Homeಮುಖಪುಟಭಾರತವನ್ನು ಗುರಿಯಾಗಿಸಲು ಪಾಕಿಸ್ತಾನದಿಂದ 300- 400 ಡ್ರೋನ್‌ಗಳ ಬಳಕೆ: ಕರ್ನಲ್ ಸೋಫಿಯಾ ಖುರೇಷಿ

ಭಾರತವನ್ನು ಗುರಿಯಾಗಿಸಲು ಪಾಕಿಸ್ತಾನದಿಂದ 300- 400 ಡ್ರೋನ್‌ಗಳ ಬಳಕೆ: ಕರ್ನಲ್ ಸೋಫಿಯಾ ಖುರೇಷಿ

- Advertisement -
- Advertisement -

ಭಾರತದ 36 ಸ್ಥಳಗಳ ಮೇಲೆ ಟರ್ಕಿ ಡ್ರೋನ್ ಮೂಲಕ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನಿಸಿದೆ. 300-400 ಡ್ರೋನ್‌ಗಳ ಸಮೂಹವು ಲೇಹ್‌ನಿಂದ ಸರ್ ಕ್ರೀಕ್‌ವರೆಗಿನ ಭಾರತೀಯ ಸ್ಥಳಗಳನ್ನು ಗುರಿಯಾಗಿಸಿದೆ. ಪಾಕಿಸ್ತಾನ ನಾಗರಿಕ ವಿಮಾನಯಾನ ಸಂಸ್ಥೆಗಳನ್ನು ಗುರಾಣಿಯಾಗಿ ಬಳಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದರು.

ಗುರುವಾರ (ಮೇ.8) ರಾತ್ರಿ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಏರ್ಪಟ್ಟ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಶುಕ್ರವಾರ (ಮೇ.9) ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಗುರುವಾರ ತಡರಾತ್ರಿ ಭಾರತದ ಉತ್ತರ ಮತ್ತು ಪಶ್ಚಿಮ ವಲಯಗಳಲ್ಲಿನ 15 ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಉಡಾಯಿಸಿದೆ ಎಂದು ಸೋಫಿಯಾ ಖುರೇಷಿ ತಿಳಿಸಿದರು.

“ನಮ್ಮ ಸಶಸ್ತ್ರ ಪಡೆಗಳು ಚಲನಶೀಲ ಮತ್ತು ಚಲನಶೀಲವಲ್ಲದ ವಿಧಾನಗಳನ್ನು ಬಳಸಿಕೊಂಡು ಅನೇಕ ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿವೆ. ಭಟಿಂಡಾ ಮಿಲಿಟರಿ ನೆಲೆಯನ್ನು ಗುರಿಯಾಗಿಸಲು ಕಳುಹಿಸಲಾದ ಒಂದು ಪಾಕಿಸ್ತಾನಿ ಸಶಸ್ತ್ರ ಮಾನವರಹಿತ ವೈಮಾನಿಕ ವಾಹನದ ಪ್ರಯತ್ನವನ್ನು ವಿಫಲಗೊಳಿಸಿವೆ ಎಂದು ಹೇಳಿದರು.

“ಭಾರತದ ನೆಲೆಗಳನ್ನು ಗುರಿಯಾಗಿಸುವ ತನ್ನ ಪ್ರಯತ್ನಗಳನ್ನು ಪಾಕಿಸ್ತಾನವು ಹಾಸ್ಯಾಸ್ಪದವಾಗಿ ನಿರಾಕರಿಸುವುದು ಅದರ ದ್ವಂದ್ವತೆಗೆ ಮತ್ತೊಂದು ಉದಾಹರಣೆಯಾಗಿದೆ. ಭಾರತೀಯ ಸಶಸ್ತ್ರ ಪಡೆಗಳು ಪ್ರಮಾಣಾನುಗುಣವಾಗಿ ಮತ್ತು ಸಮರ್ಪಕವಾಗಿ ಪ್ರತಿಕ್ರಿಯಿಸಿವೆ. ಪಾಕಿಸ್ತಾನದ ನಾಲ್ಕು ವಾಯು ರಕ್ಷಣಾ ತಾಣಗಳ ಮೇಲೆ ಸಶಸ್ತ್ರ ಡ್ರೋನ್‌ಗಳನ್ನು ಹಾರಿಸಿದೆ ಮತ್ತು ಒಂದು ಡ್ರೋನ್ ಎಡಿ ರಾಡಾರ್ ವ್ಯವಸ್ಥೆಯನ್ನು ನಾಶಪಡಿಸಿದೆ ಎಂದು ಹೇಳಿದರು.

