Homeಮುಖಪುಟಸ್ಟ್ರೆಚ್ಚರ್‌ ತಳ್ಳಲು 30ರೂ ಲಂಚ ಬೇಡಿಕೆ; ತಾತನ ಸ್ಟ್ರೆಚ್ಚರ್‌ ತಳ್ಳಿದ 6 ವರ್ಷದ ಬಾಲಕ!

ಸ್ಟ್ರೆಚ್ಚರ್‌ ತಳ್ಳಲು 30ರೂ ಲಂಚ ಬೇಡಿಕೆ; ತಾತನ ಸ್ಟ್ರೆಚ್ಚರ್‌ ತಳ್ಳಿದ 6 ವರ್ಷದ ಬಾಲಕ!

ಪ್ರತಿ ಬಾರಿ ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ 30 ರೂಪಾಯಿ ಕೇಳುತ್ತಿದ್ದು, ಸಿಬ್ಬಂದಿಗೆ ಹಣ ನೀಡಲು ಒಪ್ಪದಿದ್ದಾಗ ಚೆಡಿಯನ್ನು ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದರು ಎಂದು ಬಿಂದು ದೇವಿ ಹೇಳಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ 6 ವರ್ಷದ ಮಗು ತನ್ನ ತಾತನನ್ನು ಸ್ಟ್ರೆಚ್ಚರ್‌ನಲ್ಲಿ ಮಲಗಿಸಿ ತಳ್ಳಿಕೊಂಡು ಹೋಗುವ ಅಘಾತಕಾರಿ ವೀಡಿಯೊ ವೈರಲಾಗಿದ್ದು, ದೇಶದಾದ್ಯಂತ ಭಾರೀ ಆಕ್ರೋಶ ಹುಟ್ಟಿಸಿದೆ.

ರೋಗಿಯ ಡ್ರೆಸ್ಸಿಂಗ್‌ ಮಾಡಿಸಲು ಸ್ಟ್ರೆಚ್ಚರ್‌ ಅನ್ನು ತಳ್ಳಲು ಆಸ್ಪತ್ರೆಯ ಸಿಬ್ಬಂದಿಯು 30ರೂ ಲಂಚ ಕೇಳಿದ್ದರಿಂದ ರೋಗಿಯ ಮಗಳು ಮತ್ತು ಆಕೆಯ ಆರು ವರ್ಷದ ಮಗು ಸೇರಿ ಸ್ಟ್ರೆಚ್ಚರ್‌ ನೂಕಿಕೊಂಡು ಹೋಗಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಸಂಬಂಧಪಟ್ಟ ನೌಕರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಡ್ರೆಸ್ಸಿಂಗ್ ಮಾಡಿಸುವ ಸಲುವಾಗಿ ಸ್ಟ್ರೆಚರ್ ತಳ್ಳಲು 30 ರೂ ಲಂಚ ಕೇಳಿದ ಸಿಬ್ಬಂದಿ. ಲಂಚ ಕೊಡಲು ಹಣವಿಲ್ಲದೇ ತನ್ನ 6 ವರ್ಷದ ಮಗ ಶಿವಂ ಯಾದವ್…

Posted by Naanu Gauri on Tuesday, July 21, 2020

ಘಟನೆ ಏನು ?

ಉತ್ತರ ಪ್ರದೇಶದ ಡಿಯೋರಿಯಾದ ಬರ್ಹಾಜ್ ಪ್ರದೇಶದ ಗೌರಾ ಗ್ರಾಮದ ನಿವಾಸಿ ಚೆಡಿ ಯಾದವ್ ಗಾಯಗೊಂಡಿದ್ದು, ಅವರನ್ನು ಡಿಯೋರಿಯಾ ಜಿಲ್ಲಾ ಆಸ್ಪತ್ರೆಯ ಸರ್ಜಿಕಲ್ ವಾರ್ಡ್‌ಗೆ ದಾಖಲಿಸಲಾಗಿತ್ತು. ಚೆಡಿ ಯಾದವ್ ಪುತ್ರಿ ಬಿಂದುದೇವಿ ಮೂರು ನಾಲ್ಕು ದಿನಗಳಿಂದ ತಂದೆಯೊಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿದ್ದು, ತನ್ನ ತಂದೆಯನ್ನು ಗಾಯದ ಡ್ರೆಸ್ಸಿಂಗ್‌ಗಾಗಿ ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯಬೇಕಾಗಿತ್ತು.

