Homeಕರ್ನಾಟಕಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್...

ಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್

- Advertisement -
- Advertisement -

ವಿವಿಧ ಜಾತಿಗಳ ಮುಂದೆ ‘ಕ್ರಿಶ್ಚಿಯನ್’ ಎಂಬ ಪದ ಸೇರಿಸಿದ್ದ ವಿಚಾರ ವಿವಾದ ಸ್ವರೂಪ ಪಡೆದ ಹಿನ್ನೆಲೆ,
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಿಂದ ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಸೇರಿದಂತೆ 33 ಜಾತಿಗಳನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಬಿಟ್ಟಿದೆ.

ಭಾನುವಾರ (ಸೆ.21) ದೇವರಾಜು ಅರಸು ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್.ನಾಯ್ಕ್‌, “ಸೆ.22ರಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯದಾದ್ಯಂತ ಪ್ರಾರಂಭಗೊಳ್ಳಲಿದೆ. ಇದರಲ್ಲಿ ಪಟ್ಟಿ ಮಾಡಿರುವ 1,561 ಜಾತಿಗಳ ಪೈಕಿ 33 ಜಾತಿಗಳನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.

ಈ ಹಿಂದಿನ ಕಾಂತರಾಜು ಆಯೋಗದ ಸಮೀಕ್ಷೆಯಲ್ಲಿ ಇದ್ದ ಮಾಹಿತಿ, ಕಲಂಗಳನ್ನೇ ಉಪಯೋಗಿಸಿಕೊಂಡು ಸಮೀಕ್ಷೆ ಮಾಡಲಾಗುತ್ತಿದೆ. ಇದರಿಂದ ಕಾನೂನು ಉಲ್ಲಂಘನೆ ಆಗಿಲ್ಲ. ಈ ಮಾಹಿತಿಯನ್ನು ಸಮುದಾಯಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪರಿಸ್ಥಿತಿಗಳನ್ನು ಬಗ್ಗೆ ತಿಳಿಯಲು ಸಂಗ್ರಹಿಸಿತ್ತಿದ್ದೇವೆಯೇ ಹೊರತು, ಬೇರೆ ಉದ್ದೇಶಕ್ಕಾಗಿ ಉಪಯೋಗ ಮಾಡುವುದಿಲ್ಲ ಎಂದರು.

ಈ ಹಿಂದೆಯೇ ಆಯೋಗ ಸಮೀಕ್ಷೆ ನಡೆಸುವ ಮೊದಲೇ ಬಿಟ್ಟು ಹೋದ ಜಾತಿಗಳನ್ನು ಗಮನಕ್ಕೆ ತನ್ನಿ ಎಂದು ಜಾಗೃತಿ ಮೂಡಿಸುವ ಪ್ರಕಟಣೆಯೊಂದನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿತ್ತು. ಇದಾದ ಬಳಿಕ ಅನೇಕರು ತಮ್ಮ ಜಾತಿಗಳನ್ನು ಪರಿಗಣಿಸುವಂತೆ ಕೋರಿದ್ದರು. ಅದರಂತೆ 148 ಜಾತಿಗಳನ್ನು ಸಮೀಕ್ಷೆಯಲ್ಲಿ ಸೇರಿಸಲಾಗಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.

33 ಜಾತಿಗಳನ್ನು ಕೈಬಿಡಲಾಗಿದೆ ಎಂದರೆ ಅದನ್ನು ತೆಗೆದು ಹಾಕಿದ್ದೇವೆ ಎಂದಲ್ಲ. ಅರ್ಹ ಜಾತಿಯವರು ತಮ್ಮ ಮೂಲವನ್ನು ಸಮೀಕ್ಷೆದಾರರಿಗೆ ತಿಳಿಸಿ ಉಲ್ಲೇಖ ಮಾಡಬಹುದು ಎಂದೂ ಹೇಳಿದರು.

ಸಮೀಕ್ಷೆಯಲ್ಲಿ 60 ಪ್ರಶ್ನೆಗಳಿರುತ್ತವೆ. ಅದನ್ನು ಸಮೀಕ್ಷೆ ಮಾಡುವವರ ಮೊಬೈಲ್‌ಗೆ ಅಪ್ಲೋಡ್ ಮಾಡಲಾಗಿದೆ. ಅವುಗಳ ಮೂಲಕ ಮಾಹಿತಿ ಕಲೆ ಹಾಕಲಾಗುತ್ತದೆ. ಏನು ಪ್ರಶ್ನೆಗಳಿರುತ್ತವೆ ಎಂದು ನಾವು ಜನರಿಗೆ ತಿಳಿವಳಿಕೆ ಕೊಟ್ಟಿದ್ದೇವೆ. ಹ್ಯಾಂಡ್ ಬಿಲ್ ಪ್ರಿಂಟ್ ಮಾಡಿ ಮನೆ ಮನೆಗ ತಲುಪಿಸಲು ವ್ಯವಸ್ಥೆ ಮಾಡಿದ್ದೇವೆ. ಇನ್ನೆರಡು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ ಎಂದರು.

