Homeಮುಖಪುಟಭಾರತವನ್ನು ಗುರಿಯಾಗಿಸಲು ಪಾಕಿಸ್ತಾನದಿಂದ 300- 400 ಡ್ರೋನ್‌ಗಳ ಬಳಕೆ: ಕರ್ನಲ್ ಸೋಫಿಯಾ ಖುರೇಷಿ

ಭಾರತವನ್ನು ಗುರಿಯಾಗಿಸಲು ಪಾಕಿಸ್ತಾನದಿಂದ 300- 400 ಡ್ರೋನ್‌ಗಳ ಬಳಕೆ: ಕರ್ನಲ್ ಸೋಫಿಯಾ ಖುರೇಷಿ

- Advertisement -
- Advertisement -

ಭಾರತದ 36 ಸ್ಥಳಗಳ ಮೇಲೆ ಟರ್ಕಿ ಡ್ರೋನ್ ಮೂಲಕ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನಿಸಿದೆ. 300-400 ಡ್ರೋನ್‌ಗಳ ಸಮೂಹವು ಲೇಹ್‌ನಿಂದ ಸರ್ ಕ್ರೀಕ್‌ವರೆಗಿನ ಭಾರತೀಯ ಸ್ಥಳಗಳನ್ನು ಗುರಿಯಾಗಿಸಿದೆ. ಪಾಕಿಸ್ತಾನ ನಾಗರಿಕ ವಿಮಾನಯಾನ ಸಂಸ್ಥೆಗಳನ್ನು ಗುರಾಣಿಯಾಗಿ ಬಳಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದರು.

ಗುರುವಾರ (ಮೇ.8) ರಾತ್ರಿ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಏರ್ಪಟ್ಟ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಶುಕ್ರವಾರ (ಮೇ.9) ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಗುರುವಾರ ತಡರಾತ್ರಿ ಭಾರತದ ಉತ್ತರ ಮತ್ತು ಪಶ್ಚಿಮ ವಲಯಗಳಲ್ಲಿನ 15 ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಉಡಾಯಿಸಿದೆ ಎಂದು ಸೋಫಿಯಾ ಖುರೇಷಿ ತಿಳಿಸಿದರು.

“ನಮ್ಮ ಸಶಸ್ತ್ರ ಪಡೆಗಳು ಚಲನಶೀಲ ಮತ್ತು ಚಲನಶೀಲವಲ್ಲದ ವಿಧಾನಗಳನ್ನು ಬಳಸಿಕೊಂಡು ಅನೇಕ ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿವೆ. ಭಟಿಂಡಾ ಮಿಲಿಟರಿ ನೆಲೆಯನ್ನು ಗುರಿಯಾಗಿಸಲು ಕಳುಹಿಸಲಾದ ಒಂದು ಪಾಕಿಸ್ತಾನಿ ಸಶಸ್ತ್ರ ಮಾನವರಹಿತ ವೈಮಾನಿಕ ವಾಹನದ ಪ್ರಯತ್ನವನ್ನು ವಿಫಲಗೊಳಿಸಿವೆ ಎಂದು ಹೇಳಿದರು.

“ಭಾರತದ ನೆಲೆಗಳನ್ನು ಗುರಿಯಾಗಿಸುವ ತನ್ನ ಪ್ರಯತ್ನಗಳನ್ನು ಪಾಕಿಸ್ತಾನವು ಹಾಸ್ಯಾಸ್ಪದವಾಗಿ ನಿರಾಕರಿಸುವುದು ಅದರ ದ್ವಂದ್ವತೆಗೆ ಮತ್ತೊಂದು ಉದಾಹರಣೆಯಾಗಿದೆ. ಭಾರತೀಯ ಸಶಸ್ತ್ರ ಪಡೆಗಳು ಪ್ರಮಾಣಾನುಗುಣವಾಗಿ ಮತ್ತು ಸಮರ್ಪಕವಾಗಿ ಪ್ರತಿಕ್ರಿಯಿಸಿವೆ. ಪಾಕಿಸ್ತಾನದ ನಾಲ್ಕು ವಾಯು ರಕ್ಷಣಾ ತಾಣಗಳ ಮೇಲೆ ಸಶಸ್ತ್ರ ಡ್ರೋನ್‌ಗಳನ್ನು ಹಾರಿಸಿದೆ ಮತ್ತು ಒಂದು ಡ್ರೋನ್ ಎಡಿ ರಾಡಾರ್ ವ್ಯವಸ್ಥೆಯನ್ನು ನಾಶಪಡಿಸಿದೆ ಎಂದು ಹೇಳಿದರು.

