Homeಮುಖಪುಟಸ್ಟ್ರೆಚ್ಚರ್‌ ತಳ್ಳಲು 30ರೂ ಲಂಚ ಬೇಡಿಕೆ; ತಾತನ ಸ್ಟ್ರೆಚ್ಚರ್‌ ತಳ್ಳಿದ 6 ವರ್ಷದ ಬಾಲಕ!

ಸ್ಟ್ರೆಚ್ಚರ್‌ ತಳ್ಳಲು 30ರೂ ಲಂಚ ಬೇಡಿಕೆ; ತಾತನ ಸ್ಟ್ರೆಚ್ಚರ್‌ ತಳ್ಳಿದ 6 ವರ್ಷದ ಬಾಲಕ!

ಪ್ರತಿ ಬಾರಿ ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ 30 ರೂಪಾಯಿ ಕೇಳುತ್ತಿದ್ದು, ಸಿಬ್ಬಂದಿಗೆ ಹಣ ನೀಡಲು ಒಪ್ಪದಿದ್ದಾಗ ಚೆಡಿಯನ್ನು ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದರು ಎಂದು ಬಿಂದು ದೇವಿ ಹೇಳಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ 6 ವರ್ಷದ ಮಗು ತನ್ನ ತಾತನನ್ನು ಸ್ಟ್ರೆಚ್ಚರ್‌ನಲ್ಲಿ ಮಲಗಿಸಿ ತಳ್ಳಿಕೊಂಡು ಹೋಗುವ ಅಘಾತಕಾರಿ ವೀಡಿಯೊ ವೈರಲಾಗಿದ್ದು, ದೇಶದಾದ್ಯಂತ ಭಾರೀ ಆಕ್ರೋಶ ಹುಟ್ಟಿಸಿದೆ.

ರೋಗಿಯ ಡ್ರೆಸ್ಸಿಂಗ್‌ ಮಾಡಿಸಲು ಸ್ಟ್ರೆಚ್ಚರ್‌ ಅನ್ನು ತಳ್ಳಲು ಆಸ್ಪತ್ರೆಯ ಸಿಬ್ಬಂದಿಯು 30ರೂ ಲಂಚ ಕೇಳಿದ್ದರಿಂದ ರೋಗಿಯ ಮಗಳು ಮತ್ತು ಆಕೆಯ ಆರು ವರ್ಷದ ಮಗು ಸೇರಿ ಸ್ಟ್ರೆಚ್ಚರ್‌ ನೂಕಿಕೊಂಡು ಹೋಗಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಸಂಬಂಧಪಟ್ಟ ನೌಕರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಡ್ರೆಸ್ಸಿಂಗ್ ಮಾಡಿಸುವ ಸಲುವಾಗಿ ಸ್ಟ್ರೆಚರ್ ತಳ್ಳಲು 30 ರೂ ಲಂಚ ಕೇಳಿದ ಸಿಬ್ಬಂದಿ. ಲಂಚ ಕೊಡಲು ಹಣವಿಲ್ಲದೇ ತನ್ನ 6 ವರ್ಷದ ಮಗ ಶಿವಂ ಯಾದವ್…

Posted by Naanu Gauri on Tuesday, July 21, 2020

ಘಟನೆ ಏನು ?

ಉತ್ತರ ಪ್ರದೇಶದ ಡಿಯೋರಿಯಾದ ಬರ್ಹಾಜ್ ಪ್ರದೇಶದ ಗೌರಾ ಗ್ರಾಮದ ನಿವಾಸಿ ಚೆಡಿ ಯಾದವ್ ಗಾಯಗೊಂಡಿದ್ದು, ಅವರನ್ನು ಡಿಯೋರಿಯಾ ಜಿಲ್ಲಾ ಆಸ್ಪತ್ರೆಯ ಸರ್ಜಿಕಲ್ ವಾರ್ಡ್‌ಗೆ ದಾಖಲಿಸಲಾಗಿತ್ತು. ಚೆಡಿ ಯಾದವ್ ಪುತ್ರಿ ಬಿಂದುದೇವಿ ಮೂರು ನಾಲ್ಕು ದಿನಗಳಿಂದ ತಂದೆಯೊಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿದ್ದು, ತನ್ನ ತಂದೆಯನ್ನು ಗಾಯದ ಡ್ರೆಸ್ಸಿಂಗ್‌ಗಾಗಿ ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯಬೇಕಾಗಿತ್ತು.

