Homeಮುಖಪುಟಸ್ಟ್ರೆಚ್ಚರ್‌ ತಳ್ಳಲು 30ರೂ ಲಂಚ ಬೇಡಿಕೆ; ತಾತನ ಸ್ಟ್ರೆಚ್ಚರ್‌ ತಳ್ಳಿದ 6 ವರ್ಷದ ಬಾಲಕ!

ಸ್ಟ್ರೆಚ್ಚರ್‌ ತಳ್ಳಲು 30ರೂ ಲಂಚ ಬೇಡಿಕೆ; ತಾತನ ಸ್ಟ್ರೆಚ್ಚರ್‌ ತಳ್ಳಿದ 6 ವರ್ಷದ ಬಾಲಕ!

ಪ್ರತಿ ಬಾರಿ ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ 30 ರೂಪಾಯಿ ಕೇಳುತ್ತಿದ್ದು, ಸಿಬ್ಬಂದಿಗೆ ಹಣ ನೀಡಲು ಒಪ್ಪದಿದ್ದಾಗ ಚೆಡಿಯನ್ನು ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದರು ಎಂದು ಬಿಂದು ದೇವಿ ಹೇಳಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ 6 ವರ್ಷದ ಮಗು ತನ್ನ ತಾತನನ್ನು ಸ್ಟ್ರೆಚ್ಚರ್‌ನಲ್ಲಿ ಮಲಗಿಸಿ ತಳ್ಳಿಕೊಂಡು ಹೋಗುವ ಅಘಾತಕಾರಿ ವೀಡಿಯೊ ವೈರಲಾಗಿದ್ದು, ದೇಶದಾದ್ಯಂತ ಭಾರೀ ಆಕ್ರೋಶ ಹುಟ್ಟಿಸಿದೆ.

ರೋಗಿಯ ಡ್ರೆಸ್ಸಿಂಗ್‌ ಮಾಡಿಸಲು ಸ್ಟ್ರೆಚ್ಚರ್‌ ಅನ್ನು ತಳ್ಳಲು ಆಸ್ಪತ್ರೆಯ ಸಿಬ್ಬಂದಿಯು 30ರೂ ಲಂಚ ಕೇಳಿದ್ದರಿಂದ ರೋಗಿಯ ಮಗಳು ಮತ್ತು ಆಕೆಯ ಆರು ವರ್ಷದ ಮಗು ಸೇರಿ ಸ್ಟ್ರೆಚ್ಚರ್‌ ನೂಕಿಕೊಂಡು ಹೋಗಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಸಂಬಂಧಪಟ್ಟ ನೌಕರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಡ್ರೆಸ್ಸಿಂಗ್ ಮಾಡಿಸುವ ಸಲುವಾಗಿ ಸ್ಟ್ರೆಚರ್ ತಳ್ಳಲು 30 ರೂ ಲಂಚ ಕೇಳಿದ ಸಿಬ್ಬಂದಿ. ಲಂಚ ಕೊಡಲು ಹಣವಿಲ್ಲದೇ ತನ್ನ 6 ವರ್ಷದ ಮಗ ಶಿವಂ ಯಾದವ್…

Posted by Naanu Gauri on Tuesday, July 21, 2020

ಘಟನೆ ಏನು ?

ಉತ್ತರ ಪ್ರದೇಶದ ಡಿಯೋರಿಯಾದ ಬರ್ಹಾಜ್ ಪ್ರದೇಶದ ಗೌರಾ ಗ್ರಾಮದ ನಿವಾಸಿ ಚೆಡಿ ಯಾದವ್ ಗಾಯಗೊಂಡಿದ್ದು, ಅವರನ್ನು ಡಿಯೋರಿಯಾ ಜಿಲ್ಲಾ ಆಸ್ಪತ್ರೆಯ ಸರ್ಜಿಕಲ್ ವಾರ್ಡ್‌ಗೆ ದಾಖಲಿಸಲಾಗಿತ್ತು. ಚೆಡಿ ಯಾದವ್ ಪುತ್ರಿ ಬಿಂದುದೇವಿ ಮೂರು ನಾಲ್ಕು ದಿನಗಳಿಂದ ತಂದೆಯೊಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿದ್ದು, ತನ್ನ ತಂದೆಯನ್ನು ಗಾಯದ ಡ್ರೆಸ್ಸಿಂಗ್‌ಗಾಗಿ ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯಬೇಕಾಗಿತ್ತು.

ಆದರೆ ಪ್ರತಿ ಬಾರಿ ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ 30 ರೂಪಾಯಿ ಕೇಳುತ್ತಿದ್ದು, ಸಿಬ್ಬಂದಿಗೆ ಹಣ ನೀಡಲು ಒಪ್ಪದಿದ್ದಾಗ ಚೆಡಿಯನ್ನು ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದರು ಎಂದು ಬಿಂದು ದೇವಿ ಹೇಳಿದ್ದಾರೆ.

ನಂತರ ಬಿಂದು ತನ್ನ ಆರು ವರ್ಷದ ಮಗು ಶಿವಂ ಯಾದವ್ ಸಹಾಯದಿಂದ ತಂದೆಯನ್ನು ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಯಾರೋ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ವೈರಲ್ ಮಾಡಿದ್ದಾರೆ.

ದೇಶದಾದ್ಯಂತ ಭಾರಿ ಆಕ್ರೋಶ

ಘಟನೆಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ದೇಶದ ಪ್ರಖ್ಯಾತ ವಕೀಲರಾದ ಪ್ರಶಾಂತ್ ಭೂಷಣ್ ಯುಪಿಯಲ್ಲಿ ಗೂಂಡಾ ರಾಜ್ಯ ಮುಂದುವರೆದಿದ್ದು ಸಾಮಾನ್ಯ ಆರೋಗ್ಯ ಸೇವೆಗಳು ಕುಸಿಯುತ್ತಿದೆ ಎಂದು ಹೇಳಿದ್ದಾರೆ.

ಯುಪಿ ಯಲ್ಲಿ ಸಾಮಾನ್ಯವಾಗಿ ಆರೋಗ್ಯ ಸೇವೆಗಳು ಕುಸಿಯುತ್ತಿದೆ. ನಿರ್ದಿಷ್ಟವಾಗಿ ಆದಿತ್ಯನಾಥ್ ಅವರ ಕ್ಷೇತ್ರವಾದ ಯುಪಿಯಲ್ಲಿ ಗೂಂಡಾ ರಾಜ್ ಮುಂದುವರೆದಿದೆ. ಡಾ. ಕಫೀಲ್ ಖಾನ್ ಅವರಂತಹ ಉತ್ತಮ ವೈದ್ಯರು ಜೈಲಿನಲ್ಲಿ ಇದ್ದಾರೆ ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಮೊಹಮ್ಮದ್ ಆತಿಫ್ ಎಂಬುವವರು ತಪ್ಪಿತಸ್ಥರನ್ನು ಬಂಧಿಸದಿದ್ದರೆ ಅವಮಾನಕರ ಎಂದು ಟ್ವೀಟ್ ಮಾಡಿದ್ದಾರೆ.

ಮೊಹುವ ಮೊಹಿತ್ರ ಫ್ಯಾನ್ ಪೇಜ್ ನಿಂದ “ಆತ್ಮನಿರ್ಭರ ಭಾರತ ಅಂದರೆ ಇದು” ಎಂದು ವ್ಯಂಗ್ಯ ಮಾಡಲಾಗಿದೆ.

ಪತ್ರಕರ್ತನಿಖಿಲ್ ಚೌದರಿ “ನಾಲ್ಕು ವರ್ಷದ ಬಾಲಕ ಸ್ಟ್ರೆಚ್ಚರ್ ತಳ್ಳುತ್ತಿದ್ದಾನೆ. ಇದು ಆತ್ಮನಿರ್ಭರ ಭಾರತದ ಉದಾಹರಣೆ” ಎಂದು ಟ್ವೀಟ್ ಮಾಡಿದ್ದಾರೆ.


ಓದಿ:ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ ಆಕ್ರೋಶ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...