Homeಚಳವಳಿಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೇಂದ್ರ ಸರ್ಕಾರ ತರಲೊರಟಿರುವ ಮೂರು ಕೃಷಿ ಮಸೂದೆಗಳು ಈ ಸಂಘಟನೆಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದುಗೂಡುವಂತೆ ಮಾಡಿವೆ. ಅವರೆಲ್ಲರೂ ಕೇಂದ್ರದ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂಬ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

- Advertisement -
- Advertisement -

ಪಂಜಾಬ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಡೊಡ್ಡ-ಸಣ್ಣ ಸೇರಿದಂತೆ 31 ರೈತ ಸಂಘಟನೆಗಳು ಒಟ್ಟುಗೂಡಿವೆ. ತಮ್ಮ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಸೆಪ್ಟಂಬರ್ 25ರಂದು ಬೃಹತ್ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿವೆ.

ಈ ರೈತ ಸಂಘಟನೆಗಳು ಸಹ ವಿಭಿನ್ನ ಸೈದ್ಧಾಂತಿಕ ನಿಲುವುಗಳನ್ನು ಹೊಂದಿವೆ. ಆದರೂ ಕೇಂದ್ರ ಸರ್ಕಾರ ತರಲೊರಟಿರುವ ಮೂರು ಕೃಷಿ ಮಸೂದೆಗಳು ಈ ಸಂಘಟನೆಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದುಗೂಡುವಂತೆ ಮಾಡಿವೆ. ಅವರೆಲ್ಲರೂ ಕೇಂದ್ರದ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂಬ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

31 ರೈತ ಸಂಘಟನೆಗಳಲ್ಲಿ ಉತ್ತರ ಪ್ರದೇಶದ ರೈತನಾಯಕ ಮಹೇಂದ್ರ ಸಿಂಗ್ ಟಿಕಾಯತ್ ನೇತೃತ್ವದ ಭಾರತೀಯ ಕಿಸಾನ್ ಯೂನಿಯನ್ ಅತಿ ದೊಡ್ಡ ಸಂಘಟನೆಯಾಗಿದೆ. ಪಂಜಾಬ್‌ನಲ್ಲಿ ಅದನ್ನು ಅಜ್ಮೀರ್ ಸಿಂಗ್ ಲಾಕೋವಾಲ್ ಮುನ್ನೆಡೆಸುತ್ತಿದ್ದಾರೆ. ಇದೇ ಸಂಘಟನೆಯಿಂದ ವಿಘಟಿತರಾದ ಹಲವಾರು ಸಣ್ಣ ರೈತ ಸಂಘಗಳು ಸಹ ಪಂಜಾಬ್‌ ಬಂದ್‌ಗೆ ಬೆಂಬಲ ನೀಡಿವೆ.

31 ಸಂಘಟನೆಗಳಲ್ಲಿ ಕನಿಷ್ಟ 18 ಸಂಘಟನೆಗಳು ರಾಜ್ಯಾದ್ಯಂತ ತಮ್ಮ ಪ್ರಭಾವವನ್ನು ಹೊಂದಿವೆ ಎಂದು ಹೇಳಲಾಗುತ್ತಿದೆ. ಇವು ಪ್ರತಿ ತಾಲ್ಲೂಕು, ಜಿಲ್ಲಾ, ರಾಜ್ಯ ಘಟಕಗಳಿಗೂ ಪ್ರಜಾತಾಂತ್ರಿಕ ರೀತಿಯ ಚುನಾವಣೆ ನಡೆಸಿ ಪದಾಧಿಕಾರಿಗಳನ್ನು ನೇಮಿಸಿಕೊಂಡಿವೆ. 10000 ದಿಂದ 1 ಲಕ್ಷದವರೆಗೂ ಸದಸ್ಯತ್ವ ಹೊಂದಿವೆ ಎನ್ನಲಾಗಿದೆ. ಇನ್ನುಳಿದ ರೈತ ಸಂಘಟನೆಗಳು ಸಣ್ಣ ಸಂಘಟನೆಗಳಾಗಿದ್ದು ಒಂದೆರೆಡು ಜಿಲ್ಲೆಗಳಲ್ಲಿ ಮಾತ್ರ ತಮ್ಮ ಪ್ರಭಾವ ಹೊಂದಿವೆ.

