Homeಚಳವಳಿ2021 ರಲ್ಲಿ 31 ಸಾವಿರ ಮಹಿಳಾ ದೌರ್ಜನ್ಯದ ದೂರುಗಳು ದಾಖಲು: ಅರ್ಧದಷ್ಟು ಯುಪಿಯಿಂದ ವರದಿ

2021 ರಲ್ಲಿ 31 ಸಾವಿರ ಮಹಿಳಾ ದೌರ್ಜನ್ಯದ ದೂರುಗಳು ದಾಖಲು: ಅರ್ಧದಷ್ಟು ಯುಪಿಯಿಂದ ವರದಿ

- Advertisement -
- Advertisement -

ದೇಶದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ, ಅಪರಾಧಗಳಿಗೆ ಸಂಬಂಧಿಸಿದಂತೆ 2021 ರಲ್ಲಿ ಸುಮಾರು 31,000 ದೂರುಗಳನ್ನು ಸ್ವೀಕರಿಸಿರುವುದಾಗಿ ಎಂದು ರಾಷ್ಟ್ರೀಯ ಮಹಿಳಾ ಆಯೋಗ (NCW) ಹೇಳಿದೆ. ದಾಖಲಾಗಿರುವ ದೂರುಗಳಲ್ಲಿಅರ್ಧದಷ್ಟು ಉತ್ತರ ಪ್ರದೇಶದಿಂದ ವರದಿಯಾಗಿವೆ ಎಂದು ಎನ್‌ಸಿಡಬ್ಲ್ಯೂ ಹೇಳಿದೆ.

2020 ರಲ್ಲಿ ಮಹಿಳಾ ಆಯೋಗವು 23,722 ದೂರುಗಳನ್ನು ಸ್ವೀಕರಿಸಿತ್ತು. ಕಳೆದ ವರ್ಷ (2021) ಮಹಿಳೆಯರ ವಿರುದ್ಧದ ಅಪರಾಧಗಳ ಸಂಬಂಧಿಸಿದ ದೂರುಗಳ ಸಂಖ್ಯೆ ಶೇ.30 ರಷ್ಟು ಏರಿಕೆಯಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗದ ಅಧಿಕೃತ ಡೇಟಾ ಪ್ರಕಾರ, 2021 ರಲ್ಲಿ ಸ್ವೀಕರಿಸಲಾಗಿರುವ 30,864 ದೂರುಗಳಲ್ಲಿ, ಗರಿಷ್ಠ 11,013 ಮಹಿಳೆಯರ ಭಾವನಾತ್ಮಕ ನಿಂದನೆಯನ್ನು ಗಣನೆಗೆ ತೆಗೆದುಕೊಳ್ಳುವ ಘನತೆಯಿಂದ ಬದುಕುವ ಹಕ್ಕಿಗೆ ಸಂಬಂಧಿಸಿವೆ. 6,633 ಕೌಟುಂಬಿಕ ಹಿಂಸೆ ಮತ್ತು 4,589 ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿವೆ.

ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ರಾಜ್ಯವು ಮಹಿಳೆಯರ ವಿರುದ್ಧದ ಅಪರಾಧಗಳ ದೂರುಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಉತ್ತರ ಪ್ರದೇಶದಲ್ಲಿ 15,828, ದೆಹಲಿಯಲ್ಲಿ 3,336, ಮಹಾರಾಷ್ಟ್ರದಲ್ಲಿ 1,504, ಹರಿಯಾಣದಲ್ಲಿ 1,460 ಮತ್ತು ಬಿಹಾರದಲ್ಲಿ 1,456 ದೂರುಗಳು ದಾಖಲಾಗಿವೆ.

