Homeಮುಖಪುಟಅಮೆರಿಕಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ 8,076 ಭಾರತೀಯರ ಬಂಧನ

ಅಮೆರಿಕಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ 8,076 ಭಾರತೀಯರ ಬಂಧನ

- Advertisement -
- Advertisement -

ವಿವಿಧ ಮಾರ್ಗಗಳ ಮೂಲಕ ಅಮೆರಿಕಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸುವಾಗ ಸೆಪ್ಟಂಬರ್‌ನಲ್ಲಿ 8,076 ಭಾರತೀಯರನ್ನು ಅಮೆರಿಕದ ಕಾನೂನು ಜಾರಿ ಸಂಸ್ಥೆ ಬಂಧಿಸಿದೆ. ಅದರಲ್ಲಿ ಯುಎಸ್-ಕೆನಡಾ ಗಡಿಯೊಂದರಲ್ಲೆ ಒಟ್ಟು 3,059 ಭಾರತೀಯರನ್ನು ಬಂಧಿಸಲಾಗಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ ಡೇಟಾ ಬಹಿರಂಗಪಡಿಸಿದೆ.

ಯುಎಸ್-ಕೆನಡಾ ಗಡಿಯಲ್ಲಿ ಬಂಧಿಸಲಾದ ಭಾರತೀಯರ ಸಂಖ್ಯೆಯು ಕಳೆದ ವರ್ಷ 2022ರಿಂದ ಸೆಪ್ಟೆಂಬರ್ 2023ರ ಅಂಕಿ ಅಂಶದಲ್ಲಿ ಸೆಪ್ಟಂಬರ್‌ನಲ್ಲಿ ಅತಿ ಹೆಚ್ಚು ಬಂಧನ ನಡೆದಿದೆ.

ದಿ ಟೈಮ್ಸ್ ಆಫ್ ಇಂಡಿಯಾದ ಪ್ರಕಾರ, ಅನೇಕ ಅಕ್ರಮ ವಲಸಿಗರು ಮುಖ್ಯವಾಗಿ ಗುಜರಾತ್‌ನಿಂದ ತೆರಳಿ ಕೆನಡಾದಲ್ಲಿ ನೆಲೆಸಿದ್ದಾರೆ ಅಥವಾ ಯುಎಸ್‌ಗೆ ಪ್ರವೇಶಿಸುವ ಅವಕಾಶಕ್ಕಾಗಿ ಅವರು ಕಾಯುತ್ತಿದ್ದಾರೆ. ಆ.2,327 ಅಕ್ರಮ ವಲಸಿಗರು ಯುಎಸ್‌ಗೆ ದಾಟಲು ಪ್ರಯತ್ನಿಸಿದಾಗ ಸಿಕ್ಕಿಬಿದ್ದಿದ್ದಾರೆ. ಸೆಪ್ಟೆಂಬರ್‌ನಲ್ಲಿ ಈ ಸಂಖ್ಯೆ 3,059 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ. ಬಂಧಿತರಲ್ಲಿ ಮಕ್ಕಳು, ಒಂದೇ ಕುಟುಂಬಸ್ಥರು,  ವಯಸ್ಕರು ಇದ್ದಾರೆ.

ಅಕ್ರಮವಾಗಿ USನ್ನು ಪ್ರವೇಶಿಸಲು ಪ್ರಯತ್ನಿಸುವ ಭಾರತೀಯರು ಸಾಮಾನ್ಯವಾಗಿ US-ಮೆಕ್ಸಿಕೋ ಗಡಿಯ ಮೂಲಕ ಯುಎಸ್‌ ಪ್ರವೇಶಕ್ಕೆ ಬಯಸುತ್ತಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಫೆಬ್ರವರಿ 2019ರಿಂದ ಈ ವರ್ಷದ ಮಾರ್ಚ್ ನಡುವೆ ಯುಎಸ್ ಕಾನೂನು ಜಾರಿ ಸಂಸ್ಥೆಗಳು ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಒಟ್ಟು 1.9 ಲಕ್ಷ ಭಾರತೀಯರನ್ನು ಬಂಧಿಸಿದ್ದಾರೆ.

ಈ ಅಪಾಯಕಾರಿ ಪ್ರಯಾಣದ ಸಮಯದಲ್ಲಿ ಹಲವಾರು ಕುಟುಂಬಗಳು ಸಾವನ್ನಪ್ಪಿದ ನಿದರ್ಶನಗಳ ಹೊರತಾಗಿಯೂ ಅಕ್ರಮವಾಗಿ USಗೆ ವಲಸೆ ಹೋಗುವ ಭಾರತೀಯರ ಪ್ರಯತ್ನಗಳು ನಿರಂತರವಾಗಿ ಮುಂದುವರಿದಿದೆ. ಗುಜರಾತ್‌ನ ಗಾಂಧಿನಗರದ ನಾಲ್ಕು ಜನರಿದ್ದ ಕುಟುಂಬವು 2022ರ ಜನವರಿಯಲ್ಲಿ ಯುಎಸ್-ಕೆನಡಾ ಗಡಿಯ ಮೂಲಕ ಅಕ್ರಮವಾಗಿ ಯುಎಸ್‌ಗೆ ಪ್ರವೇಶಿಸಲು ಪ್ರಯತ್ನಿಸಿದಾಗ ಮೃತಪಟ್ಟಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಅಮೆರಿಕಗೆ ಅಕ್ರಮವಾಗಿ ವಲಸೆ ಹೋಗಲು ಯತ್ನಿಸುತ್ತಿದ್ದ ಮತ್ತೊಂದು ಗುಜರಾತ್ ಕುಟುಂಬ ಸೇಂಟ್ ಲಾರೆನ್ಸ್ ನದಿಯಲ್ಲಿ ಮುಳುಗಿ ಸಾವನ್ನಪ್ಪಿದೆ.

ಇದನ್ನು ಓದಿ: ಮಹಾರಾಷ್ಟ್ರ ಸರ್ಕಾರ ಕೊಟ್ಟ ಗಡುವು ಅಂತ್ಯ: ಮರಾಠ ಮೀಸಲಾತಿ ಹೆಚ್ಚಳಕ್ಕೆ ಮತ್ತೆ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....