Homeಮುಖಪುಟಸ್ಟ್ರೆಚ್ಚರ್‌ ತಳ್ಳಲು 30ರೂ ಲಂಚ ಬೇಡಿಕೆ; ತಾತನ ಸ್ಟ್ರೆಚ್ಚರ್‌ ತಳ್ಳಿದ 6 ವರ್ಷದ ಬಾಲಕ!

ಸ್ಟ್ರೆಚ್ಚರ್‌ ತಳ್ಳಲು 30ರೂ ಲಂಚ ಬೇಡಿಕೆ; ತಾತನ ಸ್ಟ್ರೆಚ್ಚರ್‌ ತಳ್ಳಿದ 6 ವರ್ಷದ ಬಾಲಕ!

ಪ್ರತಿ ಬಾರಿ ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ 30 ರೂಪಾಯಿ ಕೇಳುತ್ತಿದ್ದು, ಸಿಬ್ಬಂದಿಗೆ ಹಣ ನೀಡಲು ಒಪ್ಪದಿದ್ದಾಗ ಚೆಡಿಯನ್ನು ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದರು ಎಂದು ಬಿಂದು ದೇವಿ ಹೇಳಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ 6 ವರ್ಷದ ಮಗು ತನ್ನ ತಾತನನ್ನು ಸ್ಟ್ರೆಚ್ಚರ್‌ನಲ್ಲಿ ಮಲಗಿಸಿ ತಳ್ಳಿಕೊಂಡು ಹೋಗುವ ಅಘಾತಕಾರಿ ವೀಡಿಯೊ ವೈರಲಾಗಿದ್ದು, ದೇಶದಾದ್ಯಂತ ಭಾರೀ ಆಕ್ರೋಶ ಹುಟ್ಟಿಸಿದೆ.

ರೋಗಿಯ ಡ್ರೆಸ್ಸಿಂಗ್‌ ಮಾಡಿಸಲು ಸ್ಟ್ರೆಚ್ಚರ್‌ ಅನ್ನು ತಳ್ಳಲು ಆಸ್ಪತ್ರೆಯ ಸಿಬ್ಬಂದಿಯು 30ರೂ ಲಂಚ ಕೇಳಿದ್ದರಿಂದ ರೋಗಿಯ ಮಗಳು ಮತ್ತು ಆಕೆಯ ಆರು ವರ್ಷದ ಮಗು ಸೇರಿ ಸ್ಟ್ರೆಚ್ಚರ್‌ ನೂಕಿಕೊಂಡು ಹೋಗಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಸಂಬಂಧಪಟ್ಟ ನೌಕರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಡ್ರೆಸ್ಸಿಂಗ್ ಮಾಡಿಸುವ ಸಲುವಾಗಿ ಸ್ಟ್ರೆಚರ್ ತಳ್ಳಲು 30 ರೂ ಲಂಚ ಕೇಳಿದ ಸಿಬ್ಬಂದಿ. ಲಂಚ ಕೊಡಲು ಹಣವಿಲ್ಲದೇ ತನ್ನ 6 ವರ್ಷದ ಮಗ ಶಿವಂ ಯಾದವ್…

Posted by Naanu Gauri on Tuesday, July 21, 2020

ಘಟನೆ ಏನು ?

ಉತ್ತರ ಪ್ರದೇಶದ ಡಿಯೋರಿಯಾದ ಬರ್ಹಾಜ್ ಪ್ರದೇಶದ ಗೌರಾ ಗ್ರಾಮದ ನಿವಾಸಿ ಚೆಡಿ ಯಾದವ್ ಗಾಯಗೊಂಡಿದ್ದು, ಅವರನ್ನು ಡಿಯೋರಿಯಾ ಜಿಲ್ಲಾ ಆಸ್ಪತ್ರೆಯ ಸರ್ಜಿಕಲ್ ವಾರ್ಡ್‌ಗೆ ದಾಖಲಿಸಲಾಗಿತ್ತು. ಚೆಡಿ ಯಾದವ್ ಪುತ್ರಿ ಬಿಂದುದೇವಿ ಮೂರು ನಾಲ್ಕು ದಿನಗಳಿಂದ ತಂದೆಯೊಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿದ್ದು, ತನ್ನ ತಂದೆಯನ್ನು ಗಾಯದ ಡ್ರೆಸ್ಸಿಂಗ್‌ಗಾಗಿ ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯಬೇಕಾಗಿತ್ತು.

ಆದರೆ ಪ್ರತಿ ಬಾರಿ ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ 30 ರೂಪಾಯಿ ಕೇಳುತ್ತಿದ್ದು, ಸಿಬ್ಬಂದಿಗೆ ಹಣ ನೀಡಲು ಒಪ್ಪದಿದ್ದಾಗ ಚೆಡಿಯನ್ನು ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದರು ಎಂದು ಬಿಂದು ದೇವಿ ಹೇಳಿದ್ದಾರೆ.

ನಂತರ ಬಿಂದು ತನ್ನ ಆರು ವರ್ಷದ ಮಗು ಶಿವಂ ಯಾದವ್ ಸಹಾಯದಿಂದ ತಂದೆಯನ್ನು ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಯಾರೋ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ವೈರಲ್ ಮಾಡಿದ್ದಾರೆ.

ದೇಶದಾದ್ಯಂತ ಭಾರಿ ಆಕ್ರೋಶ

ಘಟನೆಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ದೇಶದ ಪ್ರಖ್ಯಾತ ವಕೀಲರಾದ ಪ್ರಶಾಂತ್ ಭೂಷಣ್ ಯುಪಿಯಲ್ಲಿ ಗೂಂಡಾ ರಾಜ್ಯ ಮುಂದುವರೆದಿದ್ದು ಸಾಮಾನ್ಯ ಆರೋಗ್ಯ ಸೇವೆಗಳು ಕುಸಿಯುತ್ತಿದೆ ಎಂದು ಹೇಳಿದ್ದಾರೆ.

ಯುಪಿ ಯಲ್ಲಿ ಸಾಮಾನ್ಯವಾಗಿ ಆರೋಗ್ಯ ಸೇವೆಗಳು ಕುಸಿಯುತ್ತಿದೆ. ನಿರ್ದಿಷ್ಟವಾಗಿ ಆದಿತ್ಯನಾಥ್ ಅವರ ಕ್ಷೇತ್ರವಾದ ಯುಪಿಯಲ್ಲಿ ಗೂಂಡಾ ರಾಜ್ ಮುಂದುವರೆದಿದೆ. ಡಾ. ಕಫೀಲ್ ಖಾನ್ ಅವರಂತಹ ಉತ್ತಮ ವೈದ್ಯರು ಜೈಲಿನಲ್ಲಿ ಇದ್ದಾರೆ ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಮೊಹಮ್ಮದ್ ಆತಿಫ್ ಎಂಬುವವರು ತಪ್ಪಿತಸ್ಥರನ್ನು ಬಂಧಿಸದಿದ್ದರೆ ಅವಮಾನಕರ ಎಂದು ಟ್ವೀಟ್ ಮಾಡಿದ್ದಾರೆ.

ಮೊಹುವ ಮೊಹಿತ್ರ ಫ್ಯಾನ್ ಪೇಜ್ ನಿಂದ “ಆತ್ಮನಿರ್ಭರ ಭಾರತ ಅಂದರೆ ಇದು” ಎಂದು ವ್ಯಂಗ್ಯ ಮಾಡಲಾಗಿದೆ.

ಪತ್ರಕರ್ತನಿಖಿಲ್ ಚೌದರಿ “ನಾಲ್ಕು ವರ್ಷದ ಬಾಲಕ ಸ್ಟ್ರೆಚ್ಚರ್ ತಳ್ಳುತ್ತಿದ್ದಾನೆ. ಇದು ಆತ್ಮನಿರ್ಭರ ಭಾರತದ ಉದಾಹರಣೆ” ಎಂದು ಟ್ವೀಟ್ ಮಾಡಿದ್ದಾರೆ.


ಓದಿ:ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ ಆಕ್ರೋಶ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...