Homeಚಳವಳಿ2021 ರಲ್ಲಿ 31 ಸಾವಿರ ಮಹಿಳಾ ದೌರ್ಜನ್ಯದ ದೂರುಗಳು ದಾಖಲು: ಅರ್ಧದಷ್ಟು ಯುಪಿಯಿಂದ ವರದಿ

2021 ರಲ್ಲಿ 31 ಸಾವಿರ ಮಹಿಳಾ ದೌರ್ಜನ್ಯದ ದೂರುಗಳು ದಾಖಲು: ಅರ್ಧದಷ್ಟು ಯುಪಿಯಿಂದ ವರದಿ

- Advertisement -
- Advertisement -

ದೇಶದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ, ಅಪರಾಧಗಳಿಗೆ ಸಂಬಂಧಿಸಿದಂತೆ 2021 ರಲ್ಲಿ ಸುಮಾರು 31,000 ದೂರುಗಳನ್ನು ಸ್ವೀಕರಿಸಿರುವುದಾಗಿ ಎಂದು ರಾಷ್ಟ್ರೀಯ ಮಹಿಳಾ ಆಯೋಗ (NCW) ಹೇಳಿದೆ. ದಾಖಲಾಗಿರುವ ದೂರುಗಳಲ್ಲಿಅರ್ಧದಷ್ಟು ಉತ್ತರ ಪ್ರದೇಶದಿಂದ ವರದಿಯಾಗಿವೆ ಎಂದು ಎನ್‌ಸಿಡಬ್ಲ್ಯೂ ಹೇಳಿದೆ.

2020 ರಲ್ಲಿ ಮಹಿಳಾ ಆಯೋಗವು 23,722 ದೂರುಗಳನ್ನು ಸ್ವೀಕರಿಸಿತ್ತು. ಕಳೆದ ವರ್ಷ (2021) ಮಹಿಳೆಯರ ವಿರುದ್ಧದ ಅಪರಾಧಗಳ ಸಂಬಂಧಿಸಿದ ದೂರುಗಳ ಸಂಖ್ಯೆ ಶೇ.30 ರಷ್ಟು ಏರಿಕೆಯಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗದ ಅಧಿಕೃತ ಡೇಟಾ ಪ್ರಕಾರ, 2021 ರಲ್ಲಿ ಸ್ವೀಕರಿಸಲಾಗಿರುವ 30,864 ದೂರುಗಳಲ್ಲಿ, ಗರಿಷ್ಠ 11,013 ಮಹಿಳೆಯರ ಭಾವನಾತ್ಮಕ ನಿಂದನೆಯನ್ನು ಗಣನೆಗೆ ತೆಗೆದುಕೊಳ್ಳುವ ಘನತೆಯಿಂದ ಬದುಕುವ ಹಕ್ಕಿಗೆ ಸಂಬಂಧಿಸಿವೆ. 6,633 ಕೌಟುಂಬಿಕ ಹಿಂಸೆ ಮತ್ತು 4,589 ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿವೆ.

ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ರಾಜ್ಯವು ಮಹಿಳೆಯರ ವಿರುದ್ಧದ ಅಪರಾಧಗಳ ದೂರುಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಉತ್ತರ ಪ್ರದೇಶದಲ್ಲಿ 15,828, ದೆಹಲಿಯಲ್ಲಿ 3,336, ಮಹಾರಾಷ್ಟ್ರದಲ್ಲಿ 1,504, ಹರಿಯಾಣದಲ್ಲಿ 1,460 ಮತ್ತು ಬಿಹಾರದಲ್ಲಿ 1,456 ದೂರುಗಳು ದಾಖಲಾಗಿವೆ.

