Homeಕರೋನಾ ತಲ್ಲಣಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

ಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ದೇಶದಲ್ಲಿ ಸುಮಾರು 30,000 ಮಕ್ಕಳು ಅನಾಥರಾಗಿದ್ದಾರೆ, ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ (NCPCR) ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ವಿವಿಧ ರಾಜ್ಯಗಳು ಸಲ್ಲಿಸಿದ ಮಾಹಿತಿಯ ಪ್ರಕಾರ 30,071 ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ ಎಂದಿದ್ದಾರೆ.

ಒಟ್ಟು, 26,176 ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ, 3,621 ಮಕ್ಕಳು ಅನಾಥರಾಗಿದ್ದಾರೆ ಮತ್ತು 274 ಮಕ್ಕಳನ್ನು ಹೊರದಬ್ಬಲಾಗಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

2020 ರ ಏಪ್ರಿಲ್ 1 ರಿಂದ 2021 ರ ಜೂನ್ 5 ರವರೆಗೆ ತಾಯಿ ಅಥವಾ ತಂದೆಯನ್ನು ಕಳೆದುಕೊಂಡಿರುವುದು, ಮತ್ತು ಇಬ್ಬರೂ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಬಗ್ಗೆ ರಾಜ್ಯವಾರು ಮಾಹಿತಿ ದೊರೆತಿದೆ ಎಂದು ಆಯೋಗವು ತಿಳಿಸಿದೆ. ಈ ಪೋಷಕರ ಸಾವಿನ ಕೊರೊನಾ ಮಾತ್ರವಲ್ಲ ಬೇರೆ ಕಾರಣಗಳು ಇವೆ ಎಂದು ತಿಳಿಸಿದೆ.

ಮಹಾರಾಷ್ಟ್ರ ಕೊರೊನಾದಿಂದ ಹೆಚ್ಚು ತೊಂದರೆಗೆ ಒಳಗಾಗಿದ್ದು, ಕಳೆದ ವರ್ಷ ಏಪ್ರಿಲ್ 1 ರಿಂದ 7,084 ಮಕ್ಕಳು ಕೊರೊನಾ ಮಾರಕ ವೈರಸ್‌ಗೆ ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದಿದೆ.

ಇದನ್ನೂ ಓದಿ: ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

ಉತ್ತರ ಪ್ರದೇಶ (3,172), ರಾಜಸ್ಥಾನ (2,482), ಹರಿಯಾಣ (2,438), ಮಧ್ಯಪ್ರದೇಶ (2,243), ಆಂಧ್ರ ಪ್ರದೇಶ (2,089), ಕೇರಳ (2,002), ಬಿಹಾರ (1,634) ಮತ್ತು ಒಡಿಶಾ (1,073) ರಾಜ್ಯಗಳಲ್ಲಿ ಇಷ್ಟು ಮಕ್ಕಳು ಅನಾಥರಾಗಿದ್ದಾರೆ ಎಂದು ಎನ್‌ಸಿಪಿಸಿಆರ್ ಹೇಳಿದೆ.

ಮಹಾರಾಷ್ಟ್ರದಲ್ಲಿ ಒಟ್ಟು 7,084 ಮಕ್ಕಳಲ್ಲಿ 6,865 ಮಕ್ಕಳು ಒಬ್ಬ ಪೋಷಕರನ್ನು (ತಂದೆ ಅಥವಾ ತಾಯಿ) ಕಳೆದುಕೊಂಡಿದ್ದಾರೆ. 217 ಮಂದಿ ಅನಾಥರಾಗಿದ್ದಾರೆ ಮತ್ತು ಇಬ್ಬರು ಮಕ್ಕಳನ್ನು ಮನೆಯಿಂದ ತ್ಯಜಿಸಲಾಗಿದೆ. ಇತ್ತ ಮಧ್ಯಪ್ರದೇಶದಲ್ಲಿ 226 ಮಕ್ಕಳನ್ನು ಬಿಟ್ಟು ಬಿಡಲಾಗಿದ್ದು, ದೇಶದಲ್ಲಿ ಅಗ್ರಸ್ಥಾನದಲ್ಲಿದೆ.

ಅನಾಥರಾಗಿರುವವರಲ್ಲಿ 15,620 ಮಂದಿ ಬಾಲಕರು, 14,447 ಮಂದಿ ಬಾಲಕಿಯರು ಮತ್ತು 4 ಮಂದಿ ಲೈಂಗಿಕ ಅಲ್ಪ ಸಂಖ್ಯಾತರು ಇದ್ದಾರೆ ಎಂದು ಎನ್‌ಸಿಪಿಸಿಆರ್ ತಿಳಿಸಿದೆ. ಇದರಲ್ಲಿ 11,815 ಮಂದಿ 8 ರಿಂದ 13 ವರ್ಷ ವಯಸ್ಸಿನವರಾಗಿದ್ದಾರೆ.

2,902 ಮಂದಿ 3 ವರ್ಷದೊಳಗಿನ ಮಕ್ಕಳು, 4-7 ವರ್ಷ ವಯಸ್ಸಿನವರು 5,107 ಮತ್ತು 14 ರಿಂದ 15 ವರ್ಷ ವಯಸ್ಸಿನವರು 4,908 ಮಂದಿ ಇದ್ದರೆ, 16 ರಿಂದ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರು 5,339 ಮಂದಿಯಿದ್ದಾರೆ ಎಂದು ಮಾಹಿತಿ ನೀಡಿದೆ.

ಅನಾಥ ಮಕ್ಕಳಿಗೆ ಮತ್ತು ಕುಟುಂಬಗಳಿಗೆ ನೆರವು ನೀಡಲು ಬಯಸುತ್ತೇವೆ ಎಂದು ಕೊರೊನಾದಿಂದ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಡೇಟಾ ಸಂಗ್ರಹಣೆಯಲ್ಲಿ ಹಲವು ಜನರು ಮತ್ತು ಸಂಸ್ಥೆಗಳು ಭಾಗಿಯಾಗಿವೆ. ಜುವೆನೈಲ್ ಜಸ್ಟೀಸ್ ಆಕ್ಟ್, 2015 ರ ಅಡಿಯಲ್ಲಿ ನೀಡಲಾದ ಮಾನದಂಡಗನ್ನು ಅನುಸರಿಸದೆ ಈ ಸಂಸ್ಥೆಗಳು ಅನಾಥ ಮಕ್ಕಳನ್ನು ಹಲವು ಕುಟುಂಬಗಳಿಗೆ ದತ್ತು ನೀಡುತ್ತಿದ್ದಾರೆ ಎಂದು ಎನ್‌ಸಿಪಿಸಿಆರ್ ಆರೋಪಿಸಿದೆ.


ಇದನ್ನೂ ಓದಿ: ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....