Homeಮುಖಪುಟ‘30 ಉಗ್ರರನ್ನು ಕೊಲ್ಲಲಾಗಿದೆ’: ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌

‘30 ಉಗ್ರರನ್ನು ಕೊಲ್ಲಲಾಗಿದೆ’: ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌

ಕುಕಿ ಮತ್ತು ಮೈಥೇಯಿ ಸಮುದಾಯಗಳ ನಡುವಿನ ಘರ್ಷಣೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ

- Advertisement -
- Advertisement -

ಮಣಿಪುರದ ವಿವಿಧೆಡೆ ಭದ್ರತಾ ಪಡೆಗಳು ಮತ್ತು ಶಸ್ತ್ರಸಜ್ಜಿತ ಬಂಡುಕೋರರ ನಡುವೆ ಭಾನುವಾರ ಘರ್ಷಣೆ ಭುಗಿಲೆದ್ದಿದೆ. “ಸುಮಾರು 30 ಉಗ್ರರು ಹತರಾಗಿದ್ದಾರೆ ಮತ್ತು ಕೆಲವರನ್ನು ಬಂಧಿಸಲಾಗಿದೆ” ಎಂದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಹೇಳಿದ್ದಾರೆ.

“ನಾಗರಿಕರ ವಿರುದ್ಧ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸುತ್ತಿರುವ ಉಗ್ರಗಾಮಿ ಗುಂಪುಗಳ ವಿರುದ್ಧ ಪ್ರತೀಕಾರ ಮತ್ತು ರಕ್ಷಣಾತ್ಮಕ ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಯ ಭಾಗವಾಗಿ ವಿವಿಧ ಪ್ರದೇಶಗಳಲ್ಲಿ ಸುಮಾರು 30 ಉಗ್ರಗಾಮಿಗಳನ್ನು ಕೊಲ್ಲಲಾಗಿದೆ. ಕೆಲವರನ್ನು ಭದ್ರತಾ ಪಡೆಗಳು ಬಂಧಿಸಿವೆ” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಶಾಂತಿಯನ್ನು ತರುವ ಸಲುವಾಗಿ ಸೈನ್ಯ ಮುಂದಾಗಿದೆ. ಕುಕಿ ಮತ್ತು ಮಥೇಯಿ ಸಮುದಾಯಗಳ ನಡುವಿನ ಘರ್ಷಣೆಯನ್ನು ತಡೆಯಲು ಕಾರ್ಯಾಚರಣೆ ನಡೆದಿದೆ.

ಇಂಫಾಲ್ ಪಶ್ಚಿಮದ ಉರಿಪೋಕ್‌ನಲ್ಲಿರುವ ಬಿಜೆಪಿ ಶಾಸಕ ಖ್ವೈರಕ್‌ಪಾಮ್ ರಘುಮಣಿ ಸಿಂಗ್ ಅವರ ಮನೆಯನ್ನು ಧ್ವಂಸಗೊಳಿಸಲಾಗಿದೆ ಮತ್ತು ಅವರ ಎರಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಉನ್ನತ ಭದ್ರತಾ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದಾರೆ.

ಇಂಫಾಲ್ ಕಣಿವೆಯ ಸುತ್ತಮುತ್ತಲಿನ ವಿವಿಧ ಜಿಲ್ಲೆಗಳ ಹಲವಾರು ಸ್ಥಳಗಳಲ್ಲಿ ಮುಂಜಾನೆ ಘರ್ಷಣೆಗಳು ಪ್ರಾರಂಭವಾದವು ಎಂದು ತಿಳಿಸಿದ್ದಾರೆ.

