Homeಮುಖಪುಟಸ್ಟ್ರೆಚ್ಚರ್‌ ತಳ್ಳಲು 30ರೂ ಲಂಚ ಬೇಡಿಕೆ; ತಾತನ ಸ್ಟ್ರೆಚ್ಚರ್‌ ತಳ್ಳಿದ 6 ವರ್ಷದ ಬಾಲಕ!

ಸ್ಟ್ರೆಚ್ಚರ್‌ ತಳ್ಳಲು 30ರೂ ಲಂಚ ಬೇಡಿಕೆ; ತಾತನ ಸ್ಟ್ರೆಚ್ಚರ್‌ ತಳ್ಳಿದ 6 ವರ್ಷದ ಬಾಲಕ!

ಪ್ರತಿ ಬಾರಿ ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ 30 ರೂಪಾಯಿ ಕೇಳುತ್ತಿದ್ದು, ಸಿಬ್ಬಂದಿಗೆ ಹಣ ನೀಡಲು ಒಪ್ಪದಿದ್ದಾಗ ಚೆಡಿಯನ್ನು ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದರು ಎಂದು ಬಿಂದು ದೇವಿ ಹೇಳಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ 6 ವರ್ಷದ ಮಗು ತನ್ನ ತಾತನನ್ನು ಸ್ಟ್ರೆಚ್ಚರ್‌ನಲ್ಲಿ ಮಲಗಿಸಿ ತಳ್ಳಿಕೊಂಡು ಹೋಗುವ ಅಘಾತಕಾರಿ ವೀಡಿಯೊ ವೈರಲಾಗಿದ್ದು, ದೇಶದಾದ್ಯಂತ ಭಾರೀ ಆಕ್ರೋಶ ಹುಟ್ಟಿಸಿದೆ.

ರೋಗಿಯ ಡ್ರೆಸ್ಸಿಂಗ್‌ ಮಾಡಿಸಲು ಸ್ಟ್ರೆಚ್ಚರ್‌ ಅನ್ನು ತಳ್ಳಲು ಆಸ್ಪತ್ರೆಯ ಸಿಬ್ಬಂದಿಯು 30ರೂ ಲಂಚ ಕೇಳಿದ್ದರಿಂದ ರೋಗಿಯ ಮಗಳು ಮತ್ತು ಆಕೆಯ ಆರು ವರ್ಷದ ಮಗು ಸೇರಿ ಸ್ಟ್ರೆಚ್ಚರ್‌ ನೂಕಿಕೊಂಡು ಹೋಗಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಸಂಬಂಧಪಟ್ಟ ನೌಕರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಡ್ರೆಸ್ಸಿಂಗ್ ಮಾಡಿಸುವ ಸಲುವಾಗಿ ಸ್ಟ್ರೆಚರ್ ತಳ್ಳಲು 30 ರೂ ಲಂಚ ಕೇಳಿದ ಸಿಬ್ಬಂದಿ. ಲಂಚ ಕೊಡಲು ಹಣವಿಲ್ಲದೇ ತನ್ನ 6 ವರ್ಷದ ಮಗ ಶಿವಂ ಯಾದವ್…

Posted by Naanu Gauri on Tuesday, July 21, 2020

ಘಟನೆ ಏನು ?

ಉತ್ತರ ಪ್ರದೇಶದ ಡಿಯೋರಿಯಾದ ಬರ್ಹಾಜ್ ಪ್ರದೇಶದ ಗೌರಾ ಗ್ರಾಮದ ನಿವಾಸಿ ಚೆಡಿ ಯಾದವ್ ಗಾಯಗೊಂಡಿದ್ದು, ಅವರನ್ನು ಡಿಯೋರಿಯಾ ಜಿಲ್ಲಾ ಆಸ್ಪತ್ರೆಯ ಸರ್ಜಿಕಲ್ ವಾರ್ಡ್‌ಗೆ ದಾಖಲಿಸಲಾಗಿತ್ತು. ಚೆಡಿ ಯಾದವ್ ಪುತ್ರಿ ಬಿಂದುದೇವಿ ಮೂರು ನಾಲ್ಕು ದಿನಗಳಿಂದ ತಂದೆಯೊಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿದ್ದು, ತನ್ನ ತಂದೆಯನ್ನು ಗಾಯದ ಡ್ರೆಸ್ಸಿಂಗ್‌ಗಾಗಿ ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯಬೇಕಾಗಿತ್ತು.

