Homeಅಂತರಾಷ್ಟ್ರೀಯಟರ್ಕಿಯಿಂದ ಸಿರಿಯಾಕ್ಕೆ ಮರಳಿದ 3 ಮಿಲಿಯನ್ ನಿರಾಶ್ರಿತರಲ್ಲಿ 31,000 ನಿರಾಶ್ರಿತರು

ಟರ್ಕಿಯಿಂದ ಸಿರಿಯಾಕ್ಕೆ ಮರಳಿದ 3 ಮಿಲಿಯನ್ ನಿರಾಶ್ರಿತರಲ್ಲಿ 31,000 ನಿರಾಶ್ರಿತರು

- Advertisement -
- Advertisement -

ಟರ್ಕಿಯಲ್ಲಿ ಆಶ್ರಯ ಪಡೆದಿದ್ದ 3 ಮಿಲಿಯನ್ ನಷ್ಟು ಸಿರಿಯನ್ ರಲ್ಲಿ ಸುಮಾರು 31,000 ಸಿರಿಯನ್ನರು  ಬಶರ್ ಅಲ್-ಅಸ್ಸಾದ್ ಅವರ ಆಡಳಿತ ಪತನದ ನಂತರ ತಮ್ಮ ತವರಿಗೆ ಮರಳಿದ್ದಾರೆ ಎಂದು  ಟರ್ಕಿಯ ಆಂತರಿಕ ಮಂತ್ರಿ  ಹೇಳಿದ್ದಾರೆ.

ಏತನ್ಮಧ್ಯೆ ಸಿರಿಯಾದ ಅಲ್-ಅಸ್ಸಾದ್ ಆಡಳಿತದಲ್ಲಿ ಮತ್ತು 13 ವರ್ಷಗಳ ಅಂತರ್ಯುದ್ಧದ ಬಲಿಪಶುಗಳ ಗೌರವಾರ್ಥವಾಗಿ ಸಿರಿಯನ್ನರು ಸ್ಮರಣಾರ್ಥ ದಿನವಾಗಿ ರ್ಯಾಲಿ ನಡೆಸಿದರು. 2011ರಲ್ಲಿ ಯುದ್ಧದ ನಂತರ ಲಕ್ಷಾಂತರ ಜನ ಸಿರಿಯಾದಿಂದ ಟರ್ಕಿಗೆ ಪಲಾಯನ ಮಾಡಿದ್ದರು. ಡಿಸೆಂಬರ್ 8 ರಂದು ಅಲ್-ಅಸ್ಸಾದ್ ಆಡಳಿತ ಪತನದ ನಂತರ ಅನೇಕರು ಹಿಂತಿರುಗುವ ಎಂಬ ಭರವಸೆ ಹೊಂದಿದ್ದಾರೆ.

ಈಗ ಟರ್ಕಿಯಿಂದ ಸಿರಿಯಾಕ್ಕೆ ಹಿಂತಿರುಗಿದ ಜನರ ಸಂಖ್ಯೆ 30,663 ಆಗಿದೆ. ಅವರಲ್ಲಿ ಶೇ.30ರಷ್ಟು ಟರ್ಕಿಯಲ್ಲಿ ಜನಿಸಿದವರಾಗಿದ್ದಾರೆ ಎಂದು ಟರ್ಕಿಯ ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ಶುಕ್ರವಾರ ಸ್ಥಳೀಯ ಟಿಜಿಆರ್‌ಟಿ ಸುದ್ದಿ ವಾಹಿನಿಗೆ ತಿಳಿಸಿದ್ದಾರೆ.

25,000ಕ್ಕೂ ಹೆಚ್ಚು ಸಿರಿಯನ್ನರು ಮರಳಿದ್ದಾರೆ. ಅವರಿಗೆ 2025ರ ಮೊದಲಾರ್ಧದಲ್ಲಿ ಮೂರು ಬಾರಿ ಟರ್ಕಿಯನ್ನು ತೊರೆಯಲು ಮತ್ತು ಮರು-ಪ್ರವೇಶಿಸಲು ಅನುಮತಿಸಲಾಗುವುದು ಎಂದು ರಾಜ್ಯ ಸುದ್ದಿ ಸಂಸ್ಥೆ ಅನಾಡೋಲುಗೆ ಮಂಗಳವಾರ ಯೆರ್ಲಿಕಾಯಾ ಹೇಳಿದ್ದಾರೆ.