ಇದನ್ನೂ ಓದಿ: 204ನೇ ವರ್ಷದ ಭೀಮಾ ಕೋರೆಗಾಂವ್ ಸ್ಮರಣೆ: ಸಾವಿರಾರು ಜನರಿಂದ ಗೌರವ ಸಮರ್ಪಣೆ

ಅಂಕಿ ಅಂಶಗಳ ಪ್ರಕಾರ, ಘನತೆಯಿಂದ ಬದುಕುವ ಹಕ್ಕು ಮತ್ತು ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ ಹೆಚ್ಚಿನ ದೂರುಗಳು ಉತ್ತರ ಪ್ರದೇಶದಿಂದ ಬಂದಿವೆ. ಎನ್‌ಸಿಡಬ್ಲ್ಯು ಸ್ವೀಕರಿಸಿದ ದೂರುಗಳ ಸಂಖ್ಯೆ 2014ರ ನಂತರ, ಇದೇ ಮೊದಲು ಅತಿ ಹೆಚ್ಚು ದೂರುಗಳು ದಾಖಲಾಗಿವೆ. 2014ರಲ್ಲಿ ಒಟ್ಟು 33,906 ದೂರುಗಳು ಬಂದಿದ್ದವು ಎಂದು ಅದು ಹೇಳಿದೆ.

ಎನ್‌ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ಈ ಹಿಂದೆ ಆಯೋಗವು ತನ್ನ ಕೆಲಸದ ಬಗ್ಗೆ ಜನರಿಗೆ ಹೆಚ್ಚು ಅರಿವು ಮೂಡಿಸುತ್ತಿರುವುದರಿಂದ ದೂರುಗಳಲ್ಲಿ ಏರಿಕೆ ಕಂಡುಬಂದಿದೆ ಎಂದು ಹೇಳಿದ್ದರು.

“ಆಯೋಗವು ಮಹಿಳೆಯರಿಗೆ ಸಹಾಯ ಮಾಡಲು ಹೊಸ ಕ್ರಮಗಳನ್ನು ಪ್ರಾರಂಭಿಸಸಿದ್ದು ಅದಕ್ಕಾಗಿ, ಅಗತ್ಯವಿರುವ ಮಹಿಳೆಯರಿಗೆ ಬೆಂಬಲ ಸೇವೆಗಳನ್ನು ಒದಗಿಸಲು ನಾವು ಸಹಾಯವಾಣಿಯನ್ನು ಪ್ರಾರಂಭಿಸಿದ್ದೇವೆ” ಎಂದು ರೇಖಾ ಶರ್ಮಾ ಹೇಳಿದ್ದಾರೆ.

2021ರ ಜುಲೈನಿಂದ ಸೆಪ್ಟೆಂಬರ್‌ವರೆಗೆ, ಪ್ರತಿ ತಿಂಗಳು 3,100 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿದೆ. 2018 ರ ನವೆಂಬರ್‌ನಲ್ಲಿ 3,000 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿತ್ತು. ಆ ಸಂದರ್ಭದಲ್ಲಿ #MeToo ಆಂದೋಲನವು ಉತ್ತುಂಗದಲ್ಲಿತ್ತು.

“ಈ ಹಿಂದೆ ಮಹಿಳೆಯರು ದೂರು ನೀಡಲು ಮುಂದೆ ಬರುತ್ತಿರಲಿಲ್ಲ. ಅವರು ಕಿರುಕುಳದಿಂದ ಏನು ಅನುಭವಿಸುತ್ತಿದ್ದಾರೆಂದು ಅವರಿಗೆ ತಿಳಿದಿರಲಿಲ್ಲ. ಆದರೆ ಈಗ ಅವರು ದೂರು ನೀಡಲು ಮುಂದೆ ಬರುತ್ತಿದ್ದಾರೆ. ಅವರು ತಮ್ಮ ಮೇಲಾಗುತ್ತಿರುವ ಕಿರುಕುಳಗಳನ್ನು ವರದಿ ಮಾಡಲು ಮುಂದೆ ಬರುತ್ತಿರುವುದು ಒಳ್ಳೆಯದು” ಎಂದು ಎನ್‌ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ತಿಳಿಸಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್‌ AFSPA ವಿವಾದ; 45 ದಿನಗಳಲ್ಲಿ ‘ಸಕಾರಾತ್ಮಕ ಬೆಳವಣಿಗೆ’: ಅಸ್ಸಾಂ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...