Homeಅಂತರಾಷ್ಟ್ರೀಯಟರ್ಕಿಯಿಂದ ಸಿರಿಯಾಕ್ಕೆ ಮರಳಿದ 3 ಮಿಲಿಯನ್ ನಿರಾಶ್ರಿತರಲ್ಲಿ 31,000 ನಿರಾಶ್ರಿತರು

ಟರ್ಕಿಯಿಂದ ಸಿರಿಯಾಕ್ಕೆ ಮರಳಿದ 3 ಮಿಲಿಯನ್ ನಿರಾಶ್ರಿತರಲ್ಲಿ 31,000 ನಿರಾಶ್ರಿತರು

- Advertisement -
- Advertisement -

ಟರ್ಕಿಯಲ್ಲಿ ಆಶ್ರಯ ಪಡೆದಿದ್ದ 3 ಮಿಲಿಯನ್ ನಷ್ಟು ಸಿರಿಯನ್ ರಲ್ಲಿ ಸುಮಾರು 31,000 ಸಿರಿಯನ್ನರು  ಬಶರ್ ಅಲ್-ಅಸ್ಸಾದ್ ಅವರ ಆಡಳಿತ ಪತನದ ನಂತರ ತಮ್ಮ ತವರಿಗೆ ಮರಳಿದ್ದಾರೆ ಎಂದು  ಟರ್ಕಿಯ ಆಂತರಿಕ ಮಂತ್ರಿ  ಹೇಳಿದ್ದಾರೆ.

ಏತನ್ಮಧ್ಯೆ ಸಿರಿಯಾದ ಅಲ್-ಅಸ್ಸಾದ್ ಆಡಳಿತದಲ್ಲಿ ಮತ್ತು 13 ವರ್ಷಗಳ ಅಂತರ್ಯುದ್ಧದ ಬಲಿಪಶುಗಳ ಗೌರವಾರ್ಥವಾಗಿ ಸಿರಿಯನ್ನರು ಸ್ಮರಣಾರ್ಥ ದಿನವಾಗಿ ರ್ಯಾಲಿ ನಡೆಸಿದರು. 2011ರಲ್ಲಿ ಯುದ್ಧದ ನಂತರ ಲಕ್ಷಾಂತರ ಜನ ಸಿರಿಯಾದಿಂದ ಟರ್ಕಿಗೆ ಪಲಾಯನ ಮಾಡಿದ್ದರು. ಡಿಸೆಂಬರ್ 8 ರಂದು ಅಲ್-ಅಸ್ಸಾದ್ ಆಡಳಿತ ಪತನದ ನಂತರ ಅನೇಕರು ಹಿಂತಿರುಗುವ ಎಂಬ ಭರವಸೆ ಹೊಂದಿದ್ದಾರೆ.

ಈಗ ಟರ್ಕಿಯಿಂದ ಸಿರಿಯಾಕ್ಕೆ ಹಿಂತಿರುಗಿದ ಜನರ ಸಂಖ್ಯೆ 30,663 ಆಗಿದೆ. ಅವರಲ್ಲಿ ಶೇ.30ರಷ್ಟು ಟರ್ಕಿಯಲ್ಲಿ ಜನಿಸಿದವರಾಗಿದ್ದಾರೆ ಎಂದು ಟರ್ಕಿಯ ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ಶುಕ್ರವಾರ ಸ್ಥಳೀಯ ಟಿಜಿಆರ್‌ಟಿ ಸುದ್ದಿ ವಾಹಿನಿಗೆ ತಿಳಿಸಿದ್ದಾರೆ.

25,000ಕ್ಕೂ ಹೆಚ್ಚು ಸಿರಿಯನ್ನರು ಮರಳಿದ್ದಾರೆ. ಅವರಿಗೆ 2025ರ ಮೊದಲಾರ್ಧದಲ್ಲಿ ಮೂರು ಬಾರಿ ಟರ್ಕಿಯನ್ನು ತೊರೆಯಲು ಮತ್ತು ಮರು-ಪ್ರವೇಶಿಸಲು ಅನುಮತಿಸಲಾಗುವುದು ಎಂದು ರಾಜ್ಯ ಸುದ್ದಿ ಸಂಸ್ಥೆ ಅನಾಡೋಲುಗೆ ಮಂಗಳವಾರ ಯೆರ್ಲಿಕಾಯಾ ಹೇಳಿದ್ದಾರೆ.