ಆದರೆ ಪ್ರತಿ ಬಾರಿ ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ 30 ರೂಪಾಯಿ ಕೇಳುತ್ತಿದ್ದು, ಸಿಬ್ಬಂದಿಗೆ ಹಣ ನೀಡಲು ಒಪ್ಪದಿದ್ದಾಗ ಚೆಡಿಯನ್ನು ಡ್ರೆಸ್ಸಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದರು ಎಂದು ಬಿಂದು ದೇವಿ ಹೇಳಿದ್ದಾರೆ.

ನಂತರ ಬಿಂದು ತನ್ನ ಆರು ವರ್ಷದ ಮಗು ಶಿವಂ ಯಾದವ್ ಸಹಾಯದಿಂದ ತಂದೆಯನ್ನು ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಯಾರೋ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ವೈರಲ್ ಮಾಡಿದ್ದಾರೆ.

ದೇಶದಾದ್ಯಂತ ಭಾರಿ ಆಕ್ರೋಶ

ಘಟನೆಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ದೇಶದ ಪ್ರಖ್ಯಾತ ವಕೀಲರಾದ ಪ್ರಶಾಂತ್ ಭೂಷಣ್ ಯುಪಿಯಲ್ಲಿ ಗೂಂಡಾ ರಾಜ್ಯ ಮುಂದುವರೆದಿದ್ದು ಸಾಮಾನ್ಯ ಆರೋಗ್ಯ ಸೇವೆಗಳು ಕುಸಿಯುತ್ತಿದೆ ಎಂದು ಹೇಳಿದ್ದಾರೆ.

ಯುಪಿ ಯಲ್ಲಿ ಸಾಮಾನ್ಯವಾಗಿ ಆರೋಗ್ಯ ಸೇವೆಗಳು ಕುಸಿಯುತ್ತಿದೆ. ನಿರ್ದಿಷ್ಟವಾಗಿ ಆದಿತ್ಯನಾಥ್ ಅವರ ಕ್ಷೇತ್ರವಾದ ಯುಪಿಯಲ್ಲಿ ಗೂಂಡಾ ರಾಜ್ ಮುಂದುವರೆದಿದೆ. ಡಾ. ಕಫೀಲ್ ಖಾನ್ ಅವರಂತಹ ಉತ್ತಮ ವೈದ್ಯರು ಜೈಲಿನಲ್ಲಿ ಇದ್ದಾರೆ ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಮೊಹಮ್ಮದ್ ಆತಿಫ್ ಎಂಬುವವರು ತಪ್ಪಿತಸ್ಥರನ್ನು ಬಂಧಿಸದಿದ್ದರೆ ಅವಮಾನಕರ ಎಂದು ಟ್ವೀಟ್ ಮಾಡಿದ್ದಾರೆ.

ಮೊಹುವ ಮೊಹಿತ್ರ ಫ್ಯಾನ್ ಪೇಜ್ ನಿಂದ “ಆತ್ಮನಿರ್ಭರ ಭಾರತ ಅಂದರೆ ಇದು” ಎಂದು ವ್ಯಂಗ್ಯ ಮಾಡಲಾಗಿದೆ.

ಪತ್ರಕರ್ತನಿಖಿಲ್ ಚೌದರಿ “ನಾಲ್ಕು ವರ್ಷದ ಬಾಲಕ ಸ್ಟ್ರೆಚ್ಚರ್ ತಳ್ಳುತ್ತಿದ್ದಾನೆ. ಇದು ಆತ್ಮನಿರ್ಭರ ಭಾರತದ ಉದಾಹರಣೆ” ಎಂದು ಟ್ವೀಟ್ ಮಾಡಿದ್ದಾರೆ.


ಓದಿ:ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ ಆಕ್ರೋಶ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...