Homeಚಳವಳಿಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೇಂದ್ರ ಸರ್ಕಾರ ತರಲೊರಟಿರುವ ಮೂರು ಕೃಷಿ ಮಸೂದೆಗಳು ಈ ಸಂಘಟನೆಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದುಗೂಡುವಂತೆ ಮಾಡಿವೆ. ಅವರೆಲ್ಲರೂ ಕೇಂದ್ರದ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂಬ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

- Advertisement -
- Advertisement -

ಪಂಜಾಬ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಡೊಡ್ಡ-ಸಣ್ಣ ಸೇರಿದಂತೆ 31 ರೈತ ಸಂಘಟನೆಗಳು ಒಟ್ಟುಗೂಡಿವೆ. ತಮ್ಮ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಸೆಪ್ಟಂಬರ್ 25ರಂದು ಬೃಹತ್ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿವೆ.

ಈ ರೈತ ಸಂಘಟನೆಗಳು ಸಹ ವಿಭಿನ್ನ ಸೈದ್ಧಾಂತಿಕ ನಿಲುವುಗಳನ್ನು ಹೊಂದಿವೆ. ಆದರೂ ಕೇಂದ್ರ ಸರ್ಕಾರ ತರಲೊರಟಿರುವ ಮೂರು ಕೃಷಿ ಮಸೂದೆಗಳು ಈ ಸಂಘಟನೆಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದುಗೂಡುವಂತೆ ಮಾಡಿವೆ. ಅವರೆಲ್ಲರೂ ಕೇಂದ್ರದ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂಬ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

31 ರೈತ ಸಂಘಟನೆಗಳಲ್ಲಿ ಉತ್ತರ ಪ್ರದೇಶದ ರೈತನಾಯಕ ಮಹೇಂದ್ರ ಸಿಂಗ್ ಟಿಕಾಯತ್ ನೇತೃತ್ವದ ಭಾರತೀಯ ಕಿಸಾನ್ ಯೂನಿಯನ್ ಅತಿ ದೊಡ್ಡ ಸಂಘಟನೆಯಾಗಿದೆ. ಪಂಜಾಬ್‌ನಲ್ಲಿ ಅದನ್ನು ಅಜ್ಮೀರ್ ಸಿಂಗ್ ಲಾಕೋವಾಲ್ ಮುನ್ನೆಡೆಸುತ್ತಿದ್ದಾರೆ. ಇದೇ ಸಂಘಟನೆಯಿಂದ ವಿಘಟಿತರಾದ ಹಲವಾರು ಸಣ್ಣ ರೈತ ಸಂಘಗಳು ಸಹ ಪಂಜಾಬ್‌ ಬಂದ್‌ಗೆ ಬೆಂಬಲ ನೀಡಿವೆ.

31 ಸಂಘಟನೆಗಳಲ್ಲಿ ಕನಿಷ್ಟ 18 ಸಂಘಟನೆಗಳು ರಾಜ್ಯಾದ್ಯಂತ ತಮ್ಮ ಪ್ರಭಾವವನ್ನು ಹೊಂದಿವೆ ಎಂದು ಹೇಳಲಾಗುತ್ತಿದೆ. ಇವು ಪ್ರತಿ ತಾಲ್ಲೂಕು, ಜಿಲ್ಲಾ, ರಾಜ್ಯ ಘಟಕಗಳಿಗೂ ಪ್ರಜಾತಾಂತ್ರಿಕ ರೀತಿಯ ಚುನಾವಣೆ ನಡೆಸಿ ಪದಾಧಿಕಾರಿಗಳನ್ನು ನೇಮಿಸಿಕೊಂಡಿವೆ. 10000 ದಿಂದ 1 ಲಕ್ಷದವರೆಗೂ ಸದಸ್ಯತ್ವ ಹೊಂದಿವೆ ಎನ್ನಲಾಗಿದೆ. ಇನ್ನುಳಿದ ರೈತ ಸಂಘಟನೆಗಳು ಸಣ್ಣ ಸಂಘಟನೆಗಳಾಗಿದ್ದು ಒಂದೆರೆಡು ಜಿಲ್ಲೆಗಳಲ್ಲಿ ಮಾತ್ರ ತಮ್ಮ ಪ್ರಭಾವ ಹೊಂದಿವೆ.

