Homeಚಳವಳಿಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೇಂದ್ರ ಸರ್ಕಾರ ತರಲೊರಟಿರುವ ಮೂರು ಕೃಷಿ ಮಸೂದೆಗಳು ಈ ಸಂಘಟನೆಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದುಗೂಡುವಂತೆ ಮಾಡಿವೆ. ಅವರೆಲ್ಲರೂ ಕೇಂದ್ರದ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂಬ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

- Advertisement -
- Advertisement -

ಪಂಜಾಬ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಡೊಡ್ಡ-ಸಣ್ಣ ಸೇರಿದಂತೆ 31 ರೈತ ಸಂಘಟನೆಗಳು ಒಟ್ಟುಗೂಡಿವೆ. ತಮ್ಮ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಸೆಪ್ಟಂಬರ್ 25ರಂದು ಬೃಹತ್ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿವೆ.

ಈ ರೈತ ಸಂಘಟನೆಗಳು ಸಹ ವಿಭಿನ್ನ ಸೈದ್ಧಾಂತಿಕ ನಿಲುವುಗಳನ್ನು ಹೊಂದಿವೆ. ಆದರೂ ಕೇಂದ್ರ ಸರ್ಕಾರ ತರಲೊರಟಿರುವ ಮೂರು ಕೃಷಿ ಮಸೂದೆಗಳು ಈ ಸಂಘಟನೆಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದುಗೂಡುವಂತೆ ಮಾಡಿವೆ. ಅವರೆಲ್ಲರೂ ಕೇಂದ್ರದ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂಬ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

31 ರೈತ ಸಂಘಟನೆಗಳಲ್ಲಿ ಉತ್ತರ ಪ್ರದೇಶದ ರೈತನಾಯಕ ಮಹೇಂದ್ರ ಸಿಂಗ್ ಟಿಕಾಯತ್ ನೇತೃತ್ವದ ಭಾರತೀಯ ಕಿಸಾನ್ ಯೂನಿಯನ್ ಅತಿ ದೊಡ್ಡ ಸಂಘಟನೆಯಾಗಿದೆ. ಪಂಜಾಬ್‌ನಲ್ಲಿ ಅದನ್ನು ಅಜ್ಮೀರ್ ಸಿಂಗ್ ಲಾಕೋವಾಲ್ ಮುನ್ನೆಡೆಸುತ್ತಿದ್ದಾರೆ. ಇದೇ ಸಂಘಟನೆಯಿಂದ ವಿಘಟಿತರಾದ ಹಲವಾರು ಸಣ್ಣ ರೈತ ಸಂಘಗಳು ಸಹ ಪಂಜಾಬ್‌ ಬಂದ್‌ಗೆ ಬೆಂಬಲ ನೀಡಿವೆ.

31 ಸಂಘಟನೆಗಳಲ್ಲಿ ಕನಿಷ್ಟ 18 ಸಂಘಟನೆಗಳು ರಾಜ್ಯಾದ್ಯಂತ ತಮ್ಮ ಪ್ರಭಾವವನ್ನು ಹೊಂದಿವೆ ಎಂದು ಹೇಳಲಾಗುತ್ತಿದೆ. ಇವು ಪ್ರತಿ ತಾಲ್ಲೂಕು, ಜಿಲ್ಲಾ, ರಾಜ್ಯ ಘಟಕಗಳಿಗೂ ಪ್ರಜಾತಾಂತ್ರಿಕ ರೀತಿಯ ಚುನಾವಣೆ ನಡೆಸಿ ಪದಾಧಿಕಾರಿಗಳನ್ನು ನೇಮಿಸಿಕೊಂಡಿವೆ. 10000 ದಿಂದ 1 ಲಕ್ಷದವರೆಗೂ ಸದಸ್ಯತ್ವ ಹೊಂದಿವೆ ಎನ್ನಲಾಗಿದೆ. ಇನ್ನುಳಿದ ರೈತ ಸಂಘಟನೆಗಳು ಸಣ್ಣ ಸಂಘಟನೆಗಳಾಗಿದ್ದು ಒಂದೆರೆಡು ಜಿಲ್ಲೆಗಳಲ್ಲಿ ಮಾತ್ರ ತಮ್ಮ ಪ್ರಭಾವ ಹೊಂದಿವೆ.

