Homeಮುಖಪುಟಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

- Advertisement -
- Advertisement -

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತ್ರಂತ್ರಾಂಶ ಬಳಸಿಕೊಂಡು ಭಾರತದಲ್ಲಿ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ನರೇಂದ್ರ ಮೋದಿ ಸರ್ಕಾರದ ಇಬ್ಬರು ಸಚಿವರು, ಮೂವರು ವಿರೋಧ ಪಕ್ಷದ ನಾಯಕರು, ಒಬ್ಬ ನ್ಯಾಯಾಂಗದ ವ್ಯಕ್ತಿ, 40 ಪತ್ರಕರ್ತರು, ವಿಜ್ಞಾನಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವು ಉದ್ಯಮಿಗಳ ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ತನಿಖಾ ವರದಿ ಹೇಳಿದೆ.

ಇದನ್ನೂ ಓದಿ: ’ಸಂಚು ಪತ್ರ’ವೇ ಸಂಚಿನಿಂದ ಲ್ಯಾಪ್‌ಟಾಪ್ ಒಳಗೆ ನುಸುಳಿದೆ!

ವಿಶ್ವದಾದ್ಯಂತ 50,000 ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ ಎನ್ನಲಾಗಿದ್ದು, ತನಿಖಾ ವರದಿಯನ್ನು ಪ್ಯಾರಿಸ್‌ ಮೂಲದ ಲಾಭರಹಿತ ಮಾಧ್ಯಮ ಸಂಸ್ಥೆ ‘ಫಾರ್ಬಿಡೆನ್‌ ಸ್ಟೋರಿಸ್‌’, ಅಮ್ನೆಸ್ಟಿ ಇಂಟರ್‌ನ್ಯಾಷನಲ್‌, ಭಾರತದ ಆನ್‌ಲೈನ್‌ ಸುದ್ದಿ ಸಂಸ್ಥೆ ದಿ ವೈರ್‌, ಲೆ ಮಾಂಡೆ, ದಿ ಗಾರ್ಡಿಯನ್‌, ವಾಷಿಂಗ್ಟನ್‌ ಪೋಸ್ಟ್‌ ಸೇರಿದಂತೆ ಒಟ್ಟು 16 ಮೆಕ್ಸಿಕನ್‌, ಅರಬ್‌ ಮತ್ತು ಯುರೋಪಿನ ಸುದ್ದಿ ಸಂಸ್ಥೆಗಳು ಜಂಟಿಯಾಗಿ ನಡೆಸಿದೆ. ಈ ಸಂಸ್ಥೆಗಳು ಕೈಗೊಂಡಿರುವ ಈ ತನಿಖೆಗೆ ‘ಪೆಗಾಸಸ್‌ ಪ್ರಾಜೆಕ್ಟ್‌’ ಎಂದು ಕರೆಯಲಾಗಿದೆ.

ಭೀಮಾ ಕೋರೆಗಾಂವ್‌ ಪ್ರಕರಣದ ಆರೋಪಿಗಳಾದ 12 ಹೋರಾಟಗಾರರ ಫೋನ್‌ಗಳನ್ನು ಹ್ಯಾಕ್‌ ಮಾಡಲಾಗಿದ್ದು ಅವರ ಮೇಲೆ ಕಣ್ಗಾವಲು ಇಡಲಾಗಿದೆ ಎಂಬ ತನಿಖಾ ವರದಿಯು ಹೇಳಿದೆ. ವರದಿಯು ‘ಜಾಗತಿಕ ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಉಲ್ಲೇಖಿಸಿದೆ.

ಇದನ್ನೂ ಓದಿ: 2019ರಲ್ಲಿ ದಿಟ್ಟವಾಗಿ ಧ್ವನಿಯೆತ್ತಿದ 10 ಪತ್ರಕರ್ತೆಯರು ಇವರು!

ಫೋನ್‌ ಹ್ಯಾಕ್ ಮಾಡಲಾಗಿರುವ ಭಾರತೀಯ ಪತ್ರಕರ್ತರಲ್ಲಿ ಸುಶಾಂತ್ ಸಿಂಗ್, ಜೆ. ಗೋಪಿಕೃಷ್ಣನ್‌, ಶಿಶಿರ್‌ ಗುಪ್ತಾ, ರಿತಿಕಾ ಚೋಪ್ರಾ, ಪ್ರಶಾಂತ್‌ ಝಾ, ಪ್ರೇಮ್‌ ಶಂಕರ್‌ ಝಾ, ಸ್ವಾತಿ ಚತುರ್ವೇದಿ, ರಾಹುಲ್‌ ಸಿಂಗ್‌, ಮುಜಮ್ಮಿಲ್‌ ಜಲೀಲ್‌, ಇಫ್ತಿಕಾರ್‌ ಗೀಲಾನಿ, ಸಂದೀಪ್‌ ಉನ್ನಿತಾನ್‌, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಎಂ.ಕೆ.ವೇಣು ಮುಂತಾದವರು ಸೇರಿದ್ದಾರೆ.

ಪೆಗಾಸಸ್ ತಂತ್ರಾಂಗಳನ್ನು ಬಳಸಿಕೊಂಡು ಫೋನ್‌ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಈ ಹಿಂದೆ ಕೂಡಾ ವರದಿಯಾಗಿತ್ತು.

ವರದಿನ್ನು ಒಕ್ಕೂಟ ಸರ್ಕಾರ ನಿರಾಕರಿಸಿದ್ದು, ‘ಇದರಲ್ಲಿ ಸತ್ಯಾಂಶವಿಲ್ಲ, ನಿರಾಧಾರ’ ಎಂದು ಹೇಳಿದೆ. “2019 ರಲ್ಲಿ ಕೂಡಾ ಇದೇ ರೀತಿಯ ವರದಿ ಪ್ರಕಟವಾಗಿತ್ತು, ಈಗಿನ ಸುದ್ದಿ ಅದರ ಮುಂದುವರಿದ ಭಾಗ ಇದ್ದಂತೆ ಇದೆ. ಇದು ಭಾರತದ ಪ್ರಜಾಪ್ರಭುತ್ವ ಮತ್ತು ಅದರ ಸಂಸ್ಥೆಗಳಿಗೆ ತೊಡಕು ಮಾಡುವ ಯತ್ನವಾಗಿದೆ” ಎಂದು ಒಕ್ಕೂಟ ಸರ್ಕಾರ ಆರೋಪಿಸಿದೆ.

ಇದನ್ನೂ ಓದಿ: ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....