ಆದರೆ ಪ್ರತಿ ಬಾರಿ ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ 30 ರೂಪಾಯಿ ಕೇಳುತ್ತಿದ್ದು, ಸಿಬ್ಬಂದಿಗೆ ಹಣ ನೀಡಲು ಒಪ್ಪದಿದ್ದಾಗ ಚೆಡಿಯನ್ನು ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದರು ಎಂದು ಬಿಂದು ದೇವಿ ಹೇಳಿದ್ದಾರೆ.

ನಂತರ ಬಿಂದು ತನ್ನ ಆರು ವರ್ಷದ ಮಗು ಶಿವಂ ಯಾದವ್ ಸಹಾಯದಿಂದ ತಂದೆಯನ್ನು ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಯಾರೋ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ವೈರಲ್ ಮಾಡಿದ್ದಾರೆ.

ದೇಶದಾದ್ಯಂತ ಭಾರಿ ಆಕ್ರೋಶ

ಘಟನೆಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ದೇಶದ ಪ್ರಖ್ಯಾತ ವಕೀಲರಾದ ಪ್ರಶಾಂತ್ ಭೂಷಣ್ ಯುಪಿಯಲ್ಲಿ ಗೂಂಡಾ ರಾಜ್ಯ ಮುಂದುವರೆದಿದ್ದು ಸಾಮಾನ್ಯ ಆರೋಗ್ಯ ಸೇವೆಗಳು ಕುಸಿಯುತ್ತಿದೆ ಎಂದು ಹೇಳಿದ್ದಾರೆ.

ಯುಪಿ ಯಲ್ಲಿ ಸಾಮಾನ್ಯವಾಗಿ ಆರೋಗ್ಯ ಸೇವೆಗಳು ಕುಸಿಯುತ್ತಿದೆ. ನಿರ್ದಿಷ್ಟವಾಗಿ ಆದಿತ್ಯನಾಥ್ ಅವರ ಕ್ಷೇತ್ರವಾದ ಯುಪಿಯಲ್ಲಿ ಗೂಂಡಾ ರಾಜ್ ಮುಂದುವರೆದಿದೆ. ಡಾ. ಕಫೀಲ್ ಖಾನ್ ಅವರಂತಹ ಉತ್ತಮ ವೈದ್ಯರು ಜೈಲಿನಲ್ಲಿ ಇದ್ದಾರೆ ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಮೊಹಮ್ಮದ್ ಆತಿಫ್ ಎಂಬುವವರು ತಪ್ಪಿತಸ್ಥರನ್ನು ಬಂಧಿಸದಿದ್ದರೆ ಅವಮಾನಕರ ಎಂದು ಟ್ವೀಟ್ ಮಾಡಿದ್ದಾರೆ.

ಮೊಹುವ ಮೊಹಿತ್ರ ಫ್ಯಾನ್ ಪೇಜ್ ನಿಂದ “ಆತ್ಮನಿರ್ಭರ ಭಾರತ ಅಂದರೆ ಇದು” ಎಂದು ವ್ಯಂಗ್ಯ ಮಾಡಲಾಗಿದೆ.

ಪತ್ರಕರ್ತನಿಖಿಲ್ ಚೌದರಿ “ನಾಲ್ಕು ವರ್ಷದ ಬಾಲಕ ಸ್ಟ್ರೆಚ್ಚರ್ ತಳ್ಳುತ್ತಿದ್ದಾನೆ. ಇದು ಆತ್ಮನಿರ್ಭರ ಭಾರತದ ಉದಾಹರಣೆ” ಎಂದು ಟ್ವೀಟ್ ಮಾಡಿದ್ದಾರೆ.


ಓದಿ:ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ ಆಕ್ರೋಶ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...