Homeಮುಖಪುಟವಿಶ್ವ ಹಿಂದೂ ಪರಿಷತ್ ಸಭೆಯಲ್ಲಿ ಭಾಗವಹಿಸಿದ 30 ನಿವೃತ್ತ ನ್ಯಾಯಾಧೀಶರು : ವಕ್ಫ್ ಮಸೂದೆ, ಮತಾಂತರ...

ವಿಶ್ವ ಹಿಂದೂ ಪರಿಷತ್ ಸಭೆಯಲ್ಲಿ ಭಾಗವಹಿಸಿದ 30 ನಿವೃತ್ತ ನ್ಯಾಯಾಧೀಶರು : ವಕ್ಫ್ ಮಸೂದೆ, ಮತಾಂತರ ಕಾನೂನು ಕುರಿತು ಚರ್ಚೆ

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ನ(ವಿಹೆಚ್‌ಪಿ) ‘ವಿಧಿ ಪ್ರಕೋಷ್ಠ’ (ಕಾನೂನು ಕೋಶ) ಭಾನುವಾರ (ಸೆ.8) ಆಯೋಜಿಸಿದ್ದ ಸಭೆಯಲ್ಲಿ ಸುಪ್ರೀಂ ಕೋರ್ಟ್ ಮತ್ತು ವಿವಿಧ ಹೈಕೋರ್ಟ್‌ಗಳ ಸುಮಾರು 30 ನಿವೃತ್ತ ನ್ಯಾಯಾಧೀಶರು ಭಾಗವಹಿಸಿದ್ದು, ವಾರಣಾಸಿ, ಮಥುರಾ ದೇವಸ್ಥಾನ-ಮಸೀದಿ ಕಾನೂನು ವಿವಾದ, ವಕ್ಫ್ (ತಿದ್ದುಪಡಿ) ಮಸೂದೆ, ಧಾರ್ಮಿಕ ಮತಾಂತರ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿಯಾಗಿದೆ.

“ನಾವು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನಿವೃತ್ತ ನ್ಯಾಯಾಧೀಶರನ್ನು ಸಭೆಗೆ ಆಹ್ವಾನಿಸಿದ್ದೆವು. ಸಮಾಜದ ಮುಂದಿರುವ ಸಾಮೂಹಿಕ ಸಮಸ್ಯೆಗಳಾದ ವಕ್ಫ್ (ತಿದ್ದುಪಡಿ) ಮಸೂದೆ, ದೇವಸ್ಥಾನಗಳನ್ನು ವಾಪಸ್ ಪಡೆಯುವುದು, ಸರ್ಕಾರದ ನಿಯಂತ್ರಣದಲ್ಲಿರುವ ದೇವಸ್ಥಾನಗಳನ್ನು ಸಮಾಜಕ್ಕೆ ಹಸ್ತಾಂತರಿಸುವುದು, ಮತಾಂತರ ಇತ್ಯಾದಿಗಳ ಕುರಿತು ಚರ್ಚಿಸಲಾಗಿದೆ. ನ್ಯಾಯಾಧೀಶರು ಮತ್ತು ವಿಹೆಚ್‌ಪಿ ನಡುವೆ ಮುಕ್ತ ಅಭಿಪ್ರಾಯ ವಿನಿಮಯ ಸಭೆಯ ಉದ್ದೇಶವಾಗಿದೆ. ಇದರಿಂದ ಎರಡೂ ಕಡೆಯವರು ಪರಸ್ಪರ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ” ಎಂದು ವಿಹೆಚ್‌ಪಿ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವಿಚಾರ ವಿನಿಮಯಕ್ಕೆ ಇದೊಂದು ವೇದಿಕೆಯಾಗಿದೆ. ರಾಷ್ಟ್ರೀಯತೆ ಮತ್ತು ಹಿಂದುತ್ವದ ಬಗ್ಗೆ ಚರ್ಚೆ ನಡೆದಿದೆ. ಹಿಂದೂಗಳ ಮೇಲೆ ಪರಿಣಾಮ ಬೀರುವ ಕಾನೂನುಗಳು, ದೇವಾಲಯಗಳ ವಿಮೋಚನೆ, ಧಾರ್ಮಿಕ ಮತಾಂತರ, ಗೋಹತ್ಯೆ ಮತ್ತು ವಕ್ಫ್ ಬೋರ್ಡ್ ಕುರಿತು ಚರ್ಚಿಸಲಾಗಿದೆ” ಎಂದು ವಿಹೆಚ್‌ಪಿ ವಕ್ತಾರ ವಿನೋದ್ ಬನ್ಸಾಲ್ ಹೇಳಿರುವುದಾಗಿ ವರದಿ ತಿಳಿಸಿದೆ.