“ನಮ್ಮ ಮಾಹಿತಿಯ ಪ್ರಕಾರ, ಕಾಕ್ಚಿಂಗ್‌ನ ಸುಗ್ನು, ಚುರಾಚಂದ್‌ಪುರದ ಕಾಂಗ್ವಿ, ಇಂಫಾಲ್ ಪಶ್ಚಿಮದ ಕಾಂಗ್‌ಚುಪ್, ಇಂಫಾಲ್ ಪೂರ್ವದ ಸಗೋಲ್ಮಾಂಗ್, ಬಿಷೆನ್‌ಪುರದ ನುಂಗೋಯಿಪೋಕ್ಪಿ, ಇಂಫಾಲ್ ಪಶ್ಚಿಮದ ಖುರ್ಖುಲ್ ಮತ್ತು ಕಾಂಗ್‌ಪೋಕ್ಪಿಯ ವೈಕೆಪಿಐನಲ್ಲಿ ಗುಂಡಿನ ದಾಳಿ ನಡೆದಿದೆ” ಎಂದಿದ್ದಾರೆ.

ಕಾಕ್ಚಿಂಗ್ ಪೊಲೀಸ್ ಠಾಣೆಯಲ್ಲಿದ್ದ ಶಶ್ತ್ರಾಸ್ತ್ರಗಳನ್ನು ಮೈತೇಯಿ ಗುಂಪಿನವರು ಲೂಟಿ ಮಾಡಿದ್ದಾರೆಂಬ ವರದಿಯೂ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಣಿಪುರದಲ್ಲಿ ಇದುವರೆಗೆ 75 ಕ್ಕೂ ಹೆಚ್ಚು ಜೀವಗಳನ್ನು ಈ ಜನಾಂಗೀಯ ಘರ್ಷಣೆ ಬಲಿ ಪಡೆದಿದೆ. ಎಸ್‌ಟಿ ಮೀಸಲಾತಿ ವಿಚಾರವಾಗಿ ಎರಡು ಸಮುದಾಯಗಳ ನಡುವಿನ ಕಲಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಮಣಿಪುರ ಮುಖ್ಯಮಂತ್ರಿ ಕುಕಿ ಸಮುದಾಯದ ವಿರೋಧಿಯಾಗಿದ್ದು, ನಮಗೆ ಪ್ರತ್ಯೇಕ ರಾಜ್ಯ ಬೇಕು ಮತ್ತು ಅದಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಪರ ಕುಕಿ ಗುಂಪಿನ ಮುಖ್ಯಸ್ಥ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ.

‘ದಿ ವೈರ್‌’ ಜಾಲತಾಣದ ಖ್ಯಾತ ಪತ್ರಕರ್ತ ಕರಣ್ ಥಾಪರ್‌ ನಡೆಸಿರುವ ಸಂದರ್ಶನದಲ್ಲಿ ಕುಕಿ ಪೀಪಲ್ಸ್ ಅಲೈಯನ್ಸ್‌ನ ಪ್ರಧಾನ ಕಾರ್ಯದರ್ಶಿ ಹ್ಯಾಂಗ್‌ಶಿಂಗ್ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದರು.

“ಕುಕಿ ಜನರಿಗೆ ಪ್ರತ್ಯೇಕ ಆಡಳಿತ ಬೇಕು. ಇದೇ ರಾಜ್ಯದಲ್ಲಿ ಮೈಥೇಯಿ ಸಮುದಾಯದೊಂದಿಗೆ ಮುಂದೆಯೂ ಇರುವುದು ಅಸಾಧ್ಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಎನ್. ಬಿರೇನ್ ಸಿಂಗ್ ಸರ್ಕಾರವನ್ನು ಕುಕಿ ಪೀಪಲ್ಸ್ ಅಲಯನ್ಸ್ ಬೆಂಬಲಿಸಿದೆ ಎಂಬುದನ್ನು ಗಮನಿಸಬಹುದು. ಈ ಬಣದ ಪ್ರಭಾವಿ ನಾಯಕ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, “ನಮಗೆ ಪ್ರತ್ಯೇಕ ಆಡಳಿತ ಬೇಕೆಂಬ ಬೇಡಿಕೆಯಿಂದ ಕುಕಿ ಸಮುದಾಯ ಹಿಂದೆ ಸರಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕ ಆಡಳಿತವೆಂದರೆ ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ಆಗಿರಬಹುದು ಎಂದು ಅವರು ಹೇಳಿದ್ದಾರೆ. ಮಣಿಪುರದೊಳಗೆ ಸ್ವಾಯತ್ತ ಪ್ರಾದೇಶಿಕ ಮಂಡಳಿಗಳ ಆಯ್ಕೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲಾಗಿದೆ ಎಂದು ಅವರು ವಿಷಾದಿಸಿದ್ದಾರೆ.

“ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಮೇಲಿನ ನಂಬಿಕೆಯನ್ನು ಕುಕಿ ಪೀಪಲ್ಸ್ ಅಲೈಯನ್ಸ್ ಕಳೆದುಕೊಂಡಿದೆ” ಎಂದಿರುವ ಅವರು, ತಾಂತ್ರಿಕವಾಗಿ ಬೆಂಬಲವನ್ನು ಹಿಂತೆಗೆದುಕೊಳ್ಳದಿದ್ದರೂ, ಮುಂದಿನ ದಿನಗಳಲ್ಲಿ ಬೆಂಬಲ ವಾಪಸ್ ಪಡೆಯುವ ಸೂಚನೆಯನ್ನೂ ಅವರು ನೀಡಿದ್ದಾರೆ.

ಇದನ್ನೂ ಓದಿರಿ: ಮಣಿಪುರ ಹಿಂಸಾಚಾರ: ಅಗತ್ಯ ವಸ್ತುಗಳ ಬೆಲೆ ಮುಗಿಲೆತ್ತರ!

ಬಿರೇನ್ ಸಿಂಗ್ ಅವರು ತಮ್ಮದೇ ಆದ ಬಹುಮತವನ್ನು ಹೊಂದಿರುವುದರಿಂದ, ಕುಕಿ ಪೀಪಲ್ಸ್ ಅಲೈಯನ್ಸ್‌ನ ಬೆಂಬಲವು ತಾಂತ್ರಿಕವಾಗಿ ಅತ್ಯುತ್ತಮವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿರೇನ್ ಸಿಂಗ್ ‘ಕುಕಿ ವಿರೋಧಿ’ ಎಂದು ಹ್ಯಾಂಗ್‌ಶಿಂಗ್ ಕಿಡಿಕಾರಿದ್ದಾರೆ.

ಕುಕಿ ಮತ್ತು ಮೈಥೇಯಿ ಸಮುದಾಯದ ನಡುವಿನ ಸಮಸ್ಯೆಗೆ ಬಿರೇನ್‌ ಸಿಂಗ್ ಅವರು ಕಳೆದ ನಾಲ್ಕೈದು ವರ್ಷಗಳಲ್ಲಿ ತೋರಿರುವ ವರ್ತನೆಯೇ ಕಾರಣ ಎಂದು ಹ್ಯಾಂಗ್‌ಶಿಂಗ್ ಆರೋಪಿಸಿದ್ದಾರೆ.

ಸಿಎಂ ಬಿರೇನ್ ಸಿಂಗ್ ಅವರು ಬೇಜವಾಬ್ದಾರಿ ತೋರಿದ್ದಾರೆಂದು ಉದಾಹರಣೆಗಳನ್ನು ಅವರು ನೀಡಿದ್ದಾರೆ. “ತಮ್ಮ ಮನೆಯನ್ನು ಲೂಟಿ ಮಾಡಲಾಗುತ್ತಿದೆ, ಸುಟ್ಟು ಹಾಕಲಾಗುತ್ತಿದೆ” ಎಂದು ಹೇಳಲು ಬಿಜೆಪಿ ಶಾಸಕ, ಬಿರೇನ್ ಸಿಂಗ್ ಅವರ ಸರ್ಕಾರದ ಸದಸ್ಯ ಲೆಟ್ಪಾವೊ ಹಾಕಿಪ್ ಅವರು ಬಿರೇನ್ ಸಿಂಗ್ ಅವರಿಗೆ ಪದೇ ಪದೇ ಫೋನ್ ಮಾಡಿದರೂ ಸ್ಪಂದಿಸಿಲ್ಲ ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...