Homeಮುಖಪುಟಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

- Advertisement -
- Advertisement -

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತ್ರಂತ್ರಾಂಶ ಬಳಸಿಕೊಂಡು ಭಾರತದಲ್ಲಿ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ನರೇಂದ್ರ ಮೋದಿ ಸರ್ಕಾರದ ಇಬ್ಬರು ಸಚಿವರು, ಮೂವರು ವಿರೋಧ ಪಕ್ಷದ ನಾಯಕರು, ಒಬ್ಬ ನ್ಯಾಯಾಂಗದ ವ್ಯಕ್ತಿ, 40 ಪತ್ರಕರ್ತರು, ವಿಜ್ಞಾನಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವು ಉದ್ಯಮಿಗಳ ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ತನಿಖಾ ವರದಿ ಹೇಳಿದೆ.

ಇದನ್ನೂ ಓದಿ: ’ಸಂಚು ಪತ್ರ’ವೇ ಸಂಚಿನಿಂದ ಲ್ಯಾಪ್‌ಟಾಪ್ ಒಳಗೆ ನುಸುಳಿದೆ!

ವಿಶ್ವದಾದ್ಯಂತ 50,000 ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ ಎನ್ನಲಾಗಿದ್ದು, ತನಿಖಾ ವರದಿಯನ್ನು ಪ್ಯಾರಿಸ್‌ ಮೂಲದ ಲಾಭರಹಿತ ಮಾಧ್ಯಮ ಸಂಸ್ಥೆ ‘ಫಾರ್ಬಿಡೆನ್‌ ಸ್ಟೋರಿಸ್‌’, ಅಮ್ನೆಸ್ಟಿ ಇಂಟರ್‌ನ್ಯಾಷನಲ್‌, ಭಾರತದ ಆನ್‌ಲೈನ್‌ ಸುದ್ದಿ ಸಂಸ್ಥೆ ದಿ ವೈರ್‌, ಲೆ ಮಾಂಡೆ, ದಿ ಗಾರ್ಡಿಯನ್‌, ವಾಷಿಂಗ್ಟನ್‌ ಪೋಸ್ಟ್‌ ಸೇರಿದಂತೆ ಒಟ್ಟು 16 ಮೆಕ್ಸಿಕನ್‌, ಅರಬ್‌ ಮತ್ತು ಯುರೋಪಿನ ಸುದ್ದಿ ಸಂಸ್ಥೆಗಳು ಜಂಟಿಯಾಗಿ ನಡೆಸಿದೆ. ಈ ಸಂಸ್ಥೆಗಳು ಕೈಗೊಂಡಿರುವ ಈ ತನಿಖೆಗೆ ‘ಪೆಗಾಸಸ್‌ ಪ್ರಾಜೆಕ್ಟ್‌’ ಎಂದು ಕರೆಯಲಾಗಿದೆ.

ಭೀಮಾ ಕೋರೆಗಾಂವ್‌ ಪ್ರಕರಣದ ಆರೋಪಿಗಳಾದ 12 ಹೋರಾಟಗಾರರ ಫೋನ್‌ಗಳನ್ನು ಹ್ಯಾಕ್‌ ಮಾಡಲಾಗಿದ್ದು ಅವರ ಮೇಲೆ ಕಣ್ಗಾವಲು ಇಡಲಾಗಿದೆ ಎಂಬ ತನಿಖಾ ವರದಿಯು ಹೇಳಿದೆ. ವರದಿಯು ‘ಜಾಗತಿಕ ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಉಲ್ಲೇಖಿಸಿದೆ.

ಇದನ್ನೂ ಓದಿ: 2019ರಲ್ಲಿ ದಿಟ್ಟವಾಗಿ ಧ್ವನಿಯೆತ್ತಿದ 10 ಪತ್ರಕರ್ತೆಯರು ಇವರು!

ಫೋನ್‌ ಹ್ಯಾಕ್ ಮಾಡಲಾಗಿರುವ ಭಾರತೀಯ ಪತ್ರಕರ್ತರಲ್ಲಿ ಸುಶಾಂತ್ ಸಿಂಗ್, ಜೆ. ಗೋಪಿಕೃಷ್ಣನ್‌, ಶಿಶಿರ್‌ ಗುಪ್ತಾ, ರಿತಿಕಾ ಚೋಪ್ರಾ, ಪ್ರಶಾಂತ್‌ ಝಾ, ಪ್ರೇಮ್‌ ಶಂಕರ್‌ ಝಾ, ಸ್ವಾತಿ ಚತುರ್ವೇದಿ, ರಾಹುಲ್‌ ಸಿಂಗ್‌, ಮುಜಮ್ಮಿಲ್‌ ಜಲೀಲ್‌, ಇಫ್ತಿಕಾರ್‌ ಗೀಲಾನಿ, ಸಂದೀಪ್‌ ಉನ್ನಿತಾನ್‌, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಎಂ.ಕೆ.ವೇಣು ಮುಂತಾದವರು ಸೇರಿದ್ದಾರೆ.

ಪೆಗಾಸಸ್ ತಂತ್ರಾಂಗಳನ್ನು ಬಳಸಿಕೊಂಡು ಫೋನ್‌ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಈ ಹಿಂದೆ ಕೂಡಾ ವರದಿಯಾಗಿತ್ತು.

ವರದಿನ್ನು ಒಕ್ಕೂಟ ಸರ್ಕಾರ ನಿರಾಕರಿಸಿದ್ದು, ‘ಇದರಲ್ಲಿ ಸತ್ಯಾಂಶವಿಲ್ಲ, ನಿರಾಧಾರ’ ಎಂದು ಹೇಳಿದೆ. “2019 ರಲ್ಲಿ ಕೂಡಾ ಇದೇ ರೀತಿಯ ವರದಿ ಪ್ರಕಟವಾಗಿತ್ತು, ಈಗಿನ ಸುದ್ದಿ ಅದರ ಮುಂದುವರಿದ ಭಾಗ ಇದ್ದಂತೆ ಇದೆ. ಇದು ಭಾರತದ ಪ್ರಜಾಪ್ರಭುತ್ವ ಮತ್ತು ಅದರ ಸಂಸ್ಥೆಗಳಿಗೆ ತೊಡಕು ಮಾಡುವ ಯತ್ನವಾಗಿದೆ” ಎಂದು ಒಕ್ಕೂಟ ಸರ್ಕಾರ ಆರೋಪಿಸಿದೆ.

ಇದನ್ನೂ ಓದಿ: ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...