Homeಚಳವಳಿಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೇಂದ್ರ ಸರ್ಕಾರ ತರಲೊರಟಿರುವ ಮೂರು ಕೃಷಿ ಮಸೂದೆಗಳು ಈ ಸಂಘಟನೆಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದುಗೂಡುವಂತೆ ಮಾಡಿವೆ. ಅವರೆಲ್ಲರೂ ಕೇಂದ್ರದ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂಬ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

- Advertisement -
- Advertisement -

ಪಂಜಾಬ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಡೊಡ್ಡ-ಸಣ್ಣ ಸೇರಿದಂತೆ 31 ರೈತ ಸಂಘಟನೆಗಳು ಒಟ್ಟುಗೂಡಿವೆ. ತಮ್ಮ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಸೆಪ್ಟಂಬರ್ 25ರಂದು ಬೃಹತ್ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿವೆ.

ಈ ರೈತ ಸಂಘಟನೆಗಳು ಸಹ ವಿಭಿನ್ನ ಸೈದ್ಧಾಂತಿಕ ನಿಲುವುಗಳನ್ನು ಹೊಂದಿವೆ. ಆದರೂ ಕೇಂದ್ರ ಸರ್ಕಾರ ತರಲೊರಟಿರುವ ಮೂರು ಕೃಷಿ ಮಸೂದೆಗಳು ಈ ಸಂಘಟನೆಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದುಗೂಡುವಂತೆ ಮಾಡಿವೆ. ಅವರೆಲ್ಲರೂ ಕೇಂದ್ರದ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂಬ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

31 ರೈತ ಸಂಘಟನೆಗಳಲ್ಲಿ ಉತ್ತರ ಪ್ರದೇಶದ ರೈತನಾಯಕ ಮಹೇಂದ್ರ ಸಿಂಗ್ ಟಿಕಾಯತ್ ನೇತೃತ್ವದ ಭಾರತೀಯ ಕಿಸಾನ್ ಯೂನಿಯನ್ ಅತಿ ದೊಡ್ಡ ಸಂಘಟನೆಯಾಗಿದೆ. ಪಂಜಾಬ್‌ನಲ್ಲಿ ಅದನ್ನು ಅಜ್ಮೀರ್ ಸಿಂಗ್ ಲಾಕೋವಾಲ್ ಮುನ್ನೆಡೆಸುತ್ತಿದ್ದಾರೆ. ಇದೇ ಸಂಘಟನೆಯಿಂದ ವಿಘಟಿತರಾದ ಹಲವಾರು ಸಣ್ಣ ರೈತ ಸಂಘಗಳು ಸಹ ಪಂಜಾಬ್‌ ಬಂದ್‌ಗೆ ಬೆಂಬಲ ನೀಡಿವೆ.

31 ಸಂಘಟನೆಗಳಲ್ಲಿ ಕನಿಷ್ಟ 18 ಸಂಘಟನೆಗಳು ರಾಜ್ಯಾದ್ಯಂತ ತಮ್ಮ ಪ್ರಭಾವವನ್ನು ಹೊಂದಿವೆ ಎಂದು ಹೇಳಲಾಗುತ್ತಿದೆ. ಇವು ಪ್ರತಿ ತಾಲ್ಲೂಕು, ಜಿಲ್ಲಾ, ರಾಜ್ಯ ಘಟಕಗಳಿಗೂ ಪ್ರಜಾತಾಂತ್ರಿಕ ರೀತಿಯ ಚುನಾವಣೆ ನಡೆಸಿ ಪದಾಧಿಕಾರಿಗಳನ್ನು ನೇಮಿಸಿಕೊಂಡಿವೆ. 10000 ದಿಂದ 1 ಲಕ್ಷದವರೆಗೂ ಸದಸ್ಯತ್ವ ಹೊಂದಿವೆ ಎನ್ನಲಾಗಿದೆ. ಇನ್ನುಳಿದ ರೈತ ಸಂಘಟನೆಗಳು ಸಣ್ಣ ಸಂಘಟನೆಗಳಾಗಿದ್ದು ಒಂದೆರೆಡು ಜಿಲ್ಲೆಗಳಲ್ಲಿ ಮಾತ್ರ ತಮ್ಮ ಪ್ರಭಾವ ಹೊಂದಿವೆ.

