Homeಕರೋನಾ ತಲ್ಲಣಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

ಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ದೇಶದಲ್ಲಿ ಸುಮಾರು 30,000 ಮಕ್ಕಳು ಅನಾಥರಾಗಿದ್ದಾರೆ, ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ (NCPCR) ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ವಿವಿಧ ರಾಜ್ಯಗಳು ಸಲ್ಲಿಸಿದ ಮಾಹಿತಿಯ ಪ್ರಕಾರ 30,071 ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ ಎಂದಿದ್ದಾರೆ.

ಒಟ್ಟು, 26,176 ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ, 3,621 ಮಕ್ಕಳು ಅನಾಥರಾಗಿದ್ದಾರೆ ಮತ್ತು 274 ಮಕ್ಕಳನ್ನು ಹೊರದಬ್ಬಲಾಗಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

2020 ರ ಏಪ್ರಿಲ್ 1 ರಿಂದ 2021 ರ ಜೂನ್ 5 ರವರೆಗೆ ತಾಯಿ ಅಥವಾ ತಂದೆಯನ್ನು ಕಳೆದುಕೊಂಡಿರುವುದು, ಮತ್ತು ಇಬ್ಬರೂ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಬಗ್ಗೆ ರಾಜ್ಯವಾರು ಮಾಹಿತಿ ದೊರೆತಿದೆ ಎಂದು ಆಯೋಗವು ತಿಳಿಸಿದೆ. ಈ ಪೋಷಕರ ಸಾವಿನ ಕೊರೊನಾ ಮಾತ್ರವಲ್ಲ ಬೇರೆ ಕಾರಣಗಳು ಇವೆ ಎಂದು ತಿಳಿಸಿದೆ.

ಮಹಾರಾಷ್ಟ್ರ ಕೊರೊನಾದಿಂದ ಹೆಚ್ಚು ತೊಂದರೆಗೆ ಒಳಗಾಗಿದ್ದು, ಕಳೆದ ವರ್ಷ ಏಪ್ರಿಲ್ 1 ರಿಂದ 7,084 ಮಕ್ಕಳು ಕೊರೊನಾ ಮಾರಕ ವೈರಸ್‌ಗೆ ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದಿದೆ.

ಇದನ್ನೂ ಓದಿ: ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

ಉತ್ತರ ಪ್ರದೇಶ (3,172), ರಾಜಸ್ಥಾನ (2,482), ಹರಿಯಾಣ (2,438), ಮಧ್ಯಪ್ರದೇಶ (2,243), ಆಂಧ್ರ ಪ್ರದೇಶ (2,089), ಕೇರಳ (2,002), ಬಿಹಾರ (1,634) ಮತ್ತು ಒಡಿಶಾ (1,073) ರಾಜ್ಯಗಳಲ್ಲಿ ಇಷ್ಟು ಮಕ್ಕಳು ಅನಾಥರಾಗಿದ್ದಾರೆ ಎಂದು ಎನ್‌ಸಿಪಿಸಿಆರ್ ಹೇಳಿದೆ.

ಮಹಾರಾಷ್ಟ್ರದಲ್ಲಿ ಒಟ್ಟು 7,084 ಮಕ್ಕಳಲ್ಲಿ 6,865 ಮಕ್ಕಳು ಒಬ್ಬ ಪೋಷಕರನ್ನು (ತಂದೆ ಅಥವಾ ತಾಯಿ) ಕಳೆದುಕೊಂಡಿದ್ದಾರೆ. 217 ಮಂದಿ ಅನಾಥರಾಗಿದ್ದಾರೆ ಮತ್ತು ಇಬ್ಬರು ಮಕ್ಕಳನ್ನು ಮನೆಯಿಂದ ತ್ಯಜಿಸಲಾಗಿದೆ. ಇತ್ತ ಮಧ್ಯಪ್ರದೇಶದಲ್ಲಿ 226 ಮಕ್ಕಳನ್ನು ಬಿಟ್ಟು ಬಿಡಲಾಗಿದ್ದು, ದೇಶದಲ್ಲಿ ಅಗ್ರಸ್ಥಾನದಲ್ಲಿದೆ.

ಅನಾಥರಾಗಿರುವವರಲ್ಲಿ 15,620 ಮಂದಿ ಬಾಲಕರು, 14,447 ಮಂದಿ ಬಾಲಕಿಯರು ಮತ್ತು 4 ಮಂದಿ ಲೈಂಗಿಕ ಅಲ್ಪ ಸಂಖ್ಯಾತರು ಇದ್ದಾರೆ ಎಂದು ಎನ್‌ಸಿಪಿಸಿಆರ್ ತಿಳಿಸಿದೆ. ಇದರಲ್ಲಿ 11,815 ಮಂದಿ 8 ರಿಂದ 13 ವರ್ಷ ವಯಸ್ಸಿನವರಾಗಿದ್ದಾರೆ.

2,902 ಮಂದಿ 3 ವರ್ಷದೊಳಗಿನ ಮಕ್ಕಳು, 4-7 ವರ್ಷ ವಯಸ್ಸಿನವರು 5,107 ಮತ್ತು 14 ರಿಂದ 15 ವರ್ಷ ವಯಸ್ಸಿನವರು 4,908 ಮಂದಿ ಇದ್ದರೆ, 16 ರಿಂದ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರು 5,339 ಮಂದಿಯಿದ್ದಾರೆ ಎಂದು ಮಾಹಿತಿ ನೀಡಿದೆ.

ಅನಾಥ ಮಕ್ಕಳಿಗೆ ಮತ್ತು ಕುಟುಂಬಗಳಿಗೆ ನೆರವು ನೀಡಲು ಬಯಸುತ್ತೇವೆ ಎಂದು ಕೊರೊನಾದಿಂದ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಡೇಟಾ ಸಂಗ್ರಹಣೆಯಲ್ಲಿ ಹಲವು ಜನರು ಮತ್ತು ಸಂಸ್ಥೆಗಳು ಭಾಗಿಯಾಗಿವೆ. ಜುವೆನೈಲ್ ಜಸ್ಟೀಸ್ ಆಕ್ಟ್, 2015 ರ ಅಡಿಯಲ್ಲಿ ನೀಡಲಾದ ಮಾನದಂಡಗನ್ನು ಅನುಸರಿಸದೆ ಈ ಸಂಸ್ಥೆಗಳು ಅನಾಥ ಮಕ್ಕಳನ್ನು ಹಲವು ಕುಟುಂಬಗಳಿಗೆ ದತ್ತು ನೀಡುತ್ತಿದ್ದಾರೆ ಎಂದು ಎನ್‌ಸಿಪಿಸಿಆರ್ ಆರೋಪಿಸಿದೆ.


ಇದನ್ನೂ ಓದಿ: ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...