Homeಚಳವಳಿಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೇಂದ್ರ ಸರ್ಕಾರ ತರಲೊರಟಿರುವ ಮೂರು ಕೃಷಿ ಮಸೂದೆಗಳು ಈ ಸಂಘಟನೆಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದುಗೂಡುವಂತೆ ಮಾಡಿವೆ. ಅವರೆಲ್ಲರೂ ಕೇಂದ್ರದ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂಬ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

- Advertisement -
- Advertisement -

ಪಂಜಾಬ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಡೊಡ್ಡ-ಸಣ್ಣ ಸೇರಿದಂತೆ 31 ರೈತ ಸಂಘಟನೆಗಳು ಒಟ್ಟುಗೂಡಿವೆ. ತಮ್ಮ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಸೆಪ್ಟಂಬರ್ 25ರಂದು ಬೃಹತ್ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿವೆ.

ಈ ರೈತ ಸಂಘಟನೆಗಳು ಸಹ ವಿಭಿನ್ನ ಸೈದ್ಧಾಂತಿಕ ನಿಲುವುಗಳನ್ನು ಹೊಂದಿವೆ. ಆದರೂ ಕೇಂದ್ರ ಸರ್ಕಾರ ತರಲೊರಟಿರುವ ಮೂರು ಕೃಷಿ ಮಸೂದೆಗಳು ಈ ಸಂಘಟನೆಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದುಗೂಡುವಂತೆ ಮಾಡಿವೆ. ಅವರೆಲ್ಲರೂ ಕೇಂದ್ರದ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂಬ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

31 ರೈತ ಸಂಘಟನೆಗಳಲ್ಲಿ ಉತ್ತರ ಪ್ರದೇಶದ ರೈತನಾಯಕ ಮಹೇಂದ್ರ ಸಿಂಗ್ ಟಿಕಾಯತ್ ನೇತೃತ್ವದ ಭಾರತೀಯ ಕಿಸಾನ್ ಯೂನಿಯನ್ ಅತಿ ದೊಡ್ಡ ಸಂಘಟನೆಯಾಗಿದೆ. ಪಂಜಾಬ್‌ನಲ್ಲಿ ಅದನ್ನು ಅಜ್ಮೀರ್ ಸಿಂಗ್ ಲಾಕೋವಾಲ್ ಮುನ್ನೆಡೆಸುತ್ತಿದ್ದಾರೆ. ಇದೇ ಸಂಘಟನೆಯಿಂದ ವಿಘಟಿತರಾದ ಹಲವಾರು ಸಣ್ಣ ರೈತ ಸಂಘಗಳು ಸಹ ಪಂಜಾಬ್‌ ಬಂದ್‌ಗೆ ಬೆಂಬಲ ನೀಡಿವೆ.

31 ಸಂಘಟನೆಗಳಲ್ಲಿ ಕನಿಷ್ಟ 18 ಸಂಘಟನೆಗಳು ರಾಜ್ಯಾದ್ಯಂತ ತಮ್ಮ ಪ್ರಭಾವವನ್ನು ಹೊಂದಿವೆ ಎಂದು ಹೇಳಲಾಗುತ್ತಿದೆ. ಇವು ಪ್ರತಿ ತಾಲ್ಲೂಕು, ಜಿಲ್ಲಾ, ರಾಜ್ಯ ಘಟಕಗಳಿಗೂ ಪ್ರಜಾತಾಂತ್ರಿಕ ರೀತಿಯ ಚುನಾವಣೆ ನಡೆಸಿ ಪದಾಧಿಕಾರಿಗಳನ್ನು ನೇಮಿಸಿಕೊಂಡಿವೆ. 10000 ದಿಂದ 1 ಲಕ್ಷದವರೆಗೂ ಸದಸ್ಯತ್ವ ಹೊಂದಿವೆ ಎನ್ನಲಾಗಿದೆ. ಇನ್ನುಳಿದ ರೈತ ಸಂಘಟನೆಗಳು ಸಣ್ಣ ಸಂಘಟನೆಗಳಾಗಿದ್ದು ಒಂದೆರೆಡು ಜಿಲ್ಲೆಗಳಲ್ಲಿ ಮಾತ್ರ ತಮ್ಮ ಪ್ರಭಾವ ಹೊಂದಿವೆ.

