Homeಚಳವಳಿಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೇಂದ್ರ ಸರ್ಕಾರ ತರಲೊರಟಿರುವ ಮೂರು ಕೃಷಿ ಮಸೂದೆಗಳು ಈ ಸಂಘಟನೆಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದುಗೂಡುವಂತೆ ಮಾಡಿವೆ. ಅವರೆಲ್ಲರೂ ಕೇಂದ್ರದ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂಬ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

- Advertisement -
- Advertisement -

ಪಂಜಾಬ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಡೊಡ್ಡ-ಸಣ್ಣ ಸೇರಿದಂತೆ 31 ರೈತ ಸಂಘಟನೆಗಳು ಒಟ್ಟುಗೂಡಿವೆ. ತಮ್ಮ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಸೆಪ್ಟಂಬರ್ 25ರಂದು ಬೃಹತ್ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿವೆ.

ಈ ರೈತ ಸಂಘಟನೆಗಳು ಸಹ ವಿಭಿನ್ನ ಸೈದ್ಧಾಂತಿಕ ನಿಲುವುಗಳನ್ನು ಹೊಂದಿವೆ. ಆದರೂ ಕೇಂದ್ರ ಸರ್ಕಾರ ತರಲೊರಟಿರುವ ಮೂರು ಕೃಷಿ ಮಸೂದೆಗಳು ಈ ಸಂಘಟನೆಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದುಗೂಡುವಂತೆ ಮಾಡಿವೆ. ಅವರೆಲ್ಲರೂ ಕೇಂದ್ರದ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂಬ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

31 ರೈತ ಸಂಘಟನೆಗಳಲ್ಲಿ ಉತ್ತರ ಪ್ರದೇಶದ ರೈತನಾಯಕ ಮಹೇಂದ್ರ ಸಿಂಗ್ ಟಿಕಾಯತ್ ನೇತೃತ್ವದ ಭಾರತೀಯ ಕಿಸಾನ್ ಯೂನಿಯನ್ ಅತಿ ದೊಡ್ಡ ಸಂಘಟನೆಯಾಗಿದೆ. ಪಂಜಾಬ್‌ನಲ್ಲಿ ಅದನ್ನು ಅಜ್ಮೀರ್ ಸಿಂಗ್ ಲಾಕೋವಾಲ್ ಮುನ್ನೆಡೆಸುತ್ತಿದ್ದಾರೆ. ಇದೇ ಸಂಘಟನೆಯಿಂದ ವಿಘಟಿತರಾದ ಹಲವಾರು ಸಣ್ಣ ರೈತ ಸಂಘಗಳು ಸಹ ಪಂಜಾಬ್‌ ಬಂದ್‌ಗೆ ಬೆಂಬಲ ನೀಡಿವೆ.

31 ಸಂಘಟನೆಗಳಲ್ಲಿ ಕನಿಷ್ಟ 18 ಸಂಘಟನೆಗಳು ರಾಜ್ಯಾದ್ಯಂತ ತಮ್ಮ ಪ್ರಭಾವವನ್ನು ಹೊಂದಿವೆ ಎಂದು ಹೇಳಲಾಗುತ್ತಿದೆ. ಇವು ಪ್ರತಿ ತಾಲ್ಲೂಕು, ಜಿಲ್ಲಾ, ರಾಜ್ಯ ಘಟಕಗಳಿಗೂ ಪ್ರಜಾತಾಂತ್ರಿಕ ರೀತಿಯ ಚುನಾವಣೆ ನಡೆಸಿ ಪದಾಧಿಕಾರಿಗಳನ್ನು ನೇಮಿಸಿಕೊಂಡಿವೆ. 10000 ದಿಂದ 1 ಲಕ್ಷದವರೆಗೂ ಸದಸ್ಯತ್ವ ಹೊಂದಿವೆ ಎನ್ನಲಾಗಿದೆ. ಇನ್ನುಳಿದ ರೈತ ಸಂಘಟನೆಗಳು ಸಣ್ಣ ಸಂಘಟನೆಗಳಾಗಿದ್ದು ಒಂದೆರೆಡು ಜಿಲ್ಲೆಗಳಲ್ಲಿ ಮಾತ್ರ ತಮ್ಮ ಪ್ರಭಾವ ಹೊಂದಿವೆ.

