Homeಮುಖಪುಟವಿಶ್ವ ಹಿಂದೂ ಪರಿಷತ್ ಸಭೆಯಲ್ಲಿ ಭಾಗವಹಿಸಿದ 30 ನಿವೃತ್ತ ನ್ಯಾಯಾಧೀಶರು : ವಕ್ಫ್ ಮಸೂದೆ, ಮತಾಂತರ...

ವಿಶ್ವ ಹಿಂದೂ ಪರಿಷತ್ ಸಭೆಯಲ್ಲಿ ಭಾಗವಹಿಸಿದ 30 ನಿವೃತ್ತ ನ್ಯಾಯಾಧೀಶರು : ವಕ್ಫ್ ಮಸೂದೆ, ಮತಾಂತರ ಕಾನೂನು ಕುರಿತು ಚರ್ಚೆ

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ನ(ವಿಹೆಚ್‌ಪಿ) ‘ವಿಧಿ ಪ್ರಕೋಷ್ಠ’ (ಕಾನೂನು ಕೋಶ) ಭಾನುವಾರ (ಸೆ.8) ಆಯೋಜಿಸಿದ್ದ ಸಭೆಯಲ್ಲಿ ಸುಪ್ರೀಂ ಕೋರ್ಟ್ ಮತ್ತು ವಿವಿಧ ಹೈಕೋರ್ಟ್‌ಗಳ ಸುಮಾರು 30 ನಿವೃತ್ತ ನ್ಯಾಯಾಧೀಶರು ಭಾಗವಹಿಸಿದ್ದು, ವಾರಣಾಸಿ, ಮಥುರಾ ದೇವಸ್ಥಾನ-ಮಸೀದಿ ಕಾನೂನು ವಿವಾದ, ವಕ್ಫ್ (ತಿದ್ದುಪಡಿ) ಮಸೂದೆ, ಧಾರ್ಮಿಕ ಮತಾಂತರ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿಯಾಗಿದೆ.

“ನಾವು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನಿವೃತ್ತ ನ್ಯಾಯಾಧೀಶರನ್ನು ಸಭೆಗೆ ಆಹ್ವಾನಿಸಿದ್ದೆವು. ಸಮಾಜದ ಮುಂದಿರುವ ಸಾಮೂಹಿಕ ಸಮಸ್ಯೆಗಳಾದ ವಕ್ಫ್ (ತಿದ್ದುಪಡಿ) ಮಸೂದೆ, ದೇವಸ್ಥಾನಗಳನ್ನು ವಾಪಸ್ ಪಡೆಯುವುದು, ಸರ್ಕಾರದ ನಿಯಂತ್ರಣದಲ್ಲಿರುವ ದೇವಸ್ಥಾನಗಳನ್ನು ಸಮಾಜಕ್ಕೆ ಹಸ್ತಾಂತರಿಸುವುದು, ಮತಾಂತರ ಇತ್ಯಾದಿಗಳ ಕುರಿತು ಚರ್ಚಿಸಲಾಗಿದೆ. ನ್ಯಾಯಾಧೀಶರು ಮತ್ತು ವಿಹೆಚ್‌ಪಿ ನಡುವೆ ಮುಕ್ತ ಅಭಿಪ್ರಾಯ ವಿನಿಮಯ ಸಭೆಯ ಉದ್ದೇಶವಾಗಿದೆ. ಇದರಿಂದ ಎರಡೂ ಕಡೆಯವರು ಪರಸ್ಪರ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ” ಎಂದು ವಿಹೆಚ್‌ಪಿ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವಿಚಾರ ವಿನಿಮಯಕ್ಕೆ ಇದೊಂದು ವೇದಿಕೆಯಾಗಿದೆ. ರಾಷ್ಟ್ರೀಯತೆ ಮತ್ತು ಹಿಂದುತ್ವದ ಬಗ್ಗೆ ಚರ್ಚೆ ನಡೆದಿದೆ. ಹಿಂದೂಗಳ ಮೇಲೆ ಪರಿಣಾಮ ಬೀರುವ ಕಾನೂನುಗಳು, ದೇವಾಲಯಗಳ ವಿಮೋಚನೆ, ಧಾರ್ಮಿಕ ಮತಾಂತರ, ಗೋಹತ್ಯೆ ಮತ್ತು ವಕ್ಫ್ ಬೋರ್ಡ್ ಕುರಿತು ಚರ್ಚಿಸಲಾಗಿದೆ” ಎಂದು ವಿಹೆಚ್‌ಪಿ ವಕ್ತಾರ ವಿನೋದ್ ಬನ್ಸಾಲ್ ಹೇಳಿರುವುದಾಗಿ ವರದಿ ತಿಳಿಸಿದೆ.