ಇದನ್ನೂ ಓದಿ: 204ನೇ ವರ್ಷದ ಭೀಮಾ ಕೋರೆಗಾಂವ್ ಸ್ಮರಣೆ: ಸಾವಿರಾರು ಜನರಿಂದ ಗೌರವ ಸಮರ್ಪಣೆ

ಅಂಕಿ ಅಂಶಗಳ ಪ್ರಕಾರ, ಘನತೆಯಿಂದ ಬದುಕುವ ಹಕ್ಕು ಮತ್ತು ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ ಹೆಚ್ಚಿನ ದೂರುಗಳು ಉತ್ತರ ಪ್ರದೇಶದಿಂದ ಬಂದಿವೆ. ಎನ್‌ಸಿಡಬ್ಲ್ಯು ಸ್ವೀಕರಿಸಿದ ದೂರುಗಳ ಸಂಖ್ಯೆ 2014ರ ನಂತರ, ಇದೇ ಮೊದಲು ಅತಿ ಹೆಚ್ಚು ದೂರುಗಳು ದಾಖಲಾಗಿವೆ. 2014ರಲ್ಲಿ ಒಟ್ಟು 33,906 ದೂರುಗಳು ಬಂದಿದ್ದವು ಎಂದು ಅದು ಹೇಳಿದೆ.

ಎನ್‌ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ಈ ಹಿಂದೆ ಆಯೋಗವು ತನ್ನ ಕೆಲಸದ ಬಗ್ಗೆ ಜನರಿಗೆ ಹೆಚ್ಚು ಅರಿವು ಮೂಡಿಸುತ್ತಿರುವುದರಿಂದ ದೂರುಗಳಲ್ಲಿ ಏರಿಕೆ ಕಂಡುಬಂದಿದೆ ಎಂದು ಹೇಳಿದ್ದರು.

“ಆಯೋಗವು ಮಹಿಳೆಯರಿಗೆ ಸಹಾಯ ಮಾಡಲು ಹೊಸ ಕ್ರಮಗಳನ್ನು ಪ್ರಾರಂಭಿಸಸಿದ್ದು ಅದಕ್ಕಾಗಿ, ಅಗತ್ಯವಿರುವ ಮಹಿಳೆಯರಿಗೆ ಬೆಂಬಲ ಸೇವೆಗಳನ್ನು ಒದಗಿಸಲು ನಾವು ಸಹಾಯವಾಣಿಯನ್ನು ಪ್ರಾರಂಭಿಸಿದ್ದೇವೆ” ಎಂದು ರೇಖಾ ಶರ್ಮಾ ಹೇಳಿದ್ದಾರೆ.

2021ರ ಜುಲೈನಿಂದ ಸೆಪ್ಟೆಂಬರ್‌ವರೆಗೆ, ಪ್ರತಿ ತಿಂಗಳು 3,100 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿದೆ. 2018 ರ ನವೆಂಬರ್‌ನಲ್ಲಿ 3,000 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿತ್ತು. ಆ ಸಂದರ್ಭದಲ್ಲಿ #MeToo ಆಂದೋಲನವು ಉತ್ತುಂಗದಲ್ಲಿತ್ತು.

“ಈ ಹಿಂದೆ ಮಹಿಳೆಯರು ದೂರು ನೀಡಲು ಮುಂದೆ ಬರುತ್ತಿರಲಿಲ್ಲ. ಅವರು ಕಿರುಕುಳದಿಂದ ಏನು ಅನುಭವಿಸುತ್ತಿದ್ದಾರೆಂದು ಅವರಿಗೆ ತಿಳಿದಿರಲಿಲ್ಲ. ಆದರೆ ಈಗ ಅವರು ದೂರು ನೀಡಲು ಮುಂದೆ ಬರುತ್ತಿದ್ದಾರೆ. ಅವರು ತಮ್ಮ ಮೇಲಾಗುತ್ತಿರುವ ಕಿರುಕುಳಗಳನ್ನು ವರದಿ ಮಾಡಲು ಮುಂದೆ ಬರುತ್ತಿರುವುದು ಒಳ್ಳೆಯದು” ಎಂದು ಎನ್‌ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ತಿಳಿಸಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್‌ AFSPA ವಿವಾದ; 45 ದಿನಗಳಲ್ಲಿ ‘ಸಕಾರಾತ್ಮಕ ಬೆಳವಣಿಗೆ’: ಅಸ್ಸಾಂ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...