ಭಾನುವಾರ ರಾತ್ರಿ ಸಚಿವ ಮೇಘವಾಲ್ ಅವರು ಹಲವಾರು ಮಾಜಿ ನ್ಯಾಯಾಧೀಶರ ಜೊತೆ ಅಲೋಕ್ ಕುಮಾರ್ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಅವರಂತಹ ಹಿರಿಯ ವಿಹೆಚ್‌ಪಿ ನಾಯಕರನ್ನು ಒಳಗೊಂಡ ಫೋಟೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. “ಇಂದು ವಿಶ್ವ ಹಿಂದೂ ಪರಿಷತ್ತಿನ ಕಾನೂನು ಕೋಶ ಆಯೋಜಿಸಿದ್ದ ಸಭೆಯಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಉದ್ದೇಶದಿಂದ ನ್ಯಾಯಾಂಗ ಸುಧಾರಣೆಗಳ ಕುರಿತು ವಿವರವಾದ ಚರ್ಚೆ ನಡೆಯಿತು. ನಿವೃತ್ತ ನ್ಯಾಯಾಧೀಶರು, ನ್ಯಾಯಶಾಸ್ತ್ರಜ್ಞರು, ಹಿರಿಯ ವಕೀಲರು ಮತ್ತು ಬುದ್ಧಿಜೀವಿಗಳು ಉಪಸ್ಥಿತರಿದ್ದರು”ಎಂದು ಬರೆದುಕೊಂಡಿದ್ದರು.

ವಿಹೆಚ್‌ಪಿ ಮೂಲಗಳ ಪ್ರಕಾರ, ಸಮಕಾಲೀನ ಕಾನೂನು ಸಮಸ್ಯೆಗಳನ್ನು ಚರ್ಚಿಸುವುದರ ಜೊತೆಗೆ, ನಿವೃತ್ತಿಯ ನಂತರ ನ್ಯಾಯಾಧೀಶರ ಪಾತ್ರ ಕೊನೆಗೊಳ್ಳುವುದಿಲ್ಲ. ಅವರು ‘ರಾಷ್ಟ್ರ ನಿರ್ಮಾಣ’ ದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕೊಡುಗೆ ನೀಡಬೇಕು ಎಂದು ಹಿರಿಯ ವಿಹೆಚ್‌ಪಿ ನಾಯಕರೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಂಘ ಪರಿವಾರದ ಹಲವಾರು ಸೈದ್ಧಾಂತಿಕ ಪ್ರಕರಣಗಳು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವುದರಿಂದ ಈ ಬೆಳವಣಿಗೆಯು ಮಹತ್ವದ್ದಾಗಿದೆ. ವಾರಣಾಸಿಯ ಕಾಶಿ ವಿಶ್ವನಾಥ್-ಜ್ಞಾನವಾಪಿ ಮಸೀದಿ ಸಂಕೀರ್ಣ ಮತ್ತು ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಮಸೀದಿ ಈದ್ಗಾ ವಿವಾದಗಳು ಇದರಲ್ಲಿ ಸೇರಿವೆ.

ವಿವಿಧ ಬಿಜೆಪಿ ಆಡಳಿತದ ರಾಜ್ಯಗಳು ಜಾರಿಗೆ ತಂದ ಕೆಲವು ಮತಾಂತರ ವಿರೋಧಿ ಕಾನೂನುಗಳು ನ್ಯಾಯಾಲಯಗಳ ಪರಿಶೀಲನೆಗೆ ಒಳಪಟ್ಟಿವೆ. ವಕ್ಫ್ ಮಸೂದೆಯನ್ನು ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಲಾಗಿದೆ. ಬಿಜೆಪಿ ಪ್ರಮುಖ ಮಿತ್ರಪಕ್ಷಗಳಾದ ಜೆಡಿ(ಯು) ಮತ್ತು ಎಲ್‌ಜೆಪಿ ಈ ವಿಚಾರದಲ್ಲಿ ವ್ಯತಿರಿಕ್ತ ಅಭಿಪ್ರಾಯ ಹೊಂದಿದೆ.

ಇದನ್ನೂ ಓದಿ : ‘ಲೋಕಸಭೆ ಚುನಾವಣೆಗೂ ಮುನ್ನ ಜನರಲ್ಲಿ ಇದ್ದ ಭಯದ ಭಾವನೆ ಈಗ ಮಾಯವಾಗಿದೆ..’; ರಾಹುಲ್ ಅಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...