ಟರ್ಕಿಯಲ್ಲಿ ವಾಸಿಸುವ ಹೆಚ್ಚಿನ ನಿರಾಶ್ರಿತರು ಸಿರಿಯಾದ ಎರಡನೇ ನಗರವಾದ ಅಲೆಪ್ಪೊದವರಾಗಿದ್ದಾರೆ. ಈ ಅಲೆಪ್ಪೊದಲ್ಲಿ  “ವಲಸೆ ನಿರ್ವಹಣಾ ಕಚೇರಿ” ಯನ್ನು ತೆರೆಯಲಿದೆ ಎಂದು ಅವರು ಹೆಚ್ಚಿನ ವಿವರಗಳನ್ನು ನೀಡದೆ ಹೇಳಿದ ಅವರು, ಟರ್ಕಿಯು ಅಲೆಪ್ಪೊದಲ್ಲಿ ತನ್ನ ರಾಯಭಾರ ಕಚೇರಿಯನ್ನು ಕೆಲವೇ ದಿನಗಳಲ್ಲಿ ಮತ್ತೆ ತೆರೆಯುತ್ತದೆ ಎಂದು ಈ ವಾರದ ಆರಂಭದಲ್ಲಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರ ಹೇಳಿಕೆಗಳನ್ನು ಪುನರುಚ್ಚರಿಸಿದ್ದಾರೆ.

ಹಯಾತ್ ತಹ್ರೀರ್ ಅಲ್-ಶಾಮ್ (HTS) ಬಂಡುಕೋರರಿಂದ ಅಲ್-ಅಸ್ಸಾದ್ ಆಡಳಿತವನ್ನು ಪತನಗೊಳಿಸಿದ ಆರು ದಿನಗಳ ನಂತರ, ಡಿಸೆಂಬರ್ 14ರಂದು ಟರ್ಕಿಯಲ್ಲಿ ಡಮಾಸ್ಕಸ್ ರಾಯಭಾರ ಕಚೇರಿಯನ್ನು ಪುನಃ ತೆರೆಯಲಾಯಿತು. ಏತನ್ಮಧ್ಯೆ, ರಾಜಧಾನಿ ಡಮಾಸ್ಕಸ್ ಮತ್ತು ಇತರೆಡೆಗಳಲ್ಲಿ, ಅಲ್-ಅಸ್ಸಾದ್‌ನ ಸುಮಾರು 25 ವರ್ಷಗಳ ಆಳ್ವಿಕೆಯಲ್ಲಿ ಕೊಲ್ಲಲ್ಪಟ್ಟ ಮತ್ತು ಜೈಲಿನಲ್ಲಿದ್ದವರಿಗಾಗಿ ಸಿರಿಯನ್ನರು ಸ್ಮರಣಾರ್ಥ ದಿನವನ್ನು ನಡೆಸಿದರು.

ಅಲ್-ಅಸ್ಸಾದ್ ಅಧಿಕಾರಾವಧಿಯಲ್ಲಿ ಕಾಣೆಯಾದ ಸಂಬಂಧಿಕರ ಭವಿಷ್ಯದ ಕುರಿತು ಹೊಸ ಅಧಿಕಾರಿಗಳನ್ನು ಒತ್ತಾಯಿಸಲು ಡಮಾಸ್ಕಸ್‌ನ ಮಧ್ಯಭಾಗದ ಹಿಜಾಜ್ ಸ್ಕ್ವೇರ್‌ನಲ್ಲಿ ಪ್ರತಿಭಟನಾಕಾರರು ಕಣ್ಮರೆಯಾದವರ ಚಿತ್ರಗಳನ್ನು ಹಿಡಿದುಕೊಂಡು ರ್ಯಾಲಿ ನಡೆಸಿದರೆಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನಿರಂಕುಶಾಧಿಕಾರಿಗಳು ಜವಾಬ್ದಾರಿ ಹೊಂದಲು ಇದು ಸಮಯ ಎಂಬ ಸೊಗಸಾದ ಕಪ್ಪು ಬ್ಯಾನರ್ ಅನ್ನು ಒಟ್ಟೋಮನ್ ರೈಲು ನಿಲ್ದಾಣದ ಬಾಲ್ಕನಿಯಿಂದ ಪ್ರದರ್ಶಿಸಲಾಯಿತು. ಹಾಗೆಯೇ ಇತರ ಫಲಕಗಳಲ್ಲಿ “ಕಾಣೆಯಾದವರ ಗುರುತು ಬಹಿರಂಗಪಡಿಸುವ ಹಕ್ಕು” ಮತ್ತು “ನನ್ನ ಮಗನಿಗೆ ಗುರುತು ಇಲ್ಲದ ಸಮಾಧಿ ನನಗೆ ಬೇಕಾಗಿಲ್ಲ, ನನಗೆ ಸತ್ಯ ಬೇಕು” ಎಂದು ಬರೆಯಲಾಗಿತ್ತು ಎಂದು ಡಮಾಸ್ಕಸ್‌ನಿಂದ ವರದಿ ಮಾಡುತ್ತಿರುವ ಅಲ್ ಜಜೀರಾದ ಹಶೆಮ್ ಅಹೆಲ್ಬರ್ರಾ ವರದಿ ಮಾಡಿದ್ದಾರೆ.

