Homeಮುಖಪುಟ‘30 ಉಗ್ರರನ್ನು ಕೊಲ್ಲಲಾಗಿದೆ’: ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌

‘30 ಉಗ್ರರನ್ನು ಕೊಲ್ಲಲಾಗಿದೆ’: ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌

ಕುಕಿ ಮತ್ತು ಮೈಥೇಯಿ ಸಮುದಾಯಗಳ ನಡುವಿನ ಘರ್ಷಣೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ

- Advertisement -
- Advertisement -

ಮಣಿಪುರದ ವಿವಿಧೆಡೆ ಭದ್ರತಾ ಪಡೆಗಳು ಮತ್ತು ಶಸ್ತ್ರಸಜ್ಜಿತ ಬಂಡುಕೋರರ ನಡುವೆ ಭಾನುವಾರ ಘರ್ಷಣೆ ಭುಗಿಲೆದ್ದಿದೆ. “ಸುಮಾರು 30 ಉಗ್ರರು ಹತರಾಗಿದ್ದಾರೆ ಮತ್ತು ಕೆಲವರನ್ನು ಬಂಧಿಸಲಾಗಿದೆ” ಎಂದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಹೇಳಿದ್ದಾರೆ.

“ನಾಗರಿಕರ ವಿರುದ್ಧ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸುತ್ತಿರುವ ಉಗ್ರಗಾಮಿ ಗುಂಪುಗಳ ವಿರುದ್ಧ ಪ್ರತೀಕಾರ ಮತ್ತು ರಕ್ಷಣಾತ್ಮಕ ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಯ ಭಾಗವಾಗಿ ವಿವಿಧ ಪ್ರದೇಶಗಳಲ್ಲಿ ಸುಮಾರು 30 ಉಗ್ರಗಾಮಿಗಳನ್ನು ಕೊಲ್ಲಲಾಗಿದೆ. ಕೆಲವರನ್ನು ಭದ್ರತಾ ಪಡೆಗಳು ಬಂಧಿಸಿವೆ” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಶಾಂತಿಯನ್ನು ತರುವ ಸಲುವಾಗಿ ಸೈನ್ಯ ಮುಂದಾಗಿದೆ. ಕುಕಿ ಮತ್ತು ಮಥೇಯಿ ಸಮುದಾಯಗಳ ನಡುವಿನ ಘರ್ಷಣೆಯನ್ನು ತಡೆಯಲು ಕಾರ್ಯಾಚರಣೆ ನಡೆದಿದೆ.

ಇಂಫಾಲ್ ಪಶ್ಚಿಮದ ಉರಿಪೋಕ್‌ನಲ್ಲಿರುವ ಬಿಜೆಪಿ ಶಾಸಕ ಖ್ವೈರಕ್‌ಪಾಮ್ ರಘುಮಣಿ ಸಿಂಗ್ ಅವರ ಮನೆಯನ್ನು ಧ್ವಂಸಗೊಳಿಸಲಾಗಿದೆ ಮತ್ತು ಅವರ ಎರಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಉನ್ನತ ಭದ್ರತಾ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದಾರೆ.

ಇಂಫಾಲ್ ಕಣಿವೆಯ ಸುತ್ತಮುತ್ತಲಿನ ವಿವಿಧ ಜಿಲ್ಲೆಗಳ ಹಲವಾರು ಸ್ಥಳಗಳಲ್ಲಿ ಮುಂಜಾನೆ ಘರ್ಷಣೆಗಳು ಪ್ರಾರಂಭವಾದವು ಎಂದು ತಿಳಿಸಿದ್ದಾರೆ.

