Homeಮುಖಪುಟಸ್ಟ್ರೆಚ್ಚರ್‌ ತಳ್ಳಲು 30ರೂ ಲಂಚ ಬೇಡಿಕೆ; ತಾತನ ಸ್ಟ್ರೆಚ್ಚರ್‌ ತಳ್ಳಿದ 6 ವರ್ಷದ ಬಾಲಕ!

ಸ್ಟ್ರೆಚ್ಚರ್‌ ತಳ್ಳಲು 30ರೂ ಲಂಚ ಬೇಡಿಕೆ; ತಾತನ ಸ್ಟ್ರೆಚ್ಚರ್‌ ತಳ್ಳಿದ 6 ವರ್ಷದ ಬಾಲಕ!

ಪ್ರತಿ ಬಾರಿ ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ 30 ರೂಪಾಯಿ ಕೇಳುತ್ತಿದ್ದು, ಸಿಬ್ಬಂದಿಗೆ ಹಣ ನೀಡಲು ಒಪ್ಪದಿದ್ದಾಗ ಚೆಡಿಯನ್ನು ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದರು ಎಂದು ಬಿಂದು ದೇವಿ ಹೇಳಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ 6 ವರ್ಷದ ಮಗು ತನ್ನ ತಾತನನ್ನು ಸ್ಟ್ರೆಚ್ಚರ್‌ನಲ್ಲಿ ಮಲಗಿಸಿ ತಳ್ಳಿಕೊಂಡು ಹೋಗುವ ಅಘಾತಕಾರಿ ವೀಡಿಯೊ ವೈರಲಾಗಿದ್ದು, ದೇಶದಾದ್ಯಂತ ಭಾರೀ ಆಕ್ರೋಶ ಹುಟ್ಟಿಸಿದೆ.

ರೋಗಿಯ ಡ್ರೆಸ್ಸಿಂಗ್‌ ಮಾಡಿಸಲು ಸ್ಟ್ರೆಚ್ಚರ್‌ ಅನ್ನು ತಳ್ಳಲು ಆಸ್ಪತ್ರೆಯ ಸಿಬ್ಬಂದಿಯು 30ರೂ ಲಂಚ ಕೇಳಿದ್ದರಿಂದ ರೋಗಿಯ ಮಗಳು ಮತ್ತು ಆಕೆಯ ಆರು ವರ್ಷದ ಮಗು ಸೇರಿ ಸ್ಟ್ರೆಚ್ಚರ್‌ ನೂಕಿಕೊಂಡು ಹೋಗಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಸಂಬಂಧಪಟ್ಟ ನೌಕರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಡ್ರೆಸ್ಸಿಂಗ್ ಮಾಡಿಸುವ ಸಲುವಾಗಿ ಸ್ಟ್ರೆಚರ್ ತಳ್ಳಲು 30 ರೂ ಲಂಚ ಕೇಳಿದ ಸಿಬ್ಬಂದಿ. ಲಂಚ ಕೊಡಲು ಹಣವಿಲ್ಲದೇ ತನ್ನ 6 ವರ್ಷದ ಮಗ ಶಿವಂ ಯಾದವ್…

Posted by Naanu Gauri on Tuesday, July 21, 2020

ಘಟನೆ ಏನು ?

ಉತ್ತರ ಪ್ರದೇಶದ ಡಿಯೋರಿಯಾದ ಬರ್ಹಾಜ್ ಪ್ರದೇಶದ ಗೌರಾ ಗ್ರಾಮದ ನಿವಾಸಿ ಚೆಡಿ ಯಾದವ್ ಗಾಯಗೊಂಡಿದ್ದು, ಅವರನ್ನು ಡಿಯೋರಿಯಾ ಜಿಲ್ಲಾ ಆಸ್ಪತ್ರೆಯ ಸರ್ಜಿಕಲ್ ವಾರ್ಡ್‌ಗೆ ದಾಖಲಿಸಲಾಗಿತ್ತು. ಚೆಡಿ ಯಾದವ್ ಪುತ್ರಿ ಬಿಂದುದೇವಿ ಮೂರು ನಾಲ್ಕು ದಿನಗಳಿಂದ ತಂದೆಯೊಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿದ್ದು, ತನ್ನ ತಂದೆಯನ್ನು ಗಾಯದ ಡ್ರೆಸ್ಸಿಂಗ್‌ಗಾಗಿ ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯಬೇಕಾಗಿತ್ತು.

