ಹೆಜ್ಬೊಲ್ಲಾ ಇಸ್ರೇಲ್ ಕಡೆಗೆ  ಕ್ಷಿಪಣಿಗಳು ಮತ್ತು ರಾಕೆಟ್‌ಗಳನ್ನು ಉಡಾಯಿಸುವ ಸಾಧ್ಯತೆ ಹಿನ್ನೆಲೆ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಹೇಳಿದೆ.

ಹಮಾಸ್‌ ಸಶಸ್ತ್ರ ಗುಂಪು ಇಸ್ರೇಲ್‌ ಮೇಲೆ ವಾಯು, ಭೂ ಮತ್ತು ಜಲ ಮಾರ್ಗಗಳಲ್ಲಿ ದಾಳಿ ನಡೆಸಿತ್ತು. ಆ ಬಳಿಕ ಇಸ್ರೇಲ್‌ ಯುದ್ಧವನ್ನು ಘೋಷಿಸಿತ್ತು. ಗಾಝಾ ಪಟ್ಟಿಗೆ ನೀರು, ಆಹಾರ, ವಿದ್ಯುತ್‌ ಸರಬರಾಜನ್ನು ತಡೆ ಹಿಡಿದಿತ್ತು.

ಇದನ್ನು ಓದಿ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಮಾಝ್ ಮಾಡಲು ಅವಕಾಶ ಕೊಟ್ಟ ಮುಖ್ಯ ಶಿಕ್ಷಕಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...