ಬಶರ್ ಅಲ್-ಅಸ್ಸಾದ್ ಅಥವಾ ಅವರ ತಂದೆ ಹಫೀಜ್ ಅಲ್-ಅಸ್ಸಾದ್ ಸಮಯದಲ್ಲಿ ಜೈಲುಗಳಲ್ಲಿ ಕೊಲ್ಲಲ್ಪಟ್ಟ ಅಥವಾ ಕಣ್ಮರೆಯಾದ ಅವರ ಪ್ರೀತಿಪಾತ್ರರ ಬ್ಯಾನರ್ ಗಳು ಮತ್ತು ಪೋಸ್ಟರ್ ಗಳು ಮತ್ತು ಚಿತ್ರಗಳನ್ನು ಹಿಡಿದಿದ್ದ ಅನೇಕ ಜನರನ್ನು ನಾನು ನೋಡಿದೆ ಎಂದು ಅವರು ವರದಿ ಮಾಡಿದ್ದಾರೆ.

ಒಂದು ಹಂತದಲ್ಲಿ ಅಹೆಲ್ಬರ್ರಾ ಬೀದಿಗಳಲ್ಲಿನ ದೃಶಗಳು “ಅಸ್ತವ್ಯಸ್ತ”ವಾಗಿದ್ದವು. ಏಕೆಂದರೆ ಜನರು   ಗಾಳಿಯಲ್ಲಿ ತಮ್ಮ ಬಂದೂಕುಗಳಿಂದ ಗುಂಡು ಹಾರಿಸಿ  ಸ್ಮರಣಾರ್ಥ ರ್ಯಾಲಿ ನಡೆಸುತ್ತಿದ್ದರು ಎಂದು ಹಶೆಮ್ ಅಹೆಲ್ಬರ್ರಾ ಹೇಳಿದ್ದಾರೆ.

ಅಲ್-ಅಸ್ಸಾದ್ ಆಡಳಿತಕ್ಕೆ ಸಿರಿಯಾದ ಜೈಲುಗಳು ವಿರೋಧಿಗಳನ್ನು ಮಟ್ಟಹಾಕಲು ಪ್ರಮುಖ ಆಧಾರಸ್ತಂಭವಾಗಿದ್ದವು. 2013ರಲ್ಲಿ ಸಿರಿಯಾದಿಂದ ಕಳ್ಳಸಾಗಣೆಯಾದವರ ಚಿತ್ರಗಳು, ಬಂಧನದಲ್ಲಿ ವ್ಯಾಪಕವಾದ ಚಿತ್ರಹಿಂಸೆ, ಹಸಿವು, ಹೊಡೆತಗಳು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ ಎಂದು ಮಾನವ ಹಕ್ಕುಗಳ ಗುಂಪು ಹೇಳಿದೆ.

ಇರಾನ್‌ನ ಉನ್ನತ ರಾಜತಾಂತ್ರಿಕರು ಸಿರಿಯಾದ ಭವಿಷ್ಯದಲ್ಲಿ “ವಿನಾಶಕಾರಿ ಹಸ್ತಕ್ಷೇಪ” ದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ಸಿರಿಯಾದ ಯಾವುದೇ ನಿರ್ಧಾರಗಳು ದೇಶದ ಜನರೊಂದಿಗೆ ಮಾತ್ರ ಇರಬೇಕು ಎಂದು ಹೇಳಿದ್ದಾರೆ.

ಸಿರಿಯಾದಲ್ಲಿ ವಿನಾಶಕಾರಿ ಹಸ್ತಕ್ಷೇಪ ಅಥವಾ ವಿದೇಶಿ ಹೇರಿಕೆ ಇಲ್ಲದ, ಅಲ್ಲಿಯ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಜನರ ಸಂಪೂರ್ಣ ಜವಾಬ್ದಾರಿ ಎಂದು ಪರಿಗಣಿಸುತ್ತೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಬೀಜಿಂಗ್‌ಗೆ ಭೇಟಿ ನೀಡಿದಾಗ ಚೀನಾದ ರಾಜ್ಯ ಮಾಧ್ಯಮ ಪೀಪಲ್ಸ್ ಡೈಲಿಯಲ್ಲಿ ಬರೆದಿದ್ದಾರೆ. ಅವರು ಸಿರಿಯಾದ ಏಕತೆ, ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗಾಗಿ ಇರಾನ್‌ನ ಗೌರವವನ್ನು ಒತ್ತಿ ಹೇಳಿದ್ದಾರೆ.

