Homeಮುಖಪುಟಭಾರತವನ್ನು ಗುರಿಯಾಗಿಸಲು ಪಾಕಿಸ್ತಾನದಿಂದ 300- 400 ಡ್ರೋನ್‌ಗಳ ಬಳಕೆ: ಕರ್ನಲ್ ಸೋಫಿಯಾ ಖುರೇಷಿ

ಭಾರತವನ್ನು ಗುರಿಯಾಗಿಸಲು ಪಾಕಿಸ್ತಾನದಿಂದ 300- 400 ಡ್ರೋನ್‌ಗಳ ಬಳಕೆ: ಕರ್ನಲ್ ಸೋಫಿಯಾ ಖುರೇಷಿ

- Advertisement -
- Advertisement -

ಭಾರತದ 36 ಸ್ಥಳಗಳ ಮೇಲೆ ಟರ್ಕಿ ಡ್ರೋನ್ ಮೂಲಕ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನಿಸಿದೆ. 300-400 ಡ್ರೋನ್‌ಗಳ ಸಮೂಹವು ಲೇಹ್‌ನಿಂದ ಸರ್ ಕ್ರೀಕ್‌ವರೆಗಿನ ಭಾರತೀಯ ಸ್ಥಳಗಳನ್ನು ಗುರಿಯಾಗಿಸಿದೆ. ಪಾಕಿಸ್ತಾನ ನಾಗರಿಕ ವಿಮಾನಯಾನ ಸಂಸ್ಥೆಗಳನ್ನು ಗುರಾಣಿಯಾಗಿ ಬಳಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದರು.

ಗುರುವಾರ (ಮೇ.8) ರಾತ್ರಿ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಏರ್ಪಟ್ಟ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಶುಕ್ರವಾರ (ಮೇ.9) ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಗುರುವಾರ ತಡರಾತ್ರಿ ಭಾರತದ ಉತ್ತರ ಮತ್ತು ಪಶ್ಚಿಮ ವಲಯಗಳಲ್ಲಿನ 15 ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಉಡಾಯಿಸಿದೆ ಎಂದು ಸೋಫಿಯಾ ಖುರೇಷಿ ತಿಳಿಸಿದರು.

“ನಮ್ಮ ಸಶಸ್ತ್ರ ಪಡೆಗಳು ಚಲನಶೀಲ ಮತ್ತು ಚಲನಶೀಲವಲ್ಲದ ವಿಧಾನಗಳನ್ನು ಬಳಸಿಕೊಂಡು ಅನೇಕ ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿವೆ. ಭಟಿಂಡಾ ಮಿಲಿಟರಿ ನೆಲೆಯನ್ನು ಗುರಿಯಾಗಿಸಲು ಕಳುಹಿಸಲಾದ ಒಂದು ಪಾಕಿಸ್ತಾನಿ ಸಶಸ್ತ್ರ ಮಾನವರಹಿತ ವೈಮಾನಿಕ ವಾಹನದ ಪ್ರಯತ್ನವನ್ನು ವಿಫಲಗೊಳಿಸಿವೆ ಎಂದು ಹೇಳಿದರು.

“ಭಾರತದ ನೆಲೆಗಳನ್ನು ಗುರಿಯಾಗಿಸುವ ತನ್ನ ಪ್ರಯತ್ನಗಳನ್ನು ಪಾಕಿಸ್ತಾನವು ಹಾಸ್ಯಾಸ್ಪದವಾಗಿ ನಿರಾಕರಿಸುವುದು ಅದರ ದ್ವಂದ್ವತೆಗೆ ಮತ್ತೊಂದು ಉದಾಹರಣೆಯಾಗಿದೆ. ಭಾರತೀಯ ಸಶಸ್ತ್ರ ಪಡೆಗಳು ಪ್ರಮಾಣಾನುಗುಣವಾಗಿ ಮತ್ತು ಸಮರ್ಪಕವಾಗಿ ಪ್ರತಿಕ್ರಿಯಿಸಿವೆ. ಪಾಕಿಸ್ತಾನದ ನಾಲ್ಕು ವಾಯು ರಕ್ಷಣಾ ತಾಣಗಳ ಮೇಲೆ ಸಶಸ್ತ್ರ ಡ್ರೋನ್‌ಗಳನ್ನು ಹಾರಿಸಿದೆ ಮತ್ತು ಒಂದು ಡ್ರೋನ್ ಎಡಿ ರಾಡಾರ್ ವ್ಯವಸ್ಥೆಯನ್ನು ನಾಶಪಡಿಸಿದೆ ಎಂದು ಹೇಳಿದರು.

