Homeಕರ್ನಾಟಕಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ನಾವು ಖರ್ಚು ಮಾಡುತ್ತಿರುವುದು ಕಡಿಮೆ ಮೊತ್ತ. ಉಚಿತ ಸರ್ಕಾರಿ ಲಸಿಕೆ ತಡವಾಗುವುದರಿಂದ ಪಾವತಿ ಮಾಡುತ್ತಿದ್ದೇವೆ ಎಂದು ತಮ್ಮ ನಡೆಯನ್ನು ಸಚಿವ ಶಿವರಾಮ್ ಹೆಬ್ಬಾರ್ ಸಮರ್ಥಿಸಿಕೊಂಡಿದ್ದಾರೆ.

- Advertisement -
- Advertisement -

ನಲವತ್ತು ಲಕ್ಷ ಕಟ್ಟಡ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆ ಕೊಡುವ ಯೋಜನೆ ಹಾಕಿ ಕಾರ್ಮಿಕ ಕಲ್ಯಾಣ ಮಂಡಳಿಯ 312 ಕೋಟಿ ಲೂಟಿಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಮಂಡಳಿಯ ಅಧಿಕಾರಿಗಳು ಯತ್ನಿಸುತ್ತಿದ್ದಾರೆ ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ರಾಜ್ಯ ಉಪಾಧ್ಯಕ್ಷ ಹರೀಶ್ ನಾಯ್ಕ್ ಆರೋಪಿಸಿದ್ದಾರೆ.

ಕಾರ್ಮಿಕ ಮಂತ್ರಿ ಶಿವರಾಮ್ ಹೆಬ್ಬಾರ್ ಕಾರ್ಮಿಕರಿಗೆ ಕೋವಿಡ್ ಲಸಿಕೆ ವಿತರಣೆಗೆಂದು 312 ಕೋಟಿ ರೂಗಳನ್ನು ಖಾಸಗಿ ಆಸ್ಪತ್ರೆ ಮಾಲೀಕರಿಗೆ ಧಾರೆಯೆರೆಯಲು ಮುಂದಾಗಿರುವುದು ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟ ನಿಧಿಯ ದುರ್ಬಳಕೆಯೆಂದು ಅವರು ಕಿಡಿಕಾರಿದ್ದಾರೆ.

ಕಾರ್ಮಿಕ ಸಚಿವರು, ಕಾರ್ಮಿಕ ಕಲ್ಯಾಣ ಮಂಡಳಿ ಅಧಿಕಾರಿಗಳು ಮತ್ತು ಖಾಸಗಿ ಆಸ್ಪತ್ರೆ ಧಣಿಗಳ ನಡುವೆ ನಡೆದ ಮಾತುಕತೆ ವೇಳೆ ರಾಜ್ಯದ 30 ಲಕ್ಷ ನೋಂದಾಯಿತ ಕಾರ್ಮಿಕರಿಗೆ ಮತ್ತು 10 ಲಕ್ಷ ವಲಸೆ ಕಾರ್ಮಿಕರಿಗೆ ಪ್ರತಿ ಲಸಿಕೆಗೆ 780 ರೂ ದರದಲ್ಲಿ ಕೋವಿಡ್ ಲಸಿಕೆ ಕೊಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಕಾರ್ಮಿಕ ಕಲ್ಯಾಣ ಮಂಡಳಿಯ ನಿಧಿ ಪೋಲು ಮಾಡುವ ಕೆಲಸ ಇದಾಗಿದೆ. ಏಕೆಂದರೆ ಸರ್ಕಾರವೇ ನೇರವಾಗಿ ಉಚಿತ ಲಸಿಕೆ ನೀಡಬೇಕಾದರೆ ಇಲ್ಲಿ ಮಾತ್ರ ಏಕೆ ಹಣ ನೀಡಬೇಕು? ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ಈ ನಿಧಿ ದುರ್ಬಳಕೆಗೆ ಸಚಿವರು ಮತ್ತು ಮಂಡಳಿಯ ಅಧಿಕಾರಿಗಳ ಕೂಟ ಪ್ರಯತ್ನ ನಡೆಸಿದೆಯೆಂದು ನಾಯ್ಕ್ ಹೇಳಿದ್ದಾರೆ.

