Homeಮುಖಪುಟವಿಶ್ವ ಹಿಂದೂ ಪರಿಷತ್ ಸಭೆಯಲ್ಲಿ ಭಾಗವಹಿಸಿದ 30 ನಿವೃತ್ತ ನ್ಯಾಯಾಧೀಶರು : ವಕ್ಫ್ ಮಸೂದೆ, ಮತಾಂತರ...

ವಿಶ್ವ ಹಿಂದೂ ಪರಿಷತ್ ಸಭೆಯಲ್ಲಿ ಭಾಗವಹಿಸಿದ 30 ನಿವೃತ್ತ ನ್ಯಾಯಾಧೀಶರು : ವಕ್ಫ್ ಮಸೂದೆ, ಮತಾಂತರ ಕಾನೂನು ಕುರಿತು ಚರ್ಚೆ

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ನ(ವಿಹೆಚ್‌ಪಿ) ‘ವಿಧಿ ಪ್ರಕೋಷ್ಠ’ (ಕಾನೂನು ಕೋಶ) ಭಾನುವಾರ (ಸೆ.8) ಆಯೋಜಿಸಿದ್ದ ಸಭೆಯಲ್ಲಿ ಸುಪ್ರೀಂ ಕೋರ್ಟ್ ಮತ್ತು ವಿವಿಧ ಹೈಕೋರ್ಟ್‌ಗಳ ಸುಮಾರು 30 ನಿವೃತ್ತ ನ್ಯಾಯಾಧೀಶರು ಭಾಗವಹಿಸಿದ್ದು, ವಾರಣಾಸಿ, ಮಥುರಾ ದೇವಸ್ಥಾನ-ಮಸೀದಿ ಕಾನೂನು ವಿವಾದ, ವಕ್ಫ್ (ತಿದ್ದುಪಡಿ) ಮಸೂದೆ, ಧಾರ್ಮಿಕ ಮತಾಂತರ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿಯಾಗಿದೆ.

“ನಾವು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನಿವೃತ್ತ ನ್ಯಾಯಾಧೀಶರನ್ನು ಸಭೆಗೆ ಆಹ್ವಾನಿಸಿದ್ದೆವು. ಸಮಾಜದ ಮುಂದಿರುವ ಸಾಮೂಹಿಕ ಸಮಸ್ಯೆಗಳಾದ ವಕ್ಫ್ (ತಿದ್ದುಪಡಿ) ಮಸೂದೆ, ದೇವಸ್ಥಾನಗಳನ್ನು ವಾಪಸ್ ಪಡೆಯುವುದು, ಸರ್ಕಾರದ ನಿಯಂತ್ರಣದಲ್ಲಿರುವ ದೇವಸ್ಥಾನಗಳನ್ನು ಸಮಾಜಕ್ಕೆ ಹಸ್ತಾಂತರಿಸುವುದು, ಮತಾಂತರ ಇತ್ಯಾದಿಗಳ ಕುರಿತು ಚರ್ಚಿಸಲಾಗಿದೆ. ನ್ಯಾಯಾಧೀಶರು ಮತ್ತು ವಿಹೆಚ್‌ಪಿ ನಡುವೆ ಮುಕ್ತ ಅಭಿಪ್ರಾಯ ವಿನಿಮಯ ಸಭೆಯ ಉದ್ದೇಶವಾಗಿದೆ. ಇದರಿಂದ ಎರಡೂ ಕಡೆಯವರು ಪರಸ್ಪರ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ” ಎಂದು ವಿಹೆಚ್‌ಪಿ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವಿಚಾರ ವಿನಿಮಯಕ್ಕೆ ಇದೊಂದು ವೇದಿಕೆಯಾಗಿದೆ. ರಾಷ್ಟ್ರೀಯತೆ ಮತ್ತು ಹಿಂದುತ್ವದ ಬಗ್ಗೆ ಚರ್ಚೆ ನಡೆದಿದೆ. ಹಿಂದೂಗಳ ಮೇಲೆ ಪರಿಣಾಮ ಬೀರುವ ಕಾನೂನುಗಳು, ದೇವಾಲಯಗಳ ವಿಮೋಚನೆ, ಧಾರ್ಮಿಕ ಮತಾಂತರ, ಗೋಹತ್ಯೆ ಮತ್ತು ವಕ್ಫ್ ಬೋರ್ಡ್ ಕುರಿತು ಚರ್ಚಿಸಲಾಗಿದೆ” ಎಂದು ವಿಹೆಚ್‌ಪಿ ವಕ್ತಾರ ವಿನೋದ್ ಬನ್ಸಾಲ್ ಹೇಳಿರುವುದಾಗಿ ವರದಿ ತಿಳಿಸಿದೆ.

