Homeಕರ್ನಾಟಕಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ನಾವು ಖರ್ಚು ಮಾಡುತ್ತಿರುವುದು ಕಡಿಮೆ ಮೊತ್ತ. ಉಚಿತ ಸರ್ಕಾರಿ ಲಸಿಕೆ ತಡವಾಗುವುದರಿಂದ ಪಾವತಿ ಮಾಡುತ್ತಿದ್ದೇವೆ ಎಂದು ತಮ್ಮ ನಡೆಯನ್ನು ಸಚಿವ ಶಿವರಾಮ್ ಹೆಬ್ಬಾರ್ ಸಮರ್ಥಿಸಿಕೊಂಡಿದ್ದಾರೆ.

- Advertisement -
- Advertisement -

ನಲವತ್ತು ಲಕ್ಷ ಕಟ್ಟಡ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆ ಕೊಡುವ ಯೋಜನೆ ಹಾಕಿ ಕಾರ್ಮಿಕ ಕಲ್ಯಾಣ ಮಂಡಳಿಯ 312 ಕೋಟಿ ಲೂಟಿಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಮಂಡಳಿಯ ಅಧಿಕಾರಿಗಳು ಯತ್ನಿಸುತ್ತಿದ್ದಾರೆ ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ರಾಜ್ಯ ಉಪಾಧ್ಯಕ್ಷ ಹರೀಶ್ ನಾಯ್ಕ್ ಆರೋಪಿಸಿದ್ದಾರೆ.

ಕಾರ್ಮಿಕ ಮಂತ್ರಿ ಶಿವರಾಮ್ ಹೆಬ್ಬಾರ್ ಕಾರ್ಮಿಕರಿಗೆ ಕೋವಿಡ್ ಲಸಿಕೆ ವಿತರಣೆಗೆಂದು 312 ಕೋಟಿ ರೂಗಳನ್ನು ಖಾಸಗಿ ಆಸ್ಪತ್ರೆ ಮಾಲೀಕರಿಗೆ ಧಾರೆಯೆರೆಯಲು ಮುಂದಾಗಿರುವುದು ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟ ನಿಧಿಯ ದುರ್ಬಳಕೆಯೆಂದು ಅವರು ಕಿಡಿಕಾರಿದ್ದಾರೆ.

ಕಾರ್ಮಿಕ ಸಚಿವರು, ಕಾರ್ಮಿಕ ಕಲ್ಯಾಣ ಮಂಡಳಿ ಅಧಿಕಾರಿಗಳು ಮತ್ತು ಖಾಸಗಿ ಆಸ್ಪತ್ರೆ ಧಣಿಗಳ ನಡುವೆ ನಡೆದ ಮಾತುಕತೆ ವೇಳೆ ರಾಜ್ಯದ 30 ಲಕ್ಷ ನೋಂದಾಯಿತ ಕಾರ್ಮಿಕರಿಗೆ ಮತ್ತು 10 ಲಕ್ಷ ವಲಸೆ ಕಾರ್ಮಿಕರಿಗೆ ಪ್ರತಿ ಲಸಿಕೆಗೆ 780 ರೂ ದರದಲ್ಲಿ ಕೋವಿಡ್ ಲಸಿಕೆ ಕೊಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಕಾರ್ಮಿಕ ಕಲ್ಯಾಣ ಮಂಡಳಿಯ ನಿಧಿ ಪೋಲು ಮಾಡುವ ಕೆಲಸ ಇದಾಗಿದೆ. ಏಕೆಂದರೆ ಸರ್ಕಾರವೇ ನೇರವಾಗಿ ಉಚಿತ ಲಸಿಕೆ ನೀಡಬೇಕಾದರೆ ಇಲ್ಲಿ ಮಾತ್ರ ಏಕೆ ಹಣ ನೀಡಬೇಕು? ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ಈ ನಿಧಿ ದುರ್ಬಳಕೆಗೆ ಸಚಿವರು ಮತ್ತು ಮಂಡಳಿಯ ಅಧಿಕಾರಿಗಳ ಕೂಟ ಪ್ರಯತ್ನ ನಡೆಸಿದೆಯೆಂದು ನಾಯ್ಕ್ ಹೇಳಿದ್ದಾರೆ.