ವಿದೇಶಾಂಗ ಸಚಿವರಾಗಿ ನೇಮಕಗೊಂಡ ನಂತರ ತನ್ನ ಮೊದಲ ಅಧಿಕೃತ ಭೇಟಿಯನ್ನು ಪ್ರಾರಂಭಿಸಲು ಅಬ್ಬಾಸ್ ಅರಾಘ್ಚಿ ಶುಕ್ರವಾರ ಮಧ್ಯಾಹ್ನ ಚೀನಾದ ರಾಜಧಾನಿಯನ್ನು ತಲುಪಿದರು ಎಂದು ಇರಾನ್ ರಾಜ್ಯ ಮಾಧ್ಯಮ ವರದಿ ಮಾಡಿದೆ. ಚೀನಾ ಮತ್ತು ಇರಾನ್ ಎರಡೂ ಮಾಜಿ ಅಧ್ಯಕ್ಷ ಅಲ್-ಅಸ್ಸಾದ್ ಬೆಂಬಲಿಗರಾಗಿದ್ದರು.

ಮಾನವೀಯ ನೆಲೆಯಲ್ಲಿ  ಸುಮಾರು 50 ಟನ್‌ಗಳಷ್ಟು ಯುರೋಪಿಯನ್ ಯೂನಿಯನ್ ನಿಧಿಯ ವೈದ್ಯಕೀಯ ಸೌಲಭ್ಯಗಳು ಈ ವರ್ಷದ ಅಂತ್ಯದ ವೇಳೆಗೆ ಸಿರಿಯಾವನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ವಿಶ್ವಸಂಸ್ಥೆಯ ಆರೋಗ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹಾಗೆಯೇ ದುಬೈನಲ್ಲಿರುವ ಇಯು ದಾಸ್ತಾನುಗಳಿಂದ ಕಳುಹಿಸಲಾದ ವೈದ್ಯಕೀಯ ಸೌಲಭ್ಯಗಳು ಗುರುವಾರ ಇಸ್ತಾನ್‌ಬುಲ್‌ಗೆ ಬಂದಿಳಿದಿವೆ ಮತ್ತು ಮುಂದಿನ ದಿನಗಳಲ್ಲಿ ಗಡಿಗೆ ತಲುಪಿಸಲಾಗುವುದು ಎಂದು ದಕ್ಷಿಣ ಟರ್ಕಿಯ ವಿಶ್ವ ಆರೋಗ್ಯ ಸಂಸ್ಥೆಯ ಗಾಜಿಯಾಂಟೆಪ್ ಕಚೇರಿಯಿಂದ ಮೃಣಾಲಿನಿ ಸಂತಾನಂ ಅವರು ಎಎಫ್‌ಪಿಗೆ ತಿಳಿಸಿದ್ದಾರೆ.

ಇವುಗಳು 8,000 ತುರ್ತು ಶಸ್ತ್ರಚಿಕಿತ್ಸಾ ಕಿಟ್‌ಗಳು, ಅರಿವಳಿಕೆ ಸರಬರಾಜುಗಳು, IV ದ್ರವಗಳು, ಕ್ರಿಮಿನಾಶಕ ವಸ್ತುಗಳು ಮತ್ತು ರೋಗ ಹರಡುವುದನ್ನು ತಡೆಗಟ್ಟುವ ಔಷಧಿಗಳನ್ನು ಒಳಗೊಂಡಿವೆ. ಇಡ್ಲಿಬ್ ಮತ್ತು ಉತ್ತರ ಅಲೆಪ್ಪೊದಲ್ಲಿನ ಆರೋಗ್ಯ ವ್ಯವಸ್ಥೆಯನ್ನು ಬೆಂಬಲಿಸಲು ಇವುಗಳನ್ನು ಕಳುಹಿಸಲಾಗುವುದು ಎಂದು EU (ಯುರೋಪಿಯನ್ ಯೂನಿಯನ್) ಹೇಳಿದೆ.

2011ರಲ್ಲಿ ಪ್ರಾರಂಭವಾದ ಅಂತರ್ಯುದ್ಧವು  ಸಿರಿಯಾ ದೇಶ ಮತ್ತು ಆರೋಗ್ಯ ವ್ಯವಸ್ಥೆಯನ್ನು ಧ್ವಂಸಗೊಳಿಸಿತು. ಇಲ್ಲಿ ಅರ್ಧದಷ್ಟು ಆಸ್ಪತ್ರೆಗಳು ಈಗ ಕಾರ್ಯನಿರ್ವಹಿಸುತ್ತಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮೃಣಾಲಿನಿ ಸಂತಾನಂ ಹೇಳಿದ್ದಾರೆ.

ದಕ್ಷಿಣ ಕೊರಿಯಾ: ಲ್ಯಾಂಡಿಂಗ್ ವೇಳೆ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು 62 ಪ್ರಯಾಣಿಕರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...