ಈ ರೈತ ಸಂಘಟನೆಗಳು ಅಕಾಲಿ ದಳ, ಕಾಂಗ್ರೆಸ್, ಆಪ್, ಎಡಪಕ್ಷಗಳು ಸೇರಿದಂತೆ ಹಲವು ರಾಜಕೀಯ ಪಕ್ಷಗಳಿಗೆ ಬೆಂಬಲ ನೀಡಿವೆ. ಆದರೂ ಈ ಬಾರಿ ಅವರೆಲ್ಲರೂ ಕೇಂದ್ರ ಸರ್ಕಾರದ ವಿರುದ್ಧ ಒಟ್ಟಾಗಿವೆ. ಸೆಪ್ಟಂಬರ್ 25ರ ಪಂಜಾಬ್ ಬಂದ್ ಅವರ ಮೊದಲ ಒಕ್ಕೂಟದ ಹೋರಾಟವಾದರೆ ನಂತರವೂ ಸಹ ಕೃಷಿ ಮತ್ತು ರೈತರ ವಿಚಾರದಲ್ಲಿ ಒಗ್ಗೂಡಿ ಹೋರಾಡುತ್ತೇವೆ ಎಂದು ಬಿಕೆಯು ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೋಖ್ರಿಕಾಲನ್ ಹೇಳಿದ್ದಾರೆ.

ಕ್ರಾಂತಿಕಾರಿ ಕಿಸಾನ್ ಯುನಿಯನ್ ಪಂಜಾಬ್‌ನ ಡಾ.ದರ್ಶನ್ ಪಾಲ್ ಮಾತನಾಡಿ “ನಾವು ಈ ಮೊದಲು ಆಲ್ ಇಂಡಿಯಾ ಕಿಸಾನ್ ಸಂಘರ್ಷ ಕೋಆರ್ಡಿನೇಷನ್ ಸಮಿತಿಯ (ಎಐಕೆಎಸ್‌ಸಿಸಿ) ಭಾಗವಾಗಿದ್ದೆವು. ಇದು ದೇಶದ ಸುಮಾರು 250ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟವಾಗಿದೆ. ಈಗ ಪಂಜಾಬ್‌ನಲ್ಲಿಯೂ ಸಹ 31 ರೈತ ಸಂಘಟನೆಗಳು ಒಂದೂಗೂಡಿರುವುದು ಸಕರಾತ್ಮಕ ಬೆಳವಣಿಗೆಯಾಗಿದ್ದು ನಾವೆಲ್ಲರೂ ಸೇರಿ ಹೋರಾಟ ಮುನ್ನೆಡೆಸುತ್ತೇವೆ” ಎಂದಿದ್ದಾರೆ.

ಹರಿಯಾಣದಲ್ಲಿ ರೈತರ ಬೃಹತ್ ಪ್ರತಿಭಟನೆ

ಈ ಮೊದಲು ಸಹ ಎಐಕೆಎಸ್‌ಸಿಸಿ ನೇತೃತ್ವದಲ್ಲಿ ದೇಶಾದ್ಯಂತ ಜಾಥಾ ನಡೆಸಿ ಬೃಹತ್ ಹೋರಾಟ ನಡೆಸಿದ್ದೇವೆ. ಆದರೆ ರಾಜ್ಯದಲ್ಲಿ ನಾವು ಬಿಡಿ ಬಿಡಿಯಾಗಿಯೇ ಹೋರಾಟ ಮಾಡಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ರಾಜ್ಯದಲ್ಲಿಯೂ ಸಹ ರೈತಸಂಘಟನೆಗಳು ಒಗ್ಗೂಡಿರುವುದರಿಂದ ಹೆಚ್ಚಿನ ಬಲಬಂದಿದೆ. ಜೊತೆಗೂಡಿ ಹೋರಾಡುವುದಕ್ಕೆ ಖುಷಿಯಾಗುತ್ತಿದೆ ಎಂದಿದ್ದಾರೆ.

ಇನ್ನು ಹರಿಯಾಣದಲ್ಲಿಯೂ ಸಹ ಅಲ್ಲಿನ ರೈತಸಂಘಟನೆಗಳು ಕೇಂದ್ರ ಸರ್ಕಾರದ ಕೃಷಿ ಮಸೂದೆಗಳ ವಿರುದ್ಧ ತಿರುಗಿಬಿದ್ದಿವೆ. ನಿನ್ನೆ 50 ಸಾವಿರಕ್ಕೂ ಹೆಚ್ಚು ರೈತರು ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಬೃಹತ್ ಹೋರಾಟ ನಡೆಸಿದ್ದಾರೆ. 

ಅದೇ ರೀತಿಯಾಗಿ ಕರ್ನಾಟಕದಲ್ಲಿಯೂ ಸಹ ರೈತ-ದಲಿತ-ಕಾರ್ಮಿಕ ಸಂಘಟನೆಗಳು ಒಟ್ಟುಗೂಡಿ ಮೂರು ದಿನದಿಂದ ಐಕ್ಯ ಹೋರಾಟ ನಡೆಸುತ್ತಿವೆ. ರೈತಸಂಘಟನೆಗಳು, ಭೂಹೀನರು, ಎಡಪಕ್ಷಗಳು ಕಾರ್ಮಿಕ ಸಂಘಟನೆಗಳು ಜೊತೆಸೇರಿ ಪರ್ಯಾಯ ಜನತಾ ಅಧಿವೇಶನ ನಡೆಸುತ್ತಿವೆ.


ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...