Homeಮುಖಪುಟ‘30 ಉಗ್ರರನ್ನು ಕೊಲ್ಲಲಾಗಿದೆ’: ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌

‘30 ಉಗ್ರರನ್ನು ಕೊಲ್ಲಲಾಗಿದೆ’: ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌

ಕುಕಿ ಮತ್ತು ಮೈಥೇಯಿ ಸಮುದಾಯಗಳ ನಡುವಿನ ಘರ್ಷಣೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ

- Advertisement -
- Advertisement -

ಮಣಿಪುರದ ವಿವಿಧೆಡೆ ಭದ್ರತಾ ಪಡೆಗಳು ಮತ್ತು ಶಸ್ತ್ರಸಜ್ಜಿತ ಬಂಡುಕೋರರ ನಡುವೆ ಭಾನುವಾರ ಘರ್ಷಣೆ ಭುಗಿಲೆದ್ದಿದೆ. “ಸುಮಾರು 30 ಉಗ್ರರು ಹತರಾಗಿದ್ದಾರೆ ಮತ್ತು ಕೆಲವರನ್ನು ಬಂಧಿಸಲಾಗಿದೆ” ಎಂದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಹೇಳಿದ್ದಾರೆ.

“ನಾಗರಿಕರ ವಿರುದ್ಧ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸುತ್ತಿರುವ ಉಗ್ರಗಾಮಿ ಗುಂಪುಗಳ ವಿರುದ್ಧ ಪ್ರತೀಕಾರ ಮತ್ತು ರಕ್ಷಣಾತ್ಮಕ ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಯ ಭಾಗವಾಗಿ ವಿವಿಧ ಪ್ರದೇಶಗಳಲ್ಲಿ ಸುಮಾರು 30 ಉಗ್ರಗಾಮಿಗಳನ್ನು ಕೊಲ್ಲಲಾಗಿದೆ. ಕೆಲವರನ್ನು ಭದ್ರತಾ ಪಡೆಗಳು ಬಂಧಿಸಿವೆ” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಶಾಂತಿಯನ್ನು ತರುವ ಸಲುವಾಗಿ ಸೈನ್ಯ ಮುಂದಾಗಿದೆ. ಕುಕಿ ಮತ್ತು ಮಥೇಯಿ ಸಮುದಾಯಗಳ ನಡುವಿನ ಘರ್ಷಣೆಯನ್ನು ತಡೆಯಲು ಕಾರ್ಯಾಚರಣೆ ನಡೆದಿದೆ.

ಇಂಫಾಲ್ ಪಶ್ಚಿಮದ ಉರಿಪೋಕ್‌ನಲ್ಲಿರುವ ಬಿಜೆಪಿ ಶಾಸಕ ಖ್ವೈರಕ್‌ಪಾಮ್ ರಘುಮಣಿ ಸಿಂಗ್ ಅವರ ಮನೆಯನ್ನು ಧ್ವಂಸಗೊಳಿಸಲಾಗಿದೆ ಮತ್ತು ಅವರ ಎರಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಉನ್ನತ ಭದ್ರತಾ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದಾರೆ.

ಇಂಫಾಲ್ ಕಣಿವೆಯ ಸುತ್ತಮುತ್ತಲಿನ ವಿವಿಧ ಜಿಲ್ಲೆಗಳ ಹಲವಾರು ಸ್ಥಳಗಳಲ್ಲಿ ಮುಂಜಾನೆ ಘರ್ಷಣೆಗಳು ಪ್ರಾರಂಭವಾದವು ಎಂದು ತಿಳಿಸಿದ್ದಾರೆ.