ಪಾಕಿಸ್ತಾನದಿಂದ ಬರುತ್ತಿರುವ ಹೇಳಿಕೆಗಳನ್ನು ತಳ್ಳಿ ಹಾಕಿದ ವಿಕ್ರಮ್ ಮಿಸ್ರಿ, ಆ ದೇಶದ ವಿರುದ್ದ ಕಿಡಿಕಾರಿದರು. ಪಾಕಿಸ್ತಾನ ಸುಳ್ಳು ಹೇಳುತ್ತಿದೆ. ವಿಶೇಷವಾಗಿ, ಪೂಂಚ್‌ನಲ್ಲಿರುವ ಗುರುದ್ವಾರದ ಮೇಲೆ ಪಾಕಿಸ್ತಾನ ದಾಳಿ ಮಾಡಿತ್ತು. ಈ ಘಟನೆಯಲ್ಲಿ ಕೆಲವು ಸ್ಥಳೀಯ ಸಿಖ್ ಸಮುದಾಯದ ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಡ್ರೋನ್ ಮೂಲಕ ನಂಕಾನಾ ಸಾಹಿಬ್ ಗುರುದ್ವಾರದ ಮೇಲೆ ಭಾರತ ದಾಳಿ ಮಾಡಿದೆ ಎಂದು ಪಾಕಿಸ್ತಾನ ಸುಳ್ಳು ಹೇಳುತ್ತಿದೆ. ಇದು ಪಾಕಿಸ್ತಾನದ ಸುಳ್ಳು ಅಭಿಯಾನದ ಒಂದು ಭಾಗವಾಗಿದೆ ಎಂದರು.

ಗುರುವಾರ ರಾತ್ರಿ ಪಾಕಿಸ್ತಾನ ದಾಳಿ ನಡೆಸಿದ ನಂತರ, ಭಾರತೀಯ ಸಶಸ್ತ್ರ ಪಡೆಗಳು ಕೂಡ ಪ್ರತೀಕಾರ ತೀರಿಸಿಕೊಂಡಿವೆ. ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿ ವಾಯು ರಕ್ಷಣಾ ರಾಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಗುರಿಯಾಗಿಸಲಾಗಿದೆ. ಲಾಹೋರ್‌ನ ವಾಯು ರಕ್ಷಣಾ ವ್ಯವಸ್ಥೆಯನ್ನು ತಟಸ್ಥಗೊಳಿಸಲಾಗಿದೆ ಎಂದು ಸೋಫಿಯಾ ಖುರೇಷಿ ತಿಳಿಸಿದರು

ಮೇ 7ರಂದು ನಡೆಸಿದ ‘ಆಪರೇಷನ್ ಸಿಂಧೂರ’ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ, “ನಮ್ಮ ಕ್ರಮ ನಿರ್ದಿಷ್ಟ, ನಿಖರ, ವಿವೇಚನಾಭರಿತ ಮತ್ತು ಉದ್ವಿಗ್ನತೆ ಹೆಚ್ಚಿಸುವ ಉದ್ದೇಶವಲ್ಲದ್ದು. ಯಾವುದೇ ಪಾಕಿಸ್ತಾನಿ ನಾಗರಿಕ, ಅವರ ಆರ್ಥಿಕ ಅಥವಾ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಿಲ್ಲ. ನಿಖರವಾಗಿ ಗೊತ್ತಿದ್ದ ಭಯೋತ್ಪಾದಕ ನೆಲೆಗಳನ್ನು ಮಾತ್ರ ಗುರಿಯಾಗಿಸಲಾಗಿದೆ” ಎಂದು ಭಾರತ ಹೇಳಿತ್ತು.

ಮೇ 7 ಮತ್ತು 8 ನಡುವೆ ರಾತ್ರಿ ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ, ನಲ್, ಫಲೋಡಿ, ಉತ್ತರಲೈ ಮತ್ತು ಭುಜ್ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದ ಹಲವಾರು ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಡ್ರೋನ್‌ ಮತ್ತು ಕ್ಷಿಪಣಿಗಳ ಮೂಲಕ ದಾಳಿ ಮಾಡಲು ಪಾಕಿಸ್ತಾನ ಪ್ರಯತ್ನಿಸಿದೆ. ಎಲ್ಲಾ ದಾಳಿಗಳನ್ನು ಇಂಟಿಗ್ರೇಟೆಡ್ ಕೌಂಟರ್ ಯುಎಎಸ್ ಗ್ರಿಡ್ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳ ಮೂಲಕ ತಟಸ್ಥಗೊಳಿಸಲಾಗಿದೆ ಎಂದು ವಿಂಗ್ ಕಮಾಂಡ್ ವ್ಯೋಮಿಕಾ ಸಿಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ 26 ಭಾರತೀಯ ಪ್ರವಾಸಿಗರನ್ನು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು ದಾಳಿ ಮಾಡಿತ್ತು. ನಮ್ಮದು ನಿಖರ, ವಿವೇಚನಾಭರಿತ ಮತ್ತು ಉದ್ವಿಗ್ನತೆ ಹೆಚ್ಚಿಸುವ ಉದ್ದೇಶವಲ್ಲದ ದಾಳಿಯಾಗಿತ್ತು ಎಂದು ವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಪುನರುಚ್ಚರಿಸಿದರು.

‘ಪಾಕಿಸ್ತಾನಿ’ ಎಂದು ಹೀಯಾಳಿಸಿ ಥಳಿಸಿದ ಪತ್ರಕರ್ತ; ಮನನೊಂದು ಆತ್ಮಹತ್ಯೆಗೆ ಶರಣಾದ ಮುಸ್ಲಿಂ ವ್ಯಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...