ಆದರೆ ಪ್ರತಿ ಬಾರಿ ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ 30 ರೂಪಾಯಿ ಕೇಳುತ್ತಿದ್ದು, ಸಿಬ್ಬಂದಿಗೆ ಹಣ ನೀಡಲು ಒಪ್ಪದಿದ್ದಾಗ ಚೆಡಿಯನ್ನು ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದರು ಎಂದು ಬಿಂದು ದೇವಿ ಹೇಳಿದ್ದಾರೆ.

ನಂತರ ಬಿಂದು ತನ್ನ ಆರು ವರ್ಷದ ಮಗು ಶಿವಂ ಯಾದವ್ ಸಹಾಯದಿಂದ ತಂದೆಯನ್ನು ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಯಾರೋ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ವೈರಲ್ ಮಾಡಿದ್ದಾರೆ.

ದೇಶದಾದ್ಯಂತ ಭಾರಿ ಆಕ್ರೋಶ

ಘಟನೆಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ದೇಶದ ಪ್ರಖ್ಯಾತ ವಕೀಲರಾದ ಪ್ರಶಾಂತ್ ಭೂಷಣ್ ಯುಪಿಯಲ್ಲಿ ಗೂಂಡಾ ರಾಜ್ಯ ಮುಂದುವರೆದಿದ್ದು ಸಾಮಾನ್ಯ ಆರೋಗ್ಯ ಸೇವೆಗಳು ಕುಸಿಯುತ್ತಿದೆ ಎಂದು ಹೇಳಿದ್ದಾರೆ.

ಯುಪಿ ಯಲ್ಲಿ ಸಾಮಾನ್ಯವಾಗಿ ಆರೋಗ್ಯ ಸೇವೆಗಳು ಕುಸಿಯುತ್ತಿದೆ. ನಿರ್ದಿಷ್ಟವಾಗಿ ಆದಿತ್ಯನಾಥ್ ಅವರ ಕ್ಷೇತ್ರವಾದ ಯುಪಿಯಲ್ಲಿ ಗೂಂಡಾ ರಾಜ್ ಮುಂದುವರೆದಿದೆ. ಡಾ. ಕಫೀಲ್ ಖಾನ್ ಅವರಂತಹ ಉತ್ತಮ ವೈದ್ಯರು ಜೈಲಿನಲ್ಲಿ ಇದ್ದಾರೆ ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಮೊಹಮ್ಮದ್ ಆತಿಫ್ ಎಂಬುವವರು ತಪ್ಪಿತಸ್ಥರನ್ನು ಬಂಧಿಸದಿದ್ದರೆ ಅವಮಾನಕರ ಎಂದು ಟ್ವೀಟ್ ಮಾಡಿದ್ದಾರೆ.

ಮೊಹುವ ಮೊಹಿತ್ರ ಫ್ಯಾನ್ ಪೇಜ್ ನಿಂದ “ಆತ್ಮನಿರ್ಭರ ಭಾರತ ಅಂದರೆ ಇದು” ಎಂದು ವ್ಯಂಗ್ಯ ಮಾಡಲಾಗಿದೆ.

ಪತ್ರಕರ್ತನಿಖಿಲ್ ಚೌದರಿ “ನಾಲ್ಕು ವರ್ಷದ ಬಾಲಕ ಸ್ಟ್ರೆಚ್ಚರ್ ತಳ್ಳುತ್ತಿದ್ದಾನೆ. ಇದು ಆತ್ಮನಿರ್ಭರ ಭಾರತದ ಉದಾಹರಣೆ” ಎಂದು ಟ್ವೀಟ್ ಮಾಡಿದ್ದಾರೆ.


ಓದಿ:ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ ಆಕ್ರೋಶ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...