Homeಕರ್ನಾಟಕಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ನಾವು ಖರ್ಚು ಮಾಡುತ್ತಿರುವುದು ಕಡಿಮೆ ಮೊತ್ತ. ಉಚಿತ ಸರ್ಕಾರಿ ಲಸಿಕೆ ತಡವಾಗುವುದರಿಂದ ಪಾವತಿ ಮಾಡುತ್ತಿದ್ದೇವೆ ಎಂದು ತಮ್ಮ ನಡೆಯನ್ನು ಸಚಿವ ಶಿವರಾಮ್ ಹೆಬ್ಬಾರ್ ಸಮರ್ಥಿಸಿಕೊಂಡಿದ್ದಾರೆ.

- Advertisement -
- Advertisement -

ನಲವತ್ತು ಲಕ್ಷ ಕಟ್ಟಡ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆ ಕೊಡುವ ಯೋಜನೆ ಹಾಕಿ ಕಾರ್ಮಿಕ ಕಲ್ಯಾಣ ಮಂಡಳಿಯ 312 ಕೋಟಿ ಲೂಟಿಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಮಂಡಳಿಯ ಅಧಿಕಾರಿಗಳು ಯತ್ನಿಸುತ್ತಿದ್ದಾರೆ ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ರಾಜ್ಯ ಉಪಾಧ್ಯಕ್ಷ ಹರೀಶ್ ನಾಯ್ಕ್ ಆರೋಪಿಸಿದ್ದಾರೆ.

ಕಾರ್ಮಿಕ ಮಂತ್ರಿ ಶಿವರಾಮ್ ಹೆಬ್ಬಾರ್ ಕಾರ್ಮಿಕರಿಗೆ ಕೋವಿಡ್ ಲಸಿಕೆ ವಿತರಣೆಗೆಂದು 312 ಕೋಟಿ ರೂಗಳನ್ನು ಖಾಸಗಿ ಆಸ್ಪತ್ರೆ ಮಾಲೀಕರಿಗೆ ಧಾರೆಯೆರೆಯಲು ಮುಂದಾಗಿರುವುದು ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟ ನಿಧಿಯ ದುರ್ಬಳಕೆಯೆಂದು ಅವರು ಕಿಡಿಕಾರಿದ್ದಾರೆ.

ಕಾರ್ಮಿಕ ಸಚಿವರು, ಕಾರ್ಮಿಕ ಕಲ್ಯಾಣ ಮಂಡಳಿ ಅಧಿಕಾರಿಗಳು ಮತ್ತು ಖಾಸಗಿ ಆಸ್ಪತ್ರೆ ಧಣಿಗಳ ನಡುವೆ ನಡೆದ ಮಾತುಕತೆ ವೇಳೆ ರಾಜ್ಯದ 30 ಲಕ್ಷ ನೋಂದಾಯಿತ ಕಾರ್ಮಿಕರಿಗೆ ಮತ್ತು 10 ಲಕ್ಷ ವಲಸೆ ಕಾರ್ಮಿಕರಿಗೆ ಪ್ರತಿ ಲಸಿಕೆಗೆ 780 ರೂ ದರದಲ್ಲಿ ಕೋವಿಡ್ ಲಸಿಕೆ ಕೊಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಕಾರ್ಮಿಕ ಕಲ್ಯಾಣ ಮಂಡಳಿಯ ನಿಧಿ ಪೋಲು ಮಾಡುವ ಕೆಲಸ ಇದಾಗಿದೆ. ಏಕೆಂದರೆ ಸರ್ಕಾರವೇ ನೇರವಾಗಿ ಉಚಿತ ಲಸಿಕೆ ನೀಡಬೇಕಾದರೆ ಇಲ್ಲಿ ಮಾತ್ರ ಏಕೆ ಹಣ ನೀಡಬೇಕು? ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ಈ ನಿಧಿ ದುರ್ಬಳಕೆಗೆ ಸಚಿವರು ಮತ್ತು ಮಂಡಳಿಯ ಅಧಿಕಾರಿಗಳ ಕೂಟ ಪ್ರಯತ್ನ ನಡೆಸಿದೆಯೆಂದು ನಾಯ್ಕ್ ಹೇಳಿದ್ದಾರೆ.