ಈ ರೈತ ಸಂಘಟನೆಗಳು ಅಕಾಲಿ ದಳ, ಕಾಂಗ್ರೆಸ್, ಆಪ್, ಎಡಪಕ್ಷಗಳು ಸೇರಿದಂತೆ ಹಲವು ರಾಜಕೀಯ ಪಕ್ಷಗಳಿಗೆ ಬೆಂಬಲ ನೀಡಿವೆ. ಆದರೂ ಈ ಬಾರಿ ಅವರೆಲ್ಲರೂ ಕೇಂದ್ರ ಸರ್ಕಾರದ ವಿರುದ್ಧ ಒಟ್ಟಾಗಿವೆ. ಸೆಪ್ಟಂಬರ್ 25ರ ಪಂಜಾಬ್ ಬಂದ್ ಅವರ ಮೊದಲ ಒಕ್ಕೂಟದ ಹೋರಾಟವಾದರೆ ನಂತರವೂ ಸಹ ಕೃಷಿ ಮತ್ತು ರೈತರ ವಿಚಾರದಲ್ಲಿ ಒಗ್ಗೂಡಿ ಹೋರಾಡುತ್ತೇವೆ ಎಂದು ಬಿಕೆಯು ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೋಖ್ರಿಕಾಲನ್ ಹೇಳಿದ್ದಾರೆ.

ಕ್ರಾಂತಿಕಾರಿ ಕಿಸಾನ್ ಯುನಿಯನ್ ಪಂಜಾಬ್‌ನ ಡಾ.ದರ್ಶನ್ ಪಾಲ್ ಮಾತನಾಡಿ “ನಾವು ಈ ಮೊದಲು ಆಲ್ ಇಂಡಿಯಾ ಕಿಸಾನ್ ಸಂಘರ್ಷ ಕೋಆರ್ಡಿನೇಷನ್ ಸಮಿತಿಯ (ಎಐಕೆಎಸ್‌ಸಿಸಿ) ಭಾಗವಾಗಿದ್ದೆವು. ಇದು ದೇಶದ ಸುಮಾರು 250ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟವಾಗಿದೆ. ಈಗ ಪಂಜಾಬ್‌ನಲ್ಲಿಯೂ ಸಹ 31 ರೈತ ಸಂಘಟನೆಗಳು ಒಂದೂಗೂಡಿರುವುದು ಸಕರಾತ್ಮಕ ಬೆಳವಣಿಗೆಯಾಗಿದ್ದು ನಾವೆಲ್ಲರೂ ಸೇರಿ ಹೋರಾಟ ಮುನ್ನೆಡೆಸುತ್ತೇವೆ” ಎಂದಿದ್ದಾರೆ.

ಹರಿಯಾಣದಲ್ಲಿ ರೈತರ ಬೃಹತ್ ಪ್ರತಿಭಟನೆ

ಈ ಮೊದಲು ಸಹ ಎಐಕೆಎಸ್‌ಸಿಸಿ ನೇತೃತ್ವದಲ್ಲಿ ದೇಶಾದ್ಯಂತ ಜಾಥಾ ನಡೆಸಿ ಬೃಹತ್ ಹೋರಾಟ ನಡೆಸಿದ್ದೇವೆ. ಆದರೆ ರಾಜ್ಯದಲ್ಲಿ ನಾವು ಬಿಡಿ ಬಿಡಿಯಾಗಿಯೇ ಹೋರಾಟ ಮಾಡಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ರಾಜ್ಯದಲ್ಲಿಯೂ ಸಹ ರೈತಸಂಘಟನೆಗಳು ಒಗ್ಗೂಡಿರುವುದರಿಂದ ಹೆಚ್ಚಿನ ಬಲಬಂದಿದೆ. ಜೊತೆಗೂಡಿ ಹೋರಾಡುವುದಕ್ಕೆ ಖುಷಿಯಾಗುತ್ತಿದೆ ಎಂದಿದ್ದಾರೆ.

ಇನ್ನು ಹರಿಯಾಣದಲ್ಲಿಯೂ ಸಹ ಅಲ್ಲಿನ ರೈತಸಂಘಟನೆಗಳು ಕೇಂದ್ರ ಸರ್ಕಾರದ ಕೃಷಿ ಮಸೂದೆಗಳ ವಿರುದ್ಧ ತಿರುಗಿಬಿದ್ದಿವೆ. ನಿನ್ನೆ 50 ಸಾವಿರಕ್ಕೂ ಹೆಚ್ಚು ರೈತರು ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಬೃಹತ್ ಹೋರಾಟ ನಡೆಸಿದ್ದಾರೆ. 

ಅದೇ ರೀತಿಯಾಗಿ ಕರ್ನಾಟಕದಲ್ಲಿಯೂ ಸಹ ರೈತ-ದಲಿತ-ಕಾರ್ಮಿಕ ಸಂಘಟನೆಗಳು ಒಟ್ಟುಗೂಡಿ ಮೂರು ದಿನದಿಂದ ಐಕ್ಯ ಹೋರಾಟ ನಡೆಸುತ್ತಿವೆ. ರೈತಸಂಘಟನೆಗಳು, ಭೂಹೀನರು, ಎಡಪಕ್ಷಗಳು ಕಾರ್ಮಿಕ ಸಂಘಟನೆಗಳು ಜೊತೆಸೇರಿ ಪರ್ಯಾಯ ಜನತಾ ಅಧಿವೇಶನ ನಡೆಸುತ್ತಿವೆ.


ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...