Homeಮುಖಪುಟಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

- Advertisement -
- Advertisement -

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತ್ರಂತ್ರಾಂಶ ಬಳಸಿಕೊಂಡು ಭಾರತದಲ್ಲಿ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ನರೇಂದ್ರ ಮೋದಿ ಸರ್ಕಾರದ ಇಬ್ಬರು ಸಚಿವರು, ಮೂವರು ವಿರೋಧ ಪಕ್ಷದ ನಾಯಕರು, ಒಬ್ಬ ನ್ಯಾಯಾಂಗದ ವ್ಯಕ್ತಿ, 40 ಪತ್ರಕರ್ತರು, ವಿಜ್ಞಾನಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವು ಉದ್ಯಮಿಗಳ ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ತನಿಖಾ ವರದಿ ಹೇಳಿದೆ.

ಇದನ್ನೂ ಓದಿ: ’ಸಂಚು ಪತ್ರ’ವೇ ಸಂಚಿನಿಂದ ಲ್ಯಾಪ್‌ಟಾಪ್ ಒಳಗೆ ನುಸುಳಿದೆ!

ವಿಶ್ವದಾದ್ಯಂತ 50,000 ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ ಎನ್ನಲಾಗಿದ್ದು, ತನಿಖಾ ವರದಿಯನ್ನು ಪ್ಯಾರಿಸ್‌ ಮೂಲದ ಲಾಭರಹಿತ ಮಾಧ್ಯಮ ಸಂಸ್ಥೆ ‘ಫಾರ್ಬಿಡೆನ್‌ ಸ್ಟೋರಿಸ್‌’, ಅಮ್ನೆಸ್ಟಿ ಇಂಟರ್‌ನ್ಯಾಷನಲ್‌, ಭಾರತದ ಆನ್‌ಲೈನ್‌ ಸುದ್ದಿ ಸಂಸ್ಥೆ ದಿ ವೈರ್‌, ಲೆ ಮಾಂಡೆ, ದಿ ಗಾರ್ಡಿಯನ್‌, ವಾಷಿಂಗ್ಟನ್‌ ಪೋಸ್ಟ್‌ ಸೇರಿದಂತೆ ಒಟ್ಟು 16 ಮೆಕ್ಸಿಕನ್‌, ಅರಬ್‌ ಮತ್ತು ಯುರೋಪಿನ ಸುದ್ದಿ ಸಂಸ್ಥೆಗಳು ಜಂಟಿಯಾಗಿ ನಡೆಸಿದೆ. ಈ ಸಂಸ್ಥೆಗಳು ಕೈಗೊಂಡಿರುವ ಈ ತನಿಖೆಗೆ ‘ಪೆಗಾಸಸ್‌ ಪ್ರಾಜೆಕ್ಟ್‌’ ಎಂದು ಕರೆಯಲಾಗಿದೆ.

ಭೀಮಾ ಕೋರೆಗಾಂವ್‌ ಪ್ರಕರಣದ ಆರೋಪಿಗಳಾದ 12 ಹೋರಾಟಗಾರರ ಫೋನ್‌ಗಳನ್ನು ಹ್ಯಾಕ್‌ ಮಾಡಲಾಗಿದ್ದು ಅವರ ಮೇಲೆ ಕಣ್ಗಾವಲು ಇಡಲಾಗಿದೆ ಎಂಬ ತನಿಖಾ ವರದಿಯು ಹೇಳಿದೆ. ವರದಿಯು ‘ಜಾಗತಿಕ ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಉಲ್ಲೇಖಿಸಿದೆ.

ಇದನ್ನೂ ಓದಿ: 2019ರಲ್ಲಿ ದಿಟ್ಟವಾಗಿ ಧ್ವನಿಯೆತ್ತಿದ 10 ಪತ್ರಕರ್ತೆಯರು ಇವರು!

ಫೋನ್‌ ಹ್ಯಾಕ್ ಮಾಡಲಾಗಿರುವ ಭಾರತೀಯ ಪತ್ರಕರ್ತರಲ್ಲಿ ಸುಶಾಂತ್ ಸಿಂಗ್, ಜೆ. ಗೋಪಿಕೃಷ್ಣನ್‌, ಶಿಶಿರ್‌ ಗುಪ್ತಾ, ರಿತಿಕಾ ಚೋಪ್ರಾ, ಪ್ರಶಾಂತ್‌ ಝಾ, ಪ್ರೇಮ್‌ ಶಂಕರ್‌ ಝಾ, ಸ್ವಾತಿ ಚತುರ್ವೇದಿ, ರಾಹುಲ್‌ ಸಿಂಗ್‌, ಮುಜಮ್ಮಿಲ್‌ ಜಲೀಲ್‌, ಇಫ್ತಿಕಾರ್‌ ಗೀಲಾನಿ, ಸಂದೀಪ್‌ ಉನ್ನಿತಾನ್‌, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಎಂ.ಕೆ.ವೇಣು ಮುಂತಾದವರು ಸೇರಿದ್ದಾರೆ.

ಪೆಗಾಸಸ್ ತಂತ್ರಾಂಗಳನ್ನು ಬಳಸಿಕೊಂಡು ಫೋನ್‌ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಈ ಹಿಂದೆ ಕೂಡಾ ವರದಿಯಾಗಿತ್ತು.

ವರದಿನ್ನು ಒಕ್ಕೂಟ ಸರ್ಕಾರ ನಿರಾಕರಿಸಿದ್ದು, ‘ಇದರಲ್ಲಿ ಸತ್ಯಾಂಶವಿಲ್ಲ, ನಿರಾಧಾರ’ ಎಂದು ಹೇಳಿದೆ. “2019 ರಲ್ಲಿ ಕೂಡಾ ಇದೇ ರೀತಿಯ ವರದಿ ಪ್ರಕಟವಾಗಿತ್ತು, ಈಗಿನ ಸುದ್ದಿ ಅದರ ಮುಂದುವರಿದ ಭಾಗ ಇದ್ದಂತೆ ಇದೆ. ಇದು ಭಾರತದ ಪ್ರಜಾಪ್ರಭುತ್ವ ಮತ್ತು ಅದರ ಸಂಸ್ಥೆಗಳಿಗೆ ತೊಡಕು ಮಾಡುವ ಯತ್ನವಾಗಿದೆ” ಎಂದು ಒಕ್ಕೂಟ ಸರ್ಕಾರ ಆರೋಪಿಸಿದೆ.

ಇದನ್ನೂ ಓದಿ: ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...