“ನಮ್ಮ ಮಾಹಿತಿಯ ಪ್ರಕಾರ, ಕಾಕ್ಚಿಂಗ್‌ನ ಸುಗ್ನು, ಚುರಾಚಂದ್‌ಪುರದ ಕಾಂಗ್ವಿ, ಇಂಫಾಲ್ ಪಶ್ಚಿಮದ ಕಾಂಗ್‌ಚುಪ್, ಇಂಫಾಲ್ ಪೂರ್ವದ ಸಗೋಲ್ಮಾಂಗ್, ಬಿಷೆನ್‌ಪುರದ ನುಂಗೋಯಿಪೋಕ್ಪಿ, ಇಂಫಾಲ್ ಪಶ್ಚಿಮದ ಖುರ್ಖುಲ್ ಮತ್ತು ಕಾಂಗ್‌ಪೋಕ್ಪಿಯ ವೈಕೆಪಿಐನಲ್ಲಿ ಗುಂಡಿನ ದಾಳಿ ನಡೆದಿದೆ” ಎಂದಿದ್ದಾರೆ.

ಕಾಕ್ಚಿಂಗ್ ಪೊಲೀಸ್ ಠಾಣೆಯಲ್ಲಿದ್ದ ಶಶ್ತ್ರಾಸ್ತ್ರಗಳನ್ನು ಮೈತೇಯಿ ಗುಂಪಿನವರು ಲೂಟಿ ಮಾಡಿದ್ದಾರೆಂಬ ವರದಿಯೂ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಣಿಪುರದಲ್ಲಿ ಇದುವರೆಗೆ 75 ಕ್ಕೂ ಹೆಚ್ಚು ಜೀವಗಳನ್ನು ಈ ಜನಾಂಗೀಯ ಘರ್ಷಣೆ ಬಲಿ ಪಡೆದಿದೆ. ಎಸ್‌ಟಿ ಮೀಸಲಾತಿ ವಿಚಾರವಾಗಿ ಎರಡು ಸಮುದಾಯಗಳ ನಡುವಿನ ಕಲಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಮಣಿಪುರ ಮುಖ್ಯಮಂತ್ರಿ ಕುಕಿ ಸಮುದಾಯದ ವಿರೋಧಿಯಾಗಿದ್ದು, ನಮಗೆ ಪ್ರತ್ಯೇಕ ರಾಜ್ಯ ಬೇಕು ಮತ್ತು ಅದಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಪರ ಕುಕಿ ಗುಂಪಿನ ಮುಖ್ಯಸ್ಥ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ.

‘ದಿ ವೈರ್‌’ ಜಾಲತಾಣದ ಖ್ಯಾತ ಪತ್ರಕರ್ತ ಕರಣ್ ಥಾಪರ್‌ ನಡೆಸಿರುವ ಸಂದರ್ಶನದಲ್ಲಿ ಕುಕಿ ಪೀಪಲ್ಸ್ ಅಲೈಯನ್ಸ್‌ನ ಪ್ರಧಾನ ಕಾರ್ಯದರ್ಶಿ ಹ್ಯಾಂಗ್‌ಶಿಂಗ್ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದರು.

“ಕುಕಿ ಜನರಿಗೆ ಪ್ರತ್ಯೇಕ ಆಡಳಿತ ಬೇಕು. ಇದೇ ರಾಜ್ಯದಲ್ಲಿ ಮೈಥೇಯಿ ಸಮುದಾಯದೊಂದಿಗೆ ಮುಂದೆಯೂ ಇರುವುದು ಅಸಾಧ್ಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಎನ್. ಬಿರೇನ್ ಸಿಂಗ್ ಸರ್ಕಾರವನ್ನು ಕುಕಿ ಪೀಪಲ್ಸ್ ಅಲಯನ್ಸ್ ಬೆಂಬಲಿಸಿದೆ ಎಂಬುದನ್ನು ಗಮನಿಸಬಹುದು. ಈ ಬಣದ ಪ್ರಭಾವಿ ನಾಯಕ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, “ನಮಗೆ ಪ್ರತ್ಯೇಕ ಆಡಳಿತ ಬೇಕೆಂಬ ಬೇಡಿಕೆಯಿಂದ ಕುಕಿ ಸಮುದಾಯ ಹಿಂದೆ ಸರಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕ ಆಡಳಿತವೆಂದರೆ ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ಆಗಿರಬಹುದು ಎಂದು ಅವರು ಹೇಳಿದ್ದಾರೆ. ಮಣಿಪುರದೊಳಗೆ ಸ್ವಾಯತ್ತ ಪ್ರಾದೇಶಿಕ ಮಂಡಳಿಗಳ ಆಯ್ಕೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲಾಗಿದೆ ಎಂದು ಅವರು ವಿಷಾದಿಸಿದ್ದಾರೆ.

“ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಮೇಲಿನ ನಂಬಿಕೆಯನ್ನು ಕುಕಿ ಪೀಪಲ್ಸ್ ಅಲೈಯನ್ಸ್ ಕಳೆದುಕೊಂಡಿದೆ” ಎಂದಿರುವ ಅವರು, ತಾಂತ್ರಿಕವಾಗಿ ಬೆಂಬಲವನ್ನು ಹಿಂತೆಗೆದುಕೊಳ್ಳದಿದ್ದರೂ, ಮುಂದಿನ ದಿನಗಳಲ್ಲಿ ಬೆಂಬಲ ವಾಪಸ್ ಪಡೆಯುವ ಸೂಚನೆಯನ್ನೂ ಅವರು ನೀಡಿದ್ದಾರೆ.

ಇದನ್ನೂ ಓದಿರಿ: ಮಣಿಪುರ ಹಿಂಸಾಚಾರ: ಅಗತ್ಯ ವಸ್ತುಗಳ ಬೆಲೆ ಮುಗಿಲೆತ್ತರ!

ಬಿರೇನ್ ಸಿಂಗ್ ಅವರು ತಮ್ಮದೇ ಆದ ಬಹುಮತವನ್ನು ಹೊಂದಿರುವುದರಿಂದ, ಕುಕಿ ಪೀಪಲ್ಸ್ ಅಲೈಯನ್ಸ್‌ನ ಬೆಂಬಲವು ತಾಂತ್ರಿಕವಾಗಿ ಅತ್ಯುತ್ತಮವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿರೇನ್ ಸಿಂಗ್ ‘ಕುಕಿ ವಿರೋಧಿ’ ಎಂದು ಹ್ಯಾಂಗ್‌ಶಿಂಗ್ ಕಿಡಿಕಾರಿದ್ದಾರೆ.

ಕುಕಿ ಮತ್ತು ಮೈಥೇಯಿ ಸಮುದಾಯದ ನಡುವಿನ ಸಮಸ್ಯೆಗೆ ಬಿರೇನ್‌ ಸಿಂಗ್ ಅವರು ಕಳೆದ ನಾಲ್ಕೈದು ವರ್ಷಗಳಲ್ಲಿ ತೋರಿರುವ ವರ್ತನೆಯೇ ಕಾರಣ ಎಂದು ಹ್ಯಾಂಗ್‌ಶಿಂಗ್ ಆರೋಪಿಸಿದ್ದಾರೆ.

ಸಿಎಂ ಬಿರೇನ್ ಸಿಂಗ್ ಅವರು ಬೇಜವಾಬ್ದಾರಿ ತೋರಿದ್ದಾರೆಂದು ಉದಾಹರಣೆಗಳನ್ನು ಅವರು ನೀಡಿದ್ದಾರೆ. “ತಮ್ಮ ಮನೆಯನ್ನು ಲೂಟಿ ಮಾಡಲಾಗುತ್ತಿದೆ, ಸುಟ್ಟು ಹಾಕಲಾಗುತ್ತಿದೆ” ಎಂದು ಹೇಳಲು ಬಿಜೆಪಿ ಶಾಸಕ, ಬಿರೇನ್ ಸಿಂಗ್ ಅವರ ಸರ್ಕಾರದ ಸದಸ್ಯ ಲೆಟ್ಪಾವೊ ಹಾಕಿಪ್ ಅವರು ಬಿರೇನ್ ಸಿಂಗ್ ಅವರಿಗೆ ಪದೇ ಪದೇ ಫೋನ್ ಮಾಡಿದರೂ ಸ್ಪಂದಿಸಿಲ್ಲ ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...