Homeಮುಖಪುಟಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

- Advertisement -
- Advertisement -

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತ್ರಂತ್ರಾಂಶ ಬಳಸಿಕೊಂಡು ಭಾರತದಲ್ಲಿ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ನರೇಂದ್ರ ಮೋದಿ ಸರ್ಕಾರದ ಇಬ್ಬರು ಸಚಿವರು, ಮೂವರು ವಿರೋಧ ಪಕ್ಷದ ನಾಯಕರು, ಒಬ್ಬ ನ್ಯಾಯಾಂಗದ ವ್ಯಕ್ತಿ, 40 ಪತ್ರಕರ್ತರು, ವಿಜ್ಞಾನಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವು ಉದ್ಯಮಿಗಳ ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ತನಿಖಾ ವರದಿ ಹೇಳಿದೆ.

ಇದನ್ನೂ ಓದಿ: ’ಸಂಚು ಪತ್ರ’ವೇ ಸಂಚಿನಿಂದ ಲ್ಯಾಪ್‌ಟಾಪ್ ಒಳಗೆ ನುಸುಳಿದೆ!

ವಿಶ್ವದಾದ್ಯಂತ 50,000 ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ ಎನ್ನಲಾಗಿದ್ದು, ತನಿಖಾ ವರದಿಯನ್ನು ಪ್ಯಾರಿಸ್‌ ಮೂಲದ ಲಾಭರಹಿತ ಮಾಧ್ಯಮ ಸಂಸ್ಥೆ ‘ಫಾರ್ಬಿಡೆನ್‌ ಸ್ಟೋರಿಸ್‌’, ಅಮ್ನೆಸ್ಟಿ ಇಂಟರ್‌ನ್ಯಾಷನಲ್‌, ಭಾರತದ ಆನ್‌ಲೈನ್‌ ಸುದ್ದಿ ಸಂಸ್ಥೆ ದಿ ವೈರ್‌, ಲೆ ಮಾಂಡೆ, ದಿ ಗಾರ್ಡಿಯನ್‌, ವಾಷಿಂಗ್ಟನ್‌ ಪೋಸ್ಟ್‌ ಸೇರಿದಂತೆ ಒಟ್ಟು 16 ಮೆಕ್ಸಿಕನ್‌, ಅರಬ್‌ ಮತ್ತು ಯುರೋಪಿನ ಸುದ್ದಿ ಸಂಸ್ಥೆಗಳು ಜಂಟಿಯಾಗಿ ನಡೆಸಿದೆ. ಈ ಸಂಸ್ಥೆಗಳು ಕೈಗೊಂಡಿರುವ ಈ ತನಿಖೆಗೆ ‘ಪೆಗಾಸಸ್‌ ಪ್ರಾಜೆಕ್ಟ್‌’ ಎಂದು ಕರೆಯಲಾಗಿದೆ.

ಭೀಮಾ ಕೋರೆಗಾಂವ್‌ ಪ್ರಕರಣದ ಆರೋಪಿಗಳಾದ 12 ಹೋರಾಟಗಾರರ ಫೋನ್‌ಗಳನ್ನು ಹ್ಯಾಕ್‌ ಮಾಡಲಾಗಿದ್ದು ಅವರ ಮೇಲೆ ಕಣ್ಗಾವಲು ಇಡಲಾಗಿದೆ ಎಂಬ ತನಿಖಾ ವರದಿಯು ಹೇಳಿದೆ. ವರದಿಯು ‘ಜಾಗತಿಕ ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಉಲ್ಲೇಖಿಸಿದೆ.

ಇದನ್ನೂ ಓದಿ: 2019ರಲ್ಲಿ ದಿಟ್ಟವಾಗಿ ಧ್ವನಿಯೆತ್ತಿದ 10 ಪತ್ರಕರ್ತೆಯರು ಇವರು!

ಫೋನ್‌ ಹ್ಯಾಕ್ ಮಾಡಲಾಗಿರುವ ಭಾರತೀಯ ಪತ್ರಕರ್ತರಲ್ಲಿ ಸುಶಾಂತ್ ಸಿಂಗ್, ಜೆ. ಗೋಪಿಕೃಷ್ಣನ್‌, ಶಿಶಿರ್‌ ಗುಪ್ತಾ, ರಿತಿಕಾ ಚೋಪ್ರಾ, ಪ್ರಶಾಂತ್‌ ಝಾ, ಪ್ರೇಮ್‌ ಶಂಕರ್‌ ಝಾ, ಸ್ವಾತಿ ಚತುರ್ವೇದಿ, ರಾಹುಲ್‌ ಸಿಂಗ್‌, ಮುಜಮ್ಮಿಲ್‌ ಜಲೀಲ್‌, ಇಫ್ತಿಕಾರ್‌ ಗೀಲಾನಿ, ಸಂದೀಪ್‌ ಉನ್ನಿತಾನ್‌, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಎಂ.ಕೆ.ವೇಣು ಮುಂತಾದವರು ಸೇರಿದ್ದಾರೆ.

ಪೆಗಾಸಸ್ ತಂತ್ರಾಂಗಳನ್ನು ಬಳಸಿಕೊಂಡು ಫೋನ್‌ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಈ ಹಿಂದೆ ಕೂಡಾ ವರದಿಯಾಗಿತ್ತು.

ವರದಿನ್ನು ಒಕ್ಕೂಟ ಸರ್ಕಾರ ನಿರಾಕರಿಸಿದ್ದು, ‘ಇದರಲ್ಲಿ ಸತ್ಯಾಂಶವಿಲ್ಲ, ನಿರಾಧಾರ’ ಎಂದು ಹೇಳಿದೆ. “2019 ರಲ್ಲಿ ಕೂಡಾ ಇದೇ ರೀತಿಯ ವರದಿ ಪ್ರಕಟವಾಗಿತ್ತು, ಈಗಿನ ಸುದ್ದಿ ಅದರ ಮುಂದುವರಿದ ಭಾಗ ಇದ್ದಂತೆ ಇದೆ. ಇದು ಭಾರತದ ಪ್ರಜಾಪ್ರಭುತ್ವ ಮತ್ತು ಅದರ ಸಂಸ್ಥೆಗಳಿಗೆ ತೊಡಕು ಮಾಡುವ ಯತ್ನವಾಗಿದೆ” ಎಂದು ಒಕ್ಕೂಟ ಸರ್ಕಾರ ಆರೋಪಿಸಿದೆ.

ಇದನ್ನೂ ಓದಿ: ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...