Homeಮುಖಪುಟವಿಶ್ವ ಹಿಂದೂ ಪರಿಷತ್ ಸಭೆಯಲ್ಲಿ ಭಾಗವಹಿಸಿದ 30 ನಿವೃತ್ತ ನ್ಯಾಯಾಧೀಶರು : ವಕ್ಫ್ ಮಸೂದೆ, ಮತಾಂತರ...

ವಿಶ್ವ ಹಿಂದೂ ಪರಿಷತ್ ಸಭೆಯಲ್ಲಿ ಭಾಗವಹಿಸಿದ 30 ನಿವೃತ್ತ ನ್ಯಾಯಾಧೀಶರು : ವಕ್ಫ್ ಮಸೂದೆ, ಮತಾಂತರ ಕಾನೂನು ಕುರಿತು ಚರ್ಚೆ

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ನ(ವಿಹೆಚ್‌ಪಿ) ‘ವಿಧಿ ಪ್ರಕೋಷ್ಠ’ (ಕಾನೂನು ಕೋಶ) ಭಾನುವಾರ (ಸೆ.8) ಆಯೋಜಿಸಿದ್ದ ಸಭೆಯಲ್ಲಿ ಸುಪ್ರೀಂ ಕೋರ್ಟ್ ಮತ್ತು ವಿವಿಧ ಹೈಕೋರ್ಟ್‌ಗಳ ಸುಮಾರು 30 ನಿವೃತ್ತ ನ್ಯಾಯಾಧೀಶರು ಭಾಗವಹಿಸಿದ್ದು, ವಾರಣಾಸಿ, ಮಥುರಾ ದೇವಸ್ಥಾನ-ಮಸೀದಿ ಕಾನೂನು ವಿವಾದ, ವಕ್ಫ್ (ತಿದ್ದುಪಡಿ) ಮಸೂದೆ, ಧಾರ್ಮಿಕ ಮತಾಂತರ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿಯಾಗಿದೆ.

“ನಾವು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನಿವೃತ್ತ ನ್ಯಾಯಾಧೀಶರನ್ನು ಸಭೆಗೆ ಆಹ್ವಾನಿಸಿದ್ದೆವು. ಸಮಾಜದ ಮುಂದಿರುವ ಸಾಮೂಹಿಕ ಸಮಸ್ಯೆಗಳಾದ ವಕ್ಫ್ (ತಿದ್ದುಪಡಿ) ಮಸೂದೆ, ದೇವಸ್ಥಾನಗಳನ್ನು ವಾಪಸ್ ಪಡೆಯುವುದು, ಸರ್ಕಾರದ ನಿಯಂತ್ರಣದಲ್ಲಿರುವ ದೇವಸ್ಥಾನಗಳನ್ನು ಸಮಾಜಕ್ಕೆ ಹಸ್ತಾಂತರಿಸುವುದು, ಮತಾಂತರ ಇತ್ಯಾದಿಗಳ ಕುರಿತು ಚರ್ಚಿಸಲಾಗಿದೆ. ನ್ಯಾಯಾಧೀಶರು ಮತ್ತು ವಿಹೆಚ್‌ಪಿ ನಡುವೆ ಮುಕ್ತ ಅಭಿಪ್ರಾಯ ವಿನಿಮಯ ಸಭೆಯ ಉದ್ದೇಶವಾಗಿದೆ. ಇದರಿಂದ ಎರಡೂ ಕಡೆಯವರು ಪರಸ್ಪರ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ” ಎಂದು ವಿಹೆಚ್‌ಪಿ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವಿಚಾರ ವಿನಿಮಯಕ್ಕೆ ಇದೊಂದು ವೇದಿಕೆಯಾಗಿದೆ. ರಾಷ್ಟ್ರೀಯತೆ ಮತ್ತು ಹಿಂದುತ್ವದ ಬಗ್ಗೆ ಚರ್ಚೆ ನಡೆದಿದೆ. ಹಿಂದೂಗಳ ಮೇಲೆ ಪರಿಣಾಮ ಬೀರುವ ಕಾನೂನುಗಳು, ದೇವಾಲಯಗಳ ವಿಮೋಚನೆ, ಧಾರ್ಮಿಕ ಮತಾಂತರ, ಗೋಹತ್ಯೆ ಮತ್ತು ವಕ್ಫ್ ಬೋರ್ಡ್ ಕುರಿತು ಚರ್ಚಿಸಲಾಗಿದೆ” ಎಂದು ವಿಹೆಚ್‌ಪಿ ವಕ್ತಾರ ವಿನೋದ್ ಬನ್ಸಾಲ್ ಹೇಳಿರುವುದಾಗಿ ವರದಿ ತಿಳಿಸಿದೆ.