ಭಾನುವಾರ ರಾತ್ರಿ ಸಚಿವ ಮೇಘವಾಲ್ ಅವರು ಹಲವಾರು ಮಾಜಿ ನ್ಯಾಯಾಧೀಶರ ಜೊತೆ ಅಲೋಕ್ ಕುಮಾರ್ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಅವರಂತಹ ಹಿರಿಯ ವಿಹೆಚ್‌ಪಿ ನಾಯಕರನ್ನು ಒಳಗೊಂಡ ಫೋಟೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. “ಇಂದು ವಿಶ್ವ ಹಿಂದೂ ಪರಿಷತ್ತಿನ ಕಾನೂನು ಕೋಶ ಆಯೋಜಿಸಿದ್ದ ಸಭೆಯಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಉದ್ದೇಶದಿಂದ ನ್ಯಾಯಾಂಗ ಸುಧಾರಣೆಗಳ ಕುರಿತು ವಿವರವಾದ ಚರ್ಚೆ ನಡೆಯಿತು. ನಿವೃತ್ತ ನ್ಯಾಯಾಧೀಶರು, ನ್ಯಾಯಶಾಸ್ತ್ರಜ್ಞರು, ಹಿರಿಯ ವಕೀಲರು ಮತ್ತು ಬುದ್ಧಿಜೀವಿಗಳು ಉಪಸ್ಥಿತರಿದ್ದರು”ಎಂದು ಬರೆದುಕೊಂಡಿದ್ದರು.

ವಿಹೆಚ್‌ಪಿ ಮೂಲಗಳ ಪ್ರಕಾರ, ಸಮಕಾಲೀನ ಕಾನೂನು ಸಮಸ್ಯೆಗಳನ್ನು ಚರ್ಚಿಸುವುದರ ಜೊತೆಗೆ, ನಿವೃತ್ತಿಯ ನಂತರ ನ್ಯಾಯಾಧೀಶರ ಪಾತ್ರ ಕೊನೆಗೊಳ್ಳುವುದಿಲ್ಲ. ಅವರು ‘ರಾಷ್ಟ್ರ ನಿರ್ಮಾಣ’ ದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕೊಡುಗೆ ನೀಡಬೇಕು ಎಂದು ಹಿರಿಯ ವಿಹೆಚ್‌ಪಿ ನಾಯಕರೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಂಘ ಪರಿವಾರದ ಹಲವಾರು ಸೈದ್ಧಾಂತಿಕ ಪ್ರಕರಣಗಳು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವುದರಿಂದ ಈ ಬೆಳವಣಿಗೆಯು ಮಹತ್ವದ್ದಾಗಿದೆ. ವಾರಣಾಸಿಯ ಕಾಶಿ ವಿಶ್ವನಾಥ್-ಜ್ಞಾನವಾಪಿ ಮಸೀದಿ ಸಂಕೀರ್ಣ ಮತ್ತು ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಮಸೀದಿ ಈದ್ಗಾ ವಿವಾದಗಳು ಇದರಲ್ಲಿ ಸೇರಿವೆ.

ವಿವಿಧ ಬಿಜೆಪಿ ಆಡಳಿತದ ರಾಜ್ಯಗಳು ಜಾರಿಗೆ ತಂದ ಕೆಲವು ಮತಾಂತರ ವಿರೋಧಿ ಕಾನೂನುಗಳು ನ್ಯಾಯಾಲಯಗಳ ಪರಿಶೀಲನೆಗೆ ಒಳಪಟ್ಟಿವೆ. ವಕ್ಫ್ ಮಸೂದೆಯನ್ನು ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಲಾಗಿದೆ. ಬಿಜೆಪಿ ಪ್ರಮುಖ ಮಿತ್ರಪಕ್ಷಗಳಾದ ಜೆಡಿ(ಯು) ಮತ್ತು ಎಲ್‌ಜೆಪಿ ಈ ವಿಚಾರದಲ್ಲಿ ವ್ಯತಿರಿಕ್ತ ಅಭಿಪ್ರಾಯ ಹೊಂದಿದೆ.

ಇದನ್ನೂ ಓದಿ : ‘ಲೋಕಸಭೆ ಚುನಾವಣೆಗೂ ಮುನ್ನ ಜನರಲ್ಲಿ ಇದ್ದ ಭಯದ ಭಾವನೆ ಈಗ ಮಾಯವಾಗಿದೆ..’; ರಾಹುಲ್ ಅಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...