Homeಮುಖಪುಟಅಂಬಾನಿ, RSS ವ್ಯಕ್ತಿಯಿಂದ 300 ಕೋಟಿ ಲಂಚದ ಆಮಿಷ ಒಡ್ಡಲಾಗಿತ್ತು: ಕಾಶ್ಮೀರದ ಮಾಜಿ ಗವರ್ನರ್‌

ಅಂಬಾನಿ, RSS ವ್ಯಕ್ತಿಯಿಂದ 300 ಕೋಟಿ ಲಂಚದ ಆಮಿಷ ಒಡ್ಡಲಾಗಿತ್ತು: ಕಾಶ್ಮೀರದ ಮಾಜಿ ಗವರ್ನರ್‌

- Advertisement -
- Advertisement -

ತಾನು ಜಮ್ಮು ಕಾಶ್ಮೀರದ ರಾಜ್ಯಪಾಲನಾಗಿದ್ದಾಗ ಅಂಬಾನಿ ಮತ್ತು ಆರ್‌ಎಸ್‌ಎಸ್ ಮೂಲದ ವ್ಯಕ್ತಿಯೊಬ್ಬರ ಎರಡು ಕಡತಗಳಿಗೆ ಅಂಗೀಕಾರ ನೀಡಿದರೆ ತನಗೆ 300 ಕೋಟಿ ರೂಪಾಯಿ ಲಂಚ ನೀಡುವುದಾಗಿ ಆಮಿಷ ಒಡ್ಡಲಾಗಿತ್ತು ಎಂದು ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಹೇಳಿದ್ದಾರೆ. ಆದರೆ ಆ ಎರಡು ಕಡತಗಳನ್ನು ತಾನು ರದ್ದುಗೊಳಿಸಿದ್ದು, ಲಂಚದ ಆಮಿಷಕ್ಕೆ ತಾನು ಬಿದ್ದಿಲ್ಲ ಎಂದು ಅವರು ತಿಳಿಸಿದ್ದಾರೆ.

ಅವರು ಭಾಷಣವೊಂದರಲ್ಲಿ ಇದನ್ನು ಬಹಿರಂಗ ಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಅದು ವೈರಲ್ ಆಗಿದೆ. “ಕಾಶ್ಮೀರಕ್ಕೆ ರಾಜ್ಯಪಾಲನಾಗಿ ಹೋದ ನಂತರ, ಎರಡು ಕಡತಗಳು ಅಂಗೀಕಾರಕ್ಕಾಗಿ ನನ್ನ ಬಳಿ ಬಂದವು. ಒಂದು ಅಂಬಾನಿಗೆ ಸೇರಿದ್ದಾಗಿದ್ದು, ಮತ್ತೊಂದು ಆರ್‌ಎಸ್‌ಎಸ್‌ನೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಯದ್ದು. ಈ ವ್ಯಕ್ತಿ ಹಿಂದಿನ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು. ಜೊತೆಗೆ ಪ್ರಧಾನಮಂತ್ರಿಯವರಿಗೆ ತುಂಬಾ ಹತ್ತಿರದವರು ಎಂದು ಹೇಳಿಕೊಂಡಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಸತ್ಯ ಒಪ್ಪಿಕೊಂಡಿದ್ದಾರೆ, ಹಾಗೆಯೆ ಕಾಯ್ದೆ ವಾಪಸ್ ಪಡೆಯಲಿ: ದರ್ಶನ್ ಪಾಲ್

ಆದರೆ ತಾನು ಎರಡೂ ಕಡತಗಳನ್ನು ರದ್ದುಗೊಳಿಸಿರುವುದಾಗಿ ಮಲಿಕ್ ಹೇಳಿದ್ದಾರೆ. “ಕಡತಗಳನ್ನು ತೆರವುಗೊಳಿಸಿದರೆ ನೀವು ತಲಾ 150 ಕೋಟಿ ರೂಪಾಯಿಗಳನ್ನು ಪಡೆಯಬಹುದು ಎಂದು ಕಾರ್ಯದರ್ಶಿಗಳು ನನಗೆ ಹೇಳಿದ್ದರು” ಎಂದು ಅವರು ವೈರಲ್‌ ವಿಡಿಯೋದಲ್ಲಿ ಹೇಳಿದ್ದಾರೆ.

ಈ ಬಗ್ಗೆ ಮುನ್ನೆಚ್ಚರಿಕೆಯಾಗಿ ಪ್ರಧಾನ ಮಂತ್ರಿಗೆ ಎರಡು ಕಡತಗಳು ಮತ್ತು ಹಗರಣದ ಬಗ್ಗೆ ಮಾಹಿತಿ ನೀಡಿದ್ದೆ. ಅವರ ಹೆಸರನ್ನು ಬಳಸುತ್ತಿದ್ದಾರೆ ಎಂದು ಹೇಳಿದ್ದೆ. “ರಾಜ್ಯಪಾಲ ಹುದ್ದೆಯಿಂದ ನನ್ನನ್ನು ತೆಗೆದರೂ ಸರಿ, ನಾನು ಆ ಕಡತಗಳಿಗೆ ಅಂಗೀಕಾರ ನೀಡುವುದಿಲ್ಲ” ಎಂದು ಅವರಿಗೆ ತಿಳಿಸಿದ್ದೆ ಎಂದು ಮಲಿಕ್ ಹೇಳಿದ್ದಾರೆ.

ಈ ಬಗ್ಗೆ ಪ್ರಧಾನಿಗೆ ತಿಳಿಸಿದಾಗ ಭ್ರಷ್ಟಾಚಾರದ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಕ್ಕಾಗಿ ಸತ್ಯಪಾಲ್ ಮಲಿಕ್ ಪ್ರತಿಪಾದಿಸಿದ್ದು, ಮೋದಿಯನ್ನು ಪ್ರಶಂಸಿಸಿದ್ದಾರೆ. ಜೊತೆಗೆ ಕಾಶ್ಮೀರವು ದೇಶದ ಅತ್ಯಂತ ಭ್ರಷ್ಟ ಪ್ರದೇಶವಾಗಿದೆ ಎಂದು ಮಲಿಕ್ ಆರೋಪಿಸಿದ್ದಾರೆ.

ಆಗಸ್ಟ್ 21, 2018 ರಂದು ಸತ್ಯ ಪಾಲ್ ಮಲಿಕ್ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ನಂತರ ಅವರನ್ನು 2019 ರ ಅಕ್ಟೋಬರ್‌ನಲ್ಲಿ ಗೋವಾಕ್ಕೆ ವರ್ಗಾಯಿಸಲಾಯಿತು. ಮಲಿಕ್ ಪ್ರಸ್ತುತ ಮೇಘಾಲಯದ ರಾಜ್ಯಪಾಲರಾಗಿದ್ದು, ದೇಶದಲ್ಲಿ ನಡೆಯುತ್ತಿರುವ ರೈತರ ಆಂದೋಲನವನ್ನು ಬೆಂಬಲಿಸುತ್ತಿದ್ದಾರೆ.

ಇದನ್ನೂ ಓದಿ: ‘ದೇಶದಲ್ಲಿ ರಾಜ್ಯಪಾಲರು ದುರ್ಬಲರಾಗಿದ್ದು, ಮಾತನಾಡಲಾಗದ ಸ್ಥಿತಿಯಿದೆ’: ರಾಜ್ಯಪಾಲ ಸತ್ಯಪಾಲ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...