Homeಮುಖಪುಟಅಂಬಾನಿ, RSS ವ್ಯಕ್ತಿಯಿಂದ 300 ಕೋಟಿ ಲಂಚದ ಆಮಿಷ ಒಡ್ಡಲಾಗಿತ್ತು: ಕಾಶ್ಮೀರದ ಮಾಜಿ ಗವರ್ನರ್‌

ಅಂಬಾನಿ, RSS ವ್ಯಕ್ತಿಯಿಂದ 300 ಕೋಟಿ ಲಂಚದ ಆಮಿಷ ಒಡ್ಡಲಾಗಿತ್ತು: ಕಾಶ್ಮೀರದ ಮಾಜಿ ಗವರ್ನರ್‌

- Advertisement -
- Advertisement -

ತಾನು ಜಮ್ಮು ಕಾಶ್ಮೀರದ ರಾಜ್ಯಪಾಲನಾಗಿದ್ದಾಗ ಅಂಬಾನಿ ಮತ್ತು ಆರ್‌ಎಸ್‌ಎಸ್ ಮೂಲದ ವ್ಯಕ್ತಿಯೊಬ್ಬರ ಎರಡು ಕಡತಗಳಿಗೆ ಅಂಗೀಕಾರ ನೀಡಿದರೆ ತನಗೆ 300 ಕೋಟಿ ರೂಪಾಯಿ ಲಂಚ ನೀಡುವುದಾಗಿ ಆಮಿಷ ಒಡ್ಡಲಾಗಿತ್ತು ಎಂದು ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಹೇಳಿದ್ದಾರೆ. ಆದರೆ ಆ ಎರಡು ಕಡತಗಳನ್ನು ತಾನು ರದ್ದುಗೊಳಿಸಿದ್ದು, ಲಂಚದ ಆಮಿಷಕ್ಕೆ ತಾನು ಬಿದ್ದಿಲ್ಲ ಎಂದು ಅವರು ತಿಳಿಸಿದ್ದಾರೆ.

ಅವರು ಭಾಷಣವೊಂದರಲ್ಲಿ ಇದನ್ನು ಬಹಿರಂಗ ಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಅದು ವೈರಲ್ ಆಗಿದೆ. “ಕಾಶ್ಮೀರಕ್ಕೆ ರಾಜ್ಯಪಾಲನಾಗಿ ಹೋದ ನಂತರ, ಎರಡು ಕಡತಗಳು ಅಂಗೀಕಾರಕ್ಕಾಗಿ ನನ್ನ ಬಳಿ ಬಂದವು. ಒಂದು ಅಂಬಾನಿಗೆ ಸೇರಿದ್ದಾಗಿದ್ದು, ಮತ್ತೊಂದು ಆರ್‌ಎಸ್‌ಎಸ್‌ನೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಯದ್ದು. ಈ ವ್ಯಕ್ತಿ ಹಿಂದಿನ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು. ಜೊತೆಗೆ ಪ್ರಧಾನಮಂತ್ರಿಯವರಿಗೆ ತುಂಬಾ ಹತ್ತಿರದವರು ಎಂದು ಹೇಳಿಕೊಂಡಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಸತ್ಯ ಒಪ್ಪಿಕೊಂಡಿದ್ದಾರೆ, ಹಾಗೆಯೆ ಕಾಯ್ದೆ ವಾಪಸ್ ಪಡೆಯಲಿ: ದರ್ಶನ್ ಪಾಲ್

ಆದರೆ ತಾನು ಎರಡೂ ಕಡತಗಳನ್ನು ರದ್ದುಗೊಳಿಸಿರುವುದಾಗಿ ಮಲಿಕ್ ಹೇಳಿದ್ದಾರೆ. “ಕಡತಗಳನ್ನು ತೆರವುಗೊಳಿಸಿದರೆ ನೀವು ತಲಾ 150 ಕೋಟಿ ರೂಪಾಯಿಗಳನ್ನು ಪಡೆಯಬಹುದು ಎಂದು ಕಾರ್ಯದರ್ಶಿಗಳು ನನಗೆ ಹೇಳಿದ್ದರು” ಎಂದು ಅವರು ವೈರಲ್‌ ವಿಡಿಯೋದಲ್ಲಿ ಹೇಳಿದ್ದಾರೆ.

ಈ ಬಗ್ಗೆ ಮುನ್ನೆಚ್ಚರಿಕೆಯಾಗಿ ಪ್ರಧಾನ ಮಂತ್ರಿಗೆ ಎರಡು ಕಡತಗಳು ಮತ್ತು ಹಗರಣದ ಬಗ್ಗೆ ಮಾಹಿತಿ ನೀಡಿದ್ದೆ. ಅವರ ಹೆಸರನ್ನು ಬಳಸುತ್ತಿದ್ದಾರೆ ಎಂದು ಹೇಳಿದ್ದೆ. “ರಾಜ್ಯಪಾಲ ಹುದ್ದೆಯಿಂದ ನನ್ನನ್ನು ತೆಗೆದರೂ ಸರಿ, ನಾನು ಆ ಕಡತಗಳಿಗೆ ಅಂಗೀಕಾರ ನೀಡುವುದಿಲ್ಲ” ಎಂದು ಅವರಿಗೆ ತಿಳಿಸಿದ್ದೆ ಎಂದು ಮಲಿಕ್ ಹೇಳಿದ್ದಾರೆ.

ಈ ಬಗ್ಗೆ ಪ್ರಧಾನಿಗೆ ತಿಳಿಸಿದಾಗ ಭ್ರಷ್ಟಾಚಾರದ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಕ್ಕಾಗಿ ಸತ್ಯಪಾಲ್ ಮಲಿಕ್ ಪ್ರತಿಪಾದಿಸಿದ್ದು, ಮೋದಿಯನ್ನು ಪ್ರಶಂಸಿಸಿದ್ದಾರೆ. ಜೊತೆಗೆ ಕಾಶ್ಮೀರವು ದೇಶದ ಅತ್ಯಂತ ಭ್ರಷ್ಟ ಪ್ರದೇಶವಾಗಿದೆ ಎಂದು ಮಲಿಕ್ ಆರೋಪಿಸಿದ್ದಾರೆ.

ಆಗಸ್ಟ್ 21, 2018 ರಂದು ಸತ್ಯ ಪಾಲ್ ಮಲಿಕ್ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ನಂತರ ಅವರನ್ನು 2019 ರ ಅಕ್ಟೋಬರ್‌ನಲ್ಲಿ ಗೋವಾಕ್ಕೆ ವರ್ಗಾಯಿಸಲಾಯಿತು. ಮಲಿಕ್ ಪ್ರಸ್ತುತ ಮೇಘಾಲಯದ ರಾಜ್ಯಪಾಲರಾಗಿದ್ದು, ದೇಶದಲ್ಲಿ ನಡೆಯುತ್ತಿರುವ ರೈತರ ಆಂದೋಲನವನ್ನು ಬೆಂಬಲಿಸುತ್ತಿದ್ದಾರೆ.

ಇದನ್ನೂ ಓದಿ: ‘ದೇಶದಲ್ಲಿ ರಾಜ್ಯಪಾಲರು ದುರ್ಬಲರಾಗಿದ್ದು, ಮಾತನಾಡಲಾಗದ ಸ್ಥಿತಿಯಿದೆ’: ರಾಜ್ಯಪಾಲ ಸತ್ಯಪಾಲ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...