Homeಚಳವಳಿ2021 ರಲ್ಲಿ 31 ಸಾವಿರ ಮಹಿಳಾ ದೌರ್ಜನ್ಯದ ದೂರುಗಳು ದಾಖಲು: ಅರ್ಧದಷ್ಟು ಯುಪಿಯಿಂದ ವರದಿ

2021 ರಲ್ಲಿ 31 ಸಾವಿರ ಮಹಿಳಾ ದೌರ್ಜನ್ಯದ ದೂರುಗಳು ದಾಖಲು: ಅರ್ಧದಷ್ಟು ಯುಪಿಯಿಂದ ವರದಿ

- Advertisement -
- Advertisement -

ದೇಶದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ, ಅಪರಾಧಗಳಿಗೆ ಸಂಬಂಧಿಸಿದಂತೆ 2021 ರಲ್ಲಿ ಸುಮಾರು 31,000 ದೂರುಗಳನ್ನು ಸ್ವೀಕರಿಸಿರುವುದಾಗಿ ಎಂದು ರಾಷ್ಟ್ರೀಯ ಮಹಿಳಾ ಆಯೋಗ (NCW) ಹೇಳಿದೆ. ದಾಖಲಾಗಿರುವ ದೂರುಗಳಲ್ಲಿಅರ್ಧದಷ್ಟು ಉತ್ತರ ಪ್ರದೇಶದಿಂದ ವರದಿಯಾಗಿವೆ ಎಂದು ಎನ್‌ಸಿಡಬ್ಲ್ಯೂ ಹೇಳಿದೆ.

2020 ರಲ್ಲಿ ಮಹಿಳಾ ಆಯೋಗವು 23,722 ದೂರುಗಳನ್ನು ಸ್ವೀಕರಿಸಿತ್ತು. ಕಳೆದ ವರ್ಷ (2021) ಮಹಿಳೆಯರ ವಿರುದ್ಧದ ಅಪರಾಧಗಳ ಸಂಬಂಧಿಸಿದ ದೂರುಗಳ ಸಂಖ್ಯೆ ಶೇ.30 ರಷ್ಟು ಏರಿಕೆಯಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗದ ಅಧಿಕೃತ ಡೇಟಾ ಪ್ರಕಾರ, 2021 ರಲ್ಲಿ ಸ್ವೀಕರಿಸಲಾಗಿರುವ 30,864 ದೂರುಗಳಲ್ಲಿ, ಗರಿಷ್ಠ 11,013 ಮಹಿಳೆಯರ ಭಾವನಾತ್ಮಕ ನಿಂದನೆಯನ್ನು ಗಣನೆಗೆ ತೆಗೆದುಕೊಳ್ಳುವ ಘನತೆಯಿಂದ ಬದುಕುವ ಹಕ್ಕಿಗೆ ಸಂಬಂಧಿಸಿವೆ. 6,633 ಕೌಟುಂಬಿಕ ಹಿಂಸೆ ಮತ್ತು 4,589 ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿವೆ.

ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ರಾಜ್ಯವು ಮಹಿಳೆಯರ ವಿರುದ್ಧದ ಅಪರಾಧಗಳ ದೂರುಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಉತ್ತರ ಪ್ರದೇಶದಲ್ಲಿ 15,828, ದೆಹಲಿಯಲ್ಲಿ 3,336, ಮಹಾರಾಷ್ಟ್ರದಲ್ಲಿ 1,504, ಹರಿಯಾಣದಲ್ಲಿ 1,460 ಮತ್ತು ಬಿಹಾರದಲ್ಲಿ 1,456 ದೂರುಗಳು ದಾಖಲಾಗಿವೆ.