ಪಾಕಿಸ್ತಾನದಿಂದ ಬರುತ್ತಿರುವ ಹೇಳಿಕೆಗಳನ್ನು ತಳ್ಳಿ ಹಾಕಿದ ವಿಕ್ರಮ್ ಮಿಸ್ರಿ, ಆ ದೇಶದ ವಿರುದ್ದ ಕಿಡಿಕಾರಿದರು. ಪಾಕಿಸ್ತಾನ ಸುಳ್ಳು ಹೇಳುತ್ತಿದೆ. ವಿಶೇಷವಾಗಿ, ಪೂಂಚ್‌ನಲ್ಲಿರುವ ಗುರುದ್ವಾರದ ಮೇಲೆ ಪಾಕಿಸ್ತಾನ ದಾಳಿ ಮಾಡಿತ್ತು. ಈ ಘಟನೆಯಲ್ಲಿ ಕೆಲವು ಸ್ಥಳೀಯ ಸಿಖ್ ಸಮುದಾಯದ ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಡ್ರೋನ್ ಮೂಲಕ ನಂಕಾನಾ ಸಾಹಿಬ್ ಗುರುದ್ವಾರದ ಮೇಲೆ ಭಾರತ ದಾಳಿ ಮಾಡಿದೆ ಎಂದು ಪಾಕಿಸ್ತಾನ ಸುಳ್ಳು ಹೇಳುತ್ತಿದೆ. ಇದು ಪಾಕಿಸ್ತಾನದ ಸುಳ್ಳು ಅಭಿಯಾನದ ಒಂದು ಭಾಗವಾಗಿದೆ ಎಂದರು.

ಗುರುವಾರ ರಾತ್ರಿ ಪಾಕಿಸ್ತಾನ ದಾಳಿ ನಡೆಸಿದ ನಂತರ, ಭಾರತೀಯ ಸಶಸ್ತ್ರ ಪಡೆಗಳು ಕೂಡ ಪ್ರತೀಕಾರ ತೀರಿಸಿಕೊಂಡಿವೆ. ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿ ವಾಯು ರಕ್ಷಣಾ ರಾಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಗುರಿಯಾಗಿಸಲಾಗಿದೆ. ಲಾಹೋರ್‌ನ ವಾಯು ರಕ್ಷಣಾ ವ್ಯವಸ್ಥೆಯನ್ನು ತಟಸ್ಥಗೊಳಿಸಲಾಗಿದೆ ಎಂದು ಸೋಫಿಯಾ ಖುರೇಷಿ ತಿಳಿಸಿದರು

ಮೇ 7ರಂದು ನಡೆಸಿದ ‘ಆಪರೇಷನ್ ಸಿಂಧೂರ’ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ, “ನಮ್ಮ ಕ್ರಮ ನಿರ್ದಿಷ್ಟ, ನಿಖರ, ವಿವೇಚನಾಭರಿತ ಮತ್ತು ಉದ್ವಿಗ್ನತೆ ಹೆಚ್ಚಿಸುವ ಉದ್ದೇಶವಲ್ಲದ್ದು. ಯಾವುದೇ ಪಾಕಿಸ್ತಾನಿ ನಾಗರಿಕ, ಅವರ ಆರ್ಥಿಕ ಅಥವಾ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಿಲ್ಲ. ನಿಖರವಾಗಿ ಗೊತ್ತಿದ್ದ ಭಯೋತ್ಪಾದಕ ನೆಲೆಗಳನ್ನು ಮಾತ್ರ ಗುರಿಯಾಗಿಸಲಾಗಿದೆ” ಎಂದು ಭಾರತ ಹೇಳಿತ್ತು.

ಮೇ 7 ಮತ್ತು 8 ನಡುವೆ ರಾತ್ರಿ ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ, ನಲ್, ಫಲೋಡಿ, ಉತ್ತರಲೈ ಮತ್ತು ಭುಜ್ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದ ಹಲವಾರು ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಡ್ರೋನ್‌ ಮತ್ತು ಕ್ಷಿಪಣಿಗಳ ಮೂಲಕ ದಾಳಿ ಮಾಡಲು ಪಾಕಿಸ್ತಾನ ಪ್ರಯತ್ನಿಸಿದೆ. ಎಲ್ಲಾ ದಾಳಿಗಳನ್ನು ಇಂಟಿಗ್ರೇಟೆಡ್ ಕೌಂಟರ್ ಯುಎಎಸ್ ಗ್ರಿಡ್ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳ ಮೂಲಕ ತಟಸ್ಥಗೊಳಿಸಲಾಗಿದೆ ಎಂದು ವಿಂಗ್ ಕಮಾಂಡ್ ವ್ಯೋಮಿಕಾ ಸಿಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ 26 ಭಾರತೀಯ ಪ್ರವಾಸಿಗರನ್ನು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು ದಾಳಿ ಮಾಡಿತ್ತು. ನಮ್ಮದು ನಿಖರ, ವಿವೇಚನಾಭರಿತ ಮತ್ತು ಉದ್ವಿಗ್ನತೆ ಹೆಚ್ಚಿಸುವ ಉದ್ದೇಶವಲ್ಲದ ದಾಳಿಯಾಗಿತ್ತು ಎಂದು ವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಪುನರುಚ್ಚರಿಸಿದರು.

‘ಪಾಕಿಸ್ತಾನಿ’ ಎಂದು ಹೀಯಾಳಿಸಿ ಥಳಿಸಿದ ಪತ್ರಕರ್ತ; ಮನನೊಂದು ಆತ್ಮಹತ್ಯೆಗೆ ಶರಣಾದ ಮುಸ್ಲಿಂ ವ್ಯಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...