ಈ ರೈತ ಸಂಘಟನೆಗಳು ಅಕಾಲಿ ದಳ, ಕಾಂಗ್ರೆಸ್, ಆಪ್, ಎಡಪಕ್ಷಗಳು ಸೇರಿದಂತೆ ಹಲವು ರಾಜಕೀಯ ಪಕ್ಷಗಳಿಗೆ ಬೆಂಬಲ ನೀಡಿವೆ. ಆದರೂ ಈ ಬಾರಿ ಅವರೆಲ್ಲರೂ ಕೇಂದ್ರ ಸರ್ಕಾರದ ವಿರುದ್ಧ ಒಟ್ಟಾಗಿವೆ. ಸೆಪ್ಟಂಬರ್ 25ರ ಪಂಜಾಬ್ ಬಂದ್ ಅವರ ಮೊದಲ ಒಕ್ಕೂಟದ ಹೋರಾಟವಾದರೆ ನಂತರವೂ ಸಹ ಕೃಷಿ ಮತ್ತು ರೈತರ ವಿಚಾರದಲ್ಲಿ ಒಗ್ಗೂಡಿ ಹೋರಾಡುತ್ತೇವೆ ಎಂದು ಬಿಕೆಯು ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೋಖ್ರಿಕಾಲನ್ ಹೇಳಿದ್ದಾರೆ.

ಕ್ರಾಂತಿಕಾರಿ ಕಿಸಾನ್ ಯುನಿಯನ್ ಪಂಜಾಬ್‌ನ ಡಾ.ದರ್ಶನ್ ಪಾಲ್ ಮಾತನಾಡಿ “ನಾವು ಈ ಮೊದಲು ಆಲ್ ಇಂಡಿಯಾ ಕಿಸಾನ್ ಸಂಘರ್ಷ ಕೋಆರ್ಡಿನೇಷನ್ ಸಮಿತಿಯ (ಎಐಕೆಎಸ್‌ಸಿಸಿ) ಭಾಗವಾಗಿದ್ದೆವು. ಇದು ದೇಶದ ಸುಮಾರು 250ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟವಾಗಿದೆ. ಈಗ ಪಂಜಾಬ್‌ನಲ್ಲಿಯೂ ಸಹ 31 ರೈತ ಸಂಘಟನೆಗಳು ಒಂದೂಗೂಡಿರುವುದು ಸಕರಾತ್ಮಕ ಬೆಳವಣಿಗೆಯಾಗಿದ್ದು ನಾವೆಲ್ಲರೂ ಸೇರಿ ಹೋರಾಟ ಮುನ್ನೆಡೆಸುತ್ತೇವೆ” ಎಂದಿದ್ದಾರೆ.

ಹರಿಯಾಣದಲ್ಲಿ ರೈತರ ಬೃಹತ್ ಪ್ರತಿಭಟನೆ

ಈ ಮೊದಲು ಸಹ ಎಐಕೆಎಸ್‌ಸಿಸಿ ನೇತೃತ್ವದಲ್ಲಿ ದೇಶಾದ್ಯಂತ ಜಾಥಾ ನಡೆಸಿ ಬೃಹತ್ ಹೋರಾಟ ನಡೆಸಿದ್ದೇವೆ. ಆದರೆ ರಾಜ್ಯದಲ್ಲಿ ನಾವು ಬಿಡಿ ಬಿಡಿಯಾಗಿಯೇ ಹೋರಾಟ ಮಾಡಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ರಾಜ್ಯದಲ್ಲಿಯೂ ಸಹ ರೈತಸಂಘಟನೆಗಳು ಒಗ್ಗೂಡಿರುವುದರಿಂದ ಹೆಚ್ಚಿನ ಬಲಬಂದಿದೆ. ಜೊತೆಗೂಡಿ ಹೋರಾಡುವುದಕ್ಕೆ ಖುಷಿಯಾಗುತ್ತಿದೆ ಎಂದಿದ್ದಾರೆ.

ಇನ್ನು ಹರಿಯಾಣದಲ್ಲಿಯೂ ಸಹ ಅಲ್ಲಿನ ರೈತಸಂಘಟನೆಗಳು ಕೇಂದ್ರ ಸರ್ಕಾರದ ಕೃಷಿ ಮಸೂದೆಗಳ ವಿರುದ್ಧ ತಿರುಗಿಬಿದ್ದಿವೆ. ನಿನ್ನೆ 50 ಸಾವಿರಕ್ಕೂ ಹೆಚ್ಚು ರೈತರು ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಬೃಹತ್ ಹೋರಾಟ ನಡೆಸಿದ್ದಾರೆ. 

ಅದೇ ರೀತಿಯಾಗಿ ಕರ್ನಾಟಕದಲ್ಲಿಯೂ ಸಹ ರೈತ-ದಲಿತ-ಕಾರ್ಮಿಕ ಸಂಘಟನೆಗಳು ಒಟ್ಟುಗೂಡಿ ಮೂರು ದಿನದಿಂದ ಐಕ್ಯ ಹೋರಾಟ ನಡೆಸುತ್ತಿವೆ. ರೈತಸಂಘಟನೆಗಳು, ಭೂಹೀನರು, ಎಡಪಕ್ಷಗಳು ಕಾರ್ಮಿಕ ಸಂಘಟನೆಗಳು ಜೊತೆಸೇರಿ ಪರ್ಯಾಯ ಜನತಾ ಅಧಿವೇಶನ ನಡೆಸುತ್ತಿವೆ.


ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...