“ನಮ್ಮ ಮಾಹಿತಿಯ ಪ್ರಕಾರ, ಕಾಕ್ಚಿಂಗ್‌ನ ಸುಗ್ನು, ಚುರಾಚಂದ್‌ಪುರದ ಕಾಂಗ್ವಿ, ಇಂಫಾಲ್ ಪಶ್ಚಿಮದ ಕಾಂಗ್‌ಚುಪ್, ಇಂಫಾಲ್ ಪೂರ್ವದ ಸಗೋಲ್ಮಾಂಗ್, ಬಿಷೆನ್‌ಪುರದ ನುಂಗೋಯಿಪೋಕ್ಪಿ, ಇಂಫಾಲ್ ಪಶ್ಚಿಮದ ಖುರ್ಖುಲ್ ಮತ್ತು ಕಾಂಗ್‌ಪೋಕ್ಪಿಯ ವೈಕೆಪಿಐನಲ್ಲಿ ಗುಂಡಿನ ದಾಳಿ ನಡೆದಿದೆ” ಎಂದಿದ್ದಾರೆ.

ಕಾಕ್ಚಿಂಗ್ ಪೊಲೀಸ್ ಠಾಣೆಯಲ್ಲಿದ್ದ ಶಶ್ತ್ರಾಸ್ತ್ರಗಳನ್ನು ಮೈತೇಯಿ ಗುಂಪಿನವರು ಲೂಟಿ ಮಾಡಿದ್ದಾರೆಂಬ ವರದಿಯೂ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಣಿಪುರದಲ್ಲಿ ಇದುವರೆಗೆ 75 ಕ್ಕೂ ಹೆಚ್ಚು ಜೀವಗಳನ್ನು ಈ ಜನಾಂಗೀಯ ಘರ್ಷಣೆ ಬಲಿ ಪಡೆದಿದೆ. ಎಸ್‌ಟಿ ಮೀಸಲಾತಿ ವಿಚಾರವಾಗಿ ಎರಡು ಸಮುದಾಯಗಳ ನಡುವಿನ ಕಲಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಮಣಿಪುರ ಮುಖ್ಯಮಂತ್ರಿ ಕುಕಿ ಸಮುದಾಯದ ವಿರೋಧಿಯಾಗಿದ್ದು, ನಮಗೆ ಪ್ರತ್ಯೇಕ ರಾಜ್ಯ ಬೇಕು ಮತ್ತು ಅದಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಪರ ಕುಕಿ ಗುಂಪಿನ ಮುಖ್ಯಸ್ಥ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ.

‘ದಿ ವೈರ್‌’ ಜಾಲತಾಣದ ಖ್ಯಾತ ಪತ್ರಕರ್ತ ಕರಣ್ ಥಾಪರ್‌ ನಡೆಸಿರುವ ಸಂದರ್ಶನದಲ್ಲಿ ಕುಕಿ ಪೀಪಲ್ಸ್ ಅಲೈಯನ್ಸ್‌ನ ಪ್ರಧಾನ ಕಾರ್ಯದರ್ಶಿ ಹ್ಯಾಂಗ್‌ಶಿಂಗ್ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದರು.

“ಕುಕಿ ಜನರಿಗೆ ಪ್ರತ್ಯೇಕ ಆಡಳಿತ ಬೇಕು. ಇದೇ ರಾಜ್ಯದಲ್ಲಿ ಮೈಥೇಯಿ ಸಮುದಾಯದೊಂದಿಗೆ ಮುಂದೆಯೂ ಇರುವುದು ಅಸಾಧ್ಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಎನ್. ಬಿರೇನ್ ಸಿಂಗ್ ಸರ್ಕಾರವನ್ನು ಕುಕಿ ಪೀಪಲ್ಸ್ ಅಲಯನ್ಸ್ ಬೆಂಬಲಿಸಿದೆ ಎಂಬುದನ್ನು ಗಮನಿಸಬಹುದು. ಈ ಬಣದ ಪ್ರಭಾವಿ ನಾಯಕ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, “ನಮಗೆ ಪ್ರತ್ಯೇಕ ಆಡಳಿತ ಬೇಕೆಂಬ ಬೇಡಿಕೆಯಿಂದ ಕುಕಿ ಸಮುದಾಯ ಹಿಂದೆ ಸರಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕ ಆಡಳಿತವೆಂದರೆ ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ಆಗಿರಬಹುದು ಎಂದು ಅವರು ಹೇಳಿದ್ದಾರೆ. ಮಣಿಪುರದೊಳಗೆ ಸ್ವಾಯತ್ತ ಪ್ರಾದೇಶಿಕ ಮಂಡಳಿಗಳ ಆಯ್ಕೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲಾಗಿದೆ ಎಂದು ಅವರು ವಿಷಾದಿಸಿದ್ದಾರೆ.

“ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಮೇಲಿನ ನಂಬಿಕೆಯನ್ನು ಕುಕಿ ಪೀಪಲ್ಸ್ ಅಲೈಯನ್ಸ್ ಕಳೆದುಕೊಂಡಿದೆ” ಎಂದಿರುವ ಅವರು, ತಾಂತ್ರಿಕವಾಗಿ ಬೆಂಬಲವನ್ನು ಹಿಂತೆಗೆದುಕೊಳ್ಳದಿದ್ದರೂ, ಮುಂದಿನ ದಿನಗಳಲ್ಲಿ ಬೆಂಬಲ ವಾಪಸ್ ಪಡೆಯುವ ಸೂಚನೆಯನ್ನೂ ಅವರು ನೀಡಿದ್ದಾರೆ.

ಇದನ್ನೂ ಓದಿರಿ: ಮಣಿಪುರ ಹಿಂಸಾಚಾರ: ಅಗತ್ಯ ವಸ್ತುಗಳ ಬೆಲೆ ಮುಗಿಲೆತ್ತರ!

ಬಿರೇನ್ ಸಿಂಗ್ ಅವರು ತಮ್ಮದೇ ಆದ ಬಹುಮತವನ್ನು ಹೊಂದಿರುವುದರಿಂದ, ಕುಕಿ ಪೀಪಲ್ಸ್ ಅಲೈಯನ್ಸ್‌ನ ಬೆಂಬಲವು ತಾಂತ್ರಿಕವಾಗಿ ಅತ್ಯುತ್ತಮವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿರೇನ್ ಸಿಂಗ್ ‘ಕುಕಿ ವಿರೋಧಿ’ ಎಂದು ಹ್ಯಾಂಗ್‌ಶಿಂಗ್ ಕಿಡಿಕಾರಿದ್ದಾರೆ.

ಕುಕಿ ಮತ್ತು ಮೈಥೇಯಿ ಸಮುದಾಯದ ನಡುವಿನ ಸಮಸ್ಯೆಗೆ ಬಿರೇನ್‌ ಸಿಂಗ್ ಅವರು ಕಳೆದ ನಾಲ್ಕೈದು ವರ್ಷಗಳಲ್ಲಿ ತೋರಿರುವ ವರ್ತನೆಯೇ ಕಾರಣ ಎಂದು ಹ್ಯಾಂಗ್‌ಶಿಂಗ್ ಆರೋಪಿಸಿದ್ದಾರೆ.

ಸಿಎಂ ಬಿರೇನ್ ಸಿಂಗ್ ಅವರು ಬೇಜವಾಬ್ದಾರಿ ತೋರಿದ್ದಾರೆಂದು ಉದಾಹರಣೆಗಳನ್ನು ಅವರು ನೀಡಿದ್ದಾರೆ. “ತಮ್ಮ ಮನೆಯನ್ನು ಲೂಟಿ ಮಾಡಲಾಗುತ್ತಿದೆ, ಸುಟ್ಟು ಹಾಕಲಾಗುತ್ತಿದೆ” ಎಂದು ಹೇಳಲು ಬಿಜೆಪಿ ಶಾಸಕ, ಬಿರೇನ್ ಸಿಂಗ್ ಅವರ ಸರ್ಕಾರದ ಸದಸ್ಯ ಲೆಟ್ಪಾವೊ ಹಾಕಿಪ್ ಅವರು ಬಿರೇನ್ ಸಿಂಗ್ ಅವರಿಗೆ ಪದೇ ಪದೇ ಫೋನ್ ಮಾಡಿದರೂ ಸ್ಪಂದಿಸಿಲ್ಲ ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...