ಪಾಕಿಸ್ತಾನದಿಂದ ಬರುತ್ತಿರುವ ಹೇಳಿಕೆಗಳನ್ನು ತಳ್ಳಿ ಹಾಕಿದ ವಿಕ್ರಮ್ ಮಿಸ್ರಿ, ಆ ದೇಶದ ವಿರುದ್ದ ಕಿಡಿಕಾರಿದರು. ಪಾಕಿಸ್ತಾನ ಸುಳ್ಳು ಹೇಳುತ್ತಿದೆ. ವಿಶೇಷವಾಗಿ, ಪೂಂಚ್‌ನಲ್ಲಿರುವ ಗುರುದ್ವಾರದ ಮೇಲೆ ಪಾಕಿಸ್ತಾನ ದಾಳಿ ಮಾಡಿತ್ತು. ಈ ಘಟನೆಯಲ್ಲಿ ಕೆಲವು ಸ್ಥಳೀಯ ಸಿಖ್ ಸಮುದಾಯದ ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಡ್ರೋನ್ ಮೂಲಕ ನಂಕಾನಾ ಸಾಹಿಬ್ ಗುರುದ್ವಾರದ ಮೇಲೆ ಭಾರತ ದಾಳಿ ಮಾಡಿದೆ ಎಂದು ಪಾಕಿಸ್ತಾನ ಸುಳ್ಳು ಹೇಳುತ್ತಿದೆ. ಇದು ಪಾಕಿಸ್ತಾನದ ಸುಳ್ಳು ಅಭಿಯಾನದ ಒಂದು ಭಾಗವಾಗಿದೆ ಎಂದರು.

ಗುರುವಾರ ರಾತ್ರಿ ಪಾಕಿಸ್ತಾನ ದಾಳಿ ನಡೆಸಿದ ನಂತರ, ಭಾರತೀಯ ಸಶಸ್ತ್ರ ಪಡೆಗಳು ಕೂಡ ಪ್ರತೀಕಾರ ತೀರಿಸಿಕೊಂಡಿವೆ. ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿ ವಾಯು ರಕ್ಷಣಾ ರಾಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಗುರಿಯಾಗಿಸಲಾಗಿದೆ. ಲಾಹೋರ್‌ನ ವಾಯು ರಕ್ಷಣಾ ವ್ಯವಸ್ಥೆಯನ್ನು ತಟಸ್ಥಗೊಳಿಸಲಾಗಿದೆ ಎಂದು ಸೋಫಿಯಾ ಖುರೇಷಿ ತಿಳಿಸಿದರು

ಮೇ 7ರಂದು ನಡೆಸಿದ ‘ಆಪರೇಷನ್ ಸಿಂಧೂರ’ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ, “ನಮ್ಮ ಕ್ರಮ ನಿರ್ದಿಷ್ಟ, ನಿಖರ, ವಿವೇಚನಾಭರಿತ ಮತ್ತು ಉದ್ವಿಗ್ನತೆ ಹೆಚ್ಚಿಸುವ ಉದ್ದೇಶವಲ್ಲದ್ದು. ಯಾವುದೇ ಪಾಕಿಸ್ತಾನಿ ನಾಗರಿಕ, ಅವರ ಆರ್ಥಿಕ ಅಥವಾ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಿಲ್ಲ. ನಿಖರವಾಗಿ ಗೊತ್ತಿದ್ದ ಭಯೋತ್ಪಾದಕ ನೆಲೆಗಳನ್ನು ಮಾತ್ರ ಗುರಿಯಾಗಿಸಲಾಗಿದೆ” ಎಂದು ಭಾರತ ಹೇಳಿತ್ತು.

ಮೇ 7 ಮತ್ತು 8 ನಡುವೆ ರಾತ್ರಿ ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ, ನಲ್, ಫಲೋಡಿ, ಉತ್ತರಲೈ ಮತ್ತು ಭುಜ್ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದ ಹಲವಾರು ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಡ್ರೋನ್‌ ಮತ್ತು ಕ್ಷಿಪಣಿಗಳ ಮೂಲಕ ದಾಳಿ ಮಾಡಲು ಪಾಕಿಸ್ತಾನ ಪ್ರಯತ್ನಿಸಿದೆ. ಎಲ್ಲಾ ದಾಳಿಗಳನ್ನು ಇಂಟಿಗ್ರೇಟೆಡ್ ಕೌಂಟರ್ ಯುಎಎಸ್ ಗ್ರಿಡ್ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳ ಮೂಲಕ ತಟಸ್ಥಗೊಳಿಸಲಾಗಿದೆ ಎಂದು ವಿಂಗ್ ಕಮಾಂಡ್ ವ್ಯೋಮಿಕಾ ಸಿಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ 26 ಭಾರತೀಯ ಪ್ರವಾಸಿಗರನ್ನು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು ದಾಳಿ ಮಾಡಿತ್ತು. ನಮ್ಮದು ನಿಖರ, ವಿವೇಚನಾಭರಿತ ಮತ್ತು ಉದ್ವಿಗ್ನತೆ ಹೆಚ್ಚಿಸುವ ಉದ್ದೇಶವಲ್ಲದ ದಾಳಿಯಾಗಿತ್ತು ಎಂದು ವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಪುನರುಚ್ಚರಿಸಿದರು.

‘ಪಾಕಿಸ್ತಾನಿ’ ಎಂದು ಹೀಯಾಳಿಸಿ ಥಳಿಸಿದ ಪತ್ರಕರ್ತ; ಮನನೊಂದು ಆತ್ಮಹತ್ಯೆಗೆ ಶರಣಾದ ಮುಸ್ಲಿಂ ವ್ಯಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...