Homeಕರೋನಾ ತಲ್ಲಣಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

ಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ದೇಶದಲ್ಲಿ ಸುಮಾರು 30,000 ಮಕ್ಕಳು ಅನಾಥರಾಗಿದ್ದಾರೆ, ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ (NCPCR) ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ವಿವಿಧ ರಾಜ್ಯಗಳು ಸಲ್ಲಿಸಿದ ಮಾಹಿತಿಯ ಪ್ರಕಾರ 30,071 ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ ಎಂದಿದ್ದಾರೆ.

ಒಟ್ಟು, 26,176 ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ, 3,621 ಮಕ್ಕಳು ಅನಾಥರಾಗಿದ್ದಾರೆ ಮತ್ತು 274 ಮಕ್ಕಳನ್ನು ಹೊರದಬ್ಬಲಾಗಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

2020 ರ ಏಪ್ರಿಲ್ 1 ರಿಂದ 2021 ರ ಜೂನ್ 5 ರವರೆಗೆ ತಾಯಿ ಅಥವಾ ತಂದೆಯನ್ನು ಕಳೆದುಕೊಂಡಿರುವುದು, ಮತ್ತು ಇಬ್ಬರೂ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಬಗ್ಗೆ ರಾಜ್ಯವಾರು ಮಾಹಿತಿ ದೊರೆತಿದೆ ಎಂದು ಆಯೋಗವು ತಿಳಿಸಿದೆ. ಈ ಪೋಷಕರ ಸಾವಿನ ಕೊರೊನಾ ಮಾತ್ರವಲ್ಲ ಬೇರೆ ಕಾರಣಗಳು ಇವೆ ಎಂದು ತಿಳಿಸಿದೆ.

ಮಹಾರಾಷ್ಟ್ರ ಕೊರೊನಾದಿಂದ ಹೆಚ್ಚು ತೊಂದರೆಗೆ ಒಳಗಾಗಿದ್ದು, ಕಳೆದ ವರ್ಷ ಏಪ್ರಿಲ್ 1 ರಿಂದ 7,084 ಮಕ್ಕಳು ಕೊರೊನಾ ಮಾರಕ ವೈರಸ್‌ಗೆ ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದಿದೆ.

ಇದನ್ನೂ ಓದಿ: ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

ಉತ್ತರ ಪ್ರದೇಶ (3,172), ರಾಜಸ್ಥಾನ (2,482), ಹರಿಯಾಣ (2,438), ಮಧ್ಯಪ್ರದೇಶ (2,243), ಆಂಧ್ರ ಪ್ರದೇಶ (2,089), ಕೇರಳ (2,002), ಬಿಹಾರ (1,634) ಮತ್ತು ಒಡಿಶಾ (1,073) ರಾಜ್ಯಗಳಲ್ಲಿ ಇಷ್ಟು ಮಕ್ಕಳು ಅನಾಥರಾಗಿದ್ದಾರೆ ಎಂದು ಎನ್‌ಸಿಪಿಸಿಆರ್ ಹೇಳಿದೆ.

ಮಹಾರಾಷ್ಟ್ರದಲ್ಲಿ ಒಟ್ಟು 7,084 ಮಕ್ಕಳಲ್ಲಿ 6,865 ಮಕ್ಕಳು ಒಬ್ಬ ಪೋಷಕರನ್ನು (ತಂದೆ ಅಥವಾ ತಾಯಿ) ಕಳೆದುಕೊಂಡಿದ್ದಾರೆ. 217 ಮಂದಿ ಅನಾಥರಾಗಿದ್ದಾರೆ ಮತ್ತು ಇಬ್ಬರು ಮಕ್ಕಳನ್ನು ಮನೆಯಿಂದ ತ್ಯಜಿಸಲಾಗಿದೆ. ಇತ್ತ ಮಧ್ಯಪ್ರದೇಶದಲ್ಲಿ 226 ಮಕ್ಕಳನ್ನು ಬಿಟ್ಟು ಬಿಡಲಾಗಿದ್ದು, ದೇಶದಲ್ಲಿ ಅಗ್ರಸ್ಥಾನದಲ್ಲಿದೆ.

ಅನಾಥರಾಗಿರುವವರಲ್ಲಿ 15,620 ಮಂದಿ ಬಾಲಕರು, 14,447 ಮಂದಿ ಬಾಲಕಿಯರು ಮತ್ತು 4 ಮಂದಿ ಲೈಂಗಿಕ ಅಲ್ಪ ಸಂಖ್ಯಾತರು ಇದ್ದಾರೆ ಎಂದು ಎನ್‌ಸಿಪಿಸಿಆರ್ ತಿಳಿಸಿದೆ. ಇದರಲ್ಲಿ 11,815 ಮಂದಿ 8 ರಿಂದ 13 ವರ್ಷ ವಯಸ್ಸಿನವರಾಗಿದ್ದಾರೆ.

2,902 ಮಂದಿ 3 ವರ್ಷದೊಳಗಿನ ಮಕ್ಕಳು, 4-7 ವರ್ಷ ವಯಸ್ಸಿನವರು 5,107 ಮತ್ತು 14 ರಿಂದ 15 ವರ್ಷ ವಯಸ್ಸಿನವರು 4,908 ಮಂದಿ ಇದ್ದರೆ, 16 ರಿಂದ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರು 5,339 ಮಂದಿಯಿದ್ದಾರೆ ಎಂದು ಮಾಹಿತಿ ನೀಡಿದೆ.

ಅನಾಥ ಮಕ್ಕಳಿಗೆ ಮತ್ತು ಕುಟುಂಬಗಳಿಗೆ ನೆರವು ನೀಡಲು ಬಯಸುತ್ತೇವೆ ಎಂದು ಕೊರೊನಾದಿಂದ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಡೇಟಾ ಸಂಗ್ರಹಣೆಯಲ್ಲಿ ಹಲವು ಜನರು ಮತ್ತು ಸಂಸ್ಥೆಗಳು ಭಾಗಿಯಾಗಿವೆ. ಜುವೆನೈಲ್ ಜಸ್ಟೀಸ್ ಆಕ್ಟ್, 2015 ರ ಅಡಿಯಲ್ಲಿ ನೀಡಲಾದ ಮಾನದಂಡಗನ್ನು ಅನುಸರಿಸದೆ ಈ ಸಂಸ್ಥೆಗಳು ಅನಾಥ ಮಕ್ಕಳನ್ನು ಹಲವು ಕುಟುಂಬಗಳಿಗೆ ದತ್ತು ನೀಡುತ್ತಿದ್ದಾರೆ ಎಂದು ಎನ್‌ಸಿಪಿಸಿಆರ್ ಆರೋಪಿಸಿದೆ.


ಇದನ್ನೂ ಓದಿ: ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...