ಭಾನುವಾರ ರಾತ್ರಿ ಸಚಿವ ಮೇಘವಾಲ್ ಅವರು ಹಲವಾರು ಮಾಜಿ ನ್ಯಾಯಾಧೀಶರ ಜೊತೆ ಅಲೋಕ್ ಕುಮಾರ್ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಅವರಂತಹ ಹಿರಿಯ ವಿಹೆಚ್‌ಪಿ ನಾಯಕರನ್ನು ಒಳಗೊಂಡ ಫೋಟೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. “ಇಂದು ವಿಶ್ವ ಹಿಂದೂ ಪರಿಷತ್ತಿನ ಕಾನೂನು ಕೋಶ ಆಯೋಜಿಸಿದ್ದ ಸಭೆಯಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಉದ್ದೇಶದಿಂದ ನ್ಯಾಯಾಂಗ ಸುಧಾರಣೆಗಳ ಕುರಿತು ವಿವರವಾದ ಚರ್ಚೆ ನಡೆಯಿತು. ನಿವೃತ್ತ ನ್ಯಾಯಾಧೀಶರು, ನ್ಯಾಯಶಾಸ್ತ್ರಜ್ಞರು, ಹಿರಿಯ ವಕೀಲರು ಮತ್ತು ಬುದ್ಧಿಜೀವಿಗಳು ಉಪಸ್ಥಿತರಿದ್ದರು”ಎಂದು ಬರೆದುಕೊಂಡಿದ್ದರು.

ವಿಹೆಚ್‌ಪಿ ಮೂಲಗಳ ಪ್ರಕಾರ, ಸಮಕಾಲೀನ ಕಾನೂನು ಸಮಸ್ಯೆಗಳನ್ನು ಚರ್ಚಿಸುವುದರ ಜೊತೆಗೆ, ನಿವೃತ್ತಿಯ ನಂತರ ನ್ಯಾಯಾಧೀಶರ ಪಾತ್ರ ಕೊನೆಗೊಳ್ಳುವುದಿಲ್ಲ. ಅವರು ‘ರಾಷ್ಟ್ರ ನಿರ್ಮಾಣ’ ದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕೊಡುಗೆ ನೀಡಬೇಕು ಎಂದು ಹಿರಿಯ ವಿಹೆಚ್‌ಪಿ ನಾಯಕರೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಂಘ ಪರಿವಾರದ ಹಲವಾರು ಸೈದ್ಧಾಂತಿಕ ಪ್ರಕರಣಗಳು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವುದರಿಂದ ಈ ಬೆಳವಣಿಗೆಯು ಮಹತ್ವದ್ದಾಗಿದೆ. ವಾರಣಾಸಿಯ ಕಾಶಿ ವಿಶ್ವನಾಥ್-ಜ್ಞಾನವಾಪಿ ಮಸೀದಿ ಸಂಕೀರ್ಣ ಮತ್ತು ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಮಸೀದಿ ಈದ್ಗಾ ವಿವಾದಗಳು ಇದರಲ್ಲಿ ಸೇರಿವೆ.

ವಿವಿಧ ಬಿಜೆಪಿ ಆಡಳಿತದ ರಾಜ್ಯಗಳು ಜಾರಿಗೆ ತಂದ ಕೆಲವು ಮತಾಂತರ ವಿರೋಧಿ ಕಾನೂನುಗಳು ನ್ಯಾಯಾಲಯಗಳ ಪರಿಶೀಲನೆಗೆ ಒಳಪಟ್ಟಿವೆ. ವಕ್ಫ್ ಮಸೂದೆಯನ್ನು ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಲಾಗಿದೆ. ಬಿಜೆಪಿ ಪ್ರಮುಖ ಮಿತ್ರಪಕ್ಷಗಳಾದ ಜೆಡಿ(ಯು) ಮತ್ತು ಎಲ್‌ಜೆಪಿ ಈ ವಿಚಾರದಲ್ಲಿ ವ್ಯತಿರಿಕ್ತ ಅಭಿಪ್ರಾಯ ಹೊಂದಿದೆ.

ಇದನ್ನೂ ಓದಿ : ‘ಲೋಕಸಭೆ ಚುನಾವಣೆಗೂ ಮುನ್ನ ಜನರಲ್ಲಿ ಇದ್ದ ಭಯದ ಭಾವನೆ ಈಗ ಮಾಯವಾಗಿದೆ..’; ರಾಹುಲ್ ಅಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...