ಆದರೆ ಪ್ರತಿ ಬಾರಿ ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ 30 ರೂಪಾಯಿ ಕೇಳುತ್ತಿದ್ದು, ಸಿಬ್ಬಂದಿಗೆ ಹಣ ನೀಡಲು ಒಪ್ಪದಿದ್ದಾಗ ಚೆಡಿಯನ್ನು ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದರು ಎಂದು ಬಿಂದು ದೇವಿ ಹೇಳಿದ್ದಾರೆ.

ನಂತರ ಬಿಂದು ತನ್ನ ಆರು ವರ್ಷದ ಮಗು ಶಿವಂ ಯಾದವ್ ಸಹಾಯದಿಂದ ತಂದೆಯನ್ನು ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಯಾರೋ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ವೈರಲ್ ಮಾಡಿದ್ದಾರೆ.

ದೇಶದಾದ್ಯಂತ ಭಾರಿ ಆಕ್ರೋಶ

ಘಟನೆಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ದೇಶದ ಪ್ರಖ್ಯಾತ ವಕೀಲರಾದ ಪ್ರಶಾಂತ್ ಭೂಷಣ್ ಯುಪಿಯಲ್ಲಿ ಗೂಂಡಾ ರಾಜ್ಯ ಮುಂದುವರೆದಿದ್ದು ಸಾಮಾನ್ಯ ಆರೋಗ್ಯ ಸೇವೆಗಳು ಕುಸಿಯುತ್ತಿದೆ ಎಂದು ಹೇಳಿದ್ದಾರೆ.

ಯುಪಿ ಯಲ್ಲಿ ಸಾಮಾನ್ಯವಾಗಿ ಆರೋಗ್ಯ ಸೇವೆಗಳು ಕುಸಿಯುತ್ತಿದೆ. ನಿರ್ದಿಷ್ಟವಾಗಿ ಆದಿತ್ಯನಾಥ್ ಅವರ ಕ್ಷೇತ್ರವಾದ ಯುಪಿಯಲ್ಲಿ ಗೂಂಡಾ ರಾಜ್ ಮುಂದುವರೆದಿದೆ. ಡಾ. ಕಫೀಲ್ ಖಾನ್ ಅವರಂತಹ ಉತ್ತಮ ವೈದ್ಯರು ಜೈಲಿನಲ್ಲಿ ಇದ್ದಾರೆ ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಮೊಹಮ್ಮದ್ ಆತಿಫ್ ಎಂಬುವವರು ತಪ್ಪಿತಸ್ಥರನ್ನು ಬಂಧಿಸದಿದ್ದರೆ ಅವಮಾನಕರ ಎಂದು ಟ್ವೀಟ್ ಮಾಡಿದ್ದಾರೆ.

ಮೊಹುವ ಮೊಹಿತ್ರ ಫ್ಯಾನ್ ಪೇಜ್ ನಿಂದ “ಆತ್ಮನಿರ್ಭರ ಭಾರತ ಅಂದರೆ ಇದು” ಎಂದು ವ್ಯಂಗ್ಯ ಮಾಡಲಾಗಿದೆ.

ಪತ್ರಕರ್ತನಿಖಿಲ್ ಚೌದರಿ “ನಾಲ್ಕು ವರ್ಷದ ಬಾಲಕ ಸ್ಟ್ರೆಚ್ಚರ್ ತಳ್ಳುತ್ತಿದ್ದಾನೆ. ಇದು ಆತ್ಮನಿರ್ಭರ ಭಾರತದ ಉದಾಹರಣೆ” ಎಂದು ಟ್ವೀಟ್ ಮಾಡಿದ್ದಾರೆ.


ಓದಿ:ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ ಆಕ್ರೋಶ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...