ಟರ್ಕಿಯಲ್ಲಿ ವಾಸಿಸುವ ಹೆಚ್ಚಿನ ನಿರಾಶ್ರಿತರು ಸಿರಿಯಾದ ಎರಡನೇ ನಗರವಾದ ಅಲೆಪ್ಪೊದವರಾಗಿದ್ದಾರೆ. ಈ ಅಲೆಪ್ಪೊದಲ್ಲಿ  “ವಲಸೆ ನಿರ್ವಹಣಾ ಕಚೇರಿ” ಯನ್ನು ತೆರೆಯಲಿದೆ ಎಂದು ಅವರು ಹೆಚ್ಚಿನ ವಿವರಗಳನ್ನು ನೀಡದೆ ಹೇಳಿದ ಅವರು, ಟರ್ಕಿಯು ಅಲೆಪ್ಪೊದಲ್ಲಿ ತನ್ನ ರಾಯಭಾರ ಕಚೇರಿಯನ್ನು ಕೆಲವೇ ದಿನಗಳಲ್ಲಿ ಮತ್ತೆ ತೆರೆಯುತ್ತದೆ ಎಂದು ಈ ವಾರದ ಆರಂಭದಲ್ಲಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರ ಹೇಳಿಕೆಗಳನ್ನು ಪುನರುಚ್ಚರಿಸಿದ್ದಾರೆ.

ಹಯಾತ್ ತಹ್ರೀರ್ ಅಲ್-ಶಾಮ್ (HTS) ಬಂಡುಕೋರರಿಂದ ಅಲ್-ಅಸ್ಸಾದ್ ಆಡಳಿತವನ್ನು ಪತನಗೊಳಿಸಿದ ಆರು ದಿನಗಳ ನಂತರ, ಡಿಸೆಂಬರ್ 14ರಂದು ಟರ್ಕಿಯಲ್ಲಿ ಡಮಾಸ್ಕಸ್ ರಾಯಭಾರ ಕಚೇರಿಯನ್ನು ಪುನಃ ತೆರೆಯಲಾಯಿತು. ಏತನ್ಮಧ್ಯೆ, ರಾಜಧಾನಿ ಡಮಾಸ್ಕಸ್ ಮತ್ತು ಇತರೆಡೆಗಳಲ್ಲಿ, ಅಲ್-ಅಸ್ಸಾದ್‌ನ ಸುಮಾರು 25 ವರ್ಷಗಳ ಆಳ್ವಿಕೆಯಲ್ಲಿ ಕೊಲ್ಲಲ್ಪಟ್ಟ ಮತ್ತು ಜೈಲಿನಲ್ಲಿದ್ದವರಿಗಾಗಿ ಸಿರಿಯನ್ನರು ಸ್ಮರಣಾರ್ಥ ದಿನವನ್ನು ನಡೆಸಿದರು.

ಅಲ್-ಅಸ್ಸಾದ್ ಅಧಿಕಾರಾವಧಿಯಲ್ಲಿ ಕಾಣೆಯಾದ ಸಂಬಂಧಿಕರ ಭವಿಷ್ಯದ ಕುರಿತು ಹೊಸ ಅಧಿಕಾರಿಗಳನ್ನು ಒತ್ತಾಯಿಸಲು ಡಮಾಸ್ಕಸ್‌ನ ಮಧ್ಯಭಾಗದ ಹಿಜಾಜ್ ಸ್ಕ್ವೇರ್‌ನಲ್ಲಿ ಪ್ರತಿಭಟನಾಕಾರರು ಕಣ್ಮರೆಯಾದವರ ಚಿತ್ರಗಳನ್ನು ಹಿಡಿದುಕೊಂಡು ರ್ಯಾಲಿ ನಡೆಸಿದರೆಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನಿರಂಕುಶಾಧಿಕಾರಿಗಳು ಜವಾಬ್ದಾರಿ ಹೊಂದಲು ಇದು ಸಮಯ ಎಂಬ ಸೊಗಸಾದ ಕಪ್ಪು ಬ್ಯಾನರ್ ಅನ್ನು ಒಟ್ಟೋಮನ್ ರೈಲು ನಿಲ್ದಾಣದ ಬಾಲ್ಕನಿಯಿಂದ ಪ್ರದರ್ಶಿಸಲಾಯಿತು. ಹಾಗೆಯೇ ಇತರ ಫಲಕಗಳಲ್ಲಿ “ಕಾಣೆಯಾದವರ ಗುರುತು ಬಹಿರಂಗಪಡಿಸುವ ಹಕ್ಕು” ಮತ್ತು “ನನ್ನ ಮಗನಿಗೆ ಗುರುತು ಇಲ್ಲದ ಸಮಾಧಿ ನನಗೆ ಬೇಕಾಗಿಲ್ಲ, ನನಗೆ ಸತ್ಯ ಬೇಕು” ಎಂದು ಬರೆಯಲಾಗಿತ್ತು ಎಂದು ಡಮಾಸ್ಕಸ್‌ನಿಂದ ವರದಿ ಮಾಡುತ್ತಿರುವ ಅಲ್ ಜಜೀರಾದ ಹಶೆಮ್ ಅಹೆಲ್ಬರ್ರಾ ವರದಿ ಮಾಡಿದ್ದಾರೆ.