ಹರೀಶ್ ನಾಯ್ಕ್ (ಎಡದಿಂದ ಮೊದಲನೇಯವರು)

ಈಗಾಗಲೇ ಕಾರ್ಮಿಕ ಇಲಾಖೆಯಲ್ಲಿ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಹಲವು ಅವ್ಯವಹಾರ ನಡೆಸಲಾಗಿದೆ. ಟೂಲ್ ಕಿಟ್, ರೇಶನ್ ಕಿಟ್, ಬೂಸ್ಟಪ್ ಕಿಟ್, ಸುರಕ್ಷಾ ಕಿಟ್, ಕಂಪ್ಯೂಟರ್ ಖರೀದಿ, ಹೊಸ ತಂತ್ರಾಂಶ ಅಳವಡಿಕೆ, ಟಿವಿ ಖರೀದಿ, ಇನೋವಾ ಕಾರ್ ಖರೀದಿಯಲ್ಲಿ ಕೋಟ್ಯಾಂತರರೂ ಗೋಲ್ಮಾಲ್ ನಡೆಸಲಾಗಿದೆ. ಇದಲ್ಲದೆ ಮಂಡಳಿಯ 2688.90 ಕೋಟಿ ರೂ.ವಿವಿಧ ಬಾಬತ್ತುಗಳಿಗೆ 2021-22ನೇ ಸಾಲಿನಲ್ಲಿ ವ್ಯಯಿಸಲು ಮಂಡಳಿಯ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಅವಕಾಶ ಬಳಸಿಕೊಂಡು ಕಾರ್ಮಿಕ ಮಂತ್ರಿ ಹೆಬ್ಬಾರ್, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮತ್ತು ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿ ಕೋಟಿ ಕಬಳಿಸಲು ನೋಡುತ್ತಿದ್ದಾರೆ. ಬಡ ಕಾರ್ಮಿಕರ ಹೆಸರಲ್ಲಿ ನಡೆಯುತ್ತಿರುವ ಹಗಲು ದರೋಡೆಯಿದು. ಇದಕ್ಕೆ ಕಡಿವಾಣ ಹಾಕಬೇಕಿದೆಯೆಂದು ಹರೀಶ್ ನಾಯ್ಕ್ ಹೇಳಿದ್ದಾರೆ.

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಸೆಸ್ ರೂಪದಲ್ಲಿ ಸಂಗ್ರಹಿಸಿದ 10,000 ಕೋಟಿಗೂ ಅಧಿಕ ಹಣವಿದೆ. ಅದನ್ನು ಕಾರ್ಮಿಕ ಕಲ್ಯಾಣ ಉದ್ದೇಶಕ್ಕಾಗಿ ಮಾತ್ರ ಬಳಸಬಹುದಾಗಿದೆ. ಆದರೆ ರೇಷನ್ ಕಿಟ್, ಲಸಿಕೆ ಹೆಸರಲ್ಲಿ ಅದನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪ ಪದೇ ಪದೇ ಕೇಳಿಬರುತ್ತಿದೆ.

ಈಗಾಗಲೇ ಖಾಸಗಿ ಶಾಲೆಗಳು ಲಸಿಕೆ ನೀಡಲು ಹಲವು ಕೋಟಿ ರೂ ಪಾವತಿಸಲಾಗಿದೆ ಮತ್ತು ಕಾರ್ಯಾದೇಶ ನೀಡಲಾಗಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ. ನಾವು ಖರ್ಚು ಮಾಡುತ್ತಿರುವುದು ಕಡಿಮೆ ಮೊತ್ತ. ಉಚಿತ ಸರ್ಕಾರಿ ಲಸಿಕೆ ತಡವಾಗುವುದರಿಂದ ಪಾವತಿ ಮಾಡುತ್ತಿದ್ದೇವೆ ಎಂದು ತಮ್ಮ ನಡೆಯನ್ನು ಸಚಿವ ಶಿವರಾಮ್ ಹೆಬ್ಬಾರ್ ಸಮರ್ಥಿಸಿಕೊಂಡಿದ್ದಾರೆ.


ಇದನ್ನೂ ಓದಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...