ಹರೀಶ್ ನಾಯ್ಕ್ (ಎಡದಿಂದ ಮೊದಲನೇಯವರು)

ಈಗಾಗಲೇ ಕಾರ್ಮಿಕ ಇಲಾಖೆಯಲ್ಲಿ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಹಲವು ಅವ್ಯವಹಾರ ನಡೆಸಲಾಗಿದೆ. ಟೂಲ್ ಕಿಟ್, ರೇಶನ್ ಕಿಟ್, ಬೂಸ್ಟಪ್ ಕಿಟ್, ಸುರಕ್ಷಾ ಕಿಟ್, ಕಂಪ್ಯೂಟರ್ ಖರೀದಿ, ಹೊಸ ತಂತ್ರಾಂಶ ಅಳವಡಿಕೆ, ಟಿವಿ ಖರೀದಿ, ಇನೋವಾ ಕಾರ್ ಖರೀದಿಯಲ್ಲಿ ಕೋಟ್ಯಾಂತರರೂ ಗೋಲ್ಮಾಲ್ ನಡೆಸಲಾಗಿದೆ. ಇದಲ್ಲದೆ ಮಂಡಳಿಯ 2688.90 ಕೋಟಿ ರೂ.ವಿವಿಧ ಬಾಬತ್ತುಗಳಿಗೆ 2021-22ನೇ ಸಾಲಿನಲ್ಲಿ ವ್ಯಯಿಸಲು ಮಂಡಳಿಯ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಅವಕಾಶ ಬಳಸಿಕೊಂಡು ಕಾರ್ಮಿಕ ಮಂತ್ರಿ ಹೆಬ್ಬಾರ್, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮತ್ತು ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿ ಕೋಟಿ ಕಬಳಿಸಲು ನೋಡುತ್ತಿದ್ದಾರೆ. ಬಡ ಕಾರ್ಮಿಕರ ಹೆಸರಲ್ಲಿ ನಡೆಯುತ್ತಿರುವ ಹಗಲು ದರೋಡೆಯಿದು. ಇದಕ್ಕೆ ಕಡಿವಾಣ ಹಾಕಬೇಕಿದೆಯೆಂದು ಹರೀಶ್ ನಾಯ್ಕ್ ಹೇಳಿದ್ದಾರೆ.

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಸೆಸ್ ರೂಪದಲ್ಲಿ ಸಂಗ್ರಹಿಸಿದ 10,000 ಕೋಟಿಗೂ ಅಧಿಕ ಹಣವಿದೆ. ಅದನ್ನು ಕಾರ್ಮಿಕ ಕಲ್ಯಾಣ ಉದ್ದೇಶಕ್ಕಾಗಿ ಮಾತ್ರ ಬಳಸಬಹುದಾಗಿದೆ. ಆದರೆ ರೇಷನ್ ಕಿಟ್, ಲಸಿಕೆ ಹೆಸರಲ್ಲಿ ಅದನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪ ಪದೇ ಪದೇ ಕೇಳಿಬರುತ್ತಿದೆ.

ಈಗಾಗಲೇ ಖಾಸಗಿ ಶಾಲೆಗಳು ಲಸಿಕೆ ನೀಡಲು ಹಲವು ಕೋಟಿ ರೂ ಪಾವತಿಸಲಾಗಿದೆ ಮತ್ತು ಕಾರ್ಯಾದೇಶ ನೀಡಲಾಗಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ. ನಾವು ಖರ್ಚು ಮಾಡುತ್ತಿರುವುದು ಕಡಿಮೆ ಮೊತ್ತ. ಉಚಿತ ಸರ್ಕಾರಿ ಲಸಿಕೆ ತಡವಾಗುವುದರಿಂದ ಪಾವತಿ ಮಾಡುತ್ತಿದ್ದೇವೆ ಎಂದು ತಮ್ಮ ನಡೆಯನ್ನು ಸಚಿವ ಶಿವರಾಮ್ ಹೆಬ್ಬಾರ್ ಸಮರ್ಥಿಸಿಕೊಂಡಿದ್ದಾರೆ.


ಇದನ್ನೂ ಓದಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...