ಏನಿದು ‘ಕ್ರಿಶ್ಚಿಯನ್’ ಜಾತಿ ವಿವಾದ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಬಳಿಕವೂ ನಾನಾ ಕಾರಣಕ್ಕಾಗಿ ಮೂಲ ಜಾತಿಯನ್ನೂ ಸೇರಿಸಿಕೊಂಡು ಕ್ರಿಶ್ಚಿಯನ್ ಎಂಬುದಾಗಿ ಗುರುತಿಸಿಕೊಂಡಿರುವ ಜಾತಿಗಳ ಹೆಸರು ಆಯೋಗ ಪ್ರಕಟಿಸಿರುವ ಜಾತಿಗಳ ಪಟ್ಟಿಯಲ್ಲಿ ದಾಖಲಾಗಿತ್ತು.

ಬ್ರಾಹ್ಮಣ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ವಾಲ್ಮೀಕಿ ಕ್ರಿಶ್ಚಿಯನ್, ಆದಿ ಆಂಧ್ರ ಕ್ರಿಶ್ಚಿಯನ್, ಆದಿ ದ್ರಾವಿಡ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್ ಸೇರಿದಂತೆ ಸುಮಾರು 46 ಜಾತಿಗಳ ಹೆಸರಿನೊಂದಿಗೆ ಕ್ರಿಶ್ಚಿಯನ್ ಎಂಬುದಾಗಿ ದಾಖಲಿಸಿರುವುದು ಕಂಡುಬಂದಿತ್ತು.

ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ನಾನಾ ಜಾತಿ- ಸಮುದಾಯಗಳ ನಾಯಕರು, ಸ್ವಾಮೀಜಿಗಳು ಕೂಡ ಮತಾಂತರದ ಬಳಿಕ ಹಿಂದೂ ಮೂಲ ಜಾತಿಯನ್ನು ಸೇರಿಸಿಕೊಂಡು ಕ್ರಿಶ್ಚಿಯನ್ ಎಂಬುದಾಗಿ ದಾಖಲಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಹಲವು ಸಚಿವರು, ಶಾಸಕರಿಂದಲೂ ಪರೋಕ್ಷವಾಗಿ ಈ ಬಗ್ಗೆ ಆಕ್ಷೇಪ ಕೇಳಿಬಂದಿತ್ತು. ಸಚಿವ ಸಂಪುಟ ಸಭೆಯಲ್ಲೂಈ ಬಗ್ಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಜನಾಭಿಪ್ರಾಯ, ಆಕ್ಷೇಪಗಳ ಬಗ್ಗೆ ಆಯೋಗದ ಗಮನಕ್ಕೆ ತಂದಿತ್ತು.

ಸೆ.22ರಿಂದ ಸಮೀಕ್ಷೆ

ರಾಜ್ಯದ ವಿವಿಧ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಸೆ.22ರಿಂದ, ಅಂದರೆ ನಾಳೆಯಿಂದ ಸಮೀಕ್ಷೆ ನಡೆಯಲಿದೆ. ಇದಕ್ಕಾಗಿ ಶಿಕ್ಷಕರು, ಕಂದಾಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. ಅವರಿಗೆ ಈಗಾಗಲೇ ಈ ಬಗ್ಗೆ ತರಬೇತಿ ನೀಡಲಾಗಿದೆ. ಈ ಬಾರಿ ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ಸಮೀಕ್ಷೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಸಮೀಕ್ಷೆ ತಡ

ಬೆಂಗಳೂರಿನಲ್ಲಿ ಎರಡು ಮೂರು ದಿನ ಸಮೀಕ್ಷೆ ತಡವಾಗಿ ಆರಂಭ ಆಗಲಿದೆ. ತರಬೇತಿ ನೀಡುವುದಕ್ಕೆ ಒಂದು ವಾರ ತಡವಾಗಿದೆ. ಜೊತೆಗೆ ಜಿಬಿಎ ನೊಟಿಫಿಕೇಷನ್ ತಡ ಆಗಿದ್ದರಿಂದ ಇಲ್ಲಿ ತಡ ಆಗಿದೆ. ಬೆಂಗಳೂರು ನಗರದಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಿಸಲಾಗಿದೆ. ಬೇರೆ ಇಲಾಖೆಯಿಂದಲೂ ನೇಮಕ ಮಾಡಲಾಗಿದೆ ಎಂದು ಮಧುಸೂದನ್ ನಾಯ್ಕ್ ತಿಳಿಸಿದ್ದಾರೆ.

ಆಧಾರ್ ಕಾರ್ಡ್‌ ಕಡ್ಡಾಯ

ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಪ್ರತಿಯೊಬ್ಬರು ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿದರೆ ಮಾತ್ರ ಸಮೀಕ್ಷೆಯಲ್ಲಿ ಪರಿಗಣಿಸಲಾಗುವುದು ಎಂದು ಮಧುಸೂದನ್ ನಾಯ್ಕ್ ತಿಳಿಸಿದ್ದಾರೆ.

ಆಳಂದ ಸೇರಿ ರಾಜ್ಯದ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...