ಇದನ್ನೂ ಓದಿ: 204ನೇ ವರ್ಷದ ಭೀಮಾ ಕೋರೆಗಾಂವ್ ಸ್ಮರಣೆ: ಸಾವಿರಾರು ಜನರಿಂದ ಗೌರವ ಸಮರ್ಪಣೆ

ಅಂಕಿ ಅಂಶಗಳ ಪ್ರಕಾರ, ಘನತೆಯಿಂದ ಬದುಕುವ ಹಕ್ಕು ಮತ್ತು ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ ಹೆಚ್ಚಿನ ದೂರುಗಳು ಉತ್ತರ ಪ್ರದೇಶದಿಂದ ಬಂದಿವೆ. ಎನ್‌ಸಿಡಬ್ಲ್ಯು ಸ್ವೀಕರಿಸಿದ ದೂರುಗಳ ಸಂಖ್ಯೆ 2014ರ ನಂತರ, ಇದೇ ಮೊದಲು ಅತಿ ಹೆಚ್ಚು ದೂರುಗಳು ದಾಖಲಾಗಿವೆ. 2014ರಲ್ಲಿ ಒಟ್ಟು 33,906 ದೂರುಗಳು ಬಂದಿದ್ದವು ಎಂದು ಅದು ಹೇಳಿದೆ.

ಎನ್‌ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ಈ ಹಿಂದೆ ಆಯೋಗವು ತನ್ನ ಕೆಲಸದ ಬಗ್ಗೆ ಜನರಿಗೆ ಹೆಚ್ಚು ಅರಿವು ಮೂಡಿಸುತ್ತಿರುವುದರಿಂದ ದೂರುಗಳಲ್ಲಿ ಏರಿಕೆ ಕಂಡುಬಂದಿದೆ ಎಂದು ಹೇಳಿದ್ದರು.

“ಆಯೋಗವು ಮಹಿಳೆಯರಿಗೆ ಸಹಾಯ ಮಾಡಲು ಹೊಸ ಕ್ರಮಗಳನ್ನು ಪ್ರಾರಂಭಿಸಸಿದ್ದು ಅದಕ್ಕಾಗಿ, ಅಗತ್ಯವಿರುವ ಮಹಿಳೆಯರಿಗೆ ಬೆಂಬಲ ಸೇವೆಗಳನ್ನು ಒದಗಿಸಲು ನಾವು ಸಹಾಯವಾಣಿಯನ್ನು ಪ್ರಾರಂಭಿಸಿದ್ದೇವೆ” ಎಂದು ರೇಖಾ ಶರ್ಮಾ ಹೇಳಿದ್ದಾರೆ.

2021ರ ಜುಲೈನಿಂದ ಸೆಪ್ಟೆಂಬರ್‌ವರೆಗೆ, ಪ್ರತಿ ತಿಂಗಳು 3,100 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿದೆ. 2018 ರ ನವೆಂಬರ್‌ನಲ್ಲಿ 3,000 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿತ್ತು. ಆ ಸಂದರ್ಭದಲ್ಲಿ #MeToo ಆಂದೋಲನವು ಉತ್ತುಂಗದಲ್ಲಿತ್ತು.

“ಈ ಹಿಂದೆ ಮಹಿಳೆಯರು ದೂರು ನೀಡಲು ಮುಂದೆ ಬರುತ್ತಿರಲಿಲ್ಲ. ಅವರು ಕಿರುಕುಳದಿಂದ ಏನು ಅನುಭವಿಸುತ್ತಿದ್ದಾರೆಂದು ಅವರಿಗೆ ತಿಳಿದಿರಲಿಲ್ಲ. ಆದರೆ ಈಗ ಅವರು ದೂರು ನೀಡಲು ಮುಂದೆ ಬರುತ್ತಿದ್ದಾರೆ. ಅವರು ತಮ್ಮ ಮೇಲಾಗುತ್ತಿರುವ ಕಿರುಕುಳಗಳನ್ನು ವರದಿ ಮಾಡಲು ಮುಂದೆ ಬರುತ್ತಿರುವುದು ಒಳ್ಳೆಯದು” ಎಂದು ಎನ್‌ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ತಿಳಿಸಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್‌ AFSPA ವಿವಾದ; 45 ದಿನಗಳಲ್ಲಿ ‘ಸಕಾರಾತ್ಮಕ ಬೆಳವಣಿಗೆ’: ಅಸ್ಸಾಂ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...