ಈ ರೈತ ಸಂಘಟನೆಗಳು ಅಕಾಲಿ ದಳ, ಕಾಂಗ್ರೆಸ್, ಆಪ್, ಎಡಪಕ್ಷಗಳು ಸೇರಿದಂತೆ ಹಲವು ರಾಜಕೀಯ ಪಕ್ಷಗಳಿಗೆ ಬೆಂಬಲ ನೀಡಿವೆ. ಆದರೂ ಈ ಬಾರಿ ಅವರೆಲ್ಲರೂ ಕೇಂದ್ರ ಸರ್ಕಾರದ ವಿರುದ್ಧ ಒಟ್ಟಾಗಿವೆ. ಸೆಪ್ಟಂಬರ್ 25ರ ಪಂಜಾಬ್ ಬಂದ್ ಅವರ ಮೊದಲ ಒಕ್ಕೂಟದ ಹೋರಾಟವಾದರೆ ನಂತರವೂ ಸಹ ಕೃಷಿ ಮತ್ತು ರೈತರ ವಿಚಾರದಲ್ಲಿ ಒಗ್ಗೂಡಿ ಹೋರಾಡುತ್ತೇವೆ ಎಂದು ಬಿಕೆಯು ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೋಖ್ರಿಕಾಲನ್ ಹೇಳಿದ್ದಾರೆ.

ಕ್ರಾಂತಿಕಾರಿ ಕಿಸಾನ್ ಯುನಿಯನ್ ಪಂಜಾಬ್‌ನ ಡಾ.ದರ್ಶನ್ ಪಾಲ್ ಮಾತನಾಡಿ “ನಾವು ಈ ಮೊದಲು ಆಲ್ ಇಂಡಿಯಾ ಕಿಸಾನ್ ಸಂಘರ್ಷ ಕೋಆರ್ಡಿನೇಷನ್ ಸಮಿತಿಯ (ಎಐಕೆಎಸ್‌ಸಿಸಿ) ಭಾಗವಾಗಿದ್ದೆವು. ಇದು ದೇಶದ ಸುಮಾರು 250ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟವಾಗಿದೆ. ಈಗ ಪಂಜಾಬ್‌ನಲ್ಲಿಯೂ ಸಹ 31 ರೈತ ಸಂಘಟನೆಗಳು ಒಂದೂಗೂಡಿರುವುದು ಸಕರಾತ್ಮಕ ಬೆಳವಣಿಗೆಯಾಗಿದ್ದು ನಾವೆಲ್ಲರೂ ಸೇರಿ ಹೋರಾಟ ಮುನ್ನೆಡೆಸುತ್ತೇವೆ” ಎಂದಿದ್ದಾರೆ.

ಹರಿಯಾಣದಲ್ಲಿ ರೈತರ ಬೃಹತ್ ಪ್ರತಿಭಟನೆ

ಈ ಮೊದಲು ಸಹ ಎಐಕೆಎಸ್‌ಸಿಸಿ ನೇತೃತ್ವದಲ್ಲಿ ದೇಶಾದ್ಯಂತ ಜಾಥಾ ನಡೆಸಿ ಬೃಹತ್ ಹೋರಾಟ ನಡೆಸಿದ್ದೇವೆ. ಆದರೆ ರಾಜ್ಯದಲ್ಲಿ ನಾವು ಬಿಡಿ ಬಿಡಿಯಾಗಿಯೇ ಹೋರಾಟ ಮಾಡಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ರಾಜ್ಯದಲ್ಲಿಯೂ ಸಹ ರೈತಸಂಘಟನೆಗಳು ಒಗ್ಗೂಡಿರುವುದರಿಂದ ಹೆಚ್ಚಿನ ಬಲಬಂದಿದೆ. ಜೊತೆಗೂಡಿ ಹೋರಾಡುವುದಕ್ಕೆ ಖುಷಿಯಾಗುತ್ತಿದೆ ಎಂದಿದ್ದಾರೆ.

ಇನ್ನು ಹರಿಯಾಣದಲ್ಲಿಯೂ ಸಹ ಅಲ್ಲಿನ ರೈತಸಂಘಟನೆಗಳು ಕೇಂದ್ರ ಸರ್ಕಾರದ ಕೃಷಿ ಮಸೂದೆಗಳ ವಿರುದ್ಧ ತಿರುಗಿಬಿದ್ದಿವೆ. ನಿನ್ನೆ 50 ಸಾವಿರಕ್ಕೂ ಹೆಚ್ಚು ರೈತರು ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಬೃಹತ್ ಹೋರಾಟ ನಡೆಸಿದ್ದಾರೆ. 

ಅದೇ ರೀತಿಯಾಗಿ ಕರ್ನಾಟಕದಲ್ಲಿಯೂ ಸಹ ರೈತ-ದಲಿತ-ಕಾರ್ಮಿಕ ಸಂಘಟನೆಗಳು ಒಟ್ಟುಗೂಡಿ ಮೂರು ದಿನದಿಂದ ಐಕ್ಯ ಹೋರಾಟ ನಡೆಸುತ್ತಿವೆ. ರೈತಸಂಘಟನೆಗಳು, ಭೂಹೀನರು, ಎಡಪಕ್ಷಗಳು ಕಾರ್ಮಿಕ ಸಂಘಟನೆಗಳು ಜೊತೆಸೇರಿ ಪರ್ಯಾಯ ಜನತಾ ಅಧಿವೇಶನ ನಡೆಸುತ್ತಿವೆ.


ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...