Homeಮುಖಪುಟ‘30 ಉಗ್ರರನ್ನು ಕೊಲ್ಲಲಾಗಿದೆ’: ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌

‘30 ಉಗ್ರರನ್ನು ಕೊಲ್ಲಲಾಗಿದೆ’: ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌

ಕುಕಿ ಮತ್ತು ಮೈಥೇಯಿ ಸಮುದಾಯಗಳ ನಡುವಿನ ಘರ್ಷಣೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ

- Advertisement -
- Advertisement -

ಮಣಿಪುರದ ವಿವಿಧೆಡೆ ಭದ್ರತಾ ಪಡೆಗಳು ಮತ್ತು ಶಸ್ತ್ರಸಜ್ಜಿತ ಬಂಡುಕೋರರ ನಡುವೆ ಭಾನುವಾರ ಘರ್ಷಣೆ ಭುಗಿಲೆದ್ದಿದೆ. “ಸುಮಾರು 30 ಉಗ್ರರು ಹತರಾಗಿದ್ದಾರೆ ಮತ್ತು ಕೆಲವರನ್ನು ಬಂಧಿಸಲಾಗಿದೆ” ಎಂದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಹೇಳಿದ್ದಾರೆ.

“ನಾಗರಿಕರ ವಿರುದ್ಧ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸುತ್ತಿರುವ ಉಗ್ರಗಾಮಿ ಗುಂಪುಗಳ ವಿರುದ್ಧ ಪ್ರತೀಕಾರ ಮತ್ತು ರಕ್ಷಣಾತ್ಮಕ ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಯ ಭಾಗವಾಗಿ ವಿವಿಧ ಪ್ರದೇಶಗಳಲ್ಲಿ ಸುಮಾರು 30 ಉಗ್ರಗಾಮಿಗಳನ್ನು ಕೊಲ್ಲಲಾಗಿದೆ. ಕೆಲವರನ್ನು ಭದ್ರತಾ ಪಡೆಗಳು ಬಂಧಿಸಿವೆ” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಶಾಂತಿಯನ್ನು ತರುವ ಸಲುವಾಗಿ ಸೈನ್ಯ ಮುಂದಾಗಿದೆ. ಕುಕಿ ಮತ್ತು ಮಥೇಯಿ ಸಮುದಾಯಗಳ ನಡುವಿನ ಘರ್ಷಣೆಯನ್ನು ತಡೆಯಲು ಕಾರ್ಯಾಚರಣೆ ನಡೆದಿದೆ.

ಇಂಫಾಲ್ ಪಶ್ಚಿಮದ ಉರಿಪೋಕ್‌ನಲ್ಲಿರುವ ಬಿಜೆಪಿ ಶಾಸಕ ಖ್ವೈರಕ್‌ಪಾಮ್ ರಘುಮಣಿ ಸಿಂಗ್ ಅವರ ಮನೆಯನ್ನು ಧ್ವಂಸಗೊಳಿಸಲಾಗಿದೆ ಮತ್ತು ಅವರ ಎರಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಉನ್ನತ ಭದ್ರತಾ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದಾರೆ.

ಇಂಫಾಲ್ ಕಣಿವೆಯ ಸುತ್ತಮುತ್ತಲಿನ ವಿವಿಧ ಜಿಲ್ಲೆಗಳ ಹಲವಾರು ಸ್ಥಳಗಳಲ್ಲಿ ಮುಂಜಾನೆ ಘರ್ಷಣೆಗಳು ಪ್ರಾರಂಭವಾದವು ಎಂದು ತಿಳಿಸಿದ್ದಾರೆ.