ಈ ರೈತ ಸಂಘಟನೆಗಳು ಅಕಾಲಿ ದಳ, ಕಾಂಗ್ರೆಸ್, ಆಪ್, ಎಡಪಕ್ಷಗಳು ಸೇರಿದಂತೆ ಹಲವು ರಾಜಕೀಯ ಪಕ್ಷಗಳಿಗೆ ಬೆಂಬಲ ನೀಡಿವೆ. ಆದರೂ ಈ ಬಾರಿ ಅವರೆಲ್ಲರೂ ಕೇಂದ್ರ ಸರ್ಕಾರದ ವಿರುದ್ಧ ಒಟ್ಟಾಗಿವೆ. ಸೆಪ್ಟಂಬರ್ 25ರ ಪಂಜಾಬ್ ಬಂದ್ ಅವರ ಮೊದಲ ಒಕ್ಕೂಟದ ಹೋರಾಟವಾದರೆ ನಂತರವೂ ಸಹ ಕೃಷಿ ಮತ್ತು ರೈತರ ವಿಚಾರದಲ್ಲಿ ಒಗ್ಗೂಡಿ ಹೋರಾಡುತ್ತೇವೆ ಎಂದು ಬಿಕೆಯು ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೋಖ್ರಿಕಾಲನ್ ಹೇಳಿದ್ದಾರೆ.

ಕ್ರಾಂತಿಕಾರಿ ಕಿಸಾನ್ ಯುನಿಯನ್ ಪಂಜಾಬ್‌ನ ಡಾ.ದರ್ಶನ್ ಪಾಲ್ ಮಾತನಾಡಿ “ನಾವು ಈ ಮೊದಲು ಆಲ್ ಇಂಡಿಯಾ ಕಿಸಾನ್ ಸಂಘರ್ಷ ಕೋಆರ್ಡಿನೇಷನ್ ಸಮಿತಿಯ (ಎಐಕೆಎಸ್‌ಸಿಸಿ) ಭಾಗವಾಗಿದ್ದೆವು. ಇದು ದೇಶದ ಸುಮಾರು 250ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟವಾಗಿದೆ. ಈಗ ಪಂಜಾಬ್‌ನಲ್ಲಿಯೂ ಸಹ 31 ರೈತ ಸಂಘಟನೆಗಳು ಒಂದೂಗೂಡಿರುವುದು ಸಕರಾತ್ಮಕ ಬೆಳವಣಿಗೆಯಾಗಿದ್ದು ನಾವೆಲ್ಲರೂ ಸೇರಿ ಹೋರಾಟ ಮುನ್ನೆಡೆಸುತ್ತೇವೆ” ಎಂದಿದ್ದಾರೆ.

ಹರಿಯಾಣದಲ್ಲಿ ರೈತರ ಬೃಹತ್ ಪ್ರತಿಭಟನೆ

ಈ ಮೊದಲು ಸಹ ಎಐಕೆಎಸ್‌ಸಿಸಿ ನೇತೃತ್ವದಲ್ಲಿ ದೇಶಾದ್ಯಂತ ಜಾಥಾ ನಡೆಸಿ ಬೃಹತ್ ಹೋರಾಟ ನಡೆಸಿದ್ದೇವೆ. ಆದರೆ ರಾಜ್ಯದಲ್ಲಿ ನಾವು ಬಿಡಿ ಬಿಡಿಯಾಗಿಯೇ ಹೋರಾಟ ಮಾಡಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ರಾಜ್ಯದಲ್ಲಿಯೂ ಸಹ ರೈತಸಂಘಟನೆಗಳು ಒಗ್ಗೂಡಿರುವುದರಿಂದ ಹೆಚ್ಚಿನ ಬಲಬಂದಿದೆ. ಜೊತೆಗೂಡಿ ಹೋರಾಡುವುದಕ್ಕೆ ಖುಷಿಯಾಗುತ್ತಿದೆ ಎಂದಿದ್ದಾರೆ.

ಇನ್ನು ಹರಿಯಾಣದಲ್ಲಿಯೂ ಸಹ ಅಲ್ಲಿನ ರೈತಸಂಘಟನೆಗಳು ಕೇಂದ್ರ ಸರ್ಕಾರದ ಕೃಷಿ ಮಸೂದೆಗಳ ವಿರುದ್ಧ ತಿರುಗಿಬಿದ್ದಿವೆ. ನಿನ್ನೆ 50 ಸಾವಿರಕ್ಕೂ ಹೆಚ್ಚು ರೈತರು ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಬೃಹತ್ ಹೋರಾಟ ನಡೆಸಿದ್ದಾರೆ. 

ಅದೇ ರೀತಿಯಾಗಿ ಕರ್ನಾಟಕದಲ್ಲಿಯೂ ಸಹ ರೈತ-ದಲಿತ-ಕಾರ್ಮಿಕ ಸಂಘಟನೆಗಳು ಒಟ್ಟುಗೂಡಿ ಮೂರು ದಿನದಿಂದ ಐಕ್ಯ ಹೋರಾಟ ನಡೆಸುತ್ತಿವೆ. ರೈತಸಂಘಟನೆಗಳು, ಭೂಹೀನರು, ಎಡಪಕ್ಷಗಳು ಕಾರ್ಮಿಕ ಸಂಘಟನೆಗಳು ಜೊತೆಸೇರಿ ಪರ್ಯಾಯ ಜನತಾ ಅಧಿವೇಶನ ನಡೆಸುತ್ತಿವೆ.


ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....