ಹರೀಶ್ ನಾಯ್ಕ್ (ಎಡದಿಂದ ಮೊದಲನೇಯವರು)

ಈಗಾಗಲೇ ಕಾರ್ಮಿಕ ಇಲಾಖೆಯಲ್ಲಿ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಹಲವು ಅವ್ಯವಹಾರ ನಡೆಸಲಾಗಿದೆ. ಟೂಲ್ ಕಿಟ್, ರೇಶನ್ ಕಿಟ್, ಬೂಸ್ಟಪ್ ಕಿಟ್, ಸುರಕ್ಷಾ ಕಿಟ್, ಕಂಪ್ಯೂಟರ್ ಖರೀದಿ, ಹೊಸ ತಂತ್ರಾಂಶ ಅಳವಡಿಕೆ, ಟಿವಿ ಖರೀದಿ, ಇನೋವಾ ಕಾರ್ ಖರೀದಿಯಲ್ಲಿ ಕೋಟ್ಯಾಂತರರೂ ಗೋಲ್ಮಾಲ್ ನಡೆಸಲಾಗಿದೆ. ಇದಲ್ಲದೆ ಮಂಡಳಿಯ 2688.90 ಕೋಟಿ ರೂ.ವಿವಿಧ ಬಾಬತ್ತುಗಳಿಗೆ 2021-22ನೇ ಸಾಲಿನಲ್ಲಿ ವ್ಯಯಿಸಲು ಮಂಡಳಿಯ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಅವಕಾಶ ಬಳಸಿಕೊಂಡು ಕಾರ್ಮಿಕ ಮಂತ್ರಿ ಹೆಬ್ಬಾರ್, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮತ್ತು ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿ ಕೋಟಿ ಕಬಳಿಸಲು ನೋಡುತ್ತಿದ್ದಾರೆ. ಬಡ ಕಾರ್ಮಿಕರ ಹೆಸರಲ್ಲಿ ನಡೆಯುತ್ತಿರುವ ಹಗಲು ದರೋಡೆಯಿದು. ಇದಕ್ಕೆ ಕಡಿವಾಣ ಹಾಕಬೇಕಿದೆಯೆಂದು ಹರೀಶ್ ನಾಯ್ಕ್ ಹೇಳಿದ್ದಾರೆ.

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಸೆಸ್ ರೂಪದಲ್ಲಿ ಸಂಗ್ರಹಿಸಿದ 10,000 ಕೋಟಿಗೂ ಅಧಿಕ ಹಣವಿದೆ. ಅದನ್ನು ಕಾರ್ಮಿಕ ಕಲ್ಯಾಣ ಉದ್ದೇಶಕ್ಕಾಗಿ ಮಾತ್ರ ಬಳಸಬಹುದಾಗಿದೆ. ಆದರೆ ರೇಷನ್ ಕಿಟ್, ಲಸಿಕೆ ಹೆಸರಲ್ಲಿ ಅದನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪ ಪದೇ ಪದೇ ಕೇಳಿಬರುತ್ತಿದೆ.

ಈಗಾಗಲೇ ಖಾಸಗಿ ಶಾಲೆಗಳು ಲಸಿಕೆ ನೀಡಲು ಹಲವು ಕೋಟಿ ರೂ ಪಾವತಿಸಲಾಗಿದೆ ಮತ್ತು ಕಾರ್ಯಾದೇಶ ನೀಡಲಾಗಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ. ನಾವು ಖರ್ಚು ಮಾಡುತ್ತಿರುವುದು ಕಡಿಮೆ ಮೊತ್ತ. ಉಚಿತ ಸರ್ಕಾರಿ ಲಸಿಕೆ ತಡವಾಗುವುದರಿಂದ ಪಾವತಿ ಮಾಡುತ್ತಿದ್ದೇವೆ ಎಂದು ತಮ್ಮ ನಡೆಯನ್ನು ಸಚಿವ ಶಿವರಾಮ್ ಹೆಬ್ಬಾರ್ ಸಮರ್ಥಿಸಿಕೊಂಡಿದ್ದಾರೆ.


ಇದನ್ನೂ ಓದಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...