ಭಾನುವಾರ ರಾತ್ರಿ ಸಚಿವ ಮೇಘವಾಲ್ ಅವರು ಹಲವಾರು ಮಾಜಿ ನ್ಯಾಯಾಧೀಶರ ಜೊತೆ ಅಲೋಕ್ ಕುಮಾರ್ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಅವರಂತಹ ಹಿರಿಯ ವಿಹೆಚ್‌ಪಿ ನಾಯಕರನ್ನು ಒಳಗೊಂಡ ಫೋಟೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. “ಇಂದು ವಿಶ್ವ ಹಿಂದೂ ಪರಿಷತ್ತಿನ ಕಾನೂನು ಕೋಶ ಆಯೋಜಿಸಿದ್ದ ಸಭೆಯಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಉದ್ದೇಶದಿಂದ ನ್ಯಾಯಾಂಗ ಸುಧಾರಣೆಗಳ ಕುರಿತು ವಿವರವಾದ ಚರ್ಚೆ ನಡೆಯಿತು. ನಿವೃತ್ತ ನ್ಯಾಯಾಧೀಶರು, ನ್ಯಾಯಶಾಸ್ತ್ರಜ್ಞರು, ಹಿರಿಯ ವಕೀಲರು ಮತ್ತು ಬುದ್ಧಿಜೀವಿಗಳು ಉಪಸ್ಥಿತರಿದ್ದರು”ಎಂದು ಬರೆದುಕೊಂಡಿದ್ದರು.

ವಿಹೆಚ್‌ಪಿ ಮೂಲಗಳ ಪ್ರಕಾರ, ಸಮಕಾಲೀನ ಕಾನೂನು ಸಮಸ್ಯೆಗಳನ್ನು ಚರ್ಚಿಸುವುದರ ಜೊತೆಗೆ, ನಿವೃತ್ತಿಯ ನಂತರ ನ್ಯಾಯಾಧೀಶರ ಪಾತ್ರ ಕೊನೆಗೊಳ್ಳುವುದಿಲ್ಲ. ಅವರು ‘ರಾಷ್ಟ್ರ ನಿರ್ಮಾಣ’ ದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕೊಡುಗೆ ನೀಡಬೇಕು ಎಂದು ಹಿರಿಯ ವಿಹೆಚ್‌ಪಿ ನಾಯಕರೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಂಘ ಪರಿವಾರದ ಹಲವಾರು ಸೈದ್ಧಾಂತಿಕ ಪ್ರಕರಣಗಳು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವುದರಿಂದ ಈ ಬೆಳವಣಿಗೆಯು ಮಹತ್ವದ್ದಾಗಿದೆ. ವಾರಣಾಸಿಯ ಕಾಶಿ ವಿಶ್ವನಾಥ್-ಜ್ಞಾನವಾಪಿ ಮಸೀದಿ ಸಂಕೀರ್ಣ ಮತ್ತು ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಮಸೀದಿ ಈದ್ಗಾ ವಿವಾದಗಳು ಇದರಲ್ಲಿ ಸೇರಿವೆ.

ವಿವಿಧ ಬಿಜೆಪಿ ಆಡಳಿತದ ರಾಜ್ಯಗಳು ಜಾರಿಗೆ ತಂದ ಕೆಲವು ಮತಾಂತರ ವಿರೋಧಿ ಕಾನೂನುಗಳು ನ್ಯಾಯಾಲಯಗಳ ಪರಿಶೀಲನೆಗೆ ಒಳಪಟ್ಟಿವೆ. ವಕ್ಫ್ ಮಸೂದೆಯನ್ನು ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಲಾಗಿದೆ. ಬಿಜೆಪಿ ಪ್ರಮುಖ ಮಿತ್ರಪಕ್ಷಗಳಾದ ಜೆಡಿ(ಯು) ಮತ್ತು ಎಲ್‌ಜೆಪಿ ಈ ವಿಚಾರದಲ್ಲಿ ವ್ಯತಿರಿಕ್ತ ಅಭಿಪ್ರಾಯ ಹೊಂದಿದೆ.

ಇದನ್ನೂ ಓದಿ : ‘ಲೋಕಸಭೆ ಚುನಾವಣೆಗೂ ಮುನ್ನ ಜನರಲ್ಲಿ ಇದ್ದ ಭಯದ ಭಾವನೆ ಈಗ ಮಾಯವಾಗಿದೆ..’; ರಾಹುಲ್ ಅಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...