ಬಶರ್ ಅಲ್-ಅಸ್ಸಾದ್ ಅಥವಾ ಅವರ ತಂದೆ ಹಫೀಜ್ ಅಲ್-ಅಸ್ಸಾದ್ ಸಮಯದಲ್ಲಿ ಜೈಲುಗಳಲ್ಲಿ ಕೊಲ್ಲಲ್ಪಟ್ಟ ಅಥವಾ ಕಣ್ಮರೆಯಾದ ಅವರ ಪ್ರೀತಿಪಾತ್ರರ ಬ್ಯಾನರ್ ಗಳು ಮತ್ತು ಪೋಸ್ಟರ್ ಗಳು ಮತ್ತು ಚಿತ್ರಗಳನ್ನು ಹಿಡಿದಿದ್ದ ಅನೇಕ ಜನರನ್ನು ನಾನು ನೋಡಿದೆ ಎಂದು ಅವರು ವರದಿ ಮಾಡಿದ್ದಾರೆ.

ಒಂದು ಹಂತದಲ್ಲಿ ಅಹೆಲ್ಬರ್ರಾ ಬೀದಿಗಳಲ್ಲಿನ ದೃಶಗಳು “ಅಸ್ತವ್ಯಸ್ತ”ವಾಗಿದ್ದವು. ಏಕೆಂದರೆ ಜನರು   ಗಾಳಿಯಲ್ಲಿ ತಮ್ಮ ಬಂದೂಕುಗಳಿಂದ ಗುಂಡು ಹಾರಿಸಿ  ಸ್ಮರಣಾರ್ಥ ರ್ಯಾಲಿ ನಡೆಸುತ್ತಿದ್ದರು ಎಂದು ಹಶೆಮ್ ಅಹೆಲ್ಬರ್ರಾ ಹೇಳಿದ್ದಾರೆ.

ಅಲ್-ಅಸ್ಸಾದ್ ಆಡಳಿತಕ್ಕೆ ಸಿರಿಯಾದ ಜೈಲುಗಳು ವಿರೋಧಿಗಳನ್ನು ಮಟ್ಟಹಾಕಲು ಪ್ರಮುಖ ಆಧಾರಸ್ತಂಭವಾಗಿದ್ದವು. 2013ರಲ್ಲಿ ಸಿರಿಯಾದಿಂದ ಕಳ್ಳಸಾಗಣೆಯಾದವರ ಚಿತ್ರಗಳು, ಬಂಧನದಲ್ಲಿ ವ್ಯಾಪಕವಾದ ಚಿತ್ರಹಿಂಸೆ, ಹಸಿವು, ಹೊಡೆತಗಳು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ ಎಂದು ಮಾನವ ಹಕ್ಕುಗಳ ಗುಂಪು ಹೇಳಿದೆ.

ಇರಾನ್‌ನ ಉನ್ನತ ರಾಜತಾಂತ್ರಿಕರು ಸಿರಿಯಾದ ಭವಿಷ್ಯದಲ್ಲಿ “ವಿನಾಶಕಾರಿ ಹಸ್ತಕ್ಷೇಪ” ದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ಸಿರಿಯಾದ ಯಾವುದೇ ನಿರ್ಧಾರಗಳು ದೇಶದ ಜನರೊಂದಿಗೆ ಮಾತ್ರ ಇರಬೇಕು ಎಂದು ಹೇಳಿದ್ದಾರೆ.

ಸಿರಿಯಾದಲ್ಲಿ ವಿನಾಶಕಾರಿ ಹಸ್ತಕ್ಷೇಪ ಅಥವಾ ವಿದೇಶಿ ಹೇರಿಕೆ ಇಲ್ಲದ, ಅಲ್ಲಿಯ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಜನರ ಸಂಪೂರ್ಣ ಜವಾಬ್ದಾರಿ ಎಂದು ಪರಿಗಣಿಸುತ್ತೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಬೀಜಿಂಗ್‌ಗೆ ಭೇಟಿ ನೀಡಿದಾಗ ಚೀನಾದ ರಾಜ್ಯ ಮಾಧ್ಯಮ ಪೀಪಲ್ಸ್ ಡೈಲಿಯಲ್ಲಿ ಬರೆದಿದ್ದಾರೆ. ಅವರು ಸಿರಿಯಾದ ಏಕತೆ, ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗಾಗಿ ಇರಾನ್‌ನ ಗೌರವವನ್ನು ಒತ್ತಿ ಹೇಳಿದ್ದಾರೆ.