“ನಮ್ಮ ಮಾಹಿತಿಯ ಪ್ರಕಾರ, ಕಾಕ್ಚಿಂಗ್‌ನ ಸುಗ್ನು, ಚುರಾಚಂದ್‌ಪುರದ ಕಾಂಗ್ವಿ, ಇಂಫಾಲ್ ಪಶ್ಚಿಮದ ಕಾಂಗ್‌ಚುಪ್, ಇಂಫಾಲ್ ಪೂರ್ವದ ಸಗೋಲ್ಮಾಂಗ್, ಬಿಷೆನ್‌ಪುರದ ನುಂಗೋಯಿಪೋಕ್ಪಿ, ಇಂಫಾಲ್ ಪಶ್ಚಿಮದ ಖುರ್ಖುಲ್ ಮತ್ತು ಕಾಂಗ್‌ಪೋಕ್ಪಿಯ ವೈಕೆಪಿಐನಲ್ಲಿ ಗುಂಡಿನ ದಾಳಿ ನಡೆದಿದೆ” ಎಂದಿದ್ದಾರೆ.

ಕಾಕ್ಚಿಂಗ್ ಪೊಲೀಸ್ ಠಾಣೆಯಲ್ಲಿದ್ದ ಶಶ್ತ್ರಾಸ್ತ್ರಗಳನ್ನು ಮೈತೇಯಿ ಗುಂಪಿನವರು ಲೂಟಿ ಮಾಡಿದ್ದಾರೆಂಬ ವರದಿಯೂ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಣಿಪುರದಲ್ಲಿ ಇದುವರೆಗೆ 75 ಕ್ಕೂ ಹೆಚ್ಚು ಜೀವಗಳನ್ನು ಈ ಜನಾಂಗೀಯ ಘರ್ಷಣೆ ಬಲಿ ಪಡೆದಿದೆ. ಎಸ್‌ಟಿ ಮೀಸಲಾತಿ ವಿಚಾರವಾಗಿ ಎರಡು ಸಮುದಾಯಗಳ ನಡುವಿನ ಕಲಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಮಣಿಪುರ ಮುಖ್ಯಮಂತ್ರಿ ಕುಕಿ ಸಮುದಾಯದ ವಿರೋಧಿಯಾಗಿದ್ದು, ನಮಗೆ ಪ್ರತ್ಯೇಕ ರಾಜ್ಯ ಬೇಕು ಮತ್ತು ಅದಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಪರ ಕುಕಿ ಗುಂಪಿನ ಮುಖ್ಯಸ್ಥ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ.

‘ದಿ ವೈರ್‌’ ಜಾಲತಾಣದ ಖ್ಯಾತ ಪತ್ರಕರ್ತ ಕರಣ್ ಥಾಪರ್‌ ನಡೆಸಿರುವ ಸಂದರ್ಶನದಲ್ಲಿ ಕುಕಿ ಪೀಪಲ್ಸ್ ಅಲೈಯನ್ಸ್‌ನ ಪ್ರಧಾನ ಕಾರ್ಯದರ್ಶಿ ಹ್ಯಾಂಗ್‌ಶಿಂಗ್ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದರು.

“ಕುಕಿ ಜನರಿಗೆ ಪ್ರತ್ಯೇಕ ಆಡಳಿತ ಬೇಕು. ಇದೇ ರಾಜ್ಯದಲ್ಲಿ ಮೈಥೇಯಿ ಸಮುದಾಯದೊಂದಿಗೆ ಮುಂದೆಯೂ ಇರುವುದು ಅಸಾಧ್ಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಎನ್. ಬಿರೇನ್ ಸಿಂಗ್ ಸರ್ಕಾರವನ್ನು ಕುಕಿ ಪೀಪಲ್ಸ್ ಅಲಯನ್ಸ್ ಬೆಂಬಲಿಸಿದೆ ಎಂಬುದನ್ನು ಗಮನಿಸಬಹುದು. ಈ ಬಣದ ಪ್ರಭಾವಿ ನಾಯಕ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, “ನಮಗೆ ಪ್ರತ್ಯೇಕ ಆಡಳಿತ ಬೇಕೆಂಬ ಬೇಡಿಕೆಯಿಂದ ಕುಕಿ ಸಮುದಾಯ ಹಿಂದೆ ಸರಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕ ಆಡಳಿತವೆಂದರೆ ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ಆಗಿರಬಹುದು ಎಂದು ಅವರು ಹೇಳಿದ್ದಾರೆ. ಮಣಿಪುರದೊಳಗೆ ಸ್ವಾಯತ್ತ ಪ್ರಾದೇಶಿಕ ಮಂಡಳಿಗಳ ಆಯ್ಕೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲಾಗಿದೆ ಎಂದು ಅವರು ವಿಷಾದಿಸಿದ್ದಾರೆ.

“ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಮೇಲಿನ ನಂಬಿಕೆಯನ್ನು ಕುಕಿ ಪೀಪಲ್ಸ್ ಅಲೈಯನ್ಸ್ ಕಳೆದುಕೊಂಡಿದೆ” ಎಂದಿರುವ ಅವರು, ತಾಂತ್ರಿಕವಾಗಿ ಬೆಂಬಲವನ್ನು ಹಿಂತೆಗೆದುಕೊಳ್ಳದಿದ್ದರೂ, ಮುಂದಿನ ದಿನಗಳಲ್ಲಿ ಬೆಂಬಲ ವಾಪಸ್ ಪಡೆಯುವ ಸೂಚನೆಯನ್ನೂ ಅವರು ನೀಡಿದ್ದಾರೆ.

ಇದನ್ನೂ ಓದಿರಿ: ಮಣಿಪುರ ಹಿಂಸಾಚಾರ: ಅಗತ್ಯ ವಸ್ತುಗಳ ಬೆಲೆ ಮುಗಿಲೆತ್ತರ!

ಬಿರೇನ್ ಸಿಂಗ್ ಅವರು ತಮ್ಮದೇ ಆದ ಬಹುಮತವನ್ನು ಹೊಂದಿರುವುದರಿಂದ, ಕುಕಿ ಪೀಪಲ್ಸ್ ಅಲೈಯನ್ಸ್‌ನ ಬೆಂಬಲವು ತಾಂತ್ರಿಕವಾಗಿ ಅತ್ಯುತ್ತಮವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿರೇನ್ ಸಿಂಗ್ ‘ಕುಕಿ ವಿರೋಧಿ’ ಎಂದು ಹ್ಯಾಂಗ್‌ಶಿಂಗ್ ಕಿಡಿಕಾರಿದ್ದಾರೆ.

ಕುಕಿ ಮತ್ತು ಮೈಥೇಯಿ ಸಮುದಾಯದ ನಡುವಿನ ಸಮಸ್ಯೆಗೆ ಬಿರೇನ್‌ ಸಿಂಗ್ ಅವರು ಕಳೆದ ನಾಲ್ಕೈದು ವರ್ಷಗಳಲ್ಲಿ ತೋರಿರುವ ವರ್ತನೆಯೇ ಕಾರಣ ಎಂದು ಹ್ಯಾಂಗ್‌ಶಿಂಗ್ ಆರೋಪಿಸಿದ್ದಾರೆ.

ಸಿಎಂ ಬಿರೇನ್ ಸಿಂಗ್ ಅವರು ಬೇಜವಾಬ್ದಾರಿ ತೋರಿದ್ದಾರೆಂದು ಉದಾಹರಣೆಗಳನ್ನು ಅವರು ನೀಡಿದ್ದಾರೆ. “ತಮ್ಮ ಮನೆಯನ್ನು ಲೂಟಿ ಮಾಡಲಾಗುತ್ತಿದೆ, ಸುಟ್ಟು ಹಾಕಲಾಗುತ್ತಿದೆ” ಎಂದು ಹೇಳಲು ಬಿಜೆಪಿ ಶಾಸಕ, ಬಿರೇನ್ ಸಿಂಗ್ ಅವರ ಸರ್ಕಾರದ ಸದಸ್ಯ ಲೆಟ್ಪಾವೊ ಹಾಕಿಪ್ ಅವರು ಬಿರೇನ್ ಸಿಂಗ್ ಅವರಿಗೆ ಪದೇ ಪದೇ ಫೋನ್ ಮಾಡಿದರೂ ಸ್ಪಂದಿಸಿಲ್ಲ ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...