Homeಮುಖಪುಟಸ್ಟ್ರೆಚ್ಚರ್‌ ತಳ್ಳಲು 30ರೂ ಲಂಚ ಬೇಡಿಕೆ; ತಾತನ ಸ್ಟ್ರೆಚ್ಚರ್‌ ತಳ್ಳಿದ 6 ವರ್ಷದ ಬಾಲಕ!

ಸ್ಟ್ರೆಚ್ಚರ್‌ ತಳ್ಳಲು 30ರೂ ಲಂಚ ಬೇಡಿಕೆ; ತಾತನ ಸ್ಟ್ರೆಚ್ಚರ್‌ ತಳ್ಳಿದ 6 ವರ್ಷದ ಬಾಲಕ!

ಪ್ರತಿ ಬಾರಿ ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ 30 ರೂಪಾಯಿ ಕೇಳುತ್ತಿದ್ದು, ಸಿಬ್ಬಂದಿಗೆ ಹಣ ನೀಡಲು ಒಪ್ಪದಿದ್ದಾಗ ಚೆಡಿಯನ್ನು ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದರು ಎಂದು ಬಿಂದು ದೇವಿ ಹೇಳಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ 6 ವರ್ಷದ ಮಗು ತನ್ನ ತಾತನನ್ನು ಸ್ಟ್ರೆಚ್ಚರ್‌ನಲ್ಲಿ ಮಲಗಿಸಿ ತಳ್ಳಿಕೊಂಡು ಹೋಗುವ ಅಘಾತಕಾರಿ ವೀಡಿಯೊ ವೈರಲಾಗಿದ್ದು, ದೇಶದಾದ್ಯಂತ ಭಾರೀ ಆಕ್ರೋಶ ಹುಟ್ಟಿಸಿದೆ.

ರೋಗಿಯ ಡ್ರೆಸ್ಸಿಂಗ್‌ ಮಾಡಿಸಲು ಸ್ಟ್ರೆಚ್ಚರ್‌ ಅನ್ನು ತಳ್ಳಲು ಆಸ್ಪತ್ರೆಯ ಸಿಬ್ಬಂದಿಯು 30ರೂ ಲಂಚ ಕೇಳಿದ್ದರಿಂದ ರೋಗಿಯ ಮಗಳು ಮತ್ತು ಆಕೆಯ ಆರು ವರ್ಷದ ಮಗು ಸೇರಿ ಸ್ಟ್ರೆಚ್ಚರ್‌ ನೂಕಿಕೊಂಡು ಹೋಗಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಸಂಬಂಧಪಟ್ಟ ನೌಕರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಡ್ರೆಸ್ಸಿಂಗ್ ಮಾಡಿಸುವ ಸಲುವಾಗಿ ಸ್ಟ್ರೆಚರ್ ತಳ್ಳಲು 30 ರೂ ಲಂಚ ಕೇಳಿದ ಸಿಬ್ಬಂದಿ. ಲಂಚ ಕೊಡಲು ಹಣವಿಲ್ಲದೇ ತನ್ನ 6 ವರ್ಷದ ಮಗ ಶಿವಂ ಯಾದವ್…

Posted by Naanu Gauri on Tuesday, July 21, 2020

ಘಟನೆ ಏನು ?

ಉತ್ತರ ಪ್ರದೇಶದ ಡಿಯೋರಿಯಾದ ಬರ್ಹಾಜ್ ಪ್ರದೇಶದ ಗೌರಾ ಗ್ರಾಮದ ನಿವಾಸಿ ಚೆಡಿ ಯಾದವ್ ಗಾಯಗೊಂಡಿದ್ದು, ಅವರನ್ನು ಡಿಯೋರಿಯಾ ಜಿಲ್ಲಾ ಆಸ್ಪತ್ರೆಯ ಸರ್ಜಿಕಲ್ ವಾರ್ಡ್‌ಗೆ ದಾಖಲಿಸಲಾಗಿತ್ತು. ಚೆಡಿ ಯಾದವ್ ಪುತ್ರಿ ಬಿಂದುದೇವಿ ಮೂರು ನಾಲ್ಕು ದಿನಗಳಿಂದ ತಂದೆಯೊಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿದ್ದು, ತನ್ನ ತಂದೆಯನ್ನು ಗಾಯದ ಡ್ರೆಸ್ಸಿಂಗ್‌ಗಾಗಿ ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯಬೇಕಾಗಿತ್ತು.

ಆದರೆ ಪ್ರತಿ ಬಾರಿ ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ 30 ರೂಪಾಯಿ ಕೇಳುತ್ತಿದ್ದು, ಸಿಬ್ಬಂದಿಗೆ ಹಣ ನೀಡಲು ಒಪ್ಪದಿದ್ದಾಗ ಚೆಡಿಯನ್ನು ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದರು ಎಂದು ಬಿಂದು ದೇವಿ ಹೇಳಿದ್ದಾರೆ.

ನಂತರ ಬಿಂದು ತನ್ನ ಆರು ವರ್ಷದ ಮಗು ಶಿವಂ ಯಾದವ್ ಸಹಾಯದಿಂದ ತಂದೆಯನ್ನು ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಯಾರೋ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ವೈರಲ್ ಮಾಡಿದ್ದಾರೆ.

ದೇಶದಾದ್ಯಂತ ಭಾರಿ ಆಕ್ರೋಶ

ಘಟನೆಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ದೇಶದ ಪ್ರಖ್ಯಾತ ವಕೀಲರಾದ ಪ್ರಶಾಂತ್ ಭೂಷಣ್ ಯುಪಿಯಲ್ಲಿ ಗೂಂಡಾ ರಾಜ್ಯ ಮುಂದುವರೆದಿದ್ದು ಸಾಮಾನ್ಯ ಆರೋಗ್ಯ ಸೇವೆಗಳು ಕುಸಿಯುತ್ತಿದೆ ಎಂದು ಹೇಳಿದ್ದಾರೆ.

ಯುಪಿ ಯಲ್ಲಿ ಸಾಮಾನ್ಯವಾಗಿ ಆರೋಗ್ಯ ಸೇವೆಗಳು ಕುಸಿಯುತ್ತಿದೆ. ನಿರ್ದಿಷ್ಟವಾಗಿ ಆದಿತ್ಯನಾಥ್ ಅವರ ಕ್ಷೇತ್ರವಾದ ಯುಪಿಯಲ್ಲಿ ಗೂಂಡಾ ರಾಜ್ ಮುಂದುವರೆದಿದೆ. ಡಾ. ಕಫೀಲ್ ಖಾನ್ ಅವರಂತಹ ಉತ್ತಮ ವೈದ್ಯರು ಜೈಲಿನಲ್ಲಿ ಇದ್ದಾರೆ ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಮೊಹಮ್ಮದ್ ಆತಿಫ್ ಎಂಬುವವರು ತಪ್ಪಿತಸ್ಥರನ್ನು ಬಂಧಿಸದಿದ್ದರೆ ಅವಮಾನಕರ ಎಂದು ಟ್ವೀಟ್ ಮಾಡಿದ್ದಾರೆ.

ಮೊಹುವ ಮೊಹಿತ್ರ ಫ್ಯಾನ್ ಪೇಜ್ ನಿಂದ “ಆತ್ಮನಿರ್ಭರ ಭಾರತ ಅಂದರೆ ಇದು” ಎಂದು ವ್ಯಂಗ್ಯ ಮಾಡಲಾಗಿದೆ.

ಪತ್ರಕರ್ತನಿಖಿಲ್ ಚೌದರಿ “ನಾಲ್ಕು ವರ್ಷದ ಬಾಲಕ ಸ್ಟ್ರೆಚ್ಚರ್ ತಳ್ಳುತ್ತಿದ್ದಾನೆ. ಇದು ಆತ್ಮನಿರ್ಭರ ಭಾರತದ ಉದಾಹರಣೆ” ಎಂದು ಟ್ವೀಟ್ ಮಾಡಿದ್ದಾರೆ.


ಓದಿ:ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ ಆಕ್ರೋಶ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...