Homeಮುಖಪುಟಅಮೆರಿಕಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ 8,076 ಭಾರತೀಯರ ಬಂಧನ

ಅಮೆರಿಕಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ 8,076 ಭಾರತೀಯರ ಬಂಧನ

- Advertisement -
- Advertisement -

ವಿವಿಧ ಮಾರ್ಗಗಳ ಮೂಲಕ ಅಮೆರಿಕಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸುವಾಗ ಸೆಪ್ಟಂಬರ್‌ನಲ್ಲಿ 8,076 ಭಾರತೀಯರನ್ನು ಅಮೆರಿಕದ ಕಾನೂನು ಜಾರಿ ಸಂಸ್ಥೆ ಬಂಧಿಸಿದೆ. ಅದರಲ್ಲಿ ಯುಎಸ್-ಕೆನಡಾ ಗಡಿಯೊಂದರಲ್ಲೆ ಒಟ್ಟು 3,059 ಭಾರತೀಯರನ್ನು ಬಂಧಿಸಲಾಗಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ ಡೇಟಾ ಬಹಿರಂಗಪಡಿಸಿದೆ.

ಯುಎಸ್-ಕೆನಡಾ ಗಡಿಯಲ್ಲಿ ಬಂಧಿಸಲಾದ ಭಾರತೀಯರ ಸಂಖ್ಯೆಯು ಕಳೆದ ವರ್ಷ 2022ರಿಂದ ಸೆಪ್ಟೆಂಬರ್ 2023ರ ಅಂಕಿ ಅಂಶದಲ್ಲಿ ಸೆಪ್ಟಂಬರ್‌ನಲ್ಲಿ ಅತಿ ಹೆಚ್ಚು ಬಂಧನ ನಡೆದಿದೆ.

ದಿ ಟೈಮ್ಸ್ ಆಫ್ ಇಂಡಿಯಾದ ಪ್ರಕಾರ, ಅನೇಕ ಅಕ್ರಮ ವಲಸಿಗರು ಮುಖ್ಯವಾಗಿ ಗುಜರಾತ್‌ನಿಂದ ತೆರಳಿ ಕೆನಡಾದಲ್ಲಿ ನೆಲೆಸಿದ್ದಾರೆ ಅಥವಾ ಯುಎಸ್‌ಗೆ ಪ್ರವೇಶಿಸುವ ಅವಕಾಶಕ್ಕಾಗಿ ಅವರು ಕಾಯುತ್ತಿದ್ದಾರೆ. ಆ.2,327 ಅಕ್ರಮ ವಲಸಿಗರು ಯುಎಸ್‌ಗೆ ದಾಟಲು ಪ್ರಯತ್ನಿಸಿದಾಗ ಸಿಕ್ಕಿಬಿದ್ದಿದ್ದಾರೆ. ಸೆಪ್ಟೆಂಬರ್‌ನಲ್ಲಿ ಈ ಸಂಖ್ಯೆ 3,059 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ. ಬಂಧಿತರಲ್ಲಿ ಮಕ್ಕಳು, ಒಂದೇ ಕುಟುಂಬಸ್ಥರು,  ವಯಸ್ಕರು ಇದ್ದಾರೆ.

ಅಕ್ರಮವಾಗಿ USನ್ನು ಪ್ರವೇಶಿಸಲು ಪ್ರಯತ್ನಿಸುವ ಭಾರತೀಯರು ಸಾಮಾನ್ಯವಾಗಿ US-ಮೆಕ್ಸಿಕೋ ಗಡಿಯ ಮೂಲಕ ಯುಎಸ್‌ ಪ್ರವೇಶಕ್ಕೆ ಬಯಸುತ್ತಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಫೆಬ್ರವರಿ 2019ರಿಂದ ಈ ವರ್ಷದ ಮಾರ್ಚ್ ನಡುವೆ ಯುಎಸ್ ಕಾನೂನು ಜಾರಿ ಸಂಸ್ಥೆಗಳು ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಒಟ್ಟು 1.9 ಲಕ್ಷ ಭಾರತೀಯರನ್ನು ಬಂಧಿಸಿದ್ದಾರೆ.

ಈ ಅಪಾಯಕಾರಿ ಪ್ರಯಾಣದ ಸಮಯದಲ್ಲಿ ಹಲವಾರು ಕುಟುಂಬಗಳು ಸಾವನ್ನಪ್ಪಿದ ನಿದರ್ಶನಗಳ ಹೊರತಾಗಿಯೂ ಅಕ್ರಮವಾಗಿ USಗೆ ವಲಸೆ ಹೋಗುವ ಭಾರತೀಯರ ಪ್ರಯತ್ನಗಳು ನಿರಂತರವಾಗಿ ಮುಂದುವರಿದಿದೆ. ಗುಜರಾತ್‌ನ ಗಾಂಧಿನಗರದ ನಾಲ್ಕು ಜನರಿದ್ದ ಕುಟುಂಬವು 2022ರ ಜನವರಿಯಲ್ಲಿ ಯುಎಸ್-ಕೆನಡಾ ಗಡಿಯ ಮೂಲಕ ಅಕ್ರಮವಾಗಿ ಯುಎಸ್‌ಗೆ ಪ್ರವೇಶಿಸಲು ಪ್ರಯತ್ನಿಸಿದಾಗ ಮೃತಪಟ್ಟಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಅಮೆರಿಕಗೆ ಅಕ್ರಮವಾಗಿ ವಲಸೆ ಹೋಗಲು ಯತ್ನಿಸುತ್ತಿದ್ದ ಮತ್ತೊಂದು ಗುಜರಾತ್ ಕುಟುಂಬ ಸೇಂಟ್ ಲಾರೆನ್ಸ್ ನದಿಯಲ್ಲಿ ಮುಳುಗಿ ಸಾವನ್ನಪ್ಪಿದೆ.

ಇದನ್ನು ಓದಿ: ಮಹಾರಾಷ್ಟ್ರ ಸರ್ಕಾರ ಕೊಟ್ಟ ಗಡುವು ಅಂತ್ಯ: ಮರಾಠ ಮೀಸಲಾತಿ ಹೆಚ್ಚಳಕ್ಕೆ ಮತ್ತೆ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...