ಈ ರೈತ ಸಂಘಟನೆಗಳು ಅಕಾಲಿ ದಳ, ಕಾಂಗ್ರೆಸ್, ಆಪ್, ಎಡಪಕ್ಷಗಳು ಸೇರಿದಂತೆ ಹಲವು ರಾಜಕೀಯ ಪಕ್ಷಗಳಿಗೆ ಬೆಂಬಲ ನೀಡಿವೆ. ಆದರೂ ಈ ಬಾರಿ ಅವರೆಲ್ಲರೂ ಕೇಂದ್ರ ಸರ್ಕಾರದ ವಿರುದ್ಧ ಒಟ್ಟಾಗಿವೆ. ಸೆಪ್ಟಂಬರ್ 25ರ ಪಂಜಾಬ್ ಬಂದ್ ಅವರ ಮೊದಲ ಒಕ್ಕೂಟದ ಹೋರಾಟವಾದರೆ ನಂತರವೂ ಸಹ ಕೃಷಿ ಮತ್ತು ರೈತರ ವಿಚಾರದಲ್ಲಿ ಒಗ್ಗೂಡಿ ಹೋರಾಡುತ್ತೇವೆ ಎಂದು ಬಿಕೆಯು ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೋಖ್ರಿಕಾಲನ್ ಹೇಳಿದ್ದಾರೆ.

ಕ್ರಾಂತಿಕಾರಿ ಕಿಸಾನ್ ಯುನಿಯನ್ ಪಂಜಾಬ್‌ನ ಡಾ.ದರ್ಶನ್ ಪಾಲ್ ಮಾತನಾಡಿ “ನಾವು ಈ ಮೊದಲು ಆಲ್ ಇಂಡಿಯಾ ಕಿಸಾನ್ ಸಂಘರ್ಷ ಕೋಆರ್ಡಿನೇಷನ್ ಸಮಿತಿಯ (ಎಐಕೆಎಸ್‌ಸಿಸಿ) ಭಾಗವಾಗಿದ್ದೆವು. ಇದು ದೇಶದ ಸುಮಾರು 250ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟವಾಗಿದೆ. ಈಗ ಪಂಜಾಬ್‌ನಲ್ಲಿಯೂ ಸಹ 31 ರೈತ ಸಂಘಟನೆಗಳು ಒಂದೂಗೂಡಿರುವುದು ಸಕರಾತ್ಮಕ ಬೆಳವಣಿಗೆಯಾಗಿದ್ದು ನಾವೆಲ್ಲರೂ ಸೇರಿ ಹೋರಾಟ ಮುನ್ನೆಡೆಸುತ್ತೇವೆ” ಎಂದಿದ್ದಾರೆ.

ಹರಿಯಾಣದಲ್ಲಿ ರೈತರ ಬೃಹತ್ ಪ್ರತಿಭಟನೆ

ಈ ಮೊದಲು ಸಹ ಎಐಕೆಎಸ್‌ಸಿಸಿ ನೇತೃತ್ವದಲ್ಲಿ ದೇಶಾದ್ಯಂತ ಜಾಥಾ ನಡೆಸಿ ಬೃಹತ್ ಹೋರಾಟ ನಡೆಸಿದ್ದೇವೆ. ಆದರೆ ರಾಜ್ಯದಲ್ಲಿ ನಾವು ಬಿಡಿ ಬಿಡಿಯಾಗಿಯೇ ಹೋರಾಟ ಮಾಡಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ರಾಜ್ಯದಲ್ಲಿಯೂ ಸಹ ರೈತಸಂಘಟನೆಗಳು ಒಗ್ಗೂಡಿರುವುದರಿಂದ ಹೆಚ್ಚಿನ ಬಲಬಂದಿದೆ. ಜೊತೆಗೂಡಿ ಹೋರಾಡುವುದಕ್ಕೆ ಖುಷಿಯಾಗುತ್ತಿದೆ ಎಂದಿದ್ದಾರೆ.

ಇನ್ನು ಹರಿಯಾಣದಲ್ಲಿಯೂ ಸಹ ಅಲ್ಲಿನ ರೈತಸಂಘಟನೆಗಳು ಕೇಂದ್ರ ಸರ್ಕಾರದ ಕೃಷಿ ಮಸೂದೆಗಳ ವಿರುದ್ಧ ತಿರುಗಿಬಿದ್ದಿವೆ. ನಿನ್ನೆ 50 ಸಾವಿರಕ್ಕೂ ಹೆಚ್ಚು ರೈತರು ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಬೃಹತ್ ಹೋರಾಟ ನಡೆಸಿದ್ದಾರೆ. 

ಅದೇ ರೀತಿಯಾಗಿ ಕರ್ನಾಟಕದಲ್ಲಿಯೂ ಸಹ ರೈತ-ದಲಿತ-ಕಾರ್ಮಿಕ ಸಂಘಟನೆಗಳು ಒಟ್ಟುಗೂಡಿ ಮೂರು ದಿನದಿಂದ ಐಕ್ಯ ಹೋರಾಟ ನಡೆಸುತ್ತಿವೆ. ರೈತಸಂಘಟನೆಗಳು, ಭೂಹೀನರು, ಎಡಪಕ್ಷಗಳು ಕಾರ್ಮಿಕ ಸಂಘಟನೆಗಳು ಜೊತೆಸೇರಿ ಪರ್ಯಾಯ ಜನತಾ ಅಧಿವೇಶನ ನಡೆಸುತ್ತಿವೆ.


ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...