ವಿದೇಶಾಂಗ ಸಚಿವರಾಗಿ ನೇಮಕಗೊಂಡ ನಂತರ ತನ್ನ ಮೊದಲ ಅಧಿಕೃತ ಭೇಟಿಯನ್ನು ಪ್ರಾರಂಭಿಸಲು ಅಬ್ಬಾಸ್ ಅರಾಘ್ಚಿ ಶುಕ್ರವಾರ ಮಧ್ಯಾಹ್ನ ಚೀನಾದ ರಾಜಧಾನಿಯನ್ನು ತಲುಪಿದರು ಎಂದು ಇರಾನ್ ರಾಜ್ಯ ಮಾಧ್ಯಮ ವರದಿ ಮಾಡಿದೆ. ಚೀನಾ ಮತ್ತು ಇರಾನ್ ಎರಡೂ ಮಾಜಿ ಅಧ್ಯಕ್ಷ ಅಲ್-ಅಸ್ಸಾದ್ ಬೆಂಬಲಿಗರಾಗಿದ್ದರು.

ಮಾನವೀಯ ನೆಲೆಯಲ್ಲಿ  ಸುಮಾರು 50 ಟನ್‌ಗಳಷ್ಟು ಯುರೋಪಿಯನ್ ಯೂನಿಯನ್ ನಿಧಿಯ ವೈದ್ಯಕೀಯ ಸೌಲಭ್ಯಗಳು ಈ ವರ್ಷದ ಅಂತ್ಯದ ವೇಳೆಗೆ ಸಿರಿಯಾವನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ವಿಶ್ವಸಂಸ್ಥೆಯ ಆರೋಗ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹಾಗೆಯೇ ದುಬೈನಲ್ಲಿರುವ ಇಯು ದಾಸ್ತಾನುಗಳಿಂದ ಕಳುಹಿಸಲಾದ ವೈದ್ಯಕೀಯ ಸೌಲಭ್ಯಗಳು ಗುರುವಾರ ಇಸ್ತಾನ್‌ಬುಲ್‌ಗೆ ಬಂದಿಳಿದಿವೆ ಮತ್ತು ಮುಂದಿನ ದಿನಗಳಲ್ಲಿ ಗಡಿಗೆ ತಲುಪಿಸಲಾಗುವುದು ಎಂದು ದಕ್ಷಿಣ ಟರ್ಕಿಯ ವಿಶ್ವ ಆರೋಗ್ಯ ಸಂಸ್ಥೆಯ ಗಾಜಿಯಾಂಟೆಪ್ ಕಚೇರಿಯಿಂದ ಮೃಣಾಲಿನಿ ಸಂತಾನಂ ಅವರು ಎಎಫ್‌ಪಿಗೆ ತಿಳಿಸಿದ್ದಾರೆ.

ಇವುಗಳು 8,000 ತುರ್ತು ಶಸ್ತ್ರಚಿಕಿತ್ಸಾ ಕಿಟ್‌ಗಳು, ಅರಿವಳಿಕೆ ಸರಬರಾಜುಗಳು, IV ದ್ರವಗಳು, ಕ್ರಿಮಿನಾಶಕ ವಸ್ತುಗಳು ಮತ್ತು ರೋಗ ಹರಡುವುದನ್ನು ತಡೆಗಟ್ಟುವ ಔಷಧಿಗಳನ್ನು ಒಳಗೊಂಡಿವೆ. ಇಡ್ಲಿಬ್ ಮತ್ತು ಉತ್ತರ ಅಲೆಪ್ಪೊದಲ್ಲಿನ ಆರೋಗ್ಯ ವ್ಯವಸ್ಥೆಯನ್ನು ಬೆಂಬಲಿಸಲು ಇವುಗಳನ್ನು ಕಳುಹಿಸಲಾಗುವುದು ಎಂದು EU (ಯುರೋಪಿಯನ್ ಯೂನಿಯನ್) ಹೇಳಿದೆ.

2011ರಲ್ಲಿ ಪ್ರಾರಂಭವಾದ ಅಂತರ್ಯುದ್ಧವು  ಸಿರಿಯಾ ದೇಶ ಮತ್ತು ಆರೋಗ್ಯ ವ್ಯವಸ್ಥೆಯನ್ನು ಧ್ವಂಸಗೊಳಿಸಿತು. ಇಲ್ಲಿ ಅರ್ಧದಷ್ಟು ಆಸ್ಪತ್ರೆಗಳು ಈಗ ಕಾರ್ಯನಿರ್ವಹಿಸುತ್ತಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮೃಣಾಲಿನಿ ಸಂತಾನಂ ಹೇಳಿದ್ದಾರೆ.

ದಕ್ಷಿಣ ಕೊರಿಯಾ: ಲ್ಯಾಂಡಿಂಗ್ ವೇಳೆ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು 62 ಪ್ರಯಾಣಿಕರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...